‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನೀವು ನಟಿಸಬಹುದು; ಅವಕಾಶದ ಬಾಗಿಲು ತೆರೆದ ಹೊಂಬಾಳೆ

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಪಾತ್ರ ಮಾಡುತ್ತಿದ್ದಾರೆ. ಉಳಿದ ಪಾತ್ರಕ್ಕೆ ಕಲಾವಿದರ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಪಾತ್ರಗಳ ಆಯ್ಕೆ ಪ್ರಕ್ರಿಯೆಗೆ ಹೊಂಬಾಳೆ ಫಿಲ್ಮ್ಸ್ ಚಾಲನೆ ನೀಡಿದೆ.

‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನೀವು ನಟಿಸಬಹುದು; ಅವಕಾಶದ ಬಾಗಿಲು ತೆರೆದ ಹೊಂಬಾಳೆ
ರಿಷಬ್
Follow us
| Updated By: ರಾಜೇಶ್ ದುಗ್ಗುಮನೆ

Updated on:Dec 12, 2023 | 2:01 PM

‘ಕಾಂತಾರ: ಚಾಪ್ಟರ್ 1’ (Kantara Chapter 1) ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಅನಾವರಣಗೊಂಡಿತ್ತು. ರಿಷಬ್ ಶೆಟ್ಟಿ ಅವತಾರ ನೋಡಿ ಅಭಿಮಾನಿಗಳು ರೋಮಾಂಚನಗೊಂಡಿದ್ದರು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ರಿಷಬ್ ಶೆಟ್ಟಿ ಈ ಮೊದಲೇ ಘೋಷಣೆ ಮಾಡಿದ್ದರು. ಅವರು ಹೇಳಿದಂತೆ ನಡೆದುಕೊಂಡಿದ್ದಾರೆ. ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನಟಿಸೋಕೆ ಕಲಾವಿದರ ಅವಶ್ಯಕತೆ ಇದೆ. ಈ ಕುರಿತು ಕಾಲ್​ಫಾರ್ ಮಾಡಲಾಗಿದೆ. ಈ ಅವಕಾಶವನ್ನು ಪಡೆಯಬೇಕು ಎಂದು ಇಚ್ಛಿಸಿದವರಿಗೆ ವಯಸ್ಸಿನ ಮಿತಿ ಇದೆ.

‘ಕಾಂತಾರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಈಗ ಈ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧವಾಗುತ್ತಿದೆ. 2024ರ ಆರಂಭದಲ್ಲಿ ಸಿನಿಮಾ ಕೆಲಸ ಪ್ರಾರಂಭ ಆಗಲಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಪಾತ್ರ ಮಾಡುತ್ತಿದ್ದಾರೆ. ಉಳಿದ ಪಾತ್ರಕ್ಕೆ ಕಲಾವಿದರ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಪಾತ್ರಗಳ ಆಯ್ಕೆ ಪ್ರಕ್ರಿಯೆಗೆ ಹೊಂಬಾಳೆ ಫಿಲ್ಮ್ಸ್ ಚಾಲನೆ ನೀಡಿದೆ.

‘ಕಲಾವಿದರು ಬೇಕಾಗಿದ್ದಾರೆ’ ಎಂದು ಹೊಂಬಾಳೆ ಫಿಲ್ಮ್ಸ್ ಪೋಸ್ಟರ್ ಹಂಚಿಕೊಂಡಿದೆ. ಪುರುಷರ ವಯಸ್ಸು 30ರಿಂದ 60 ವರ್ಷ ಅಂತರದಲ್ಲಿ ಹಾಗೂ ಮಹಿಳೆಯರ ವಯಸ್ಸು 18ರಿಂದ 60 ವರ್ಷ ಅಂತರದಲ್ಲಿ ಇರಬೇಕು. ನೋಂದಣಿ ಮಾಡಲು kantara.film ಗೆ ಭೇಟಿ ನೀಡಬೇಕು. 14 ಡಿಸೆಂಬರ್​ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಮತ್ತೊಂದು ವಿಶೇಷ ಸೂಚನೆಯನ್ನು ಕೂಡ ನೀಡಲಾಗಿದೆ. ರೀಲ್ಸ್ ಮತ್ತು ಅವುಗಳನ್ನೇ ಹೋಲುವ ವಿಡಿಯೋಗಳಿದ್ದರೆ ಅದನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ಕಟ್ಟುನಿಟ್ಟಾಗಿ ಹೇಳಿದೆ.

ಇದನ್ನೂ ಓದಿ: ‘ಕಾಂತಾರ’ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ, ಗೋವಾ ಸಿನಿಮೋತ್ಸವದಲ್ಲಿ ವಿಶೇಷ ಗೌರವ

‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ರಿಷಬ್ ಶೆಟ್ಟಿ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಕಾಂತಾರ’ ಚಿತ್ರದ ಕಥೆ ನಡೆಯುವುದಕ್ಕೂ ಮೊದಲು ಏನಾಗಿತ್ತು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಫಸ್ಟ್ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Tue, 12 December 23

ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಅಮೆಜಾನ್ ವಿಶೇಷ ಆಫರ್ ಸೇಲ್ ಮುಂದಿನ ವಾರವೇ ಆರಂಭ!
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ
ಭಾವ್​ನಗರದಲ್ಲಿ ಗುಜರಾತ್​ನ ಮೊಟ್ಟಮೊದಲ ಧಾನ್ಯಗಳ ಎಟಿಎಂ ಸ್ಥಾಪನೆ