AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ

ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ
ಹೊಂಬಾಳೆ ಫಿಲ್ಮ್ಸ್​-ವಿಜಯ್ ಕಿರಗಂದೂರು
TV9 Web
| Edited By: |

Updated on:Jan 02, 2023 | 5:44 PM

Share

ವಿಜಯ್ ಕಿರಗಂದೂರು (Vijay Kirgandur ) ಅವರ ‘ಹೊಂಬಾಳೆ ಫಿಲ್ಮ್ಸ್​​’ ಕಡೆಯಿಂದ ಹೊಸ ಹೊಸ ಸಿನಿಮಾಗಳು ಘೋಷಣೆ ಆಗುತ್ತಲೇ ಇವೆ. ‘ಕೆಜಿಎಫ್​’ (KGF Movie) ಸರಣಿ ಹಿಟ್ ಆದ ನಂತರದಲ್ಲಿ ಪರಭಾಷೆಯಲ್ಲೂ ವಿಜಯ್ ಕಿರಗಂದೂರು ಅವರು ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ್ದಾರೆ. ಹೊಸ ವರ್ಷಕ್ಕೆ ಅವರ ಕಡೆಯಿಂದ ಮಹತ್ವದ ಘೋಷಣೆ ಆಗಿದೆ. ಸಿನಿಮಾ ರಂಗಕ್ಕೆ ಮುಂದಿನ ಐದು ವರ್ಷಗಳಲ್ಲಿ 3 ಸಾವಿರ ಕೋಟಿ ರೂಪಾಯಿ ಹೂಡಿಕೆ ಮಾಡುವ ಬಗ್ಗೆ ಅವರು ಮಾಹಿತಿ ಹಂಚಿಕೊಂಡಿದ್ದಾರೆ. ಈ ಮೂಲಕ ಹಲವು ಬಿಗ್ ಬಜೆಟ್ ಚಿತ್ರಗಳು ಈ ನಿರ್ಮಾಣ ಸಂಸ್ಥೆಯಿಂದ ಮೂಡಿ ಬರುವ ಸೂಚನೆ ಸಿಕ್ಕಿದೆ.

‘ಹೊಂಬಾಳೆ ಫಿಲ್ಮ್ಸ್​​’ ಕನ್ನಡ ಚಿತ್ರರಂಗಕ್ಕೆ ನೀಡಿದ ಕೊಡುಗೆ ತುಂಬಾನೇ ದೊಡ್ಡದು. ಹಲವು ಸೂಪರ್ ಹಿಟ್ ಚಿತ್ರಗಳನ್ನು ಈ ನಿರ್ಮಾಣ ಸಂಸ್ಥೆ ನೀಡಿದೆ. ‘ಕೆಜಿಎಫ್​’ ಹಾಗೂ ‘ಕೆಜಿಎಫ್​ 2’ ಚಿತ್ರಗಳಿಂದ ಈ ಸಂಸ್ಥೆಗೆ ದೊಡ್ಡ ಮಟ್ಟದ ಲಾಭ ಆಗಿದೆ. ‘ಕೆಜಿಎಫ್ 2’ ವಿಶ್ವ ಮಟ್ಟದಲ್ಲಿ 1300+ ಕೋಟಿ ರೂಪಾಯಿ ಕಮಾಯಿ ಮಾಡಿದೆ. ಇದರಿಂದ ವಿಜಯ್ ಅವರ ಜೇಬು ತುಂಬಿದೆ. ಇತ್ತೀಚೆಗೆ ತೆರೆಗೆ ಬಂದ ‘ಕಾಂತಾರ’ ಸಿನಿಮಾ ಕೂಡ ಸೂಪರ್ ಹಿಟ್ ಆಯಿತು. ಈ ಸಿನಿಮಾ ಕೂಡ ದೊಡ್ಡ ಮಟ್ಟದ ಲಾಭ ನೀಡಿದೆ. 15 ಕೋಟಿ ಬಜೆಟ್​ನಲ್ಲಿ ರೆಡಿ ಆದ ಈ ಚಿತ್ರದ ಒಟ್ಟಾರೆ ಕಲೆಕ್ಷನ್​ 400 ಕೋಟಿ ರೂಪಾಯಿ ದಾಟಿದೆ. ಈ ಎಲ್ಲಾ ಸಿನಿಮಾಗಳಿಂದ ಆದ ಲಾಭವನ್ನು ಚಿತ್ರರಂಗಕ್ಕೆ ಮರಳಿ ಹೂಡಿಕೆ ಮಾಡಲು ವಿಜಯ್ ನಿರ್ಧರಿಸಿದಂತಿದೆ.

ಹೊಂಬಾಳೆ ಫಿಲ್ಮ್ಸ್​​ ನಿರ್ಮಾಣದ ಮೊದಲ ಸಿನಿಮಾ ‘ನಿನ್ನಿಂದಲೇ’ (2014) ಹೆಚ್ಚು ಸದ್ದು ಮಾಡಲಿಲ್ಲ. 2015ರಲ್ಲಿ ಬಂದ ‘ಮಾಸ್ಟರ್​ಪೀಸ್​’ ಚಿತ್ರ ಸೂಪರ್ ಹಿಟ್ ಆಯಿತು. ‘ರಾಜಕುಮಾರ’ ಸೇರಿ ಹಲವು ಸೂಪರ್ ಹಿಟ್ ಚಿತ್ರಗಳು ನಿರ್ಮಾಣ ಸಂಸ್ಥೆಯಿಂದ ಮೂಡಿ ಬಂದಿವೆ.

ಇದನ್ನೂ ಓದಿ: KGF Chapter 1: ‘ಕೆಜಿಎಫ್’ ಚಿತ್ರಕ್ಕೆ 4 ವರ್ಷ; ಇತಿಹಾಸ ಸೃಷ್ಟಿಸಿದ ದಿನ ನೆನೆದ ಹೊಂಬಾಳೆ ಫಿಲ್ಮ್ಸ್​

ಹೊಂಬಾಳೆ ತೆಲುಗಿನಲ್ಲಿ ‘ಸಲಾರ್​’ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಈ ಚಿತ್ರಕ್ಕೆ ಪ್ರಶಾಂತ್ ನೀಲ್ ನಿರ್ದೇಶನ ಇದೆ. ಪ್ರಭಾಸ್ ಈ ಚಿತ್ರದ ಹೀರೋ. ಪೃಥ್ವಿರಾಜ್​ ನಿರ್ದೇಶಿಸಿ ನಟಿಸುತ್ತಿರುವ ಮಲಯಾಳಂನ ‘ಟೈಸನ್​’ ಕೂಡ ನಿರೀಕ್ಷೆ ಮೂಡಿಸಿದೆ. ಕನ್ನಡದ ‘ಬಘೀರ’ ಚಿತ್ರದ ಬಗ್ಗೆ ಕುತೂಹಲ ಮೂಡಿದೆ. ಮಲಯಾಳಂನ ‘ಧೂಮಂ’, ರಕ್ಷಿತ್ ಶೆಟ್ಟಿ ನಿರ್ದೇಶನ ಮಾಡಲಿರುವ ‘ರಿಚರ್ಡ್​ ಆಂಟನಿ’ ಸಿನಿಮಾಗಳು ಘೋಷಣೆ ಆಗಿವೆ. ತಮಿಳಿನಲ್ಲಿ ಕೀರ್ತಿ ಸುರೇಶ್ ನಟನೆಯ ಸಿನಿಮಾಗೆ ಹೊಂಬಾಳೆ ಹಣ ಹೂಡಿಕೆ ಮಾಡುತ್ತಿದೆ. ಇದರ ಜತೆಗೆ ಬಾಲಿವುಡ್​ನತ್ತ ವಿಜಯ್ ಅವರು ಗಮನಹರಿಸಲಿದ್ದಾರೆ. ಮುಂದಿನ ದಿನಗಳಲ್ಲಿ ಮತ್ತಷ್ಟು ಸಿನಿಮಾ ಘೋಷಣೆ ಆಗುವ ನಿರೀಕ್ಷೆ ಇದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 5:27 pm, Mon, 2 January 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು