AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನೀವು ನಟಿಸಬಹುದು; ಅವಕಾಶದ ಬಾಗಿಲು ತೆರೆದ ಹೊಂಬಾಳೆ

‘ಕಾಂತಾರ’ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಪಾತ್ರ ಮಾಡುತ್ತಿದ್ದಾರೆ. ಉಳಿದ ಪಾತ್ರಕ್ಕೆ ಕಲಾವಿದರ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಪಾತ್ರಗಳ ಆಯ್ಕೆ ಪ್ರಕ್ರಿಯೆಗೆ ಹೊಂಬಾಳೆ ಫಿಲ್ಮ್ಸ್ ಚಾಲನೆ ನೀಡಿದೆ.

‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನೀವು ನಟಿಸಬಹುದು; ಅವಕಾಶದ ಬಾಗಿಲು ತೆರೆದ ಹೊಂಬಾಳೆ
ರಿಷಬ್
TV9 Web
| Edited By: |

Updated on:Dec 12, 2023 | 2:01 PM

Share

‘ಕಾಂತಾರ: ಚಾಪ್ಟರ್ 1’ (Kantara Chapter 1) ಚಿತ್ರದ ಮೊದಲ ಪೋಸ್ಟರ್ ಇತ್ತೀಚೆಗೆ ಅನಾವರಣಗೊಂಡಿತ್ತು. ರಿಷಬ್ ಶೆಟ್ಟಿ ಅವತಾರ ನೋಡಿ ಅಭಿಮಾನಿಗಳು ರೋಮಾಂಚನಗೊಂಡಿದ್ದರು. ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ರಿಷಬ್ ಶೆಟ್ಟಿ ಈ ಮೊದಲೇ ಘೋಷಣೆ ಮಾಡಿದ್ದರು. ಅವರು ಹೇಳಿದಂತೆ ನಡೆದುಕೊಂಡಿದ್ದಾರೆ. ‘ಕಾಂತಾರ ಚಾಪ್ಟರ್ 1’ ಚಿತ್ರದಲ್ಲಿ ನಟಿಸೋಕೆ ಕಲಾವಿದರ ಅವಶ್ಯಕತೆ ಇದೆ. ಈ ಕುರಿತು ಕಾಲ್​ಫಾರ್ ಮಾಡಲಾಗಿದೆ. ಈ ಅವಕಾಶವನ್ನು ಪಡೆಯಬೇಕು ಎಂದು ಇಚ್ಛಿಸಿದವರಿಗೆ ವಯಸ್ಸಿನ ಮಿತಿ ಇದೆ.

‘ಕಾಂತಾರ’ ಸಿನಿಮಾ ಕಳೆದ ವರ್ಷ ರಿಲೀಸ್ ಆಗಿ ಸೂಪರ್ ಹಿಟ್ ಎನಿಸಿಕೊಂಡಿತು. ಈಗ ಈ ಚಿತ್ರಕ್ಕೆ ಪ್ರೀಕ್ವೆಲ್ ಸಿದ್ಧವಾಗುತ್ತಿದೆ. 2024ರ ಆರಂಭದಲ್ಲಿ ಸಿನಿಮಾ ಕೆಲಸ ಪ್ರಾರಂಭ ಆಗಲಿದೆ. ಈ ಚಿತ್ರದಲ್ಲಿ ರಿಷಬ್ ಶೆಟ್ಟಿ ಹೀರೋ ಪಾತ್ರ ಮಾಡುತ್ತಿದ್ದಾರೆ. ಉಳಿದ ಪಾತ್ರಕ್ಕೆ ಕಲಾವಿದರ ಆಯ್ಕೆ ಇನ್ನಷ್ಟೇ ಆಗಬೇಕಿದೆ. ಪಾತ್ರಗಳ ಆಯ್ಕೆ ಪ್ರಕ್ರಿಯೆಗೆ ಹೊಂಬಾಳೆ ಫಿಲ್ಮ್ಸ್ ಚಾಲನೆ ನೀಡಿದೆ.

‘ಕಲಾವಿದರು ಬೇಕಾಗಿದ್ದಾರೆ’ ಎಂದು ಹೊಂಬಾಳೆ ಫಿಲ್ಮ್ಸ್ ಪೋಸ್ಟರ್ ಹಂಚಿಕೊಂಡಿದೆ. ಪುರುಷರ ವಯಸ್ಸು 30ರಿಂದ 60 ವರ್ಷ ಅಂತರದಲ್ಲಿ ಹಾಗೂ ಮಹಿಳೆಯರ ವಯಸ್ಸು 18ರಿಂದ 60 ವರ್ಷ ಅಂತರದಲ್ಲಿ ಇರಬೇಕು. ನೋಂದಣಿ ಮಾಡಲು kantara.film ಗೆ ಭೇಟಿ ನೀಡಬೇಕು. 14 ಡಿಸೆಂಬರ್​ವರೆಗೆ ಮಾತ್ರ ಅರ್ಜಿ ಸಲ್ಲಿಸಲು ಅವಕಾಶ ಇದೆ. ಮತ್ತೊಂದು ವಿಶೇಷ ಸೂಚನೆಯನ್ನು ಕೂಡ ನೀಡಲಾಗಿದೆ. ರೀಲ್ಸ್ ಮತ್ತು ಅವುಗಳನ್ನೇ ಹೋಲುವ ವಿಡಿಯೋಗಳಿದ್ದರೆ ಅದನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಹೊಂಬಾಳೆ ಫಿಲ್ಮ್ಸ್ ಕಟ್ಟುನಿಟ್ಟಾಗಿ ಹೇಳಿದೆ.

