AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಒಂದೇ ಟ್ವೀಟ್ ಮೂಲಕ ಎಲ್ಲಾ ಅನುಮಾನಗಳಿಗೆ ತೆರೆ ಎಳೆದ ‘ಹೊಂಬಾಳೆ ಫಿಲ್ಮ್ಸ್’; ಮಹತ್ವದ ಘೋಷಣೆ

Dhoomam Movie: ‘ಧೂಮಂ’ ಸಿನಿಮಾಗೆ ಪವನ್ ಕುಮಾರ್ ನಿರ್ದೇಶನ ಇದೆ. ಫಹಾದ್ ಫಾಸಿಲ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಈ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗೋದು ವಿಳಂಬ ಆಗಲಿದೆ ಎನ್ನಲಾಗಿತ್ತು.

ಒಂದೇ ಟ್ವೀಟ್ ಮೂಲಕ ಎಲ್ಲಾ ಅನುಮಾನಗಳಿಗೆ ತೆರೆ ಎಳೆದ ‘ಹೊಂಬಾಳೆ ಫಿಲ್ಮ್ಸ್’; ಮಹತ್ವದ ಘೋಷಣೆ
ಧೂಮಂ
ರಾಜೇಶ್ ದುಗ್ಗುಮನೆ
|

Updated on: Jun 20, 2023 | 10:31 AM

Share

ವಿಜಯ್ ಕಿರಗಂದೂರು ಒಡೆತನದ ‘ಹೊಂಬಾಳೆ ಫಿಲ್ಮ್ಸ್’ (Hombale Films) ನಿರ್ಮಾಣ ಸಂಸ್ಥೆಯ ಜನಪ್ರಿಯತೆ ಹೆಚ್ಚಿದೆ. ‘ಕೆಜಿಎಫ್ 2’ ಬಳಿಕ ಹಲವು ಭಾಷೆಗಳಲ್ಲಿ ಈ ನಿರ್ಮಾಣ ಸಂಸ್ಥೆ ಸಿನಿಮಾ ಘೋಷಿಸುತ್ತಿದೆ. ಈಗ ಹೊಂಬಾಳೆ ಫಿಲ್ಮ್ಸ್ ನಿರ್ಮಾಣದ ‘ಧೂಮಂ’ ಸಿನಿಮಾ (Dhoomam Movie) ರಿಲೀಸ್​ಗೆ ರೆಡಿ ಇದೆ. ಈ ಸಿನಿಮಾದ ಮೂಲ ಭಾಷೆ ಮಲಯಾಳಂ. ಈ ಚಿತ್ರ ಕನ್ನಡದಲ್ಲೂ ರಿಲೀಸ್ ಆಗುತ್ತಿದೆ. ಆದರೆ, ಈ ಬಗ್ಗೆ ಒಂದಷ್ಟು ಗೊಂದಲ ಇತ್ತು. ಅದಕ್ಕೆಲ್ಲ ತೆರೆ ಬಿದ್ದಿದೆ. ಹೊಂಬಾಳೆ ಫಿಲ್ಮ್ಸ್ ಮಾಡಿದ ಒಂದು ಟ್ವೀಟ್​ನಿಂದ ಎಲ್ಲದಕ್ಕೂ ಸ್ಪಷ್ಟನೆ ಸಿಕ್ಕಿದೆ.

‘ಧೂಮಂ’ ಸಿನಿಮಾಗೆ ಪವನ್ ಕುಮಾರ್ ನಿರ್ದೇಶನ ಇದೆ. ಫಹಾದ್ ಫಾಸಿಲ್ ಅವರು ಈ ಚಿತ್ರದಲ್ಲಿ ಮುಖ್ಯಭೂಮಿಕೆ ನಿರ್ವಹಿಸಿದ್ದಾರೆ. ಮಲಯಾಳಂ ಹಾಗೂ ಕನ್ನಡ ಭಾಷೆಯಲ್ಲಿ ರಿಲೀಸ್ ಆದ ಟ್ರೇಲರ್ ಎಲ್ಲರ ಗಮನ ಸೆಳೆದಿದೆ. ಸಸ್ಪೆನ್ಸ್ ಥ್ರಿಲ್ಲರ್ ಶೈಲಿಯಲ್ಲಿ ಟ್ರೇಲರ್ ಮೂಡಿ ಬಂದಿದೆ. ಈ ಸಿನಿಮಾ ಕನ್ನಡದಲ್ಲಿ ರಿಲೀಸ್ ಆಗೋದು ವಿಳಂಬ ಆಗಲಿದೆ ಎನ್ನಲಾಗಿತ್ತು. ಆದರೆ, ಇದು ಸುಳ್ಳಾಗಿದೆ. ಜೂನ್ 23ರಂದು ಮಲಯಾಳಂ ಹಾಗೂ ಕನ್ನಡದಲ್ಲಿ ಈ ಸಿನಿಮಾ ಒಟ್ಟೊಟ್ಟಿಗೆ ರಿಲೀಸ್ ಆಗುತ್ತಿದೆ.

