Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ

Hombale Films: ಇತ್ತೀಚೆಗಷ್ಟೆ ಪ್ರಭಾಸ್ ಜೊತೆಗೆ ಮೂರು ಭಾರಿ ಬಜೆಟ್ ಸಿನಿಮಾ ಘೋಷಣೆ ಮಾಡಿರುವ ಹೊಂಬಾಳೆ, ಇದೀಗ ಮತ್ತೊಂದು ಹೊಸ ಸಿನಿಮಾ ಘೋಷಣೆ ಮಾಡಿದೆ. ಸಿನಿಮಾದ ಪೋಸ್ಟರ್ ಟೀಸರ್ ಇಂದು ಬಿಡುಗಡೆ ಆಗಿದೆ.

ಹೊಂಬಾಳೆಯ ಹೊಸ ಸಿನಿಮಾ ‘ನರಸಿಂಹ’, ಟೀಸರ್ ನೋಡಿ
Follow us
ಮಂಜುನಾಥ ಸಿ.
|

Updated on: Nov 16, 2024 | 4:51 PM

ಈಗಾಗಲೇ ಕೆಲವು ನೂರಾರು ಕೋಟಿ ಪ್ರಾಜೆಕ್ಟ್​ಗಳನ್ನು ಘೋಷಿಸಿರುವ ಹೊಂಬಾಳೆ ಫಿಲಮ್ಸ್ ನಿರ್ಮಾಣ ಸಂಸ್ಥೆ ಇದೀಗ ಹೊಸದೊಂದು ಸಿನಿಮಾ ಘೋಷಣೆ ಮಾಡಿದೆ. ಭಾರತದ ದೊಡ್ಡ ದೊಡ್ಡ ಸ್ಟಾರ್ ನಟ-ನಟಿಯರೊಡನೆ ಕೆಲಸ ಮಾಡಿರುವ ಹೊಂಬಾಳೆ ಇದೀಗ ಅನಿಮೇಷನ್ ಸಿನಿಮಾ ಮಾಡಲು ಮುಂದಾದಂತಿದೆ. ಮಾತ್ರವಲ್ಲದೆ ಮೊದಲ ಬಾರಿಗೆ ಹೊಂಬಾಳೆ ಫಿಲಮ್ಸ್ ಪೌರಾಣಿಕ ಕತೆಯ ಸಿನಿಮಾದ ಮೇಲೆ ಬಂಡವಾಳ ಹೂಡುತ್ತಿದೆ. ಹೊಂಬಾಳೆ ‘ನರಸಿಂಹ’ ಸಿನಿಮಾವನ್ನು ತನ್ನ ಮುಂದಿನ ಸಿನಿಮಾವನ್ನಾಗಿ ಘೋಷಣೆ ಮಾಡಿದೆ.

ಸಿನಿಮಾಕ್ಕೆ ‘ಮಹಾವತಾರ್ ನರಸಿಂಹ’ ಎಂದು ಹೆಸರಿಟ್ಟಿದ್ದು ಇದೊಂದು 3ಡಿ ಸಿನಿಮಾ ಆಗಿರಲಿದೆ. ಇದು ನಿಜ ನಟರಿಲ್ಲದ ಅನಿಮೇಷನ್ ಸಿನಿಮಾ ಆಗಿರಲಿದೆ ಎನ್ನಲಾಗುತ್ತಿದೆ. ಈ ಸಿನಿಮಾವನ್ನು ಭಾರತದ ಜನಪ್ರಿಯ ಅನಿಮೇಷನ್ ಸಿನಿಮಾ ಸ್ಟುಡಿಯೋ ಕ್ಲೀಮ್ ಸಹ ನಿರ್ಮಾಣ ಮಾಡುತ್ತಿದೆ. ಕ್ಲೀಮ್​ನ ಅಶ್ವಿನ್ ಕುಮಾರ್ ಅವರು ಈ ಸಿನಿಮಾದ ನಿರ್ದೇಶನ ಮಾಡಲಿದ್ದಾರೆ. ಭಾರಿ ಗಾತ್ರದ ನರಸಿಂಹ ಹಾಗೂ ನರಸಿಂಹನ ಎದುರು ನಿಂತಿರುವ ಹಿರಣ್ಯಕಶಪುವಿನ ಪೋಸ್ಟರ್ ಅನ್ನು ಇದೀಗ ಬಿಡುಗಡೆ ಮಾಡಲಾಗಿದೆ. ಜೊತೆಗೆ ಸಣ್ಣ ಟೀಸರ್ ಅನ್ನೂ ಬಿಡುಗಡೆ ಮಾಡಲಾಗಿದೆ.

