AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

Hombale Films: ಇತ್ತೀಚೆಗಷ್ಟೆ ಪ್ರಭಾಸ್ ಜೊತೆಗೆ ಮೂರು ಭಾರಿ ಬಜೆಟ್ ಸಿನಿಮಾ ಘೋಷಣೆ ಮಾಡಿರುವ ಹೊಂಬಾಳೆ, ಇದೀಗ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಸಿನಿಮಾದ ಪೋಸ್ಟರ್ ಟೀಸರ್ ಇಂದು ಬಿಡುಗಡೆ ಆಗಿದೆ.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ
ಮಂಜುನಾಥ ಸಿ.
|

Updated on: Nov 16, 2024 | 4:51 PM

Share

ಈಗಾಗಲೇ ಕೆಲವು ನೂರಾರು ಕೋಟಿ ಪ್ರಾಜೆಕ್ಟ್​ಗಳನ್ನು ಘೋಷಿಸಿರುವ ಹೊಂಬಾಳೆ ಫಿಲಮ್ಸ್ ನಿರ್ಮಾಣ ಸಂಸ್ಥೆ ಇದೀಗ ಹೊಸದೊಂದು ಸಿನಿಮಾ ಘೋಷಣೆ ಮಾಡಿದೆ. ಭಾರತದ ದೊಡ್ಡ ದೊಡ್ಡ ಸ್ಟಾರ್ ನಟ-ನಟಿಯರೊಡನೆ ಕೆಲಸ ಮಾಡಿರುವ ಹೊಂಬಾಳೆ ಇದೀಗ ಅನಿಮೇಷನ್ ಸಿನಿಮಾ ಮಾಡಲು ಮುಂದಾದಂತಿದೆ. ಮಾತ್ರವಲ್ಲದೆ ಮೊದಲ ಬಾರಿಗೆ ಹೊಂಬಾಳೆ ಫಿಲಮ್ಸ್ ಪೌರಾಣಿಕ ಕತೆಯ ಸಿನಿಮಾದ ಮೇಲೆ ಬಂಡವಾಳ ಹೂಡುತ್ತಿದೆ. ಹೊಂಬಾಳೆ ‘ನರಸಿಂಹ’ ಸಿನಿಮಾವನ್ನು ತನ್ನ ಮುಂದಿನ ಸಿನಿಮಾವನ್ನಾಗಿ ಘೋಷಣೆ ಮಾಡಿದೆ.

ಸಿನಿಮಾಕ್ಕೆ ‘ಮಹಾವತಾರ್ ನರಸಿಂಹ’ ಎಂದು ಹೆಸರಿಟ್ಟಿದ್ದು ಇದೊಂದು 3ಡಿ ಸಿನಿಮಾ ಆಗಿರಲಿದೆ. ಇದು ನಿಜ ನಟರಿಲ್ಲದ ಅನಿಮೇಷನ್ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ಭಾರತದ ಜನಪ್ರಿಯ ಅನಿಮೇಷನ್ ಸಿನಿಮಾ ಸ್ಟುಡಿಯೋ ಕ್ಲೀಮ್ ಸಹ ನಿರ್ಮಾಣ ಮಾಡುತ್ತಿದೆ. ಕ್ಲೀಮ್​ನ ಅಶ್ವಿನ್ ಕುಮಾರ್ ಅವರು ಈ ಸಿನಿಮಾದ ನಿರ್ದೇಶನ ಮಾಡಲಿದ್ದಾರೆ. ಭಾರಿ ಗಾತ್ರದ ನರಸಿಂಹ ಹಾಗೂ ನರಸಿಂಹನ ಎದುರು ನಿಂತಿರುವ ಹಿರಣ್ಯಕಶಪುವಿನ ಪೋಸ್ಟರ್ ಅನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಣ್ಣ ಟೀಸರ್ ಅನ್ನೂ ಬಿಡುಗಡೆ ಮಾಡಲಾಗಿದೆ.

‘ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಆಗಿದೆ. ಸಿನಿಮಾಕ್ಕೆ ಸ್ಯಾಮ್ ಸಿಎಸ್ ಮತ್ತು ಶ್ಲೋಕ ಅರುಗಳು ಸಂಗೀತ ನೀಡುತ್ತಿದ್ದಾರೆ. ಸಿನಿಮಾದಲ್ಲಿ ಹಿರಣ್ಯಕಶಪು ಹಾಗೂ ನರಸಿಂಹನ ಕತೆಯನ್ನು ಅದ್ಧೂರಿಯಾಗಿ, ರೋಚಕವಾಗಿ ತೆರೆಯ ಮೇಲೆ ತರಲಾಗುತ್ತಿದೆ.

ಇದನ್ನೂ ಓದಿ:ಹೊಸ ಚಿತ್ರ ಘೋಷಿಸಿದ ಹೊಂಬಾಳೆ, ಪೋಸ್ಟರ್​ ಮೂಡಿಸಿದೆ ಹಲವು ಪ್ರಶ್ನೆ

ವಿಷ್ಣುವಿನ ಮಹಾಅವರತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದ್ದು, ಆ ಯೋಜನೆಯ ಮೊದಲ ಪ್ರಾಜೆಕ್ಟ್ ಆಗಿ ಇದೀಗ ‘ನರಸಿಂಹ’ ಅನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾಕ್ಕೆ ಕ್ಲೀಮ್ ಸಹ ಸಾಥ್ ನೀಡಿದೆ. ಕ್ಲೀಮ್ ಈಗಾಗಲೇ ಭಾರತದಲ್ಲಿ ಕೆಲವು ಅನಿಮೇಷನ್ ಸಿನಿಮಾಗಳನ್ನು ನಿರ್ಮಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಹಗಲು ರಾತ್ರಿ ಹಣದ ಚಿಂತೆ ಮಾಡುತ್ತಿದ್ದೀರಾ? ಇದರಿಂದ ಯಾವ ದೋಷ ಬರುತ್ತೆ?
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಇಂದು ಈ ರಾಶಿಯವರು ಅತಿಯಾದ ಕೋಪವನ್ನು ಕೈಬಿಡಿ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ
ಬೆಳಗಾವಿಯಲ್ಲಿ ಭಾರಿ ಗಾಳಿ ಮಳೆಗೆ ಧರೆಗುರುಳಿದ ಮರಗಳು: ಸಂಚಾರ ಅಸ್ತವ್ಯಸ್ತ