AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!

ರಾಬರ್ಟ್​ ಸಿನಿಮಾದಲ್ಲಿ ದರ್ಶನ್​ ಎರಡು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎರಡನ್ನೂ ತುಂಬಾನೇ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಅವರ ನಟನೆಗೂ ಎಲ್ಲ ಕಡೆಗಳಿಂದ ಮೆಚ್ಚುಗೆಯ ಮಾತು ಕೇಳಿ ಬರುತ್ತಿದೆ.

Darshan: ದರ್ಶನ್​ಗೆ ಆಸ್ಕರ್​ ಕೊಡಿ; ವೇದಿಕೆಯ ಮೇಲೆ ಬೇಡಿಕೆ ಇಟ್ಟ ರವಿಶಂಕರ್​!
ರವಿಶಂಕರ್​-ದರ್ಶನ್​
ರಾಜೇಶ್ ದುಗ್ಗುಮನೆ
| Edited By: |

Updated on: Mar 17, 2021 | 3:56 PM

Share

‘ಆ ಹಾಲಿವುಡ್​ ನನ್​ ಮಕ್ಳು ಯಾರ್​​ಯಾರಿಗೋ ಆಸ್ಕರ್​ ಕೊಡ್ತಾರೆ. ಆದರೆ, ಡಿ ಬಾಸ್​ ದರ್ಶನ್​​ಗೆ ಆಸ್ಕರ್​ ಕೊಡಬೇಕು’- ಹೀಗೆ ಹೇಳಿದ್ದು ಬೇರಾರು ಅಲ್ಲ ರಾಬರ್ಟ್​ ಸಿನಿಮಾದಲ್ಲಿ ವಿಲನ್​ ಪಾತ್ರ ಮಾಡಿರುವ ರವಿಶಂಕರ್​. ರಾಬರ್ಟ್​ ಸಕ್ಸಸ್​ ಮೀಟ್​ ವೇದಿಕೆಯಲ್ಲಿ ಅವರು ಹೀಗೊಂದು ಬೇಡಿಕೆ ಇಟ್ಟರು. ಅಷ್ಟಕ್ಕೂ ಅವರು ಹೀಗೆ ಹೇಳಿದ್ದೇಕೆ ಎನ್ನುವ ಪ್ರಶ್ನೆಗೆ ಇಲ್ಲಿದೆ ಉತ್ತರ. ರಾಬರ್ಟ್​ ಸಿನಿಮಾ ಕೇವಲ 6 ದಿನಕ್ಕೆ 60 ಕೋಟಿಗೂ ಅಧಿಕ ಗಳಿಕೆ ಮಾಡಿಕೊಂಡು ಮುನ್ನುಗ್ಗುತ್ತಿದೆ. ಇದೇ ಖುಷಿಗೆ ರಾಬರ್ಟ್​ ಚಿತ್ರತಂಡ ಖಾಸಗಿ ಹೋಟೆಲ್​ ಒಂದರಲ್ಲಿ ಸಕ್ಸಸ್​ ಮೀಟ್​ ನಡೆಸಿತ್ತು. ಈ ವೇಳೆ ರವಿಶಂಕರ್​ ವೇದಿಕೆ ಹತ್ತಿ ಮಾತನಾಡುವಾಗ ಈ ಬೇಡಿಕೆ ಇಟ್ಟರು.

ರಾಬರ್ಟ್​ ಹಿಟ್​ ಆಗೋಕೆ ಪ್ರೇಕ್ಷಕರು ಮೊದಲು ಕಾರಣ. ನಿಮಗೆ ನಾನು ಮೊದಲು ಧನ್ಯವಾದ ಹೇಳಬೇಕು. ಎರಡನೆಯದಾಗಿ ನಾನು ಥ್ಯಾಂಕ್ಸ್​ ಹೇಳಬೇಕಾಗಿದ್ದು ನಿರ್ದೇಶಕ ತರುಣ್​ ಸುಧೀರ್​ಗೆ. ಸಿನಿಮಾ ಅಚ್ಚುಕಟ್ಟಾಗಿ ಮೂಡಿ ಬರೋಕೆ ಅವರ ಪರಿಶ್ರಮ ಸಾಕಷ್ಟಿದೆ. ನಾವು ಎಲ್ಲೆಲ್ಲಿ ಕ್ಲ್ಯಾಪ್ಸ್​ ಬೀಳುತ್ತದೆ ಅಂದುಕೊಂಡಿದ್ದೆವೋ ಅಲ್ಲೆಲ್ಲವೂ ಪ್ರೇಕ್ಷಕರಿಂದ ಚಪ್ಪಾಳೆ ಬಿದ್ದಿದೆ. ರಾಬರ್ಟ್​ ಸಕ್ಸಸ್​​ ಆಗೋದಕ್ಕೆ ನಿರ್ಮಾಪಕರೂ ಕಾರಣ ಎಂದು ಖುಷಿ ವ್ಯಕ್ತಪಡಿಸಿದರು.

