AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ

Kantara | Rishab Shetty: ರಿಷಬ್ ಶೆಟ್ಟಿ ನಿರ್ದೇಶನ ಮತ್ತು ನಾಯಕತ್ವದಲ್ಲಿ ಕಾಂತಾರ ಚಿತ್ರವನ್ನು ಹೊಂಬಾಳೆ ನಿರ್ಮಾಣ ಸಂಸ್ಥೆ ಘೋಷಿಸಿದೆ.

Hombale Films: ಹೊಂಬಾಳೆ ಫಿಲ್ಮ್ಸ್​ನ 11ನೇ ಚಿತ್ರ ಕಾಂತಾರ; ನಿರ್ದೇಶಕ ಮತ್ತು ನಾಯಕನಾಗಿ ರಿಷಬ್ ಶೆಟ್ಟಿ
ಚಿತ್ರತಂಡ ಬಿಡುಗಡೆಗೊಳಿಸಿರುವ ಪೋಸ್ಟರ್ (ಕೃಪೆ: ಹೊಂಬಾಳೆ ಫಿಲ್ಮ್ಸ್)
TV9 Web
| Updated By: shivaprasad.hs|

Updated on:Aug 06, 2021 | 12:21 PM

Share

ಕನ್ನಡದಲ್ಲಿ ಹಿಟ್ ಚಿತ್ರಗಳನ್ನು ನಿರ್ಮಿಸುತ್ತಾ  ಬಂದಿರುವ ಹೊಂಬಾಳೆ ಫಿಲ್ಮ್ಸ್ ಈಗ ಸಾಲುಸಾಲಾಗಿ ತನ್ನ ನೂತನ ಚಿತ್ರಗಳನ್ನು ಘೋಷಿಸುತ್ತಿದೆ. ಇಂದು ಹೊಸ ಚಿತ್ರವನ್ನು ಘೋಷಿಸುವುದಾಗಿ ತಿಳಿಸಿದ್ದ ಸಂಸ್ಥೆ, ಚಿತ್ರದ ಹೆಸರು ಹಾಗೂ ತಂಡವನ್ನು ಘೋಷಿಸಿದ್ದು, ಅಭಿಮಾನಿಗಳಿಗೆ ಭರ್ಜರಿ ಸುದ್ದಿ ನೀಡಿದೆ. ಕಾರಣ, ತನ್ನ ಹನ್ನೊಂದನೇ ಚಿತ್ರದ ಮೊದಲ ಪೋಸ್ಟರ್​ಅನ್ನು ಬಿಡುಗಡೆಗೊಳಿಸಿರುವ ಹೊಂಬಾಳೆಯ ನೂತನ ಚಿತ್ರಕ್ಕೆ ನಾಯಕನಾಗಿ ರಿಷಬ್ ಶೆಟ್ಟಿ ಕಾಣಿಸಿಕೊಳ್ಳುತ್ತಿದ್ದಾರೆ. ನಿರ್ದೇಶನದ ಜವಾಬ್ದಾರಿಯನ್ನೂ ರಿಷಬ್ ಶೆಟ್ಟಿ ಹೊತ್ತಿದ್ದು, ಚಿತ್ರಕ್ಕೆ ‘ಕಾಂತಾರ’ ಎಂದು ನಾಮಕರಣ ಮಾಡಲಾಗಿದೆ.

‘ಕಾಂತಾರ’ ಚಿತ್ರವು ತುಳುನಾಡಿನ ಹೆಮ್ಮೆಯ ಕ್ರೀಡೆ ಕಂಬಳದ ಕುರಿತ ಚಿತ್ರವಾಗಿರಬಹುದು ಎಂಬ ಸೂಚನೆಯನ್ನು ಪೋಸ್ಟರ್ ನೀಡುತ್ತಿದೆ. ಚಿತ್ರದ ಟೈಟಲ್​ಗೆ ‘ಒಂದು ದಂತಕಥೆ’ ಎಂಬ ಅಡಿಬರಹವನ್ನೂ ನೀಡಲಾಗಿದ್ದು, ಚಿತ್ರದ ಚಿತ್ರೀಕರಣವು ಆಗಸ್ಟ್ 27ರಿಂದ ಪ್ರಾರಂಭವಾಗಲಿದೆ ಎಂದು ಹೊಂಬಾಳೆ ಫಿಲ್ಮ್ಸ್ ತಿಳಿಸಿದೆ. ಚಿತ್ರವನ್ನು ವಿಜಯ್ ಕಿರಗಂದೂರು ನಿರ್ಮಾಣ ಮಾಡುತ್ತಿದ್ದಾರೆ.

ಹೊಂಬಾಳೆ ಫಿಲ್ಮ್ಸ್ ಬಿಡುಗಡೆ ಮಾಡಿರುವ ಪೋಸ್ಟರ್:

ನಟ, ನಿರ್ದೇಶಕ ರಿಷಬ್ ಶೆಟ್ಟಿ ‘ಕಾಂತಾರ’ ಚಿತ್ರದ ಕುರಿತು ತಮ್ಮ ಅನಿಸಿಕೆಯನ್ನು ಹಂಚಿಕೊಂಡಿದ್ದು, ಬಹಳ ಸಮಯದ ಬಳಿಕ ಹೊಸ ‘ಕಿಚ್ಚಿ’ನೊಂದಿಗೆ ನಿರ್ದೇಶಕನಾಗಿ ಬರುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ. ಹಾಗೆಯೇ ಸುತ್ತ ಕವಿದಿರುವ ಕರಾಳತೆಯನ್ನು ಈ ಕಿಚ್ಚು ದಹಿಸಲಿದೆ ಎಂಬ ನಂಬಿಕೆಯೂ ಅವರಲ್ಲಿದೆ. ಈ ಕುರಿತು ಅವರು ಹಂಚಿಕೊಂಡ ಟ್ವೀಟ್ ಇಲ್ಲಿದೆ.

ಪ್ರಸ್ತುತ ಹೊಂಬಾಳೆ ಫಿಲ್ಮ್ಸ್ ಸಂಸ್ಥೆಯ ಅಡಿಯಲ್ಲಿ ಬಹುನಿರೀಕ್ಷಿತ ಸಿನಿಮಾಗಳು ಮೂಡಿಬರುತ್ತಿವೆ. ಪ್ರಶಾಂತ್ ನೀಲ್ ನಿರ್ದೇಶನದ, ಯಶ್​ ನಟನೆಯ ‘ಕೆಜಿಎಫ್​: ಚಾಪ್ಟರ್​ 2’ ಹಾಗೂ ಪ್ರಭಾಸ್​ ನಟನೆಯ ‘ಸಲಾರ್​’ ಸಿನಿಮಾ ಕೆಲಸಗಳು ಬಿರುಸಿನಿಂದ ಸಾಗಿವೆ. ಶ್ರೀಮುರಳಿ ನಟನೆಯ ‘ಭಗೀರ’ ಚಿತ್ರವನ್ನೂ ಅನೌನ್ಸ್ ಮಾಡಲಾಗಿದ್ದು, ಅದು ಇನ್ನು ಸೆಟ್ಟೇರಬೇಕಿದೆ. ಜೂನ್​ನಲ್ಲಿ ಪುನೀತ್ ರಾಜ್​ಕುಮಾರ್​ ಮತ್ತು ಪವನ್​ ಕುಮಾರ್​ ಕಾಂಬಿನೇಷನ್​ನ ‘ದ್ವಿತ್ವ’ ಚಿತ್ರದ ಶೀರ್ಷಿಕೆ ಮತ್ತು ಫಸ್ಟ್​ಲುಕ್​ ಲಾಂಚ್​ ಮಾಡಲಾಗಿತ್ತು. ಈಗ ದ್ವಿತ್ವಕ್ಕೆ ನಾಯಕಿಯನ್ನೂ ಘೋಷಿಸಲಾಗಿದ್ದು, ದಕ್ಷಿಣ ಭಾರತದ ಖ್ಯಾತ ನಟಿ ತ್ರಿಷಾ ನಟಿಸಲಿದ್ದಾರೆ. ಹೊಂಬಾಳೆಯ 10ನೇ ಚಿತ್ರವಾಗಿ ರಕ್ಷಿತ್​ ಶೆಟ್ಟಿ ಕತೆ, ನಿರ್ದೇಶನದಲ್ಲಿ ‘ರಿಚರ್ಡ್​ ಆ್ಯಂಟೊನಿ’ ಘೋಷಣೆ ಆಗಿತ್ತು. ಈಗ 11ನೇ ಸಿನಿಮಾವನ್ನೂ ಘೋಷಿಸಿರುವ ನಿರ್ಮಾಣ ಸಂಸ್ಥೆ, ಅದ್ದೂರಿ ಬಜೆಟ್​ಗಳ, ಬೃಹತ್ ತಾರಾಗಣದ ಚಿತ್ರಗಳನ್ನು ಏಕಕಾಲಕ್ಕೆ ನಿರ್ಮಿಸುತ್ತಿದೆ.

ಇದನ್ನೂ ಓದಿ:

ಪವರ್​ ಸ್ಟಾರ್​ ಪುನೀತ್​ ರಾಜ್​ಕುಮಾರ್ ‘ದ್ವಿತ್ವ’ ಚಿತ್ರಕ್ಕೆ ನಾಯಕಿಯಾದ ತ್ರಿಷಾ ಕೃಷ್ಣನ್

Hombale Films and Rakshith Shetty: ಅಭಿಮಾನಿಗಳ ಕಾಯುವಿಕೆಗೆ ಕೊನೆ ಹಾಡೇ ಬಿಟ್ರು ರಕ್ಷಿತ್​ ಶೆಟ್ಟಿ, ಡೈರೆಕ್ಟರ್ ಕ್ಯಾಪ್​ ಹಾಕ್ಕೊಳ್ಳೋ ಟೈಮ್ ಬಂದೇ ಬಿಡ್ತು!

(Hombale Films announces its 11th production directed and starring Rishab Shetty)

Published On - 11:52 am, Fri, 6 August 21

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