AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

Kantara Movie Release Date: ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಸಿನಿಮಾ ನೋಡಲು ರಿಷಬ್​ ಶೆಟ್ಟಿ ಅಭಿಮಾನಿಗಳು ಕಾದಿದ್ದಾರೆ. ಸೆಪ್ಟೆಂಬರ್ 30ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’
ರಿಷಬ್​ ಶೆಟ್ಟಿ
TV9 Web
| Edited By: |

Updated on:Jun 04, 2022 | 8:53 AM

Share

ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಿಷಬ್​ ಶೆಟ್ಟಿ (Rishab Shetty) ಅವರ ಪ್ರತಿ ಸಿನಿಮಾದಲ್ಲೂ ಪ್ರೇಕ್ಷಕರಿಗೆ ಹೊಸದೇನನ್ನೋ ಪರಿಚಯಿಸುತ್ತಾರೆ. ಈಗ ಅವರು ‘ಕಾಂತಾರ’ ಸಿನಿಮಾದ (Kantara Movie) ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕರಾವಳಿ ಭಾಗದ ಕಥೆ ಹೊಂದಿರುವ ಈ ಚಿತ್ರವನ್ನು ಅವರು ನಿರ್ದೇಶಿಸುತ್ತಿದ್ದು, ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಭರಪೂರ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ (Hombale Films) ಮೂಲಕ ಈ ಚಿತ್ರ ಮೂಡಿಬರುತ್ತಿರುವ ಕಾರಣದಿಂದ ಹೈಪ್​ ಹೆಚ್ಚಿದೆ. ಈಗ ‘ಕಾಂತಾರ’ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗಿದೆ. ಈ ಬಾರಿಯ ದಸರಾ ಹಬ್ಬದ ಪ್ರಯುಕ್ತ ಸೆ.30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ವಿಜಯ್​ ಕಿರಗಂದೂರು ಬಂಡವಾಳ ಹೂಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​​ನಿಂದ ಚಿತ್ರದ ಮೇಲಿನ ಕೌತುಕ ಡಬಲ್​ ಆಗಿದೆ.

ಭಾರತೀಯ ಚಿತ್ರರಂಗದಲ್ಲಿ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಹೊಂಬಾಳೆ ಫಿಲ್ಮ್ಸ್​’ ಬೆಳೆದು ನಿಂತಿದೆ. ‘ಕೆಜಿಎಫ್​: ಚಾಪ್ಟರ್​ 2’ ರೀತಿಯ ಬೃಹತ್​ ಸಿನಿಮಾವನ್ನು ನಿರ್ಮಾಣ ಮಾಡಿದ ಖ್ಯಾತಿ ಈ ಸಂಸ್ಥೆಗೆ ಸಲ್ಲುತ್ತದೆ. ಹಾಗಂತ ಒಂದೇ ರೀತಿಯ ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣ ಮಾಡುತ್ತಿಲ್ಲ. ಬಗೆಬಗೆಯ ಸಿನಿಮಾಗಳಿಗೆ ಬಂಡವಾಳ ಹೂಡಲಾಗುತ್ತಿದೆ. ಆ ಪೈಕಿ ‘ಕಾಂತಾರ’ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​
Image
ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ
Image
‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ
Image
ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ನವರಸಗಳ ರಸದೌತಣ ಬಡಿಸ್ತಾರೆ ಜಗ್ಗೇಶ್​; ಆ.5ಕ್ಕೆ ‘ರಾಘವೇಂದ್ರ ಸ್ಟೋರ್ಸ್​’ ಶುರು

‘ದಸರಾದ ಜೊತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ. ಸೆಪ್ಟೆಂಬರ್ 30ರಂದು ಕಾಂತಾರ ಅನಾವರಣ’ ಎಂದು ‘ಹೊಂಬಾಳೆ ಫಿಲ್ಮ್ಸ್​’ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಪೋಸ್ಟ್​ ಮಾಡಲಾಗಿದೆ. ಈ ಸಿನಿಮಾ ನೋಡಲು ರಿಷಬ್​ ಶೆಟ್ಟಿ ಅಭಿಮಾನಿಗಳು ಕಾದಿದ್ದಾರೆ. ಯೂಟ್ಯೂಬ್​ನಲ್ಲಿ ‘ಕಾಂತಾರ’ ಟೀಸರ್​ ಬರೋಬ್ಬರಿ 21 ಲಕ್ಷಕ್ಕಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಸಿನಿಮಾ ಮೇಲೆ ಜನರಿಗೆ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ.

ರಿಷಬ್​ ಶೆಟ್ಟಿ ಜೊತೆಗೆ ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್​ ಮುಂತಾದವರು ‘ಕಾಂತಾರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಿ. ಅಜನೀಶ್​ ಲೋಕನಾಥ್​ ಅವರ ಸಂಗೀತ ನೀಡುತ್ತಿದ್ದಾರೆ. ಭರ್ಜರಿ ಸಾಹಸ ದೃಶ್ಯಗಳು ಈ ಸಿನಿಮಾದಲ್ಲಿ ಇದೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಈ ಸಿನಿಮಾದಿಂದ ರಿಷಬ್​​ ಶೆಟ್ಟಿ ವೃತ್ತಿಬದುಕಿನ ಮೈಲೇಜ್​ ಹೆಚ್ಚಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:53 am, Sat, 4 June 22

Follow Us
Web contact
Web contact

TV9 Kannada

Read More
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!