ಇದನ್ನೂ ಓದಿ: ‘ಕಾಂತಾರ’ಕ್ಕೆ ಮತ್ತೊಂದು ಪ್ರಶಸ್ತಿಯ ಗರಿ, ಗೋವಾ ಸಿನಿಮೋತ್ಸವದಲ್ಲಿ ವಿಶೇಷ ಗೌರವ

‘ಕಾಂತಾರ ಚಾಪ್ಟರ್ 1’ ಚಿತ್ರಕ್ಕೆ ಹೊಂಬಾಳೆ ಫಿಲ್ಮ್ಸ್ ಬಂಡವಾಳ ಹೂಡುತ್ತಿದೆ. ರಿಷಬ್ ಶೆಟ್ಟಿ ಅವರು ಸಿನಿಮಾ ನಿರ್ದೇಶನ ಮಾಡುತ್ತಿದ್ದಾರೆ. ಈ ಚಿತ್ರದ ಬಗ್ಗೆ ಅಭಿಮಾನಿಗಳಿಗೆ ಸಾಕಷ್ಟು ನಿರೀಕ್ಷೆ ಸೃಷ್ಟಿ ಆಗಿದೆ. ‘ಕಾಂತಾರ’ ಚಿತ್ರದ ಕಥೆ ನಡೆಯುವುದಕ್ಕೂ ಮೊದಲು ಏನಾಗಿತ್ತು ಎಂಬುದನ್ನು ಈ ಚಿತ್ರದಲ್ಲಿ ಹೇಳಲಾಗುತ್ತಿದೆ. ಫಸ್ಟ್ ಪೋಸ್ಟರ್ ಸಾಕಷ್ಟು ಗಮನ ಸೆಳೆದಿದೆ. ಕನ್ನಡ, ಹಿಂದಿ, ತೆಲುಗು, ತಮಿಳು, ಮಲಯಾಳಂ, ಬೆಂಗಾಲಿ ಹಾಗೂ ಇಂಗ್ಲಿಷ್ ಭಾಷೆಯಲ್ಲಿ ಸಿನಿಮಾ ಸಿದ್ಧವಾಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:01 pm, Tue, 12 December 23

ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಸಿಕ್ಕ ಸಿಕ್ಕ ಜಾನುವಾರುಗಳನ್ನು ತಿಂದು ತೇಗಿದ ಚಿರತೆ ಬೋನಿಗೆ ಬಿತ್ತು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಗೋಪಾಲ್‌ಗಂಜ್‌ನ ದೇವಸ್ಥಾನದಿಂದ 50 ಲಕ್ಷ ಮೌಲ್ಯದ ಚಿನ್ನದ ಕಿರೀಟ, ಆಭರಣ ಕಳವು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಕಾಳಹಸ್ತಿ ದೇವಸ್ಥಾನದಲ್ಲಿ ನೆಲದ ಮೇಲೆ ಕುಳಿತು ಪ್ರಸಾದ ಸೇವಿಸಿದ ರಷ್ಯನ್ನರು
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಪ್ರೇಮ್ ಕಹಾನಿ: 19 ವರ್ಷದ ಯುವತಿ ಹಿಂದೆ ಬಿದ್ದು ದುರಂತ ಅಂತ್ಯಕಂಡ 40 ಅಂಕಲ್
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಬೇರೆ ಮಹಿಳೆ ಜತೆ ಲವ್ವಿಡವ್ವಿ: ಹೆಂಡ್ತಿ ಹತ್ಯೆಗೆ ಸುಪಾರಿ ಕೊಟ್ಟ ಪತಿ
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಡಿಕೆಶಿ ಪ್ರಾರ್ಥನೆಗೆ ಅಸ್ತು ಎಂದಳಾ ಶಕ್ತಿದೇವಿ? ಅರ್ಚಕರು ಹೇಳಿದ್ದಿಷ್ಟು
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ಸಂಜು ಹೊಡೆತಕ್ಕೆ ಸಿಲುಕಿ ನೋವಿನಿಂದ ನರಳಾಡಿದ ಅಂಪೈರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