AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

Hombale Films: ಇತ್ತೀಚೆಗಷ್ಟೆ ಪ್ರಭಾಸ್ ಜೊತೆಗೆ ಮೂರು ಭಾರಿ ಬಜೆಟ್ ಸಿನಿಮಾ ಘೋಷಣೆ ಮಾಡಿರುವ ಹೊಂಬಾಳೆ, ಇದೀಗ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಸಿನಿಮಾದ ಪೋಸ್ಟರ್ ಟೀಸರ್ ಇಂದು ಬಿಡುಗಡೆ ಆಗಿದೆ.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ
ಮಂಜುನಾಥ ಸಿ.
|

Updated on: Nov 16, 2024 | 4:51 PM

Share

ಈಗಾಗಲೇ ಕೆಲವು ನೂರಾರು ಕೋಟಿ ಪ್ರಾಜೆಕ್ಟ್​ಗಳನ್ನು ಘೋಷಿಸಿರುವ ಹೊಂಬಾಳೆ ಫಿಲಮ್ಸ್ ನಿರ್ಮಾಣ ಸಂಸ್ಥೆ ಇದೀಗ ಹೊಸದೊಂದು ಸಿನಿಮಾ ಘೋಷಣೆ ಮಾಡಿದೆ. ಭಾರತದ ದೊಡ್ಡ ದೊಡ್ಡ ಸ್ಟಾರ್ ನಟ-ನಟಿಯರೊಡನೆ ಕೆಲಸ ಮಾಡಿರುವ ಹೊಂಬಾಳೆ ಇದೀಗ ಅನಿಮೇಷನ್ ಸಿನಿಮಾ ಮಾಡಲು ಮುಂದಾದಂತಿದೆ. ಮಾತ್ರವಲ್ಲದೆ ಮೊದಲ ಬಾರಿಗೆ ಹೊಂಬಾಳೆ ಫಿಲಮ್ಸ್ ಪೌರಾಣಿಕ ಕತೆಯ ಸಿನಿಮಾದ ಮೇಲೆ ಬಂಡವಾಳ ಹೂಡುತ್ತಿದೆ. ಹೊಂಬಾಳೆ ‘ನರಸಿಂಹ’ ಸಿನಿಮಾವನ್ನು ತನ್ನ ಮುಂದಿನ ಸಿನಿಮಾವನ್ನಾಗಿ ಘೋಷಣೆ ಮಾಡಿದೆ.

ಸಿನಿಮಾಕ್ಕೆ ‘ಮಹಾವತಾರ್ ನರಸಿಂಹ’ ಎಂದು ಹೆಸರಿಟ್ಟಿದ್ದು ಇದೊಂದು 3ಡಿ ಸಿನಿಮಾ ಆಗಿರಲಿದೆ. ಇದು ನಿಜ ನಟರಿಲ್ಲದ ಅನಿಮೇಷನ್ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ಭಾರತದ ಜನಪ್ರಿಯ ಅನಿಮೇಷನ್ ಸಿನಿಮಾ ಸ್ಟುಡಿಯೋ ಕ್ಲೀಮ್ ಸಹ ನಿರ್ಮಾಣ ಮಾಡುತ್ತಿದೆ. ಕ್ಲೀಮ್​ನ ಅಶ್ವಿನ್ ಕುಮಾರ್ ಅವರು ಈ ಸಿನಿಮಾದ ನಿರ್ದೇಶನ ಮಾಡಲಿದ್ದಾರೆ. ಭಾರಿ ಗಾತ್ರದ ನರಸಿಂಹ ಹಾಗೂ ನರಸಿಂಹನ ಎದುರು ನಿಂತಿರುವ ಹಿರಣ್ಯಕಶಪುವಿನ ಪೋಸ್ಟರ್ ಅನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಣ್ಣ ಟೀಸರ್ ಅನ್ನೂ ಬಿಡುಗಡೆ ಮಾಡಲಾಗಿದೆ.

