AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’

‘ಹೊಂಬಾಳೆ ಮ್ಯೂಸಿಕ್’ ಕಂಪನಿಯು ‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ‌ ಮಾಡಿದೆ. ನಾಗರಾಜ ಸೋಮಯಾಜಿ ಅವರು ಈ ಸಿನಿಮಾಗೆ ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗಾಗಲೇ ಟೈಟಲ್ ಮತ್ತು ಪೋಸ್ಟರ್ ಮೂಲಕ ‘ದೇವಿ‌ ಮಹಾತ್ಮೆ’ ಚಿತ್ರವು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ.

‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’
Hombale MusicImage Credit source: Tv9 Kannada
ಮದನ್​ ಕುಮಾರ್​
|

Updated on: May 26, 2026 | 7:11 PM

Share

ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ’ (Hombale Films) ಸಂಸ್ಥೆಯು ಸಕ್ರಿಯವಾಗಿ ತೊಡಗಿಕೊಂಡಿದೆ. ‘ಕೆಜಿಎಫ್’, ‘ಕಾಂತಾರ’, ‘ಸಲಾರ್’ ರೀತಿಯ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಮಾತ್ರವಲ್ಲದೇ ಸಿನಿಮಾಗಳ ವಿತರಣೆಯಲ್ಲೂ ಈ ಸಂಸ್ಥೆ ಆ್ಯಕ್ಟೀವ್ ಆಗಿದೆ. ಈಗ ಮ್ಯೂಸಿಕ್ ಮಾರುಕಟ್ಟೆಗೂ ಕಾಲಿಟ್ಟಿದೆ. ‘ಹೊಂಬಾಳೆ ಮ್ಯೂಸಿಕ್’ (Hombale Music) ಮೂಲಕ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಖರೀದಿಸಲು ಆರಂಭಿಸಿದೆ. ಹೊಂಬಾಳೆ ಸಂಸ್ಥೆ ಖರೀದಿಸಿದ ಮೊದಲ ಸಿನಿಮಾ ಆಲ್ಬಂ ‘ದೇವಿ ಮಹಾತ್ಮೆ’ (Devi Mahatme) ಆಗಿದ್ದು, ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಟೈಟಲ್ ಹಾಗೂ ಪೋಸ್ಟರ್ ಮೂಲಕ ‘ದೇವಿ‌ ಮಹಾತ್ಮೆ’ ಚಿತ್ರವು ಸಿನಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿದೆ. ಈಗ ಈ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಚಿತ್ರದ ಹಾಡುಗಳು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಮ್ಯೂಸಿಕ್’ಗೆ ಮಾರಾಟ ಆಗಿರುವುದು ಇಡೀ ಚಿತ್ರತಂಡ ಸಂತಸಕ್ಕೆ ಕಾರಣವಾಗಿದೆ. ‘ಹೊಂಬಾಳೆ’ ಜೊತೆ ಕೈ ಜೋಡಿಸಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದೆ.

ಹೌದು, ‘ಹೊಂಬಾಳೆ ಮ್ಯೂಸಿಕ್’ ಕಂಪನಿಯು ‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ‌ ಮಾಡಿದೆ. ಅಂದಹಾಗೇ ಈ ಚಿತ್ರಕ್ಕೆ ನಿರ್ದೇಶನ ಮಾಡಿರುವುದು ನಾಗರಾಜ ಸೋಮಯಾಜಿ. ಈ ಮೊದಲು ‘ಮರ್ಯಾದೆ ಪ್ರಶ್ನೆ’ ಸಿನಿಮಾ ಮಾಡಿದ್ದ ಅವರ ಸಾರಥ್ಯದಲ್ಲಿ ಈಗ ‘ದೇವಿ ಮಹಾತ್ಮೆ’ ಚಿತ್ರ ಮೂಡಿಬರುತ್ತಿದೆ. ಲಿಖಿತ್ ಪ್ರಸಾದ್ ಕೆ. ಶೆಟ್ಟಿ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

‘ಯುವಿಜಿ ಸ್ಟುಡಿಯೋ’ ಬ್ಯಾನರ್ ಮೂಲಕ ವಿದ್ಯಾ ಗಾಂಧಿರಾಜನ್ ಅವರು ‘ದೇವಿ ಮಹಾತ್ಮೆ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಗಾಂಧಿರಾಜನ್ ಅವರು ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಒಂದೊಳ್ಳೆ ತಾಂತ್ರಿಕ ವರ್ಗ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದೆ. ಉಜ್ವಲ್ ಚಂದ್ರ ಅವರ ಸಂಕಲನ, ಎಸ್.ಕೆ. ರಾವ್ ಅವರ ಛಾಯಾಗ್ರಹಣ ಈ ಸಿನಿಮಾಗೆ ಇದೆ.

ಇದನ್ನೂ ಓದಿ: ಎರಡು ವರ್ಷಕ್ಕೊಂದು ಅನಿಮೇಟೆಡ್ ಸಿನಿಮಾ; 10 ವರ್ಷದ ಪ್ಲ್ಯಾನ್ ರೆಡಿ ಮಾಡಿದ ಹೊಂಬಾಳೆ

ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ‘ದೇವಿ ಮಹಾತ್ಮೆ’. ನಾಗರಾಜ ಸೋಮಯಾಜಿ ಅವರು ಈ ಸಿನಿಮಾಗೆ ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್, ಭಾಸ್ಕರ್ ಬಂಗೇರ‌, ಗುರು ಆರ್ಯ ಹಾಗೂ ವಾದಿರಾಜ ಶೆಟ್ಟಿ ಜೊತೆಯಾಗಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಸರ್ಕಾರದ ಜೊತೆ ಇರುತ್ತೇವೆ: ಡಿಕೆಶಿಗೆ ತೇಜಸ್ವಿ ಸೂರ್ಯ ಭರವಸೆ
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪಶುವೈದ್ಯ ನೇಮಕಾತಿ ಹಗರಣ: CBI ತನಿಖೆಗೆ ಒಪ್ಪಿಸಿ ಎಂದ ಸುರೇಶ್ ಕುಮಾರ್
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಪ್ರತಿಭಟನಾಕಾರರ ಮೇಲಿನ ಲಾಠಿಚಾರ್ಜ್​ಗೆ ಸದನದಲ್ಲಿ ಖರ್ಗೆ ಖಂಡನೆ
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಡಿಕೆಶಿಗೆ ಹೈ ಸೆಕ್ಯೂರಿಟಿ:ದೆಹಲಿಯಲ್ಲಿ ವಿಶೇಷ ಭದ್ರತೆ ಇದೇ ಮೊದಲು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಆನ್ಲೈನ್ ಫುಡ್ ಡೆಲಿವರಿ ಆಪ್‌ಗಳ ವಿರುದ್ಧ ತಿರುಗಿಬಿದ್ದ ಹೋಟೆಲ್ ಮಾಲೀಕರು
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಕುಡುಕ ಎಂದ ಕಾಂಗ್ರೆಸ್​​​​​ ವಿರುದ್ಧ ಸಿಟಿ ರವಿ ಕೆಂಡಾಮಂಡಲ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಪಶುವೈದ್ಯ ನೇಮಕಾತಿ ಹಗರಣ: ಕೆಪಿಎಸ್‌ಸಿ ಕಚೇರಿಗೆ ಬಿಜೆಪಿ ನಿಯೋಗ ಭೇಟಿ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಹೈಡ್ರಾಮಾ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ರಾತ್ರೋರಾತ್ರಿ ಮೆಟ್ರೋ ಕ್ರೇನ್ ಏರಿ ಕೆಳಗಿಳಿಯಲಾಗದೆ ಒದ್ದಾಡಿದ ವ್ಯಕ್ತಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ
ಪಂಜಾಬ್‌ನಲ್ಲಿ ಬಿಜೆಪಿ ಕಚೇರಿ ಮೇಲೆ ಪೆಟ್ರೋಲ್ ಬಾಂಬ್ ದಾಳಿ