‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’

‘ಹೊಂಬಾಳೆ ಮ್ಯೂಸಿಕ್’ ಕಂಪನಿಯು ‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ‌ ಮಾಡಿದೆ. ನಾಗರಾಜ ಸೋಮಯಾಜಿ ಅವರು ಈ ಸಿನಿಮಾಗೆ ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಈಗಾಗಲೇ ಟೈಟಲ್ ಮತ್ತು ಪೋಸ್ಟರ್ ಮೂಲಕ ‘ದೇವಿ‌ ಮಹಾತ್ಮೆ’ ಚಿತ್ರವು ಸಿನಿಪ್ರಿಯರಲ್ಲಿ ನಿರೀಕ್ಷೆ ಮೂಡಿಸಿದೆ.

‘ದೇವಿ‌ ಮಹಾತ್ಮೆ’ ಸಿನಿಮಾದ ಆಡಿಯೋ ರೈಟ್ಸ್ ಖರೀದಿಸಿದ ‘ಹೊಂಬಾಳೆ ಮ್ಯೂಸಿಕ್’
Hombale Music
Image Credit source: Tv9 Kannada

Updated on: May 26, 2026 | 7:11 PM

ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ’ (Hombale Films) ಸಂಸ್ಥೆಯು ಸಕ್ರಿಯವಾಗಿ ತೊಡಗಿಕೊಂಡಿದೆ. ‘ಕೆಜಿಎಫ್’, ‘ಕಾಂತಾರ’, ‘ಸಲಾರ್’ ರೀತಿಯ ಬಿಗ್ ಬಜೆಟ್ ಸಿನಿಮಾಗಳನ್ನು ನಿರ್ಮಾಣ ಮಾಡಿದ್ದು ಮಾತ್ರವಲ್ಲದೇ ಸಿನಿಮಾಗಳ ವಿತರಣೆಯಲ್ಲೂ ಈ ಸಂಸ್ಥೆ ಆ್ಯಕ್ಟೀವ್ ಆಗಿದೆ. ಈಗ ಮ್ಯೂಸಿಕ್ ಮಾರುಕಟ್ಟೆಗೂ ಕಾಲಿಟ್ಟಿದೆ. ‘ಹೊಂಬಾಳೆ ಮ್ಯೂಸಿಕ್’ (Hombale Music) ಮೂಲಕ ಸಿನಿಮಾಗಳ ಆಡಿಯೋ ಹಕ್ಕುಗಳನ್ನು ಖರೀದಿಸಲು ಆರಂಭಿಸಿದೆ. ಹೊಂಬಾಳೆ ಸಂಸ್ಥೆ ಖರೀದಿಸಿದ ಮೊದಲ ಸಿನಿಮಾ ಆಲ್ಬಂ ‘ದೇವಿ ಮಹಾತ್ಮೆ’ (Devi Mahatme) ಆಗಿದ್ದು, ಆ ಬಗ್ಗೆ ಮಾಹಿತಿ ಹಂಚಿಕೊಳ್ಳಲಾಗಿದೆ.

ಟೈಟಲ್ ಹಾಗೂ ಪೋಸ್ಟರ್ ಮೂಲಕ ‘ದೇವಿ‌ ಮಹಾತ್ಮೆ’ ಚಿತ್ರವು ಸಿನಿ ಪ್ರೇಕ್ಷಕರಲ್ಲಿ ನಿರೀಕ್ಷೆ ಹೆಚ್ಚು ಮಾಡಿದೆ. ಈಗ ಈ ಸಿನಿಮಾದಿಂದ ಹೊಸ ಅಪ್ ಡೇಟ್ ಸಿಕ್ಕಿದೆ. ಚಿತ್ರದ ಹಾಡುಗಳು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾದ ‘ಹೊಂಬಾಳೆ ಮ್ಯೂಸಿಕ್’ಗೆ ಮಾರಾಟ ಆಗಿರುವುದು ಇಡೀ ಚಿತ್ರತಂಡ ಸಂತಸಕ್ಕೆ ಕಾರಣವಾಗಿದೆ. ‘ಹೊಂಬಾಳೆ’ ಜೊತೆ ಕೈ ಜೋಡಿಸಿರುವುದರಿಂದ ಚಿತ್ರತಂಡದ ಬಲ ಹೆಚ್ಚಿದೆ.

ಹೌದು, ‘ಹೊಂಬಾಳೆ ಮ್ಯೂಸಿಕ್’ ಕಂಪನಿಯು ‘ದೇವಿ ಮಹಾತ್ಮೆ’ ಸಿನಿಮಾದ ಆಡಿಯೋ ಹಕ್ಕನ್ನು ಖರೀದಿ‌ ಮಾಡಿದೆ. ಅಂದಹಾಗೇ ಈ ಚಿತ್ರಕ್ಕೆ ನಿರ್ದೇಶನ ಮಾಡಿರುವುದು ನಾಗರಾಜ ಸೋಮಯಾಜಿ. ಈ ಮೊದಲು ‘ಮರ್ಯಾದೆ ಪ್ರಶ್ನೆ’ ಸಿನಿಮಾ ಮಾಡಿದ್ದ ಅವರ ಸಾರಥ್ಯದಲ್ಲಿ ಈಗ ‘ದೇವಿ ಮಹಾತ್ಮೆ’ ಚಿತ್ರ ಮೂಡಿಬರುತ್ತಿದೆ. ಲಿಖಿತ್ ಪ್ರಸಾದ್ ಕೆ. ಶೆಟ್ಟಿ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ.

