AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

ರಾಬರ್ಟ್​ ಸಿನಿಮಾದಲ್ಲಿ ದರ್ಶನ್​ ಎರಡು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎರಡನ್ನೂ ತುಂಬಾನೇ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಅವರ ನಟನೆಗೂ ಎಲ್ಲ ಕಡೆಗಳಿಂದ ಮೆಚ್ಚುಗೆಯ ಮಾತು ಕೇಳಿ ಬರುತ್ತಿದೆ.

Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!
ರವಿಶಂಕರ್​-ದರ್ಶನ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 17, 2021 | 3:56 PM

Share

‘ಆ ಹಾಲಿವುಡ್​ ನನ್​ ಮಕ್ಳು ಯಾರ್​​ಯಾರಿಗೋ ಆಸ್ಕರ್​ ಕೊಡ್ತಾರೆ. ಆದರೆ, ಡಿ ಬಾಸ್​ ದರ್ಶನ್​​ಗೆ ಆಸ್ಕರ್​ ಕೊಡಬೇಕು’- ಹೀಗೆ ಹೇಳಿದ್ದು ಬೇರಾರು ಅಲ್ಲ ರಾಬರ್ಟ್​ ಸಿನಿಮಾದಲ್ಲಿ ವಿಲನ್​ ಪಾತ್ರ ಮಾಡಿರುವ ರವಿಶಂಕರ್​. ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲಿ ಅವರು ಹೀಗೊಂದು ಬೇಡಿಕೆ ಇಟ್ಟರು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ರಾಬರ್ಟ್​ ಸಿನಿಮಾ ಕೇವಲ 6 ದಿನಕ್ಕೆ 60 ಕೋಟಿಗೂ ಅಧಿಕ ಗಳಿಕೆ ಮಾಡಿಕೊಂಡು ಮುನ್ನುಗ್ಗುತ್ತಿದೆ. ಇದೇ ಖುಷಿಗೆ ರಾಬರ್ಟ್​ ಚಿತ್ರತಂಡ ಖಾಸಗಿ ಹೋಟೆಲ್​ ಒಂದರಲ್ಲಿ ಸಕ್ಸಸ್​ ಮೀಟ್​ ನಡೆಸಿತ್ತು. ಈ ವೇಳೆ ರವಿಶಂಕರ್​ ವೇದಿಕೆ ಹತ್ತಿ ಮಾತನಾಡುವಾಗ ಈ ಬೇಡಿಕೆ ಇಟ್ಟರು.

ರಾಬರ್ಟ್​ ಹಿಟ್​ ಆಗೋಕೆ ಪ್ರೇಕ್ಷಕರು ಮೊದಲು ಕಾರಣ. ನಿಮಗೆ ನಾನು ಮೊದಲು ಧನ್ಯವಾದ ಹೇಳಬೇಕು. ಎರಡನೆಯದಾಗಿ ನಾನು ಥ್ಯಾಂಕ್ಸ್​ ಹೇಳಬೇಕಾಗಿದ್ದು ನಿರ್ದೇಶಕ ತರುಣ್​ ಸುಧೀರ್​ಗೆ. ಸಿನಿಮಾ ಅಚ್ಚುಕಟ್ಟಾಗಿ ಮೂಡಿ ಬರೋಕೆ ಅವರ ಪರಿಶ್ರಮ ಸಾಕಷ್ಟಿದೆ. ನಾವು ಎಲ್ಲೆಲ್ಲಿ ಕ್ಲ್ಯಾಪ್ಸ್​ ಬೀಳುತ್ತದೆ ಅಂದುಕೊಂಡಿದ್ದೆವೋ ಅಲ್ಲೆಲ್ಲವೂ ಪ್ರೇಕ್ಷಕರಿಂದ ಚಪ್ಪಾಳೆ ಬಿದ್ದಿದೆ. ರಾಬರ್ಟ್​ ಸಕ್ಸಸ್​​ ಆಗೋದಕ್ಕೆ ನಿರ್ಮಾಪಕರೂ ಕಾರಣ ಎಂದು ಖುಷಿ ವ್ಯಕ್ತಪಡಿಸಿದರು.

ವೇದಿಕೆ ಮೇಲೆ ದರ್ಶನ್​ ಅವರ ಬಗ್ಗೆ ಮಾತನಾಡಲು ರವಿಶಂಕರ್​ ಮರೆತಿಲ್ಲ. ಸಿನಿಮಾದ ಮುಖ್ಯರುವಾರಿ ಡಿ ಬಾಸ್​. ಅವರಿಗೆ ನಾನು ಎಷ್ಟು ಬಾರಿ ಧನ್ಯವಾದ ಹೇಳಿದರೂ ಸಾಕಾಗದು ಎಂದರು ರವಿಶಂಕರ್​. ಈ ವೇಳೆ, ಆ ಹಾಲಿವುಡ್​ ನನ್​ ಮಕ್ಳು ಯಾರ್​​​ಯಾರಿಗೋ ಆಸ್ಕರ್​ ಕೊಡುತ್ತಾರೆ. ನಿಜವಾಗಿಯೂ ಅವರು ಅವಾರ್ಡ್​ ನೀಡಬೇಕಾಗಿದ್ದು ದರ್ಶನ್​ಗೆ ಎಂದರು. ರಶವಿಶಂಕರ್ ಹೀಗೆ ಹೇಳೋಕೂ ಒಂದು ಕಾರಣ ಇದೆ. ರಾಬರ್ಟ್​ ಸಿನಿಮಾದಲ್ಲಿ ದರ್ಶನ್​ ಎರಡು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎರಡನ್ನೂ ತುಂಬಾನೇ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಇದನ್ನು ನೋಡಿ ಸಿನಿಮಾದಲ್ಲಿ ಹೀಗೆ ಹೇಳುತ್ತಾರೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದರು. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮೊಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ

Follow Us
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
ಶಾರ್ಟ್​ ಸರ್ಕ್ಯೂಟ್​ಗೆ ಸಿಲಿಂಡರ್​ ಸ್ಫೋಟ; 21 ಲಕ್ಷ ರೂ. ಕಳೆದುಕೊಂಡ ಮಾಲೀಕ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
80ರ ಫೋಟೊ ಟ್ರೆಂಡ್: ಸೈಬರ್ ವಂಚನೆ ಸಾಧ್ಯತೆಗಳ ಬಗ್ಗೆ ಪೊಲೀಸರಿಂದ ಸಂದೇಶ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ದಾಳಿಯನ್ನೇ ದೊಡ್ಡ ಸಾಧನೆಯಂತೆ ಬಿಂಬಿಸಿಕೊಳ್ತಿದೆ ಇಡಿ: ವಿಜಯ್ ಮಲ್ಯ ಟೀಕೆ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
ಬಿಗ್ ಬಾಸ್ ಮನೆಯಲ್ಲಿ ಮಹಿಳೆಯರು ಕೆಲಸಕ್ಕೆ ಮಾತ್ರ ಸೀಮಿತ? ಗಂಭೀರ ಆರೋಪ
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?
8 ಜನ ನಾಮಿನೇಟ್; ಇದರಲ್ಲಿ ಎಲಿಮಿನೇಟ್ ಆಗೋದು ಯಾರು?