AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜುಲೈ 19ಕ್ಕೆ ಬಿಡುಗಡೆ ಆಗಲಿದೆ ‘ಹಿರಣ್ಯ’: ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್

ಹಿರಣ್ಯ ಕನ್ನಡ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗಲಿದೆ. ಸಿನಿಮಾದಲ್ಲಿ ರಾಜವರ್ಧನ್ ನಾಯಕನಾಗಿ ನಟಿಸಿದ್ದು, ರಿಹಾನಾ ನಾಯಕಿಯಾಗಿ ನಟಿಸಿದ್ದಾರೆ. ಸಿನಿಮಾದಲ್ಲಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ.

ಜುಲೈ 19ಕ್ಕೆ ಬಿಡುಗಡೆ ಆಗಲಿದೆ 'ಹಿರಣ್ಯ': ವಿಶೇಷ ಪಾತ್ರದಲ್ಲಿ ದಿವ್ಯಾ ಸುರೇಶ್
ಮಂಜುನಾಥ ಸಿ.
|

Updated on: Jul 17, 2024 | 10:50 PM

Share

ರಾಜವರ್ಧನ್‌ ನಾಯಕರಾಗಿರುವ ‘ಹಿರಣ್ಯ’ ಸಿನಿಮಾ ಹಲವು ಕಾರಣಗಳಿಗೆ ಗಮನ ಸೆಳೆದಿದೆ. ಈ ಸಿನಿಮಾ ಜುಲೈ 19ಕ್ಕೆ ಬಿಡುಗಡೆ ಆಗುತ್ತಿದ್ದು, ಇದೀಗ ಸಿನಿಮಾದ ಹಾಡೊಂದನ್ನು ಚಿತ್ರತಂಡ ಬಿಡುಗಡೆ ಮಾಡಿದೆ. ‘ಬೈಲಾ ಬೈಲಾ ’ ಎಂಬ ಈ ಹಾಡಿಗೆ ಮಾಜಿ ಬಿಗ್​ಬಾಸ್ ಚೆಲುವೆ ದಿವ್ಯಾ ಸುರೇಶ್ ಸಖತ್ ಆಗಿ ಹೆಜ್ಜೆ ಹಾಕಿದ್ದಾರೆ. ನಿರ್ದೇಶಕ ಪ್ರವೀಣ್ ಅವ್ಯುಕ್ತ್ ಬರೆದ ಸಾಹಿತ್ಯಕ್ಕೆ ಶಮಿತಾ ಮಲ್ನಾಡ್ ಧ್ವನಿಯಾಗಿದ್ದು, ಜೂಡಾ ಸ್ಯಾಂಡಿ ಹಾಡಿಗೆ ಸಂಗೀತ ನೀಡಿದ್ದಾರೆ.

ಈಗಾಗಲೇ ಹಲವು ಕಿರು ಚಿತ್ರಗಳನ್ನು ನಿರ್ದೇಶನ ಮಾಡಿದ ಅನುಭವ ಇರುವ ಪ್ರವೀಣ್‌ ಅವ್ಯುಕ್ತ್ ‘ಹಿರಣ್ಯ’ ಸಿನಿಮಾದ ಮೂಲಕ ಪೂರ್ಣ ಪ್ರಮಾಣದ ನಿರ್ದೇಶಕನಾಗಿ ಕನ್ನಡ ಚಿತ್ರರಂಗಕ್ಕೆ ಪರಿಚಯವಾಗುತ್ತಿದ್ದಾರೆ. ‘ಹಿರಣ್ಯ’ ಸಿನಿಮಾದಲ್ಲಿ ರಾಜವರ್ಧನ್‌ ನಾಯಕನಾಗಿ ನಟಿಸಿದ್ದು ಅವರಿಗೆ ನಾಯಕಿಯಾಗಿ ರಿಹಾನಾ ನಟಿಸಿದ್ದಾರೆ. ಈ ಸಿನಿಮಾದ ಮೂಲಕ ರಿಹಾನಾ ಚಂದನವನಕ್ಕೆ ಪರಿಚಯವಾಗುತ್ತಿದ್ದಾರೆ.

ಇದನ್ನೂ ಓದಿ:‘ಪುಷ್ಪ 2’ ಸಿನಿಮಾ ಫ್ಲಾಪ್ ಆದರೂ ‘ಕೆಜಿಎಫ್ 2’ ದಾಖಲೆ ಮುರಿಯುತ್ತೆ: ನಿರ್ಮಾಪಕ

ಆ್ಯಕ್ಷನ್‌-ಥ್ರಿಲ್ಲರ್‌ ಜೊತೆಗೆ ತಾಯಿ ಸೆಂಟಿಮೆಂಟ್‌ ಕತೆಯನ್ನು ‘ಹಿರಣ್ಯ’ ಸಿನಿಮಾ ಒಳಗೊಂಡಿದೆ. “ಹಿರಣ್ಯ’ ಸಿನಿಮಾದಲ್ಲಿ ಬಿಗ್‌ ಬಾಸ್‌ ಖ್ಯಾತಿಯ ದಿವ್ಯಾ ಸುರೇಶ್‌ ವಿಶೇಷ ಪಾತ್ರದಲ್ಲಿ ನಟಿಸಿದ್ದಾರೆ. ಉಳಿದಂತೆ ಹುಲಿ ಕಾರ್ತಿಕ್‌, ಅರವಿಂದ ರಾವ್‌, ದಿಲೀಪ್‌ ಶೆಟ್ಟಿ ಮುಂತಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.

