AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hombale Films: ಹೊಂಬಾಳೆ 12ನೇ ಸಿನಿಮಾ ‘ರಾಘವೇಂದ್ರ ಸ್ಟೋರ್ಸ್’​ಗೆ ಜಗ್ಗೇಶ್​ ಹೀರೋ; ನಿರ್ದೇಶನ ಯಾರದ್ದು?

Raghavendra Stores: ವಿಜಯ್​ ಕಿರಂಗದೂರು ಆರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ತಮ್ಮ ನಿರ್ಮಾಣದ 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

Hombale Films: ಹೊಂಬಾಳೆ 12ನೇ ಸಿನಿಮಾ ‘ರಾಘವೇಂದ್ರ ಸ್ಟೋರ್ಸ್’​ಗೆ ಜಗ್ಗೇಶ್​ ಹೀರೋ; ನಿರ್ದೇಶನ ಯಾರದ್ದು?
Hombale Films: ಹೊಂಬಾಳೆ 12ನೇ ಸಿನಿಮಾ ‘ರಾಘವೇಂದ್ರ ಸ್ಟೋರ್ಸ್​ಗೆ’ ಜಗ್ಗೇಶ್​ ಹೀರೋ; ನಿರ್ದೇಶನ ಯಾರದ್ದು?
TV9 Web
| Edited By: |

Updated on:Sep 22, 2021 | 3:36 PM

Share

‘ಕೆಜಿಎಫ್​ ಚಾಫ್ಟರ್​ 2’ನಂತಹ ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ವಿಜಯ್​ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್​ ತಮ್ಮ 12ನೇ ಸಿನಿಮಾ ಘೋಷಣೆ ಮಾಡಿದೆ. ಅದಕ್ಕೆ ‘‘ರಾಘವೇಂದ್ರ ಸ್ಟೋರ್ಸ್’ ಎಂದು ಹೆಸರಿಡಲಾಗಿದ್ದು, ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಇಂದು (ಸೆಪ್ಟೆಂಬರ್​ 22) ಸಿನಿಮಾದ ಟೈಟಲ್​ ಹಾಗೂ ಫಸ್ಟ್​ಲುಕ್​ ಬಿಡುಗಡೆ ಆಗಿದೆ.

ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನವೆಂಬರ್​ 22ರಿಂದ ಸಿನಿಮಾ ಶೂಟಿಂಗ್​ ಆರಂಭಗೊಳ್ಳಲಿದೆ. ಈ ಸಿನಿಮಾದಲ್ಲಿ ಜಗ್ಗೇಶ್​ ಭಿನ್ನ ಅವತಾರಾದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ.

2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾ ಮೂಲಕ ವಿಜಯ್​ ಕಿರಗಂದೂರು ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟರು. ಇದಾದ ನಂತರ 2015ರಲ್ಲಿ ಇವರ ನಿರ್ಮಾಣದ ‘ಮಾಸ್ಟರ್​ಪೀಸ್​’ ತೆರೆಗೆ ಬಂತು. 2017ರಲ್ಲಿ ‘ರಾಜಕುಮಾರ’​ ಸಿನಿಮಾ ರಿಲೀಸ್​ ಆಯಿತು. ‘ಕೆಜಿಎಫ್​: ಚಾಪ್ಟರ್​ 1’ ನಿರ್ಮಾಣ ಮಾಡಿ 2018ರಲ್ಲಿ ಅದನ್ನು ರಿಲೀಸ್​ ಮಾಡಿತು ಹೊಂಬಾಳೆ ಫಿಲ್ಮ್ಸ್​. ಈ ಸಿನಿಮಾ ದೊಡ್ಡ ಯಶಸ್ಸು ಪಡೆಯಿತು. ಈ ವರ್ಷ ‘ಯುವರತ್ನ’ ಸಿನಿಮಾ ರಿಲೀಸ್​ ಆಗಿದೆ. ‘ಕೆಜಿಎಫ್​ 2’ 2022ಕ್ಕೆ ರಿಲೀಸ್ ಆಗುತ್ತಿದೆ. ಈ ಆರು ಸಿನಿಮಾಗಳ ಪೈಕಿ ಮೂರು ಚಿತ್ರಗಳಲ್ಲಿ ಪುನೀತ್​ ಹಾಗೂ ಮೂರು ಚಿತ್ರಗಳಲ್ಲಿ ಯಶ್​ ನಟಿಸಿದ್ದರು.

ಈಗ ಹೊಂಬಾಳೆ ಫಿಲ್ಮ್ಸ್​ ಬೇರೆಬೇರೆ ನಟರ ಜತೆ ಸಿನಿಮಾ ಮಾಡುತ್ತಿದೆ. ತೆಲುಗಿನ ‘ಸಲಾರ್​’ ಸಿನಿಮಾ ನಿರ್ಮಾಣ ಜವಾಬ್ದಾರಿ ಹೊಂಬಾಳೆ ಹೊತ್ತುಕೊಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್​ ಹೀರೋ. ಶ್ರೀಮುರಳಿ ನಟನೆಯ ‘ಭಗೀರ’, ಪುನೀತ್​ ನಟನೆಯ ‘ದ್ವಿತ್ವ’, ರಕ್ಷಿತ್​ ಶೆಟ್ಟಿ ನಿರ್ದೇಶನದ ‘ರಿಚರ್ಡ್​ ಆ್ಯಂಟೋನಿ’ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳುತ್ತಿರುವ ‘ಕಾಂತಾರ’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡುತ್ತಿದೆ.

ವಿಜಯ್​ ಕಿರಂಗದೂರು ಆರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ತಮ್ಮ ನಿರ್ಮಾಣದ 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ‘ಪ್ರತಿಯೊಬ್ಬರಲ್ಲೂ ಹಸಿವಿದೆ. ಪ್ರತಿ ಅಗಳಿನಲ್ಲೂ ತಿನ್ನುವವರ ಹೆಸರಿದೆ ಅನ್ನದಾತೋ ಸುಖೀಭವ’ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿತ್ತು.

ಇದನ್ನೂ ಓದಿ: ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ

 

Published On - 3:20 pm, Wed, 22 September 21

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!