ವೇದಿಕೆ ಮೇಲೆ ದರ್ಶನ್​ ಅವರ ಬಗ್ಗೆ ಮಾತನಾಡಲು ರವಿಶಂಕರ್​ ಮರೆತಿಲ್ಲ. ಸಿನಿಮಾದ ಮುಖ್ಯರುವಾರಿ ಡಿ ಬಾಸ್​. ಅವರಿಗೆ ನಾನು ಎಷ್ಟು ಬಾರಿ ಧನ್ಯವಾದ ಹೇಳಿದರೂ ಸಾಕಾಗದು ಎಂದರು ರವಿಶಂಕರ್​. ಈ ವೇಳೆ, ಆ ಹಾಲಿವುಡ್​ ನನ್​ ಮಕ್ಳು ಯಾರ್​​​ಯಾರಿಗೋ ಆಸ್ಕರ್​ ಕೊಡುತ್ತಾರೆ. ನಿಜವಾಗಿಯೂ ಅವರು ಅವಾರ್ಡ್​ ನೀಡಬೇಕಾಗಿದ್ದು ದರ್ಶನ್​ಗೆ ಎಂದರು. ರಶವಿಶಂಕರ್ ಹೀಗೆ ಹೇಳೋಕೂ ಒಂದು ಕಾರಣ ಇದೆ. ರಾಬರ್ಟ್​ ಸಿನಿಮಾದಲ್ಲಿ ದರ್ಶನ್​ ಎರಡು ಶೇಡ್​ಗಳಲ್ಲಿ ಕಾಣಿಸಿಕೊಂಡಿದ್ದಾರೆ. ಈ ಎರಡನ್ನೂ ತುಂಬಾನೇ ಅಚ್ಚುಕಟ್ಟಾಗಿ ನಿರ್ವಹಿಸಿದ್ದಾರೆ. ಇದನ್ನು ನೋಡಿ ಸಿನಿಮಾದಲ್ಲಿ ಹೀಗೆ ಹೇಳುತ್ತಾರೆ.

ಈ ಹಿಂದೆ ತರುಣ್​ ಸುಧೀರ್​ ನಿರ್ದೇಶನ ಮಾಡಿದ್ದ ‘ಚೌಕ’ ಸಿನಿಮಾದಲ್ಲಿ ದರ್ಶನ್​ ಅವರು ರಾಬರ್ಟ್​ ಎಂಬ ಅತಿಥಿ ಪಾತ್ರವನ್ನು ಮಾಡಿದ್ದರು. ಅದೇ ಪಾತ್ರವನ್ನು ಮುಖ್ಯವಾಗಿ ಇಟ್ಟುಕೊಂಡು ತರುಣ್​ ಅವರು ಹೊಸ ಕಥೆ ಬರೆದು ‘ರಾಬರ್ಟ್​’ ಸಿನಿಮಾ ಮಾಡಿದ್ದರು. ಆಶಾ ಭಟ್​ ಸಿನಿಮಾದ ನಾಯಕಿ. ತೆಲುಗಿನ ಖಳ ಜಗಪತಿ ಬಾಬು ಈ ಸಿನಿಮಾದಲ್ಲಿ ಪ್ರಮುಖ ವಿಲನ್​ ಆಗಿ ಕಾಣಿಸಿಕೊಂಡಿದ್ದಾರೆ. ವಿನೋದ್​​ ಪ್ರಭಾಕರ್​, ರವಿಶಂಕರ್​, ಸೋನಲ್​ ಮೊಂಥೆರೋ, ಚಿಕ್ಕಣ್ಣ, ಅವಿನಾಶ್​, ದೇವರಾಜ್​, ಶಿವರಾಜ್​ ಕೆ.ಆರ್​. ಪೇಟೆ, ಐಶ್ವರ್ಯಾ ಪ್ರಸಾದ್​ ಮುಂತಾದವರು ಸಿನಿಮಾದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: Puneeth Rajkumar Birthday: ಪುನೀತ್​ ಜನ್ಮದಿನಕ್ಕೆ ಶುಭಕೋರಿದ ದರ್ಶನ್​-ಸುದೀಪ್​! ಅಪ್ಪುಗೆ ಶುಭಾಶಯಗಳ ಸುರಿಮಳೆ

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು