AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಮತ್ತೊಂದು ಸಿನಿಮಾ; ಸೆಪ್ಟೆಂಬರ್​​ 22ಕ್ಕೆ ಟೈಟಲ್​ ಲಾಂಚ್​

ವಿಜಯ್​ ಕಿರಂಗದೂರು ಆರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ತಮ್ಮ ನಿರ್ಮಾಣದ 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ.

ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಮತ್ತೊಂದು ಸಿನಿಮಾ; ಸೆಪ್ಟೆಂಬರ್​​ 22ಕ್ಕೆ ಟೈಟಲ್​ ಲಾಂಚ್​
ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ಮತ್ತೊಂದು ಸಿನಿಮಾ; ಸೆಪ್ಟೆಂಬರ್​​ 22ಕ್ಕೆ ಟೈಟಲ್​ ಲಾಂಚ್​
TV9 Web
| Edited By: |

Updated on: Sep 20, 2021 | 9:06 PM

Share

‘ಕೆಜಿಎಫ್’ ಹಿಟ್​ ಆದ ನಂತರದಲ್ಲಿ ಹೊಂಬಾಳೆ ಫಿಲ್ಮ್ಸ್​ ವಿಜಯ್​ ಕಿರಗಂದೂರು ಸಾಲುಸಾಲು ಸಿನಿಮಾಗಳನ್ನು ಘೋಷಣೆ ಮಾಡುತ್ತಿದ್ದಾರೆ. ಈಗ 12ನೇ ಸಿನಿಮಾ ಟೈಟಲ್​ ಲಾಂಚ್​ಗೆ ಹೊಂಬಾಳೆ ಫಿಲ್ಮ್ಸ್​ ಮುಹೂರ್ತ ಫಿಕ್ಸ್​ ಮಾಡಿದೆ. ಸೆಪ್ಟೆಂಬರ್ 22ರಂದು ಚಿತ್ರದ ಟೈಟಲ್​ ಲಾಂಚ್​ ಹಾಗೂ ಫಸ್ಟ್​ ಲುಕ್​ ರಿವೀಲ್​ ಆಗಲಿದೆ.

2014ರಲ್ಲಿ ತೆರೆಗೆ ಬಂದ ‘ನಿನ್ನಿಂದಲೇ’ ಸಿನಿಮಾ ಮೂಲಕ ವಿಜಯ್​ ಕಿರಗಂದೂರು ಸಿನಿಮಾ ನಿರ್ಮಾಣಕ್ಕೆ ಕಾಲಿಟ್ಟರು. ಇದಾದ ನಂತರ 2015ರಲ್ಲಿ ಇವರ ನಿರ್ಮಾಣದ ‘ಮಾಸ್ಟರ್​ಪೀಸ್​’ ತೆರೆಗೆ ಬಂತು. 2017ರಲ್ಲಿ ‘ರಾಜಕುಮಾರ’​ ಸಿನಿಮಾ ರಿಲೀಸ್​ ಆಯಿತು. ‘ಕೆಜಿಎಫ್​: ಚಾಪ್ಟರ್​ 1’ ನಿರ್ಮಾಣ ಮಾಡಿ 2018ರಲ್ಲಿ ಅದನ್ನು ರಿಲೀಸ್​ ಮಾಡಿತು ಹೊಂಬಾಳೆ ಫಿಲ್ಮ್ಸ್​. ಈ ಸಿನಿಮಾ ದೊಡ್ಡ ಯಶಸ್ಸು ಪಡೆಯಿತು. ಈ ವರ್ಷ ‘ಯುವರತ್ನ’ ಸಿನಿಮಾ ರಿಲೀಸ್​ ಆಗಿದೆ. ‘ಕೆಜಿಎಫ್​ 2’ 2022ಕ್ಕೆ ರಿಲೀಸ್ ಆಗುತ್ತಿದೆ. ಈ ಆರು ಸಿನಿಮಾಗಳ ಪೈಕಿ ಮೂರು ಚಿತ್ರಗಳಲ್ಲಿ ಪುನೀತ್​ ಹಾಗೂ ಮೂರು ಚಿತ್ರಗಳಲ್ಲಿ ಯಶ್​ ನಟಿಸಿದ್ದರು.

ಈಗ ಹೊಂಬಾಳೆ ಫಿಲ್ಮ್ಸ್​ ಬೇರೆಬೇರೆ ನಟರ ಜತೆ ಸಿನಿಮಾ ಮಾಡುತ್ತಿದೆ. ತೆಲುಗಿನ ‘ಸಲಾರ್​’ ಸಿನಿಮಾ ನಿರ್ಮಾಣ ಜವಾಬ್ದಾರಿ ಹೊಂಬಾಳೆ ಹೊತ್ತುಕೊಂಡಿದೆ. ಈ ಸಿನಿಮಾದಲ್ಲಿ ಪ್ರಭಾಸ್​ ಹೀರೋ. ಶ್ರೀಮುರಳಿ ನಟನೆಯ ‘ಭಗೀರ’, ಪುನೀತ್​ ನಟನೆಯ ‘ದ್ವಿತ್ವ’, ರಕ್ಷಿತ್​ ಶೆಟ್ಟಿ ನಿರ್ದೇಶನದ ‘ರಿಚರ್ಡ್​ ಆ್ಯಂಟೋನಿ’ ರಿಷಬ್​ ಶೆಟ್ಟಿ ಆ್ಯಕ್ಷನ್​ ಕಟ್​ ಹೇಳುತ್ತಿರುವ ‘ಕಾಂತಾರ’ ಸಿನಿಮಾಗೆ ಹೊಂಬಾಳೆ ಫಿಲ್ಮ್ಸ್ ಹಣ ಹೂಡುತ್ತಿದೆ.

ವಿಜಯ್​ ಕಿರಂಗದೂರು ಆರು ಸಿನಿಮಾಗಳ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಇದರ ಜತೆಗೆ ತಮ್ಮ ನಿರ್ಮಾಣದ 12ನೇ ಸಿನಿಮಾ ಬಗ್ಗೆ ಮಾಹಿತಿ ನೀಡಿದ್ದಾರೆ. ‘ಪ್ರತಿಯೊಬ್ಬರಲ್ಲೂ ಹಸಿವಿದೆ. ಪ್ರತಿ ಅಗಳಿನಲ್ಲೂ ತಿನ್ನುವವರ ಹೆಸರಿದೆ ಅನ್ನದಾತೋ ಸುಖೀಭವ’ ಎಂದು ಹೊಂಬಾಳೆ ಫಿಲ್ಮ್ಸ್​ ಬರೆದುಕೊಂಡಿರುವುದು ಸಾಕಷ್ಟು ಕುತೂಹಲ ಹುಟ್ಟಿಸಿದೆ. ಈ ಸಿನಿಮಾಗೆ ಆ್ಯಕ್ಷನ್​ ಕಟ್​ ಹೇಳುವವರು ಯಾರು? ಈ ಸಿನಿಮಾದಲ್ಲಿ ನಟಿಸುವವರು ಯಾರು ಎನ್ನುವ ಪ್ರಶ್ನೆ ಅಭಿಮಾನಿಗಳಲ್ಲಿ ಮೂಡಿದೆ. ಇದಕ್ಕೆ ಉತ್ತರ ಸೆಪ್ಟೆಂಬರ್​ 22ರ ಮಧ್ಯಾಹ್ನ 3 ಗಂಟೆಗೆ ಸಿಗಲಿದೆ.

ಇದನ್ನೂ ಓದಿ: ​ಯಶ್​ ಎಂಟ್ರಿಗೆ ಜಾಗ ಬಿಟ್ಟುಕೊಟ್ಟ ಪ್ರಭಾಸ್​; ‘ಕೆಜಿಎಫ್​ 2’ ಚಿತ್ರಕ್ಕಾಗಿ ‘ಸಲಾರ್​’ ರಿಲೀಸ್​ ದಿನಾಂಕ ಬದಲು?

‘ಕೆಜಿಎಫ್​’ ನಿರ್ಮಾಪಕ ವಿಜಯ್​ ಕಿರಗಂದೂರು ಹೇಳಿದ ಮಾತಿನಿಂದ ಮುಗಿಯಿತು ‘ಕಿರಿಕ್​ ಪಾರ್ಟಿ’ ವಿವಾದ

Follow Us
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಮುನಿಸು ಮರೆತು ಲೋಕ ಅದಾಲತ್​​ನಲ್ಲಿ ಮತ್ತೆ ಒಂದಾದ ಮೂರು ಜೋಡಿಗಳು
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ಬಿರು ಬೇಸಿಗೆಯಲ್ಲೂ ಆಲಿಕಲ್ಲು ಮಳೆ: ಧಾರವಾಡ ಮಂದಿಗೆ ತಂಪೆರೆದ ವರುಣ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ನೆಲಮಂಗಲದಲ್ಲಿ 6 ನವಿಲು ಸಾವು: ವಿಷ ಪ್ರಾಶನಮಾಡಿ ಕೊಂದಿರುವ ಶಂಕೆ
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ತಮ್ಮ ಕ್ಷೇತ್ರದ ಜಾತ್ರೆಗೆ ಸಿಎಂ ಒಂದು ಲೋಡ್ ಸಿಲಿಂಡರ್ ಕೊಡಿಸಿದ್ರಾ ?
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಹೊಸ ಜೆರ್ಸಿ ಪ್ರೋಮೋದಲ್ಲಿ ಆರ್​ಸಿಬಿಯನ್ನು ಗೇಲಿ ಮಾಡಿದ ಕೆಕೆಆರ್
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಅಪಾರ್ಟ್​ಮೆಂಟ್ ಲಿಫ್ಟ್​ ಗೇಟಿನೊಳಗೆ ಸಿಲುಕಿತು ಮಗುವಿನ ಕೈ
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಿಹಾರದ ಸಿಎಂ​ ಬರುವ ಮುನ್ನ ಮೈದಾನಕ್ಕೆ ನುಗ್ಗಿದ ಗೂಳಿ; ಓಡಿದ ಪೊಲೀಸರು
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ಬಜೆಟ್​ ಬಗ್ಗೆ ಅಸಮಾಧಾನಗೊಂಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ ಕೈ ಶಾಸಕ
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ತಂದೆಯ ಅಂತ್ಯಸಂಸ್ಕಾರ ನೆರವೇರಿಸಿ ಲಿಂಗಸಮಾನತೆಯ ಸಂದೇಶ ಸಾರಿದ ಸಹೋದರಿಯರು
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!
ಮನೆಯ ಅಂಗಳದಲ್ಲಿ ಮಲಗಿದ್ದ ವೃದ್ಧೆಗೆ ಕಡಿದೇ ಬಿಡ್ತು ಹಾವು!