AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಸ ಚಿತ್ರ ಘೋಷಿಸಿದ ಹೊಂಬಾಳೆ, ಪೋಸ್ಟರ್​ ಮೂಡಿಸಿದೆ ಹಲವು ಪ್ರಶ್ನೆ

Hombale Films: ಇತ್ತೀಚೆಗಷ್ಟೆ ನಟ ಪ್ರಭಾಸ್​ ಜೊತೆಗೆ ಮೂರು ಸಿನಿಮಾ ಮಾಡುವುದಾಗಿ ಘೋಷಣೆ ಮಾಡಿರುವ ಹೊಂಬಾಳೆ ಫಿಲಮ್ಸ್ ಇದೀಗ ಹೊಸದೊಂದು ಸಿನಿಮಾ ಘೋಷಣೆ ಮಾಡಿದೆ. ಸಿನಿಮಾದ ಪೋಸ್ಟರ್ ಮಾತ್ರವೇ ಬಿಡುಗಡೆ ಮಾಡಲಾಗಿದ್ದು, ಸಿನಿಮಾದ ಇತರೆ ಮಾಹಿತಿ ನವೆಂಬರ್ 16ಕ್ಕೆ ತಿಳಿಯಲಿವೆ.

ಹೊಸ ಚಿತ್ರ ಘೋಷಿಸಿದ ಹೊಂಬಾಳೆ, ಪೋಸ್ಟರ್​ ಮೂಡಿಸಿದೆ ಹಲವು ಪ್ರಶ್ನೆ
ಮಂಜುನಾಥ ಸಿ.
|

Updated on:Nov 15, 2024 | 1:05 PM

Share

ಭಾರತದ ಟಾಪ್ ನಿರ್ಮಾಣ ಸಂಸ್ಥೆಗಳಲ್ಲಿ ಒಂದೆನಿಸಿಕೊಂಡಿರುವ ಕರ್ನಾಟಕದ ಹೊಂಬಾಳೆ ಫಿಲಮ್ಸ್ ಹೊಸ ಸಿನಿಮಾ ಘೋಷಣೆ ಮಾಡಿದೆ. ನವೆಂಬರ್ 15 ರಂದು ಪೋಸ್ಟರ್ ಒಂದನ್ನು ಹಂಚಿಕೊಂಡಿರುವ ಹೊಂಬಾಳೆ, ಸಿನಿಮಾದ ಕುರಿತು ಕುತೂಹಲ ಹುಟ್ಟಿಸಿದೆ. ಈಗ ಬಿಡುಗಡೆ ಮಾಡಲಾಗಿರುವ ಪೋಸ್ಟರ್​ನಲ್ಲಿ ಸಿನಿಮಾ ಬಗ್ಗೆ ಹೆಚ್ಚಿನ ಮಾಹಿತಿ ಹಂಚಿಕೊಂಡಿಲ್ಲ, ಆದರೆ ಪೋಸ್ಟರ್ ನೋಡಿದವರಿಗೆ ಇದು ಪೌರಾಣಿಕ ಸಿನಿಮಾ ಇರಬಹುದು ಎಂಬ ಅನುಮಾನ ಮೂಡಿದೆ. ಜೊತೆಗೆ ಇದು ಅನಿಮೇಷನ್ ಸಿನಿಮಾ ಆಗಿರಬಹುದೆಂಬ ಅನುಮಾನವೂ ಮೂಡುತ್ತಿದೆ.

ಹೊಂಬಾಳೆ ಈಗ ಹಂಚಿಕೊಂಡಿರುವ ಪೋಸ್ಟರ್​ನಲ್ಲಿ ರಕ್ತ ಮೆತ್ತಿದ ಕೈ ಮಾತ್ರವೇ ಕಾಣುತ್ತಿದ್ದು, ಪೌರಾಣಿಕ ಕತೆಯಾದ ನರಸಿಂಹನ ಕೈ ರೀತಿ ಕಾಣುತ್ತಿದೆ. ಚೂಪಾದ ಉಗುರುಗಳು ಜೊತೆಗೆ ಕೈಗೆ ಧರಿಸಿರುವ ಕೆಲವು ಆಭರಣಗಳು ಗಮನ ಸೆಳೆಯುತ್ತಿವೆ. ಪೋಸ್ಟರ್ ಬಿಡುಗಡೆ ಮಾಡಿರುವ ಹೊಂಬಾಳೆ, ‘ನಂಬಿಕೆಗೆ ಸವಾಲು ಬಂದಾಗ ಅವನು ಬರುತ್ತಾನೆ’ ಎಂಬ ಅಡಿಬರಹವನ್ನು ನೀಡಿದೆ. ಸಿನಿಮಾದ ಇತರೆ ಮಾಹಿತಿಯನ್ನು ನಾಳೆ ಅಂದರೆ ನವೆಂಬರ್ 16 ಮಧ್ಯಾಹ್ನ 3:33 ಕ್ಕೆ ಹಂಚಿಕೊಳ್ಳುವುದಾಗಿ ಘೋಷಿಸಿದೆ.

