AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೆಜಿಎಫ್​ 3’ ಬಗ್ಗೆ ದೊಡ್ಡ ಸುಳಿವು ನೀಡಿದ ‘ಹೊಂಬಾಳೆ’; 1978ರಿಂದ 1981 ತನಕ ರಾಕಿ ಎಲ್ಲಿದ್ದ?

KGF Chapter 3: ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾದಲ್ಲಿ ಮಿಸ್​ ಆದ ಒಂದಷ್ಟು ವಿವರಗಳು ಇವೆ. ಅವುಗಳನ್ನು ಇಟ್ಟುಕೊಂಡು ‘ಕೆಜಿಎಫ್​ 3’ ಚಿತ್ರ ಮಾಡಲಾಗುತ್ತಿದೆ ಎಂಬುದಕ್ಕೆ ಈಗ ಸುಳಿವು ಸಿಕ್ಕಿದೆ.

‘ಕೆಜಿಎಫ್​ 3’ ಬಗ್ಗೆ ದೊಡ್ಡ ಸುಳಿವು ನೀಡಿದ ‘ಹೊಂಬಾಳೆ’; 1978ರಿಂದ 1981 ತನಕ ರಾಕಿ ಎಲ್ಲಿದ್ದ?
ಯಶ್
ಮದನ್​ ಕುಮಾರ್​
|

Updated on:Apr 14, 2023 | 1:50 PM

Share

​ಏಪ್ರಿಲ್​ 14 ಎಂದರೆ ‘ರಾಕಿಂಗ್​ ಸ್ಟಾರ್​’ ಯಶ್​ (Yash) ಪಾಲಿಗೆ ವಿಶೇಷ ದಿನ. ಕೇವಲ ಯಶ್​ ಅವರಿಗೆ ಮಾತ್ರವಲ್ಲದೇ ಇಡೀ ಕನ್ನಡ ಚಿತ್ರರಂಗಕ್ಕೆ ಇದು ವಿಶೇಷವಾದ ದಿನಾಂಕ. 2022ರ ಏಪ್ರಿಲ್​ 14ರಂದು ‘ಕೆಜಿಎಫ್​: ಚಾಪ್ಟರ್​ 2’ ಚಿತ್ರ ತೆರೆಕಂಡಿತು. ಅದಾಗಿ ಇಂದಿಗೆ ಒಂದು ವರ್ಷ ಕಳೆದಿದೆ. ಇಡೀ ದೇಶವೇ ಚಂದನವನದ ಕಡೆಗೆ ತಿರುಗಿ ನೋಡಿದ ಆ ದಿನವನ್ನು ಕನ್ನಡ ಸಿನಿಪ್ರಿಯರು ಮರೆಯುವಂತಿಲ್ಲ. ‘ಕೆಜಿಎಫ್​ 2’ ನಿರ್ಮಾಣ ಮಾಡಿದ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಸಂಸ್ಥೆ ಈಗ ಆ ನೆನಪುಗಳನ್ನು ಮೆಲುಕು ಹಾಕಿದೆ. ಒಂದು ವಿಶೇಷವಾದ ವಿಡಿಯೋ ಹಂಚಿಕೊಳ್ಳುವ ಮೂಲಕ ರಾಕಿ ಭಾಯ್​ ಜರ್ನಿಯನ್ನು ಮತ್ತೊಮ್ಮೆ ನೆನಪಿಸಿಕೊಳ್ಳಲಾಗಿದೆ. ಅದರಲ್ಲಿ ಹೊಸದೊಂದು ಸುಳಿವು ನೀಡಲಾಗಿದೆ. ‘ಕೆಜಿಎಫ್​: ಚಾಪ್ಟರ್​ 3’ (KGF Chapter 3) ಸಿನಿಮಾ ಬರೋದು ಖಚಿತ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ ಒದಗಿಸುತ್ತಿದೆ. ಇದನ್ನು ನೋಡಿ ಅಭಿಮಾನಿಗಳು ಥ್ರಿಲ್​ ಆಗಿದ್ದಾರೆ.

ನಿರ್ದೇಶಕ ಪ್ರಶಾಂತ್​ ನೀಲ್​ ಅವರು ‘ಕೆಜಿಎಫ್​: ಚಾಪ್ಟರ್​ 1’ ಮತ್ತು ‘ಕೆಜಿಎಫ್​: ಚಾಪ್ಟರ್​ 2’ ಸಿನಿಮಾಗಳ ಮೂಲಕ ರಾಕಿ ಭಾಯ್​ ಪಾತ್ರದ ಬಾಲ್ಯ, ಹೋರಾಟ, ಲವ್​, ಅವನತಿ.. ಮುಂತಾದ್ದನ್ನು ತೋರಿಸಿದರು. ಆದರೆ ಒಂದು ವಿಚಾರವನ್ನು ಗೌಪ್ಯವಾಗಿ ಇಡಲಾಯಿತು. 1978ರಿಂದ 1981ರ ತನಕ ರಾಕಿ ಭಾಯ್​ ಎಲ್ಲಿದ್ದ ಎಂಬುದನ್ನು ‘ಕೆಜಿಎಫ್​ 2’ ಸಿನಿಮಾದಲ್ಲಿ ತೋರಿಸಿಲ್ಲ. ಆ ಬಗ್ಗೆ ಅಭಿಮಾನಿಗಳಿಗೆ ಕುತೂಹಲ ಇದೆ.