‘ನಿಲ್ಲಲೇ ಬೇಕು ಎಲ್ಲ ದಿಮಾಕು. ಕಾಲಪುರುಷನ ಕಾಲಿನ ಕೆಳಗೆ. ಧೂಮಂ ಕನ್ನಡದಲ್ಲಿ ಜೂನ್ 23ರಂದು ರಾಜ್ಯದಾದ್ಯಂತ ಬಿಡುಗಡೆ’ ಎಂದು ಹೊಂಬಾಳೆ ಫಿಲ್ಮ್ಸ್ ಟ್ವೀಟ್ ಮಾಡಿದೆ. ಈ ಮೂಲಕ ಎಲ್ಲಾ ಕುತೂಹಲಗಳಿಗೆ ತೆರೆ ಎಳೆಯಲಾಗಿದೆ. ಇದರಿಂದ ಅಭಿಮಾನಿಗಳು ಖುಷಿಯಾಗಿದ್ದಾರೆ. ಸಿನಿಮಾ ಯಾವ ರೀತಿಯಲ್ಲಿ ಮೂಡಿಬರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಇದೆ.

ಸಖತ್ ಸ್ಪೀಡ್​ನಲ್ಲಿ ‘ಧೂಮಂ’ ಕೆಲಸ ಪೂರ್ಣಗೊಂಡಿದೆ. ಅಕ್ಟೋಬರ್ 9ರಂದು ‘ಧೂಮಂ’ ಚಿತ್ರಕ್ಕೆ ಮುಹೂರ್ತ ಮಾಡಲಾಗಿತ್ತು. ‘ಧೂಮಂ’ ಚಿತ್ರದ ಮೊದಲ ಸನ್ನಿವೇಶಕ್ಕೆ ಮಂಜುನಾಥ್ ಕಿರಗಂದೂರು ಆರಂಭ ಫಲಕ ತೋರಿಸಿದ್ದರು. ಶೈಲಜಾ ವಿಜಯ್ ಕಿರಗಂದೂರು ಕ್ಯಾಮೆರಾ ಚಾಲನೆ ನೀಡಿದ್ದರು. ಮೂರೇ ತಿಂಗಳಲ್ಲಿ ‘ಧೂಮಂ’ ಸಿನಿಮಾದ ಕೆಲಸ ಪೂರ್ಣಗೊಂಡಿತ್ತು. ಈಗ ಸಿನಿಮಾ ರಿಲೀಸ್​ಗೆ ರೆಡಿ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Follow Us
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಉದ್ಯೋಗಾಕಾಂಕ್ಷಿಗಳಿಗೆ ಗುಡ್​​ನ್ಯೂಸ್​​ ಕೊಟ್ಟ ರಾಜ್ಯ ಸರ್ಕಾರ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಧಾರವಾಡದ ರಾಮನಾಳದಲ್ಲಿ ಸರ್ವಧರ್ಮ ಸಮನ್ವಯತೆಗೆ ಸಾಕ್ಷಿಯಾದ ಮೊಹರಂ ಆಚರಣೆ
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಮಂತ್ರಾಲಯಕ್ಕೆ ಭಕ್ತ ಸಾಗರ: 21 ದಿನಗಳಲ್ಲೇ ಬಂತು ಕೋಟಿ ಕೋಟಿ ಕಾಣಿಕೆ!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಚಲಿಸುತ್ತಿದ್ದ ಓಮಿನಿ ಕಾರಿನಿಂದ ಕೆಳಗೆ ಬಿದ್ದ ಐವರು ಮಕ್ಕಳು!
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಎಣ್ಣೆ ಕಿಕ್​ನಲ್ಲಿ ಮಹಿಳಾ PSIಗೇ ಕಾಲಿನಿಂದ ಒದ್ದು ನಿಂದಿಸಿದ ಯುವತಿ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಮಂಜುನಾಥಸ್ವಾಮಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದ ಬಿವೈ ವಿಜಯೇಂದ್ರ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ಶರಾವತಿ ವಿದ್ಯುದಾಗಾರಕ್ಕೆ ನುಗ್ಗಿದ ನೀರು: 7ನೇ ಯುನಿಟ್‌ನಲ್ಲಿ ಭಾರೀ ಅವಘಡ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ವಾಣಿಜ್ಯ ಎಲ್‌ಪಿಜಿ ಪೂರೈಕೆ ಮೇಲಿನ ಎಲ್ಲಾ ನಿರ್ಬಂಧ ಹಿಂಪಡೆದ ಕೇಂದ್ರ
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಇಂದು ಈ ರಾಶಿಯವರಿಗೆ ಇಂದು ಅನಾರೋಗ್ಯ ಕಾಡಬಹುದು, ಎಚ್ಚರ!
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ
ಭಾವಿ ಪತ್ನಿಗೆ ಹಾಕಿದ್ದ ಚಿನ್ನ ನಕಲಿ: ಮದ್ವೆ ಕ್ಯಾನ್ಸಲ್, ಕಂಗಾಲಾದ ಯುವಕ