“ವೇದಾಸ್‌ ಇನ್ಫಿನಿಟಿ ಪಿಕ್ಚರ್’ ಬ್ಯಾನರ್‌ನಲ್ಲಿ ವಿಘ್ನೇಶ್ವರ ಯು. ಹಾಗೂ ವಿಜಯ್‌ ಕುಮಾರ್‌ ಬಿ. ವಿ ಜಂಟಿಯಾಗಿ ಬಂಡವಾಳ ಹೂಡಿ ನಿರ್ಮಿಸುತ್ತಿರುವ “ಹಿರಣ್ಯ’ ಸಿನಿಮಾಕ್ಕೆ ಯೋಗೇಶ್ವರನ್‌ ಆರ್‌. ಛಾಯಾಗ್ರಹಣವಿದೆ. ಚಿತ್ರದ ಹಾಡುಗಳಿಗೆ ಜ್ಯೂಡಾ ಸ್ಯಾಂಡಿ ಸಂಗೀತ ಸಂಯೋಜನೆಯಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Manjunatha C
Manjunatha C

ಮಂಜುನಾಥ ಸಿ, ಬೆಂಗಳೂರು ಗ್ರಾಮಾಂತರ, ವಿಜಯರಪುರ ಪಟ್ಟಣ ನಿವಾಸಿ. ಕಳೆದ ಏಳು ವರ್ಷಗಳಿಂದ ಪತ್ರಿಕೋದ್ಯಮದಲ್ಲಿ ಸಕ್ರಿಯನಾಗಿದ್ದೇನೆ. ಕಳೆದ ಐದು ವರ್ಷದಿಂದ ಡಿಜಿಟಲ್ ಪತ್ರಿಕೋದ್ಯಮದಲ್ಲಿ ತೊಡಗಿಕೊಂಡಿದ್ದೇನೆ. ಈ ಹಿಂದೆ ಪ್ರಜಾವಾಣಿ, ಒನ್ ಇಂಡಿಯಾ ಕನ್ನಡ ಸಂಸ್ಥೆಗಳ ವಿವಿಧ ವಿಭಾಗಗಳಲ್ಲಿ ಕೆಲಸ ಮಾಡಿದ್ದೇನೆ. ಪ್ರಸ್ತುತ ಟಿವಿ9 ಕನ್ನಡ ಡಿಜಿಟಲ್​ನ ಸಿನಿಮಾ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಮೆಚ್ಚಿನ ಹವ್ಯಾಸ ಸಿನಿಮಾ ವೀಕ್ಷಣೆ, ಪುಸ್ತಕಗಳನ್ನು ಓದುವುದು.

Read More
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ವರುಣಾರ್ಭಟಕ್ಕೆ ಚಿಕ್ಕಮಗಳೂರಲ್ಲಿ ಹೊಳೆಯಂತಾದ ರಸ್ತೆಗಳು
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಹರಿಹರ ಪಂಚಮಸಾಲಿ ಪೀಠ ವಿವಾದ ಬಗ್ಗೆ ಯತ್ನಾಳ್ ಸ್ಫೋಟಕ ಹೇಳಿಕೆ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ಕಾರು ಗುದ್ದಿದ ರಭಸಕ್ಕೆ ಆಟೋ ಅಪ್ಪಚ್ಚಿ: 10 ಮಂದಿಗೆ ಗಾಯ
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
ನಮ್ಮ ಮೆಟ್ರೋ ನೀಲಿ ಮಾರ್ಗಕ್ಕೆ  ಸೌರಶಕ್ತಿ ಬಳಕೆಗೆ ಶಿಫಾರಸು: ಲಾಭ ಏನು?
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
1.85 ಕೆಜಿ ಚಿನ್ನ ಬ್ಯಾಗ್​​​​​ನಲ್ಲಿ ತುಂಬಿಕೊಂಡು ಹೋದ ದೃಶ್ಯ ಇಲ್ಲಿದೆ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ವಿಶ್ವನಾಥ ವಿರುದ್ಧ ಎಫ್‌ಐಆರ್: ಸಿದ್ದರಾಮಯ್ಯ ಪುತ್ರನ ವಿರುದ್ಧ ಸ್ಫೋಟಕ ಆರೋಪ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ರೈಲ್ವೆ ಕ್ರಾಸಿಂಗ್‌ನಲ್ಲಿ ಬಸ್‌ ಹಾಗೂ ಕಾರಿಗೆ ರೈಲು ಡಿಕ್ಕಿ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬೀದರ್​ನಲ್ಲಿ ಬಿರುಗಾಳಿ ಮಳೆ ಆರ್ಭಟಕ್ಕೆ ಒಂದು ಎಕರೆ ಪಪ್ಪಾಯಿ ಬೆಳೆ ನಾಶ
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಬಾದಾಮಿ ಐತಿಹಾಸಿಕ ದೇಗುಲದಲ್ಲಿ ಚಪ್ಪಲಿ ಧರಿಸಿ ಕೂತ ಮುಸ್ಲಿಂ ಯುವತಿ!
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ
ಇಟಲಿ ಪ್ರಧಾನಿಗೆ ಮೆಲೋಡಿ ಗಿಫ್ಟ್​ ಕೊಟ್ಟ ಪ್ರಧಾನಿ ಮೋದಿ