ಇದನ್ನೂ ಓದಿ
Image
Radhika Pandit: ಯಶ್​​ಗಿಂತ ರಾಧಿಕಾ ಪಂಡಿತ್ ಎಷ್ಟು ವರ್ಷ ದೊಡ್ಡವರು? ಇಲ್ಲಿದೆ ಮಾಹಿತಿ
Image
Yash Birthday: ಬರ್ತ್​ಡೇಗೂ ಮೊದಲು ಅಭಿಮಾನಿಗಳ ಭೇಟಿ ಮಾಡಿದ ಯಶ್; ಇದಕ್ಕಿದೆ ಕಾರಣ
Image
Yash Birthday: ‘ಕ್ಷಮಿಸಿ, ಹುಟ್ಟುಹಬ್ಬಕ್ಕೆ ನಿಮ್ಮ ಜತೆ ಇರಲು ಆಗುತ್ತಿಲ್ಲ’: ಅಭಿಮಾನಿಗಳಿಗೆ ಯಶ್​ ಪತ್ರ
Image
Yash: ನಟ ಯಶ್​ ಅವರನ್ನು ಭೇಟಿ ಮಾಡಿದ ಭಾರತೀಯ ಕ್ರಿಕೆಟಿಗರಾದ ಹಾರ್ದಿಕ್​, ಕೃನಾಲ್ ಪಾಂಡ್ಯ

ಈಗ ‘ಹೊಂಬಾಳೆ ಫಿಲ್ಮ್ಸ್​’ ಹಂಚಿಕೊಂಡ ವಿಡಿಯೋದಲ್ಲಿ ‘1978ರಿಂದ 1981ರ ತನಕ ರಾಕಿ ಭಾಯ್​ ಎಲ್ಲಿದ್ದ?’ ಎಂಬ ವಾಕ್ಯ ಹೈಲೈಟ್​ ಆಗಿದೆ. ಅಲ್ಲದೇ ವಿಡಿಯೋದ ಕೊನೆಯಲ್ಲಿ ‘3’ ಎದ್ದು ಕಾಣಿಸಿದೆ. ಅಂದರೆ, ‘ಕೆಜಿಎಫ್​: ಚಾಪ್ಟರ್​ 3’ ಚಿತ್ರಕ್ಕೆ ಸಕಲ ತಯಾರಿ ನಡೆದಿದೆಯೇ ಎಂಬ ಪ್ರಶ್ನೆ ಪ್ರೇಕ್ಷಕರ ಮನದಲ್ಲಿ ಮೂಡಿದೆ. ಮೂರನೇ ಚಾಪ್ಟರ್​ನಲ್ಲಿ 1978ರಿಂದ 1981ರವರೆಗಿನ ಕಥೆ ಬಹಿರಂಗ ಆಗಲಿದೆ ಎಂದು ಎಲ್ಲರೂ ಊಹಿಸುತ್ತಿದ್ದಾರೆ.

ಇದನ್ನೂ ಓದಿ: KGF 3: ‘ಇನ್ನೂ ಭರ್ಜರಿಯಾದ ದೃಶ್ಯಗಳಿವೆ’: ‘ಕೆಜಿಎಫ್​ 3’ ಬಗ್ಗೆ ಮಾಹಿತಿ ಬಹಿರಂಗ ಮಾಡಿದ ಯಶ್​​

‘ಕೆಜಿಎಫ್​: ಚಾಪ್ಟರ್​ 2’ ತೆರೆಕಂಡು ಒಂದು ವರ್ಷ ಕಳೆದಿದ್ದರೂ ಕೂಡ ಯಶ್​ ಅವರು ಹೊಸ ಸಿನಿಮಾ ಅನೌನ್ಸ್​ ಮಾಡಿಲ್ಲ. ಅವರು ಯಾವ ಪ್ರೊಡಕ್ಷನ್​ ಹೌಸ್​ ಜೊತೆ ಕೈ ಜೋಡಿಸುತ್ತಾರೆ ಎಂಬುದು ಕೂಡ ಬಹಿರಂಗ ಆಗಿಲ್ಲ. ಈಗ ‘ಹೊಂಬಾಳೆ ಫಿಲ್ಮ್ಸ್​’ ಹಂಚಿಕೊಂಡ ವಿಡಿಯೋದಲ್ಲಿ ‘ಕೆಜಿಎಫ್​: ಚಾಪ್ಟರ್​ 3’ ಬಗ್ಗೆ ಹಿಂಟ್​ ಸಿಕ್ಕಿರುವುದರಿಂದ ಯಶ್​ ಮಾಡಲಿರುವ ಮುಂದಿನ ಸಿನಿಮಾ ಇದೇ ಆಗಿರಬಹುದೇ ಎಂದು ಫ್ಯಾನ್ಸ್​ ಊಹಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 1:50 pm, Fri, 14 April 23

Follow Us
Madan Kumar
Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ದೆಹಲಿ: ಶಿಕ್ಷಣ ಸಚಿವಾಲಯದ ಕಚೇರಿಯಲ್ಲಿ ಅಗ್ನಿ ಅವಘಡ
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?
ವಾಣಿಜ್ಯ LPG ಸಿಲಿಂಡರ್ ಬೆಲೆ ಏರಿಕೆ: ಹೋಟೆಲ್ ಊಟ-ತಿಂಡಿ ದರ ಹೆಚ್ಚಾಗುತ್ತಾ?