AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

Hombale Films: ಇತ್ತೀಚೆಗಷ್ಟೆ ಪ್ರಭಾಸ್ ಜೊತೆಗೆ ಮೂರು ಭಾರಿ ಬಜೆಟ್ ಸಿನಿಮಾ ಘೋಷಣೆ ಮಾಡಿರುವ ಹೊಂಬಾಳೆ, ಇದೀಗ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಸಿನಿಮಾದ ಪೋಸ್ಟರ್ ಟೀಸರ್ ಇಂದು ಬಿಡುಗಡೆ ಆಗಿದೆ.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ
ಮಂಜುನಾಥ ಸಿ.
|

Updated on: Nov 16, 2024 | 4:51 PM

Share

ಈಗಾಗಲೇ ಕೆಲವು ನೂರಾರು ಕೋಟಿ ಪ್ರಾಜೆಕ್ಟ್​ಗಳನ್ನು ಘೋಷಿಸಿರುವ ಹೊಂಬಾಳೆ ಫಿಲಮ್ಸ್ ನಿರ್ಮಾಣ ಸಂಸ್ಥೆ ಇದೀಗ ಹೊಸದೊಂದು ಸಿನಿಮಾ ಘೋಷಣೆ ಮಾಡಿದೆ. ಭಾರತದ ದೊಡ್ಡ ದೊಡ್ಡ ಸ್ಟಾರ್ ನಟ-ನಟಿಯರೊಡನೆ ಕೆಲಸ ಮಾಡಿರುವ ಹೊಂಬಾಳೆ ಇದೀಗ ಅನಿಮೇಷನ್ ಸಿನಿಮಾ ಮಾಡಲು ಮುಂದಾದಂತಿದೆ. ಮಾತ್ರವಲ್ಲದೆ ಮೊದಲ ಬಾರಿಗೆ ಹೊಂಬಾಳೆ ಫಿಲಮ್ಸ್ ಪೌರಾಣಿಕ ಕತೆಯ ಸಿನಿಮಾದ ಮೇಲೆ ಬಂಡವಾಳ ಹೂಡುತ್ತಿದೆ. ಹೊಂಬಾಳೆ ‘ನರಸಿಂಹ’ ಸಿನಿಮಾವನ್ನು ತನ್ನ ಮುಂದಿನ ಸಿನಿಮಾವನ್ನಾಗಿ ಘೋಷಣೆ ಮಾಡಿದೆ.

ಸಿನಿಮಾಕ್ಕೆ ‘ಮಹಾವತಾರ್ ನರಸಿಂಹ’ ಎಂದು ಹೆಸರಿಟ್ಟಿದ್ದು ಇದೊಂದು 3ಡಿ ಸಿನಿಮಾ ಆಗಿರಲಿದೆ. ಇದು ನಿಜ ನಟರಿಲ್ಲದ ಅನಿಮೇಷನ್ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ಭಾರತದ ಜನಪ್ರಿಯ ಅನಿಮೇಷನ್ ಸಿನಿಮಾ ಸ್ಟುಡಿಯೋ ಕ್ಲೀಮ್ ಸಹ ನಿರ್ಮಾಣ ಮಾಡುತ್ತಿದೆ. ಕ್ಲೀಮ್​ನ ಅಶ್ವಿನ್ ಕುಮಾರ್ ಅವರು ಈ ಸಿನಿಮಾದ ನಿರ್ದೇಶನ ಮಾಡಲಿದ್ದಾರೆ. ಭಾರಿ ಗಾತ್ರದ ನರಸಿಂಹ ಹಾಗೂ ನರಸಿಂಹನ ಎದುರು ನಿಂತಿರುವ ಹಿರಣ್ಯಕಶಪುವಿನ ಪೋಸ್ಟರ್ ಅನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಣ್ಣ ಟೀಸರ್ ಅನ್ನೂ ಬಿಡುಗಡೆ ಮಾಡಲಾಗಿದೆ.

‘ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಆಗಿದೆ. ಸಿನಿಮಾಕ್ಕೆ ಸ್ಯಾಮ್ ಸಿಎಸ್ ಮತ್ತು ಶ್ಲೋಕ ಅರುಗಳು ಸಂಗೀತ ನೀಡುತ್ತಿದ್ದಾರೆ. ಸಿನಿಮಾದಲ್ಲಿ ಹಿರಣ್ಯಕಶಪು ಹಾಗೂ ನರಸಿಂಹನ ಕತೆಯನ್ನು ಅದ್ಧೂರಿಯಾಗಿ, ರೋಚಕವಾಗಿ ತೆರೆಯ ಮೇಲೆ ತರಲಾಗುತ್ತಿದೆ.

ಇದನ್ನೂ ಓದಿ:ಹೊಸ ಚಿತ್ರ ಘೋಷಿಸಿದ ಹೊಂಬಾಳೆ, ಪೋಸ್ಟರ್​ ಮೂಡಿಸಿದೆ ಹಲವು ಪ್ರಶ್ನೆ

ವಿಷ್ಣುವಿನ ಮಹಾಅವರತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದ್ದು, ಆ ಯೋಜನೆಯ ಮೊದಲ ಪ್ರಾಜೆಕ್ಟ್ ಆಗಿ ಇದೀಗ ‘ನರಸಿಂಹ’ ಅನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾಕ್ಕೆ ಕ್ಲೀಮ್ ಸಹ ಸಾಥ್ ನೀಡಿದೆ. ಕ್ಲೀಮ್ ಈಗಾಗಲೇ ಭಾರತದಲ್ಲಿ ಕೆಲವು ಅನಿಮೇಷನ್ ಸಿನಿಮಾಗಳನ್ನು ನಿರ್ಮಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು
ಸಿಡ್ನಿಯ ಬೊಂಡಿ ಬೀಚ್​ನಲ್ಲಿ ಸಾಮೂಹಿಕ ಗುಂಡಿನ ದಾಳಿ, 10 ಮಂದಿ ಸಾವು