‘ನರಸಿಂಹ’ ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಹಾಗೂ ಮಲಯಾಳಂ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆ ಆಗಲಿದೆ. ಇದು ಮೂಲತಃ ಹಿಂದಿಯಲ್ಲಿ ನಿರ್ಮಾಣ ಆಗಲಿರುವ ಸಿನಿಮಾ ಆಗಿದೆ. ಸಿನಿಮಾಕ್ಕೆ ಸ್ಯಾಮ್ ಸಿಎಸ್ ಮತ್ತು ಶ್ಲೋಕ ಅರುಗಳು ಸಂಗೀತ ನೀಡುತ್ತಿದ್ದಾರೆ. ಸಿನಿಮಾದಲ್ಲಿ ಹಿರಣ್ಯಕಶಪು ಹಾಗೂ ನರಸಿಂಹನ ಕತೆಯನ್ನು ಅದ್ಧೂರಿಯಾಗಿ, ರೋಚಕವಾಗಿ ತೆರೆಯ ಮೇಲೆ ತರಲಾಗುತ್ತಿದೆ.

ಇದನ್ನೂ ಓದಿ:ಹೊಸ ಚಿತ್ರ ಘೋಷಿಸಿದ ಹೊಂಬಾಳೆ, ಪೋಸ್ಟರ್​ ಮೂಡಿಸಿದೆ ಹಲವು ಪ್ರಶ್ನೆ

ವಿಷ್ಣುವಿನ ಮಹಾಅವರತಾರಗಳ ಸರಣಿಯನ್ನು ಹೊಂಬಾಳೆ ಹೊರತರುವ ಯೋಜನೆ ಹಾಕಿಕೊಂಡಿದ್ದು, ಆ ಯೋಜನೆಯ ಮೊದಲ ಪ್ರಾಜೆಕ್ಟ್ ಆಗಿ ಇದೀಗ ‘ನರಸಿಂಹ’ ಅನ್ನು ನಿರ್ಮಾಣ ಮಾಡುತ್ತಿದೆ. ಸಿನಿಮಾಕ್ಕೆ ಕ್ಲೀಮ್ ಸಹ ಸಾಥ್ ನೀಡಿದೆ. ಕ್ಲೀಮ್ ಈಗಾಗಲೇ ಭಾರತದಲ್ಲಿ ಕೆಲವು ಅನಿಮೇಷನ್ ಸಿನಿಮಾಗಳನ್ನು ನಿರ್ಮಿಸಿದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರವಿ ಮೀನ ರಾಶಿ, ಚಂದ್ರ ವೃಷಭ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ರಾಮನಗರ: ಮಾನವೀಯತೆ ಮೆರೆದ ಪೊಲೀಸ್​ ಪೇದೆಗೆ ಮೆಚ್ಚುಗೆ
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಈದ್ ಆಚರಿಸಿದ ಮುಸ್ಲಿಮರ ಮೇಲೆ ಹೂಮಳೆ ಸುರಿಸಿದ ಹಿಂದೂಗಳು
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಪವರ್‌ಪ್ಲೇನಲ್ಲೇ ಪವರ್ ಕಳೆದುಕೊಂಡ ಕೆಕೆಆರ್
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಉತ್ತರ ಕರ್ನಾಟಕದಲ್ಲಿ ನೀರಿಗಾಗಿ ಹಾಹಾಕಾರ ಈಗಾಗಲೇ ಶುರುವಾಗಿದೆ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಪೊಲೀಸ್ ತಂಡದ ಕಾರ್ಯಕ್ಷಮತೆಗೆ ವ್ಯಾಪಕ ಮೆಚ್ಚುಗೆ, ಅಭಿನಂದಿಸಿದ ಐಜಿಪಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಸಚಿವ ಎಂಪಿ ಪಾಟೀಲ್​ಗೆ ಚಿನ್ನದ ಉಂಗುರ ತೊಡಿಸಿ ಆಶೀರ್ವದಿಸಿದ ಸ್ವಾಮೀಜಿ
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ಪಕ್ಷದ ಸಂಘಟನೆ ವಿಜಯೇಂದ್ರ ನೇತೃತ್ವದಲ್ಲಿ ನಮ್ಮಆದ್ಯತೆಯಾಗಿದೆ: ಶ್ರೀರಾಮುಲು
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ದೇಗುಲದ ಭಕ್ತಿಗೀತೆ ಸೌಂಡ್ ಕಡಿಮೆ ಮಾಡುವಂತೆ ಮುಸ್ಲಿಂ ಯುವಕರಿಂದ ಅವಾಜ್
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ
ನೋಯ್ಡಾದಲ್ಲಿ ಬೆಂಕಿ ಅವಘಡ; 3 ಕಾರ್ಖಾನೆಗಳು ಸ್ಥಳದಲ್ಲೇ ಸುಟ್ಟು ಭಸ್ಮ