ಸಿನಿಮಾ ಹಿಂದಿ, ಕನ್ನಡ, ತೆಲುಗು, ತಮಿಳು ಮತ್ತು ಮಲಯಾಳಂ ಭಾಷೆಗಳಲ್ಲಿ ಬರುತ್ತಿರುವಾಗಿ ಪೋಸ್ಟರ್​ನಲ್ಲಿದ್ದು, ಸಿನಿಮಾವನ್ನು ಅಶ್ವಿನ್ ಕುಮಾರ್ ಎಂಬುವರು ನಿರ್ದೇಶನ ಮಾಡುತ್ತಿದ್ದಾರೆ. ಅಂದಹಾಗೆ ಈ ಅಶ್ವಿನ್ ಕುಮಾರ್ ಯಾರು ಎಂಬುದು ಸಹ ಸದ್ಯಕ್ಕೆ ಅನುಮಾನ. ಆಸ್ಕರ್​ಗೆ ನಾಮಿನೇಟ್ ಆಗಿದ್ದ ‘ಲಿಟಲ್ ಟೆರರಿಸ್ಟ್’, ‘ನೋ ಫಾದರ್ ಇನ್ ಕಾಶ್ಮೀರ್’ ಅಂಥಹಾ ಸಿನಿಮಾಗಳನ್ನು ನಿರ್ದೇಶಿಸಿರುವ ಬೆಂಗಾಲಿ ನಿರ್ದೇಶಕ ಅಶ್ವಿನ್ ಕುಮಾರ್ ಅವರೇ ಈ ಸಿನಿಮಾ ನಿರ್ದೇಶಿಸುತ್ತಿದ್ದಾರಾ ಎಂಬ ಅನುಮಾನ ಇದೆಯಾದರೂ ಖಾತ್ರಿಗೆ ನಾಳೆಯ ವರೆಗೂ ಕಾಯಬೇಕಿದೆ.

ಇದನ್ನೂ ಓದಿ:ಪ್ರಭಾಸ್ ಜೊತೆ ಮೂರು ವರ್ಷಕ್ಕೆ ಮೂರು ಸಿನಿಮಾ, ಹೊಂಬಾಳೆ ಘೋಷಣೆ

ಸಿನಿಮಾವನ್ನು ಹೊಂಬಾಳೆ ಹಾಗೂ ಕ್ಲೀನ್ ಪ್ರೊಡಕ್ಷನ್ಸ್ ಒಟ್ಟಿಗೆ ನಿರ್ಮಾಣ ಮಾಡುತ್ತಿದ್ದು, ಕ್ಲೀನ್ ಪ್ರೊಡಕ್ಷನ್ಸ್​ನವರು ಅನಿಮೇಷನ್ ಸಿನಿಮಾಗಳನ್ನು ಮಾಡುವುದಕ್ಕೆ ಜನಪ್ರಿಯ. ಹಾಗಾಗಿ ಇದು ಅನಿಮೇಟೆಡ್ ಸಿನಿಮಾ ಆಗಿರಬಹುದಾ ಎಂಬ ಅನುಮಾನ ಮೂಡಿದೆ. ಪೋಸ್ಟರ್​ನಲ್ಲಿ ಕಾಣಿಸಿಕೊಂಡಿರುವ ವಾನರ ರೂಪಿಯ ಕೈ ಸಹ ಇದಕ್ಕೆ ಪುಷ್ಠಿ ನೀಡುತ್ತಿದೆ.

ಹೊಂಬಾಳೆ ಇತ್ತೀಚೆಗಷ್ಟೆ ನಟ ಪ್ರಭಾಸ್ ಜೊತೆಗೆ ಮೂರು ಸಿನಿಮಾ ಒಟ್ಟಿಗೆ ಘೋಷಣೆ ಮಾಡಿದೆ. ಮೊದಲಿಗೆ ‘ಸಲಾರ್ 2’ ಸಿನಿಮಾ ಬಿಡುಗಡೆ ಆಗಲಿದೆ. ‘ಕೆಜಿಎಫ್ 3’ ಸಹ ಮುಂದಿನ ವರ್ಷ ಪ್ರಾರಂಭ ಆಗಲಿದೆ. ಮಲಯಾಳಂನಲ್ಲಿ ಪೃಥ್ವಿರಾಜ್ ಸುಕುಮಾರ್ ನಿರ್ದೇಶನದಲ್ಲಿ ‘ಟೈಸನ್’ ಸಿನಿಮಾ ಪ್ರಾರಂಭ ಮಾಡಿದ್ದರಾದರೂ ಆ ಸಿನಿಮಾ ಸೆಟ್ಟೇರಿದಂತಿಲ್ಲ. ಈಗ ಹೊಸ ಸಿನಿಮಾ ಘೋಷಣೆ ಮಾಡಿದ್ದಾರೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:02 pm, Fri, 15 November 24

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!