Sign In

By signing in or creating an account, you agree with Associated Broadcasting Company's Terms & Conditions and Privacy Policy.

Hombale Films: ಹೊಂಬಾಳೆ 12ನೇ ಸಿನಿಮಾ ‘ರಾಘವೇಂದ್ರ ಸ್ಟೋರ್ಸ್’​ಗೆ ಜಗ್ಗೇಶ್​ ಹೀರೋ; ನಿರ್ದೇಶನ ಯಾರದ್ದು?

Raghavendra Stores: ವಿಜಯ್​ ಕಿರಂಗದೂರು ಆರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ತಮ್ಮ ನಿರ್ಮಾಣದ 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

Hombale Films: ಹೊಂಬಾಳೆ 12ನೇ ಸಿನಿಮಾ ‘ರಾಘವೇಂದ್ರ ಸ್ಟೋರ್ಸ್’​ಗೆ ಜಗ್ಗೇಶ್​ ಹೀರೋ; ನಿರ್ದೇಶನ ಯಾರದ್ದು?
Hombale Films: ಹೊಂಬಾಳೆ 12ನೇ ಸಿನಿಮಾ ‘ರಾಘವೇಂದ್ರ ಸ್ಟೋರ್ಸ್​ಗೆ’ ಜಗ್ಗೇಶ್​ ಹೀರೋ; ನಿರ್ದೇಶನ ಯಾರದ್ದು?
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on:Sep 22, 2021 | 3:36 PM

‘ಕೆಜಿಎಫ್​ ಚಾಫ್ಟರ್​ 2’ನಂತಹ ಬಿಗ್​ ಬಜೆಟ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿರುವ ವಿಜಯ್​ ಕಿರಗಂದೂರು ಅವರ ಹೊಂಬಾಳೆ ಫಿಲ್ಮ್ಸ್​ ತಮ್ಮ 12ನೇ ಸಿನಿಮಾ ಘೋಷಣೆ ಮಾಡಿದೆ. ಅದಕ್ಕೆ ‘‘ರಾಘವೇಂದ್ರ ಸ್ಟೋರ್ಸ್’ ಎಂದು ಹೆಸರಿಡಲಾಗಿದ್ದು, ಜಗ್ಗೇಶ್​ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಸಂತೋಷ್​ ಆನಂದ್​ರಾಮ್​ ನಿರ್ದೇಶನ ಸಿನಿಮಾಗಿದೆ. ಇಂದು (ಸೆಪ್ಟೆಂಬರ್​ 22) ಸಿನಿಮಾದ ಟೈಟಲ್​ ಹಾಗೂ ಫಸ್ಟ್​ಲುಕ್​ ಬಿಡುಗಡೆ ಆಗಿದೆ.

ಜಗ್ಗೇಶ್​ ಬಾಣಸಿಗನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ನವೆಂಬರ್​ 22ರಿಂದ ಸಿನಿಮಾ ಶೂಟಿಂಗ್​ ಆರಂಭಗೊಳ್ಳಲಿದೆ. ಈ ಸಿನಿಮಾದಲ್ಲಿ ಜಗ್ಗೇಶ್​ ಭಿನ್ನ ಅವತಾರಾದಲ್ಲಿ ಕಾಣಿಸಿಕೊಂಡಿದ್ದಾರೆ. ಅವರ ಲುಕ್​ ಅಭಿಮಾನಿಗಳಿಗೆ ಇಷ್ಟವಾಗಿದೆ.

2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾ ಮೂಲಕ ವಿಜಯ್​ ಕಿರಗಂದೂರು ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟರು. ಇದಾದ ನಂತರ 2015ರಲ್ಲಿ ಇವರ ನಿರ್ಮಾಣದ ‘ಮಾಸ್ಟರ್​ಪೀಸ್​’ ತೆರೆಗೆ ಬಂತು. 2017ರಲ್ಲಿ ‘ರಾಜಕುಮಾರ’​ ಸಿನಿಮಾ ರಿಲೀಸ್​ ಆಯಿತು. ‘ಕೆಜಿಎಫ್​: ಚಾಪ್ಟರ್​ 1’ ನಿರ್ಮಾಣ ಮಾಡಿ 2018ರಲ್ಲಿ ಅದನ್ನು ರಿಲೀಸ್​ ಮಾಡಿತು ಹೊಂಬಾಳೆ ಫಿಲ್ಮ್ಸ್​. ಈ ಸಿನಿಮಾ ದೊಡ್ಡ ಯಶಸ್ಸು ಪಡೆಯಿತು. ಈ ವರ್ಷ ‘ಯುವರತ್ನ’ ಸಿನಿಮಾ ರಿಲೀಸ್​ ಆಗಿದೆ. ‘ಕೆಜಿಎಫ್​ 2’ 2022ಕ್ಕೆ ರಿಲೀಸ್ ಆಗುತ್ತಿದೆ. ಈ ಆರು ಸಿನಿಮಾಗಳ ಪೈಕಿ ಮೂರು ಚಿತ್ರಗಳಲ್ಲಿ ಪುನೀತ್​ ಹಾಗೂ ಮೂರು ಚಿತ್ರಗಳಲ್ಲಿ ಯಶ್​ ನಟಿಸಿದ್ದರು.

