AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’

Kantara Movie Release Date: ‘ಹೊಂಬಾಳೆ ಫಿಲ್ಮ್ಸ್​’ ನಿರ್ಮಾಣದ ‘ಕಾಂತಾರ’ ಸಿನಿಮಾ ನೋಡಲು ರಿಷಬ್​ ಶೆಟ್ಟಿ ಅಭಿಮಾನಿಗಳು ಕಾದಿದ್ದಾರೆ. ಸೆಪ್ಟೆಂಬರ್ 30ರಂದು ಈ ಚಿತ್ರ ಅದ್ದೂರಿಯಾಗಿ ಬಿಡುಗಡೆ ಆಗಲಿದೆ.

ದಸರಾ ಹಬ್ಬಕ್ಕೆ ಬರಲಿದೆ ‘ಕಾಂತಾರ’; ರಿಷಬ್​ ಶೆಟ್ಟಿ ಚಿತ್ರದ ರಿಲೀಸ್​ ಡೇಟ್​ ಘೋಷಿಸಿದ ‘ಹೊಂಬಾಳೆ ಫಿಲ್ಮ್ಸ್​’
ರಿಷಬ್​ ಶೆಟ್ಟಿ
TV9 Web
| Edited By: |

Updated on:Jun 04, 2022 | 8:53 AM

Share

ನಟನಾಗಿ, ನಿರ್ದೇಶಕನಾಗಿ ಗುರುತಿಸಿಕೊಂಡಿರುವ ರಿಷಬ್​ ಶೆಟ್ಟಿ (Rishab Shetty) ಅವರ ಪ್ರತಿ ಸಿನಿಮಾದಲ್ಲೂ ಪ್ರೇಕ್ಷಕರಿಗೆ ಹೊಸದೇನನ್ನೋ ಪರಿಚಯಿಸುತ್ತಾರೆ. ಈಗ ಅವರು ‘ಕಾಂತಾರ’ ಸಿನಿಮಾದ (Kantara Movie) ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಕರಾವಳಿ ಭಾಗದ ಕಥೆ ಹೊಂದಿರುವ ಈ ಚಿತ್ರವನ್ನು ಅವರು ನಿರ್ದೇಶಿಸುತ್ತಿದ್ದು, ಮುಖ್ಯ ಭೂಮಿಕೆಯಲ್ಲೂ ನಟಿಸುತ್ತಿದ್ದಾರೆ. ಈ ಸಿನಿಮಾ ಮೇಲೆ ಭರಪೂರ ನಿರೀಕ್ಷೆ ಇಟ್ಟುಕೊಳ್ಳಲಾಗಿದೆ. ಖ್ಯಾತ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಫಿಲ್ಮ್ಸ್’ (Hombale Films) ಮೂಲಕ ಈ ಚಿತ್ರ ಮೂಡಿಬರುತ್ತಿರುವ ಕಾರಣದಿಂದ ಹೈಪ್​ ಹೆಚ್ಚಿದೆ. ಈಗ ‘ಕಾಂತಾರ’ ಸಿನಿಮಾದ ರಿಲೀಸ್​ ಡೇಟ್​ ಅನೌನ್ಸ್​ ಮಾಡಲಾಗಿದೆ. ಈ ಬಾರಿಯ ದಸರಾ ಹಬ್ಬದ ಪ್ರಯುಕ್ತ ಸೆ.30ರಂದು ಈ ಸಿನಿಮಾ ಬಿಡುಗಡೆ ಆಗಲಿದೆ. ಈ ಚಿತ್ರಕ್ಕೆ ವಿಜಯ್​ ಕಿರಗಂದೂರು ಬಂಡವಾಳ ಹೂಡುತ್ತಿದ್ದಾರೆ. ಈಗಾಗಲೇ ಬಿಡುಗಡೆ ಆಗಿರುವ ಟೀಸರ್​​ನಿಂದ ಚಿತ್ರದ ಮೇಲಿನ ಕೌತುಕ ಡಬಲ್​ ಆಗಿದೆ.

ಭಾರತೀಯ ಚಿತ್ರರಂಗದಲ್ಲಿ ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ‘ಹೊಂಬಾಳೆ ಫಿಲ್ಮ್ಸ್​’ ಬೆಳೆದು ನಿಂತಿದೆ. ‘ಕೆಜಿಎಫ್​: ಚಾಪ್ಟರ್​ 2’ ರೀತಿಯ ಬೃಹತ್​ ಸಿನಿಮಾವನ್ನು ನಿರ್ಮಾಣ ಮಾಡಿದ ಖ್ಯಾತಿ ಈ ಸಂಸ್ಥೆಗೆ ಸಲ್ಲುತ್ತದೆ. ಹಾಗಂತ ಒಂದೇ ರೀತಿಯ ಚಿತ್ರಗಳನ್ನು ಈ ಸಂಸ್ಥೆ ನಿರ್ಮಾಣ ಮಾಡುತ್ತಿಲ್ಲ. ಬಗೆಬಗೆಯ ಸಿನಿಮಾಗಳಿಗೆ ಬಂಡವಾಳ ಹೂಡಲಾಗುತ್ತಿದೆ. ಆ ಪೈಕಿ ‘ಕಾಂತಾರ’ ಸಿನಿಮಾ ಮೂಲಕ ಗಮನ ಸೆಳೆಯುತ್ತಿದೆ.

ಇದನ್ನೂ ಓದಿ
Image
‘ಕೆಜಿಎಫ್​ 3’ ಸದ್ಯಕ್ಕಿಲ್ಲ: ಸ್ಪಷ್ಟನೆ ನೀಡಿದ ಹೊಂಬಾಳೆ ಫಿಲ್ಮ್ಸ್​ನ ಕಾರ್ತಿಕ್​ ಗೌಡ; ಅಂತೆ-ಕಂತೆಗಳಿಗೆ ಬ್ರೇಕ್​
Image
ಬ್ರೇಕಿಂಗ್​ ನ್ಯೂಸ್​ ನೀಡಿದ ‘ಹೊಂಬಾಳೆ ಫಿಲ್ಮ್ಸ್​’: ಯುವ ರಾಜ್​ಕುಮಾರ್​ ಜತೆ ಹೊಸ ಸಿನಿಮಾ ಘೋಷಣೆ
Image
‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ಅನೌನ್ಸ್​; ಈ ಬಾರಿ ಚಾನ್ಸ್​ ಪಡೆದಿದ್ದು ಲೇಡಿ ಡೈರೆಕ್ಟರ್​ ಸುಧಾ ಕೊಂಗರ
Image
ಟೀಸರ್​ ಮೂಲಕ ಗಮನ ಸೆಳೆದ ‘ಕಾಂತಾರ’, ‘ರಾಘವೇಂದ್ರ ಸ್ಟೋರ್ಸ್​’; ಹೊಂಬಾಳೆ ಫಿಲ್ಮ್ಸ್​ ಪ್ರಯತ್ನಕ್ಕೆ ಸಿಕ್ತು ಮೆಚ್ಚುಗೆ

ಇದನ್ನೂ ಓದಿ: ವರಮಹಾಲಕ್ಷ್ಮಿ ಹಬ್ಬಕ್ಕೆ ನವರಸಗಳ ರಸದೌತಣ ಬಡಿಸ್ತಾರೆ ಜಗ್ಗೇಶ್​; ಆ.5ಕ್ಕೆ ‘ರಾಘವೇಂದ್ರ ಸ್ಟೋರ್ಸ್​’ ಶುರು

‘ದಸರಾದ ಜೊತೆಗೆ ಕಾಡ್ಗಿಚ್ಚಿನ ಬಯಲಾಟಕ್ಕೆ ಸಾಕ್ಷಿಯಾಗಿ. ಸೆಪ್ಟೆಂಬರ್ 30ರಂದು ಕಾಂತಾರ ಅನಾವರಣ’ ಎಂದು ‘ಹೊಂಬಾಳೆ ಫಿಲ್ಮ್ಸ್​’ ಸೋಶಿಯಲ್​ ಮೀಡಿಯಾ ಖಾತೆಗಳ ಮೂಲಕ ಪೋಸ್ಟ್​ ಮಾಡಲಾಗಿದೆ. ಈ ಸಿನಿಮಾ ನೋಡಲು ರಿಷಬ್​ ಶೆಟ್ಟಿ ಅಭಿಮಾನಿಗಳು ಕಾದಿದ್ದಾರೆ. ಯೂಟ್ಯೂಬ್​ನಲ್ಲಿ ‘ಕಾಂತಾರ’ ಟೀಸರ್​ ಬರೋಬ್ಬರಿ 21 ಲಕ್ಷಕ್ಕಿಂತಲೂ ಅಧಿಕ ಬಾರಿ ವೀಕ್ಷಣೆ ಕಂಡಿದೆ. ಸಿನಿಮಾ ಮೇಲೆ ಜನರಿಗೆ ಎಷ್ಟು ನಿರೀಕ್ಷೆ ಇದೆ ಎಂಬುದಕ್ಕೆ ಈ ಸಂಖ್ಯೆಯೇ ಸಾಕ್ಷಿ.

ರಿಷಬ್​ ಶೆಟ್ಟಿ ಜೊತೆಗೆ ಅಚ್ಯುತ್​ ಕುಮಾರ್​, ಪ್ರಮೋದ್​ ಶೆಟ್ಟಿ, ಸಪ್ತಮಿ ಗೌಡ, ಕಿಶೋರ್​ ಮುಂತಾದವರು ‘ಕಾಂತಾರ’ ಸಿನಿಮಾದಲ್ಲಿ ನಟಿಸುತ್ತಿದ್ದಾರೆ. ಬಿ. ಅಜನೀಶ್​ ಲೋಕನಾಥ್​ ಅವರ ಸಂಗೀತ ನೀಡುತ್ತಿದ್ದಾರೆ. ಭರ್ಜರಿ ಸಾಹಸ ದೃಶ್ಯಗಳು ಈ ಸಿನಿಮಾದಲ್ಲಿ ಇದೆ ಎಂಬುದಕ್ಕೆ ಟೀಸರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಈ ಸಿನಿಮಾದಿಂದ ರಿಷಬ್​​ ಶೆಟ್ಟಿ ವೃತ್ತಿಬದುಕಿನ ಮೈಲೇಜ್​ ಹೆಚ್ಚಲಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 8:53 am, Sat, 4 June 22

ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಅಸ್ಸಾಂನಲ್ಲಿ ಹಿಂಸಾಚಾರ; ಸರ್ಕಾರದಿಂದ ಭದ್ರತೆ, ಇಂಟರ್​​ನೆಟ್​ ಸೇವೆ ಸ್ಥಗಿತ
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಸಿದ್ದರಾಮಯ್ಯ ಭೇಟಿ ಬಳಿಕ ಬಿಗ್ ಅಪ್ಡೇಟ್ ಕೊಟ್ಟ ರಾಜಣ್ಣ!
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಬಿಜೆಪಿ ನಾಯಕಿಯಿಂದ ದೃಷ್ಟಿಹೀನ ಮಹಿಳೆಗೆ ಚಿತ್ರಹಿಂಸೆ; ವಿಡಿಯೋ ವೈರಲ್
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ಹೊಸ ಡಾಂಬರು ರಸ್ತೆಯ ಪರಿಶೀಲನೆಗೆ ಹೋದ ಸಚಿವೆಗೆ ಕಾದಿತ್ತು ಶಾಕ್!
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದೂರುದಾರರಿಂದ ಪೇಪರ್ ಬಂಡಲ್ ತರಿಸಿದ್ದ ಪಿಸಿ ಅಮಾನತು
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ದಾವಣಗೆರೆ: ಗಾಂಜಾ ಕೇಸ್​ನಲ್ಲಿ ರಿಯಲ್​ ಎಸ್ಟೇಟ್​ ಉದ್ಯಮಿ ಅರೆಸ್ಟ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಮದುವೆಯಲ್ಲಿ ಕನ್ಯಾದಾನದ ವೇಳೆ ಮಂಗನಿಂದ ಮದುಮಗಳಿಗೆ ಶಾಕ್
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಧನುಶ್ ಅನ್ನು ಇಕ್ಕಟ್ಟಿಗೆ ಸಿಲುಕಿಸಿದ ಬಿಗ್​​ಬಾಸ್: ಕಣ್ಣೀರಾದ ಮನೆ ಮಂದಿ
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಹುಬ್ಬಳ್ಳಿ ಮರ್ಯಾದೆ ಹತ್ಯೆ: ಆಸ್ಪತ್ರೆ ಬಿಲ್​ ಭರಿಸಲಾಗದೆ ಕುಟುಂಬ ಕಂಗಾಲು
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!
ಮನೆಗಳಲ್ಲಿ ಕಳುವು ಮಾಡಿದ್ದಲ್ಲದೆ, ಚಹಾ ಮಾಡಿ ಕುಡಿದು ಹೋದ ಕಳ್ಳರು!