AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Dhoomam: ಕನ್ನಡದಲ್ಲಿ ಯಾಕಿಲ್ಲ ‘ಧೂಮಂ’ ಪೋಸ್ಟರ್​? ಹೊಂಬಾಳೆ ಫಿಲ್ಮ್ಸ್​, ಪವನ್​ ಕುಮಾರ್​ಗೆ ಕನ್ನಡಿಗರ ಪ್ರಶ್ನೆ

ಕನ್ನಡದಲ್ಲೂ ‘ಧೂಮಂ’ ಪೋಸ್ಟರ್​ ರಿಲೀಸ್​ ಆಗಲಿದೆ ಎಂದು ನಿರೀಕ್ಷಿಸಲಾಗಿತ್ತು. ಆದರೆ ಕೇವಲ ಮಲಯಾಳಂನಲ್ಲಿ ಪೋಸ್ಟರ್​ ಬಿಡುಗಡೆ ಮಾಡಿರುವುದು ಕರುನಾಡಿನ ಸಿನಿಪ್ರಿಯರಿಗೆ ಬೇಸರ ಮೂಡಿಸಿದೆ.

Dhoomam: ಕನ್ನಡದಲ್ಲಿ ಯಾಕಿಲ್ಲ ‘ಧೂಮಂ’ ಪೋಸ್ಟರ್​? ಹೊಂಬಾಳೆ ಫಿಲ್ಮ್ಸ್​, ಪವನ್​ ಕುಮಾರ್​ಗೆ ಕನ್ನಡಿಗರ ಪ್ರಶ್ನೆ
ಧೂಮಂ ಸಿನಿಮಾ ಪೋಸ್ಟರ್
ಮದನ್​ ಕುಮಾರ್​
|

Updated on:Apr 17, 2023 | 4:45 PM

Share

ಭಾರತೀಯ ಚಿತ್ರರಂಗದಲ್ಲಿ ‘ಹೊಂಬಾಳೆ ಫಿಲ್ಮ್ಸ್​’ (Hombale Films) ಒಂದು ಪ್ರತಿಷ್ಠಿತ ನಿರ್ಮಾಣ ಸಂಸ್ಥೆಯಾಗಿ ಬೆಳೆದು ನಿಂತಿದೆ. ‘ಕೆಜಿಎಫ್​: ಚಾಪ್ಟರ್​ 2’, ‘ಕಾಂತಾರ’ ಮುಂತಾದ ಸಿನಿಮಾಗಳನ್ನು ನೀಡಿರುವ ಈ ಬ್ಯಾನರ್​ ಮೇಲೆ ಪ್ರೇಕ್ಷಕರಿಗೆ ಸಖತ್​ ಭರವಸೆ ಮೂಡಿದೆ. ಈ ಪ್ರೊಡಕ್ಷನ್​ ಹೌಸ್​ನಿಂದ ಬರಲಿರುವ ಎಲ್ಲ ಸಿನಿಮಾಗಳ ಮೇಲೆ ಜನರು ಸಾಕಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಈಗ ಇದೇ ಸಂಸ್ಥೆಯ ‘ಧೂಮಂ’ ಸಿನಿಮಾದ (Dhoomam Movie) ಫಸ್ಟ್​ ಲುಕ್​ ಬಿಡುಗಡೆ ಆಗಿದೆ. ಖ್ಯಾತ ನಿರ್ದೇಶಕ ಪವನ್​ ಕುಮಾರ್​ ಅವರು ಈ ಸಿನಿಮಾಗೆ ಆ್ಯಕ್ಷನ್​-ಕಟ್​ ಹೇಳುತ್ತಿದ್ದಾರೆ. ಸದಾ ಡಿಫರೆಂಟ್​ ಕಾನ್ಸೆಪ್ಟ್​ಗಳ ಮೂಲಕ ಗಮನ ಸೆಳೆಯುವ ಅವರು ಈಗ ‘ಧೂಮಂ’ ಪೋಸ್ಟರ್ ಮೂಲಕ ಕೌತುಕ ಮೂಡಿಸಿದ್ದಾರೆ. ಮಲಯಾಳಂ ನಟ ಫಹಾದ್​ ಫಾಸಿಲ್​ (Fahadh Faasil) ಅವರು ಈ ಚಿತ್ರದಲ್ಲಿ ಪ್ರಮುಖ ಪಾತ್ರ ಮಾಡುತ್ತಿದ್ದಾರೆ. ಇದು ಪ್ಯಾನ್​ ಇಂಡಿಯಾ ಸಿನಿಮಾ. ಆದರೆ ಸದ್ಯಕ್ಕೆ ಮಲಯಾಳಂ ಭಾಷೆಯಲ್ಲಿ ಮಾತ್ರ ಪೋಸ್ಟರ್​ ಬಿಡುಗಡೆ ಮಾಡಲಾಗಿದೆ. ಕನ್ನಡದಲ್ಲಿ ಯಾಕೆ ಪೋಸ್ಟರ್​ ರಿಲೀಸ್​ ಆಗಿಲ್ಲ ಎಂದು ನೆಟ್ಟಿಗರು ಪ್ರಶ್ನೆ ಮಾಡಿದ್ದಾರೆ.