ಈಗ ಹೊಂಬಾಳೆ ಫಿಲ್ಮ್ಸ್​ ಬೇರೆಬೇರೆ ನಟರ ಜತೆ ಸಿನಿಮಾ ಮಾಡುತ್ತಿದೆ. ತೆಲುಗಿನ ‘ಸಲಾರ್​’ ಸಿನಿಮಾ ನಿರ್ಮಾಣ ಜವಾಬ್ದಾರಿ ಹೊಂಬಾಳೆ ಹೊತ್ತುಕೊಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್​ ಹೀರೋ. ಶ್ರೀಮುರಳಿ ನಟನೆಯ ‘ಭಗೀರ’, ಪುನೀತ್​ ನಟನೆಯ ‘ದ್ವಿತ್ವ’, ರಕ್ಷಿತ್​ ಶೆಟ್ಟಿ ನಿರ್ದೇಶನದ ‘ರಿಚರ್ಡ್​ ಆ್ಯಂಟೋನಿ’ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳುತ್ತಿರುವ ‘ಕಾಂತಾರ’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡುತ್ತಿದೆ.

ವಿಜಯ್​ ಕಿರಂಗದೂರು ಆರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ತಮ್ಮ ನಿರ್ಮಾಣದ 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ಇತ್ತೀಚೆಗೆ ‘ಪ್ರತಿಯೊಬ್ಬರಲ್ಲೂ ಹಸಿವಿದೆ. ಪ್ರತಿ ಅಗಳಿನಲ್ಲೂ ತಿನ್ನುವವರ ಹೆಸರಿದೆ ಅನ್ನದಾತೋ ಸುಖೀಭವ’ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿತ್ತು.

ಇದನ್ನೂ ಓದಿ: ಸಡನ್​ ಆಗಿ ‘ಕಿಚ್ಚು’ ಹೊತ್ತಿಸಿದ ಹೊಂಬಾಳೆ ಫಿಲ್ಮ್ಸ್​; 11ನೇ ಸಿನಿಮಾ ಬಗ್ಗೆ ಕೆಜಿಎಫ್​ ನಿರ್ಮಾಪಕರ ಬ್ರೇಕಿಂಗ್​ ನ್ಯೂಸ್

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ

 

Published On - 3:20 pm, Wed, 22 September 21

ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಸಣ್ಣ ವಯಸ್ಸಲ್ಲಿ ಮಾಡಿದ್ದ ಆಣೆ: ಕೊಟ್ಟ ಮಾತು ನಡೆಸಿಕೊಟ್ಟ ಧ್ರುವ ಸರ್ಜಾ
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಹೋಳಿ ಹಬ್ಬದಂದೇ ಹರಿಯಾಣದ ಬಿಜೆಪಿ ನಾಯಕನ ಹತ್ಯೆ; ಸಿಸಿಟಿವಿ ವಿಡಿಯೋ ವೈರಲ್
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ಅಮೃತಸರ ದೇವಾಲಯದ ಮೇಲಿನ ಗ್ರೆನೇಡ್ ದಾಳಿ ಸಿಸಿಟಿವಿಯಲ್ಲಿ ಸೆರೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ರಸ್ತೆಯಲ್ಲಿ ಮಹಿಳೆ, ಮಗುವಿನ ಮೇಲೆ ಬೀದಿ ಹಸು ಅಟ್ಯಾಕ್; ವಿಡಿಯೋ ಇಲ್ಲಿದೆ
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಯುವತಿಯರೊಂದಿಗೆ ಮಕ್ಕಳನ್ನು ಹೆಗಲ ಮೇಲೆ ಹೊತ್ತು ಕುಣಿದ ಗೃಹಿಣಿಯರು
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಕುಂಭಮೇಳ ಎಫೆಕ್ಟ್: ನಾಗಾಸಾಧು ವೇಷ ಹಾಕಿಕೊಂಡು ಹೋಳಿ ಆಚರಣೆ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಸಾಯುವ ಮುನ್ನ ದಿವ್ಯಾ ಕುಮಾರ್ 4 ಬಾಲ್​ನಲ್ಲಿ 20 ರನ್ ಬಾರಿಸಿದ ವಿಡಿಯೋ
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಮಾರ್ಚ್ 8ರಂದು ನಾನು ಮತ್ತು ಸಿಎಂ ಇಬ್ಬರೂ ಲಭ್ಯರಿರಲಿಲ್ಲ: ಶಿವಕುಮಾರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಬೆಂಗಳೂರಿನಲ್ಲಿ ಕಸ ವಿಲೇವಾರಿ ಸಮಸ್ಯೆ ಒಪ್ಪಿಕೊಂಡ ಬಿಬಿಎಂಪಿ ಕಮಿಷನರ್
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ
ಹೋಳಿ ವೇಳೆ ಪೊಲೀಸ್ ಅಧಿಕಾರಿಗೆ ಡ್ಯಾನ್ಸ್ ಮಾಡಲು ತೇಜ್ ಪ್ರತಾಪ್ ಒತ್ತಾಯ