‘ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಆಗಿದೆ. ಸಿನಿಮಾಕ್ಕೆ ಸ್ಯಾಮ್ ಸಿಎಸ್ ಮತ್ತು ಶ್ಲೋಕ ಅರುಗಳು ಸಂಗೀತ ನೀಡುತ್ತಿದ್ದಾರೆ. ಸಿನಿಮಾದಲ್ಲಿ ಹಿರಣ್ಯಕಶಪು ಹಾಗೂ ನರಸಿಂಹನ ಕತೆಯನ್ನು ಅದ್ಧೂರಿಯಾಗಿ, ರೋಚಕವಾಗಿ ತೆರೆಯ ಮೇಲೆ ತರಲಾಗುತ್ತಿದೆ.

ಇದನ್ನೂ ಓದಿ:ಹೊಸ ಚಿತ್ರ ಘೋಷಿಸಿದ ಹೊಂಬಾಳೆ, ಪೋಸ್ಟರ್​ ಮೂಡಿಸಿದೆ ಹಲವು ಪ್ರಶ್ನೆ

ವಿಷ್ಣುವಿನ ಮಹಾಅವರತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದ್ದು, ಆ ಯೋಜನೆಯ ಮೊದಲ ಪ್ರಾಜೆಕ್ಟ್ ಆಗಿ ಇದೀಗ ‘ನರಸಿಂಹ’ ಅನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾಕ್ಕೆ ಕ್ಲೀಮ್ ಸಹ ಸಾಥ್ ನೀಡಿದೆ. ಕ್ಲೀಮ್ ಈಗಾಗಲೇ ಭಾರತದಲ್ಲಿ ಕೆಲವು ಅನಿಮೇಷನ್ ಸಿನಿಮಾಗಳನ್ನು ನಿರ್ಮಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ಕಾಂಗ್ರೆಸ್​​ನಲ್ಲಿ ಸ್ಫೋಟಕ ಬೆಳವಣಿಗೆ: 30 ಹಿರಿಯ ಶಾಸಕರು ದಿಢೀರ್ ಸಭೆ
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ನಟಿ ಚೈತ್ರಾ ಜೆ. ಆಚಾರ್ ಕಂಠದಲ್ಲಿ ಕೇಳಿ ‘ಕರಿಮಾಯಿ ತಾಯೆ’ ಹಾಡು
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಚಿನ್ನದ ಬ್ಯಾಗ್ ಇದ್ದ ಬಸ್ಸನ್ನು ಫಾಲೋ ಮಾಡಿ ದೋಚಿದ್ದು ಹೇಗೆ ಗೊತ್ತಾ?
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪಾಕ್ ಆಟಗಾರನನ್ನು ಖರೀದಿಸಿದ ಕಾವ್ಯ ಮಾರನ್​ಗೆ ಭಾರತೀಯರಿಂದ ಹಿಡಿಶಾಪ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಪುಟ್ಟ ಬಾಲಕಿಯ ಕೈಯಲ್ಲೇ ಮೊಬೈಲ್ ಸ್ಫೋಟ; ಇಲ್ಲಿದೆ ವಿಡಿಯೋ
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಲಕ್ಕುಂಡಿ ನಿಧಿ ರಹಸ್ಯ ಕೊನೆಗೂ ಬಯಲು, ಚಿನ್ನ ಎಷ್ಟು ಕೋಟಿ ಮೌಲ್ಯದ್ದು?
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ಮಧ್ಯಪ್ರಾಚ್ಯ ಯುದ್ಧದಿಂದ ಅಕ್ಕಿ ಉದ್ಯಮಕ್ಕೂ ಹೊಡೆತ!
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ವಾಣಿಜ್ಯ ಸಿಲಿಂಡರ್ ಕೊರತೆ: ಕಟ್ಟಿಗೆ ಒಲೆಗಳಿಗೆ ಡಿಮ್ಯಾಂಡಪ್ಪೋ ಡಿಮ್ಯಾಂಡ್​
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ರೈಲಿನ ಕಿಟಕಿಯ ಸರಳುಗಳ ಮಧ್ಯೆ ಎಳನೀರು ಒಳಗೆಳೆಯಲು ವ್ಯಕ್ತಿಯ ಹರಸಾಹಸ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ
ಸಿಲಿಂಡರ್ ಶಾರ್ಟೇಜ್; ರಾಜ್​​ಕುಮಾರ್ ನೆಚ್ಚಿನ ಹೋಟೆಲ್​​ಗೆ ಬೀಗ