ಪವನ್​ ಕುಮಾರ್​ ಅವರ ಸಿನಿಮಾಗಳಲ್ಲಿ ಹೀರೋ ಯಾರು ಎಂಬುದಕ್ಕಿಂತಲೂ ಕಥೆ ಮತ್ತು ಕಾನ್ಸೆಪ್ಟ್​ ಏನು ಎಂಬುದೇ ಹೆಚ್ಚು ಮುಖ್ಯವಾಗುತ್ತದೆ. ಈ ಹಿಂದೆ ‘ಲೂಸಿಯಾ’, ‘ಯೂಟರ್ನ್​’ ಸಿನಿಮಾಗಳನ್ನು ಅವರು ಈ ಮಾತನ್ನು ಸಾಬೀತು ಮಾಡಿದ್ದರು. ಈಗ ‘ಧೂಮಂ’ ಸಿನಿಮಾವನ್ನು ಕೂಡ ಅವರು ಡಿಫರೆಂಟ್​ ಆಗಿ ಕಟ್ಟಿಕೊಡಲಿದ್ದಾರೆ ಎಂಬುದಕ್ಕೆ ಈ ಪೋಸ್ಟರ್​ ಸಾಕ್ಷಿ ಒದಗಿಸುತ್ತಿದೆ.

ಇದನ್ನೂ ಓದಿ
Image
‘ಕೆಜಿಎಫ್​ 3’ ಬಗ್ಗೆ ದೊಡ್ಡ ಸುಳಿವು ನೀಡಿದ ‘ಹೊಂಬಾಳೆ’; 1978ರಿಂದ 1981 ತನಕ ರಾಕಿ ಎಲ್ಲಿದ್ದ?
Image
RCB-Hombale: ಬೆಂಗಳೂರಿನ ಖದರ್ ವಿಶ್ವಕ್ಕೆ ಪಸರಿಸಲು ಹೊಂಬಾಳೆ ಜೊತೆ ಕೈಜೋಡಿಸಿದ ಆರ್​ಸಿಬಿ
Image
Kantara 2: ಯುಗಾದಿ ದಿನವೇ ಸಿಹಿ ಸುದ್ದಿ ನೀಡಿದ ರಿಷಬ್​ ಶೆಟ್ಟಿ; ಇಲ್ಲಿದೆ ‘ಕಾಂತಾರ 2’ ಅಪ್​ಡೇಟ್​
Image
Hombale Films: ಮುಂದಿನ 5 ವರ್ಷಗಳಲ್ಲಿ ಚಿತ್ರರಂಗಕ್ಕೆ 3 ಸಾವಿರ ಕೋಟಿ ರೂ. ಹೂಡಿಕೆ; ವಿಜಯ್ ಕಿರಗಂದೂರು ಮಹತ್ವದ ಘೋಷಣೆ

‘ಬೆಂಕಿ ಇಲ್ಲದೇ ಹೊಗೆ ಆಡುವುದಿಲ್ಲ. ಇಲ್ಲಿದೆ ಮೊದಲ ಕಿಡಿ’ ಎಂಬ ಕ್ಯಾಪ್ಷನ್​ನೊಂದಿಗೆ ‘ಧೂಮಂ’ ಪೋಸ್ಟರ್​ ಹಂಚಿಕೊಳ್ಳಲಾಗಿದೆ. ಪೋಸ್ಟರ್​ನಲ್ಲಿ ಫಹಾದ್​ ಫಾಸಿಲ್​ ಅವರ ಬಾಯಿಗೆ ಪಟ್ಟಿ ಕಟ್ಟಲಾಗಿದೆ. ಹಿನ್ನೆಲೆಯಲ್ಲಿ ಇನ್ನುಳಿದ ಪಾತ್ರಗಳನ್ನು ತೋರಿಸಲಾಗಿದೆ. ಪೋಸ್ಟರ್​ ನೋಡಿದ ಸಿನಿಪ್ರಿಯರು ಬಗೆಬಗೆಯಲ್ಲಿ ಕಮೆಂಟ್​ ಮಾಡುತ್ತಿದ್ದಾರೆ. ಕನ್ನಡದಲ್ಲೂ ಪೋಸ್ಟರ್ ಇದ್ದಿದ್ದರೆ ಚೆನ್ನಾಗಿರುತ್ತಿತ್ತು ಎಂದು ಕರುನಾಡಿನ ಸಿನಿಪ್ರಿಯರು ಅನಿಸಿಕೆ ತಿಳಿಸಿದ್ದಾರೆ.

ಇದನ್ನೂ ಓದಿ: ‘ಕೆಜಿಎಫ್​ 3’ ಬಗ್ಗೆ ದೊಡ್ಡ ಸುಳಿವು ನೀಡಿದ ‘ಹೊಂಬಾಳೆ’; 1978ರಿಂದ 1981 ತನಕ ರಾಕಿ ಎಲ್ಲಿದ್ದ?

‘ಹೊಂಬಾಳೆ ಫಿಲ್ಮ್ಸ್​’ ಕನ್ನಡದ ಸಿನಿಮಾ ನಿರ್ಮಾಣ ಸಂಸ್ಥೆ. ನಿರ್ದೇಶಕ ಪವನ್​ ಕುಮಾರ್​ ಕೂಡ ಕನ್ನಡದವರು. ಹಾಗಾಗಿ ಕನ್ನಡದಲ್ಲೂ ‘ಧೂಮಂ’ ಪೋಸ್ಟರ್​ ರಿಲೀಸ್​ ಆಗಲಿದೆ ಎಂದು ಕನ್ನಡಿಗರು ನಿರೀಕ್ಷಿಸಿದ್ದರು. ಆದರೆ ಕೇವಲ ಮಲಯಾಳಂನಲ್ಲಿ ಪೋಸ್ಟರ್​ ಬಿಡುಗಡೆ ಮಾಡಿರುವುದು ಕೆಲವರಿಗೆ ಬೇಸರ ಮೂಡಿಸಿದೆ.

ಇದನ್ನೂ ಓದಿ: Kichcha Sudeep: ‘ಹೊಂಬಾಳೆ ಫಿಲ್ಮ್ಸ್​’ ಜತೆ ಕಿಚ್ಚ ಸುದೀಪ್​ ಸಿನಿಮಾ? ಅಚ್ಚರಿ ಹುಟ್ಟುಹಾಕಿದೆ ಈ ಫೋಟೋ

‘ಧೂಮಂ’ ಸಿನಿಮಾದಲ್ಲಿ ಫಹಾದ್​ ಫಾಸಿಲ್​ ಜೊತೆ ರೋಷನ್​ ಮ್ಯಾಥೀವ್​, ಅಪರ್ಣಾ ಬಾಲಮುರಳಿ ಮುಂತಾದವರು ನಟಿಸುತ್ತಿದ್ದಾರೆ. ‘ಲೂಸಿಯಾ’ ಖ್ಯಾತಿಯ ಪೂರ್ಣಚಂದ್ರ ತೇಜಸ್ವಿ ಅವರು ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಪ್ರೀತಾ ಜಯರಾಮನ್​ ಛಾಯಾಗ್ರಹಣದ ಜವಾಬ್ದಾರಿ ನಿಭಾಯಿಸುತ್ತಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 4:45 pm, Mon, 17 April 23

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್