‘ಯುವಿಜಿ ಸ್ಟುಡಿಯೋ’ ಬ್ಯಾನರ್ ಮೂಲಕ ವಿದ್ಯಾ ಗಾಂಧಿರಾಜನ್ ಅವರು ‘ದೇವಿ ಮಹಾತ್ಮೆ’ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಗಾಂಧಿರಾಜನ್ ಅವರು ನಿರ್ಮಾಣದಲ್ಲಿ ಸಾಥ್ ಕೊಟ್ಟಿದ್ದಾರೆ. ಒಂದೊಳ್ಳೆ ತಾಂತ್ರಿಕ ವರ್ಗ ಈ ಚಿತ್ರದಲ್ಲಿ ಕೆಲಸ ಮಾಡುತ್ತಿದೆ. ಉಜ್ವಲ್ ಚಂದ್ರ ಅವರ ಸಂಕಲನ, ಎಸ್.ಕೆ. ರಾವ್ ಅವರ ಛಾಯಾಗ್ರಹಣ ಈ ಸಿನಿಮಾಗೆ ಇದೆ.

ಇದನ್ನೂ ಓದಿ: ಎರಡು ವರ್ಷಕ್ಕೊಂದು ಅನಿಮೇಟೆಡ್ ಸಿನಿಮಾ; 10 ವರ್ಷದ ಪ್ಲ್ಯಾನ್ ರೆಡಿ ಮಾಡಿದ ಹೊಂಬಾಳೆ

ಕಾಮಿಡಿ ಥ್ರಿಲ್ಲರ್ ಕಥಾಹಂದರ ಹೊಂದಿರುವ ಸಿನಿಮಾ ‘ದೇವಿ ಮಹಾತ್ಮೆ’. ನಾಗರಾಜ ಸೋಮಯಾಜಿ ಅವರು ಈ ಸಿನಿಮಾಗೆ ಚಿತ್ರಕಥೆ ಬರೆದು ಆ್ಯಕ್ಷನ್-ಕಟ್ ಹೇಳುತ್ತಿದ್ದಾರೆ. ಬರವಣಿಗೆಯಲ್ಲಿ ಅರವಿಂದ್ ಕುಪ್ಳೀಕರ್, ಭಾಸ್ಕರ್ ಬಂಗೇರ‌, ಗುರು ಆರ್ಯ ಹಾಗೂ ವಾದಿರಾಜ ಶೆಟ್ಟಿ ಜೊತೆಯಾಗಿದ್ದಾರೆ ಎಂದು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Madan Kumar

ಮಾಧ್ಯಮ ಲೋಕದಲ್ಲಿ ಕಳೆದ 10 ವರ್ಷಗಳಿಂದ ಸಕ್ರಿಯವಾಗಿದ್ದೇನೆ. ಕನ್ನಡದ ವಿವಿಧ ಪ್ರತಿಷ್ಠಿತ ಮಾಧ್ಯಮಗಳಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದೇನೆ. ಸಿನಿಮಾ ವರದಿಗಾರಿಕೆ ಮತ್ತು ವಿಮರ್ಶೆಯಲ್ಲಿ ಪರಿಣತಿ ಇದೆ. 2014ರಿಂದ 2019ರ ತನಕ ವಿಜಯವಾಣಿ ದಿನ ಪತ್ರಿಕೆಯಲ್ಲಿ ಸಿನಿಮಾ ವರದಿಗಾರನಾಗಿ ಕೆಲಸ ಮಾಡಿ ಅನುಭವ ಪಡೆದಿದ್ದೇನೆ. ಬಳಿಕ ವಿಜಯ ಕರ್ನಾಟಕ ಡಿಜಿಟಲ್ (ಟೈಮ್ಸ್​ ಇಂಟರ್​ನೆಟ್​) ಸಂಸ್ಥೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ಕೆಲಸ ಮಾಡಿದ್ದೇನೆ. ಪ್ರಸ್ತುತ ‘ಟಿವಿ9 ಕನ್ನಡ ಡಿಜಿಟಲ್​’ನ ಸಿನಿಮಾ/ಮನರಂಜನೆ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ. ಎಲ್ಲ ಭಾಷೆಯ ಸಿನಿಮಾಗಳ ವೀಕ್ಷಣೆಯಲ್ಲಿ ಆಸಕ್ತಿ ಇದೆ. ಸದಾ ಕನ್ನಡ-ಇಂಗ್ಲಿಷ್​ ಸಾಹಿತ್ಯದ ವಿದ್ಯಾರ್ಥಿ.

Read More
Follow Us