AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ

ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ
ಹೊಂಬಾಳೆ ಫಿಲ್ಮ್ಸ್​-ವಿಜಯ್ ಕಿರಗಂದೂರು
TV9 Web
| Edited By: |

Updated on:Jan 02, 2023 | 5:44 PM

Share

ವಿಜಯ್ ಕಿರಗಂದೂರು (Vijay Kirgandur ) ಅವರ ‘ಹೊಂಬಾಳೆ ಫಿಲ್ಮ್ಸ್​​’ ಕಡೆಯಿಂದ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಲೇ ಇವೆ. ‘ಕೆಜಿಎಫ್​’ (KGF Movie) ಸರಣಿ ಹಿಟ್ ಆದ ನಂತರದಲ್ಲಿ ಪರಭಾಷೆಯಲ್ಲೂ ವಿಜಯ್ ಕಿರಗಂದೂರು ಅವರು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಹೊಸ ವರ್ಷಕ್ಕೆ ಅವರ ಕಡೆಯಿಂದ ಮಹತ್ವದ ಘೋಷಣೆ ಆಗಿದೆ. ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

‘ಹೊಂಬಾಳೆ ಫಿಲ್ಮ್ಸ್​​’ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಈ ನಿರ್ಮಾಣ ಸಂಸ್ಥೆ ನೀಡಿದೆ. ‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಚಿತ್ರಗಳಿಂದ ಈ ಸಂಸ್ಥೆಗೆ ದೊಡ್ಡ ಮಟ್ಟದ ಲಾಭ ಆಗಿದೆ. ‘ಕೆಜಿಎಫ್ 2’ ವಿಶ್ವ ಮಟ್ಟದಲ್ಲಿ 1300+ ಕೋಟಿ ರೂಪಾಯಿ ಕಮಾಯಿ ಮಾಡಿದೆ. ಇದರಿಂದ ವಿಜಯ್ ಅವರ ಜೇಬು ತುಂಬಿದೆ. ಇತ್ತೀಚೆಗೆ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಕೂಡ ಸೂಪರ್ ಹಿಟ್ ಆಯಿತು. ಈ ಸಿನಿಮಾ ಕೂಡ ದೊಡ್ಡ ಮಟ್ಟದ ಲಾಭ ನೀಡಿದೆ. 15 ಕೋಟಿ ಬಜೆಟ್​ನಲ್ಲಿ ರೆಡಿ ಆದ ಈ ಚಿತ್ರದ ಒಟ್ಟಾರೆ ಕಲೆಕ್ಷನ್​ 400 ಕೋಟಿ ರೂಪಾಯಿ ದಾಟಿದೆ. ಈ ಎಲ್ಲಾ ಸಿನಿಮಾಗಳಿಂದ ಆದ ಲಾಭವನ್ನು ಚಿತ್ರರಂಗಕ್ಕೆ ಮರಳಿ ಹೂಡಿಕೆ ಮಾಡಲು ವಿಜಯ್ ನಿರ್ಧರಿಸಿದಂತಿದೆ.

ಹೊಂಬಾಳೆ ಫಿಲ್ಮ್ಸ್​​ ನಿರ್ಮಾಣದ ಮೊದಲ ಸಿನಿಮಾ ‘ನಿನ್ನಿಂದಲೇ’ (2014) ಹೆಚ್ಚು ಸದ್ದು ಮಾಡಲಿಲ್ಲ. 2015ರಲ್ಲಿ ಬಂದ ‘ಮಾಸ್ಟರ್​ಪೀಸ್​’ ಚಿತ್ರ ಸೂಪರ್ ಹಿಟ್ ಆಯಿತು. ‘ರಾಜಕುಮಾರ’ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣ ಸಂಸ್ಥೆಯಿಂದ ಮೂಡಿ ಬಂದಿವೆ.

ಇದನ್ನೂ ಓದಿ: KGF Chapter 1: ‘ಕೆಜಿಎಫ್’ ಚಿತ್ರಕ್ಕೆ 4 ವರ್ಷ; ಇತಿಹಾಸ ಸೃಷ್ಟಿಸಿದ ದಿನ ನೆನೆದ ಹೊಂಬಾಳೆ ಫಿಲ್ಮ್ಸ್​

ಹೊಂಬಾಳೆ ತೆಲುಗಿನಲ್ಲಿ ‘ಸಲಾರ್​’ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಪ್ರಭಾಸ್ ಈ ಚಿತ್ರದ ಹೀರೋ. ಪೃಥ್ವಿರಾಜ್​ ನಿರ್ದೇಶಿಸಿ ನಟಿಸುತ್ತಿರುವ ಮಲಯಾಳಂನ ‘ಟೈಸನ್​’ ಕೂಡ ನಿರೀಕ್ಷೆ ಮೂಡಿಸಿದೆ. ಕನ್ನಡದ ‘ಬಘೀರ’ ಚಿತ್ರದ ಬಗ್ಗೆ ಕುತೂಹಲ ಮೂಡಿದೆ. ಮಲಯಾಳಂನ ‘ಧೂಮಂ’, ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಲಿರುವ ‘ರಿಚರ್ಡ್​ ಆಂಟನಿ’ ಸಿನಿಮಾಗಳು ಘೋಷಣೆ ಆಗಿವೆ. ತಮಿಳಿನಲ್ಲಿ ಕೀರ್ತಿ ಸುರೇಶ್ ನಟನೆಯ ಸಿನಿಮಾಗೆ ಹೊಂಬಾಳೆ ಹಣ ಹೂಡಿಕೆ ಮಾಡುತ್ತಿದೆ. ಇದರ ಜತೆಗೆ ಬಾಲಿವುಡ್​ನತ್ತ ವಿಜಯ್ ಅವರು ಗಮನಹರಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾ ಘೋಷಣೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:27 pm, Mon, 2 January 23

Follow Us
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಟಿವಿ9 ಕಚೇರಿಯಲ್ಲಿ ಗಣೇಶೋತ್ಸವ: ಅದ್ಧೂರಿ ಮೆರವಣಿಗೆಯೊಂದಿಗೆ ಗಣೇಶ ವಿಸರ್ಜನೆ
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಬಿಕೆ ಹರಿಪ್ರಸಾದ್ ಕೈಗೆ ಬಲ ತುಂಬಿದ ಸುರ್ಜೆವಾಲಾ, ವೇಣುಗೋಪಾಲ್
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಯುಪಿಐ ವಹಿವಾಟುಗಳಿಗೆ ಹೊಸ ಶುಲ್ಕ: ಯಾರು ಶುಲ್ಕ ಕಟ್ಟಬೇಕು? ಇಲ್ಲಿದೆ ಉತ್ತರ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಬೀದರ್​ನ ಪ್ರವಾಸಿ ತಾಣಗಳಲ್ಲಿ ಇರುವ ಕುಂದು ಕೊರತೆಗಳು ಒಂದಾ, ಎರಡಾ? ವಿಡಿಯೋ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಮೈಸೂರು ಹೊಸ ಮನೆ ಹಿಂದಿನ ರಹಸ್ಯ ಬಿಚ್ಚಿಟ್ಟ ಯತೀಂದ್ರ ಸಿದ್ದರಾಮಯ್ಯ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಪಿಎಂ ಕಿಸಾನ್ ಸಮ್ಮಾನ್ ನಿಧಿ: ಇ-ಕೆವೈಸಿ ಮಾಡಿಸೋದೇಗೆ?; ಇಲ್ಲಿದೆ ಮಾಹಿತಿ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ಗಣೇಶ ಹಬ್ಬಕ್ಕೆ ಡಿಪೋ, ಬಸ್ ನಿಲ್ದಾಣದಲ್ಲಿ ಪ್ರಸಾದ ಸಿದ್ದಗೊಳಿಸದಂತೆ ಆದೇಶ
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ತಾವರೆಕೆರೆ ಮೆಟ್ರೋ ಸ್ಟೇಷನ್ ಹೆಸರು ಬದಲಿಸದಂತೆ ಸ್ಥಳೀಯರು ಬಿಗಿಪಟ್ಟು
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಚಿತ್ರದುರ್ಗದಲ್ಲಿ ಪ್ರಯಾಣಿಕರೊಂದಿಗೆ ಸರ್ಕಾರಿ ಬಸ್ ಚಾಲಕನ ಕಿರಿಕ್
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​
ಜಿಬಿಎ ಅಧಿಕಾರಿಗಳಿಗೆ ಸಚಿವ ಕೃಷ್ಣ ಬೈರೇಗೌಡರಿಂದ ಕ್ಲಾಸ್​​