AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಕಿ ಭಾಯ್​ಗೆ ‘ದುನಿಯಾ’ ಗೆಲ್ಲಲು ನೀವೂ ಸಾಥ್ ನೀಡಬಹುದು! ‘ಕೆಜಿಎಫ್ 2’ ಚಿತ್ರತಂಡ ನೀಡಿರುವ ಭರ್ಜರಿ ಆಫರ್ ಏನು ಗೊತ್ತಾ?

Yash | Hombale Films: ಭಾರತೀಯ ಚಿತ್ರರಂಗದ ಇತಿಹಾಸದಲ್ಲೇ ಹೊಸ ಪ್ರಯತ್ನಕ್ಕೆ ‘ಕೆಜಿಎಫ್ 2’ ಚಿತ್ರತಂಡ ಮುಂದಾಗಿದ್ದು, ಅಭಿಮಾನಿಗಳಿಗೆ ಭರ್ಜರಿ ಆಫರ್ ನೀಡಿದೆ. ಏನದು? ಇಲ್ಲಿದೆ ಮಾಹಿತಿ.

ರಾಕಿ ಭಾಯ್​ಗೆ ‘ದುನಿಯಾ’ ಗೆಲ್ಲಲು ನೀವೂ ಸಾಥ್ ನೀಡಬಹುದು! ‘ಕೆಜಿಎಫ್ 2’ ಚಿತ್ರತಂಡ ನೀಡಿರುವ ಭರ್ಜರಿ ಆಫರ್ ಏನು ಗೊತ್ತಾ?
ಕಲಾವಿದರ ಕಣ್ಣಲ್ಲಿ ‘ಕೆಜಿಎಫ್ 2’ (Credits: Hombale Films/ Twitter)
TV9 Web
| Updated By: shivaprasad.hs|

Updated on: Mar 22, 2022 | 8:03 PM

Share

ದೇಶದೆಲ್ಲೆಡೆ ‘ಕೆಜಿಎಫ್ 2’ (KGF 2) ಹವಾ ಜೋರಾಗಿದೆ. ಚಿತ್ರತಂಡ ಕೂಡ ಭರ್ಜರಿ ಪ್ರಚಾರದಲ್ಲಿ ತೊಡಗಿಸಿಕೊಳ್ಳುತ್ತಿದೆ. ಇದೀಗ ಅಭಿಮಾನಿಗಳನ್ನು ಚಿತ್ರಕ್ಕೆ ಮತ್ತಷ್ಟು ಹತ್ತಿರವಾಗಿಸಲು ಚಿತ್ರತಂಡ ನಿರ್ಧರಿಸಿದೆ. ಈ ಹಿನ್ನೆಲೆಯಲ್ಲಿ ಇದುವರೆಗೆ ಯಾರೂ ಮಾಡಿರದ ಸಾಹಸಕ್ಕೆ ಮುಂದಾಗಿದೆ ನಿರ್ಮಾಣ ಸಂಸ್ಥೆ ‘ಹೊಂಬಾಳೆ ಫಿಲ್ಮ್ಸ್’! ಹೌದು. ಯಶ್ ನಾಯಕನಾಗಿ ನಟಿಸುತ್ತಿರುವ ‘ಕೆಜಿಎಫ್ 2’ ಏಪ್ರಿಲ್ 14ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಪ್ರಶಾಂತ್ ನೀಲ್ ನಿರ್ದೇಶನದ ಈ ಚಿತ್ರ ಈಗಾಗಲೇ ದೊಡ್ಡ ಮಟ್ಟದಲ್ಲಿ ಹವಾ ಎಬ್ಬಿಸಿದೆ. ಇದೀಗ ಚಿತ್ರತಂಡ ಕೊನೆಯ ಹಂತದ ಪ್ರಚಾರ ಕಾರ್ಯಗಳಲ್ಲಿ ಬ್ಯುಸಿಯಾಗಿದ್ದು, ಹಲವು ನೂತನ ಆಫರ್​ಗಳನ್ನು ಅಭಿಮಾನಿಗಳಿಗೆ ನೀಡಿದೆ. ಈ ಕುರಿತು ಹೊಂಬಾಳೆ ಫಿಲ್ಮ್ಸ್ ಟ್ವಿಟರ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಸಂಪೂರ್ಣ ವಿವರ ನೀಡಿದೆ. ಕಲಾವಿದರು, ಗ್ರಾಫಿಕ್ಸ್ ಡಿಸೈನ್​ಗಳಲ್ಲಿ ಆಸಕ್ತಿಯುಳ್ಳವರು ತಾವು ರಚಿಸಿದ ‘ರಾಕಿ ಭಾಯ್’ ಕಲಾಕೃತಿಗಳನ್ನು ಹೊಂಬಾಳೆ ಫಿಲ್ಮ್ಸ್ ಜತೆ ಹಂಚಿಕೊಳ್ಳಬಹುದು. ಅದು ಚಿತ್ರತಂಡ ವಿಶ್ವಾದ್ಯಂತ ನಡೆಸಲಿರುವ ಪ್ರಚಾರದ ಭಾಗವಾಗಲಿದೆ. ಈ ಕುರಿತು ಪೂರ್ಣ ವಿವರ ನೀಡಿದೆ ಚಿತ್ರತಂಡ.

ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡ ಮಾಹಿತಿಯಲ್ಲೇನಿದೆ?

ಹೊಂಬಾಳೆ ಫಿಲ್ಮ್ಸ್ ಟ್ವೀಟ್​ನಲ್ಲಿ ಸಂಕ್ಷಿಪ್ತ ಬರಹವನ್ನು ಹಂಚಿಕೊಂಡಿದೆ. ಅದರಲ್ಲಿ ಅಭಿಮಾನಿಗಳಿಗೆ ನೀಡಿರುವ ಭರ್ಜರಿ ಆಫರ್​ನ ವಿವರಣೆಯಿದೆ. ‘‘ಕೆಜಿಎಫ್ 1 ರಿಲೀಸ್ ಆಗಿ ಮೂರು ವರ್ಷವಾಗಿದ್ದು, ನಮಗೆ ಸಿಕ್ಕ ಪ್ರೀತಿಗೆ ವಂದನೆಗಳು. ಇದು ಕೆಜಿಎಫ್​ 2ರ ಪ್ರಯಾಣವನ್ನು ಮತ್ತಷ್ಟು ವಿಶೇಷವಾಗಿಸಿದೆ’’ ಎಂದು ಬರಹವನ್ನು ಆರಂಭಿಸಿದೆ ಹೊಂಬಾಳೆ ಫಿಲ್ಮ್ಸ್.

‘‘ಈ ಚಿತ್ರವು ನಿಮ್ಮೆಲ್ಲರದ್ದು. ಕೆಜಿಎಫ್ 2 ಪ್ರಚಾರಕ್ಕೆ ನೀವೂ ಸಾಥ್ ನೀಡಿದರೆ ಚೆನ್ನಾಗಿರುತ್ತದೆ. ಭಾರತೀಯ ಸಿನಿಮಾ ಇತಿಹಾಸದಲ್ಲೇ ಮೊದಲ ಬಾರಿಗೆ ಅಭಿಮಾನಿ ಕಲಾವಿದರು ರಚಿಸಿದ ಕಲಾಕೃತಿಗಳನ್ನು ಇಟ್ಟುಕೊಂಡು ನಾವು ಪ್ರಚಾರ ನಡೆಸಲಿದ್ದೇವೆ. ಇಂದಿನಿಂದ ಆರಂಭಿಸಿ.. ನೀವು ರಚಿಸಿದ ರಾಕಿ ಭಾಯ್ ಕಲಾಕೃತಿಗಳನ್ನು ನಮ್ಮೊಂದಿಗೆ ಹಂಚಿಕೊಳ್ಳಿ. ಅದು ಚಿತ್ರತಂಡದ ಮುಖ್ಯ ಪ್ರಚಾರದಲ್ಲಿ ಜತೆಯಾಗಲಿದೆ’’

‘‘ಚಿತ್ರವು ಅಭಿಮಾನಿಗಳ ಹೊರತಾಗಿ ಏನೂ ಅಲ್ಲ ಮತ್ತು ಇದರಿಂದ ರಾಕಿ ಭಾಯ್​ಅನ್ನು ಜಗತ್ತಿನ ನಕಾಶೆಯಲ್ಲಿ ಗುರುತಿಸಲು ಸಹಾಯಕವಾಗುತ್ತದೆ. ಕಾರಣ, ರಾಕಿ ಭಾಯ್​ಗೆ ಬೇಕಿರುವುದು ‘ದುನಿಯಾ’’’ ಎಂದು ಬರೆದಿದೆ ಹೊಂಬಾಳೆ ಫಿಲ್ಮ್ಸ್. ಇದಕ್ಕೆ ಸಂಬಂಧಪಟ್ಟಂತೆ ಹೊಂಬಾಳೆ ಫಿಲ್ಮ್ಸ್​​ ಹಂಚಿಕೊಂಡ ಟ್ವೀಟ್ ಇಲ್ಲಿದೆ.

ಪ್ರಶಾಂತ್ ನೀಲ್ ನಿರ್ದೇಶನದ ‘ಕೆಜಿಎಫ್ 2’ ಏಪ್ರಿಲ್ 14ರಂದು ವಿಶ್ವಾದ್ಯಂತ ರಿಲೀಸ್ ಆಗುತ್ತಿದೆ. ಸಂಜಯ್ ದತ್, ರವೀನಾ ಟಂಡನ್, ಪ್ರಕಾಶ್ ರಾಜ್, ಶ್ರೀನಿಧಿ ಶೆಟ್ಟಿ ಮೊದಲಾದ ಖ್ಯಾತ ಕಲಾವಿದರ ದಂಡೇ ಚಿತ್ರದಲ್ಲಿದೆ. ಚಿತ್ರದ ಹೊಸ ಹಾಡು ‘ತೂಫಾನ್’ ಈಗಾಗಲೇ ದೊಡ್ಡ ಮಟ್ಟದಲ್ಲಿ ಹಿಟ್ ಆಗಿದೆ.

ಇದನ್ನೂ ಓದಿ:

ಸಿನಿಮಾ ಒಪ್ಪಿಕೊಳ್ಳುವ ಮುನ್ನ ತಾರೆಯರು ವಿಧಿಸೋ ಷರತ್ತುಗಳಿವು!

Anupama Parameswaran: ಸಾಂಪ್ರದಾಯಿಕ ಗೆಟಪ್​ನಲ್ಲಿ ಮಿಂಚಿದ ‘ನಟಸಾರ್ವಭೌಮ’ ಬೆಡಗಿ; ಅನುಪಮಾ ಪರಮೇಶ್ವರನ್ ಕ್ಯೂಟ್ ಫೋಟೋ ಗ್ಯಾಲರಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