Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೈವದ ಹರಕೆ ತೀರಿಸಿದ ‘ಕಾಂತಾರ’ ತಂಡ; ರೋಮಾಂಚನಕಾರಿಯಾಗಿದೆ ವಿಡಿಯೋ ​

ಈ ಸಿನಿಮಾ ಯಶಸ್ಸು ಕಂಡಿರುವುದರಿಂದ ಚಿತ್ರತಂಡ ಖುಷಿಯಲ್ಲಿದೆ. ರಿಷಬ್ ಶೆಟ್ಟಿ ಅವರು ಸ್ಟಾರ್ ಹೀರೋ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರ ಖ್ಯಾತಿ ಹಬ್ಬಿದೆ.

ದೈವದ ಹರಕೆ ತೀರಿಸಿದ ‘ಕಾಂತಾರ’ ತಂಡ; ರೋಮಾಂಚನಕಾರಿಯಾಗಿದೆ ವಿಡಿಯೋ ​
ದೈವದ ವಿಡಿಯೋ ಹಂಚಿಕೊಂಡ ಹೊಂಬಾಳೆ ಫಿಲ್ಮ್ಸ್​
Follow us
TV9 Web
| Updated By: ರಾಜೇಶ್ ದುಗ್ಗುಮನೆ

Updated on: Jan 20, 2023 | 2:43 PM

ರಿಷಬ್ ಶೆಟ್ಟಿ (Rishab Shetty) ನಟಿಸಿ ನಿರ್ದೇಶಿಸಿರುವ ‘ಕಾಂತಾರ’ ಸಿನಿಮಾ ಸೂಪರ್ ಹಿಟ್ ಆಯಿತು. ಈ ಚಿತ್ರದಿಂದ ಹೊಂಬಾಳೆ ಫಿಲ್ಮ್ಸ್​ ಅಭೂತಪೂರ್ವ ಯಶಸ್ಸು ಕಂಡಿತು. ನಿರ್ಮಾಪಕ ವಿಜಯ್ ಕಿರಗಂದೂರು (Vijay Kiraganduru) ಅವರು ಈ ಚಿತ್ರದಿಂದ ಸಾಕಷ್ಟು ಲಾಭ ಕಂಡರು. ಇತ್ತೀಚೆಗೆ ಚಿತ್ರತಂಡ ಪಂಜುರ್ಲಿ ದೈವಕ್ಕೆ ಹರಕೆ ತೀರಿಸಿತ್ತು. ಈ ವಿಡಿಯೋ ಅನ್ನು ಚಿತ್ರತಂಡ ಹಂಚಿಕೊಂಡಿದೆ. ಆ ಕ್ಷಣಗಳನ್ನು ಅದ್ಭುತವಾಗಿ ಸೆರೆ ಹಿಡಿದು ಹೊಂಬಾಳೆ ಫಿಲ್ಮ್ಸ್ ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದೆ. ಈ ವಿಡಿಯೋ ನೋಡಿದ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ. ಇನ್ನೂ ಕೆಲವರು ಈ ವಿಡಿಯೋ ರೋಮಾಂಚನಕಾರಿ ಆಗಿದೆ ಎಂದಿದ್ದಾರೆ.

‘ಕಾಂತಾರ’ ಸಿನಿಮಾದ ಜೀವಾಳ ದೈವ. ರಿಷಬ್ ಶೆಟ್ಟಿ ಅವರು ಕರಾವಳಿಯವರು. ಅಲ್ಲಿಯ ಸಂಸ್ಕೃತಿಯನ್ನೇ ಇಟ್ಟುಕೊಂಡು ಸಿನಿಮಾ ಮಾಡಿದ್ದರು. ‘ಕಾಂತಾರ’ ಚಿತ್ರದಲ್ಲಿ ