Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ

ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ
ಹೊಂಬಾಳೆ ಫಿಲ್ಮ್ಸ್​-ವಿಜಯ್ ಕಿರಗಂದೂರು
Follow us
| Updated By: ರಾಜೇಶ್ ದುಗ್ಗುಮನೆ

Updated on:Jan 02, 2023 | 5:44 PM

ವಿಜಯ್ ಕಿರಗಂದೂರು (Vijay Kirgandur ) ಅವರ ‘ಹೊಂಬಾಳೆ ಫಿಲ್ಮ್ಸ್​​’ ಕಡೆಯಿಂದ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಲೇ ಇವೆ. ‘ಕೆಜಿಎಫ್​’ (KGF Movie) ಸರಣಿ ಹಿಟ್ ಆದ ನಂತರದಲ್ಲಿ ಪರಭಾಷೆಯಲ್ಲೂ ವಿಜಯ್ ಕಿರಗಂದೂರು ಅವರು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಹೊಸ ವರ್ಷಕ್ಕೆ ಅವರ ಕಡೆಯಿಂದ ಮಹತ್ವದ ಘೋಷಣೆ ಆಗಿದೆ. ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

‘ಹೊಂಬಾಳೆ ಫಿಲ್ಮ್ಸ್​​’ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಈ ನಿರ್ಮಾಣ ಸಂಸ್ಥೆ ನೀಡಿದೆ. ‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಚಿತ್ರಗಳಿಂದ ಈ ಸಂಸ್ಥೆಗೆ ದೊಡ್ಡ ಮಟ್ಟದ ಲಾಭ ಆಗಿದೆ. ‘ಕೆಜಿಎಫ್ 2’ ವಿಶ್ವ ಮಟ್ಟದಲ್ಲಿ 1300+ ಕೋಟಿ ರೂಪಾಯಿ ಕಮಾಯಿ ಮಾಡಿದೆ. ಇದರಿಂದ ವಿಜಯ್ ಅವರ ಜೇಬು ತುಂಬಿದೆ. ಇತ್ತೀಚೆಗೆ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಕೂಡ ಸೂಪರ್ ಹಿಟ್ ಆಯಿತು. ಈ ಸಿನಿಮಾ ಕೂಡ ದೊಡ್ಡ ಮಟ್ಟದ ಲಾಭ ನೀಡಿದೆ. 15 ಕೋಟಿ ಬಜೆಟ್​ನಲ್ಲಿ ರೆಡಿ ಆದ ಈ ಚಿತ್ರದ ಒಟ್ಟಾರೆ ಕಲೆಕ್ಷನ್​ 400 ಕೋಟಿ ರೂಪಾಯಿ ದಾಟಿದೆ. ಈ ಎಲ್ಲಾ ಸಿನಿಮಾಗಳಿಂದ ಆದ ಲಾಭವನ್ನು ಚಿತ್ರರಂಗಕ್ಕೆ ಮರಳಿ ಹೂಡಿಕೆ ಮಾಡಲು ವಿಜಯ್ ನಿರ್ಧರಿಸಿದಂತಿದೆ.

ಹೊಂಬಾಳೆ ಫಿಲ್ಮ್ಸ್​​ ನಿರ್ಮಾಣದ ಮೊದಲ ಸಿನಿಮಾ ‘ನಿನ್ನಿಂದಲೇ’ (2014) ಹೆಚ್ಚು ಸದ್ದು ಮಾಡಲಿಲ್ಲ. 2015ರಲ್ಲಿ ಬಂದ ‘ಮಾಸ್ಟರ್​ಪೀಸ್​’ ಚಿತ್ರ ಸೂಪರ್ ಹಿಟ್ ಆಯಿತು. ‘ರಾಜಕುಮಾರ’ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣ ಸಂಸ್ಥೆಯಿಂದ ಮೂಡಿ ಬಂದಿವೆ.

ಇದನ್ನೂ ಓದಿ: KGF Chapter 1: ‘ಕೆಜಿಎಫ್’ ಚಿತ್ರಕ್ಕೆ 4 ವರ್ಷ; ಇತಿಹಾಸ ಸೃಷ್ಟಿಸಿದ ದಿನ ನೆನೆದ ಹೊಂಬಾಳೆ ಫಿಲ್ಮ್ಸ್​

ಹೊಂಬಾಳೆ ತೆಲುಗಿನಲ್ಲಿ ‘ಸಲಾರ್​’ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಪ್ರಭಾಸ್ ಈ ಚಿತ್ರದ ಹೀರೋ. ಪೃಥ್ವಿರಾಜ್​ ನಿರ್ದೇಶಿಸಿ ನಟಿಸುತ್ತಿರುವ ಮಲಯಾಳಂನ ‘ಟೈಸನ್​’ ಕೂಡ ನಿರೀಕ್ಷೆ ಮೂಡಿಸಿದೆ. ಕನ್ನಡದ ‘ಬಘೀರ’ ಚಿತ್ರದ ಬಗ್ಗೆ ಕುತೂಹಲ ಮೂಡಿದೆ. ಮಲಯಾಳಂನ ‘ಧೂಮಂ’, ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಲಿರುವ ‘ರಿಚರ್ಡ್​ ಆಂಟನಿ’ ಸಿನಿಮಾಗಳು ಘೋಷಣೆ ಆಗಿವೆ. ತಮಿಳಿನಲ್ಲಿ ಕೀರ್ತಿ ಸುರೇಶ್ ನಟನೆಯ ಸಿನಿಮಾಗೆ ಹೊಂಬಾಳೆ ಹಣ ಹೂಡಿಕೆ ಮಾಡುತ್ತಿದೆ. ಇದರ ಜತೆಗೆ ಬಾಲಿವುಡ್​ನತ್ತ ವಿಜಯ್ ಅವರು ಗಮನಹರಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾ ಘೋಷಣೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:27 pm, Mon, 2 January 23

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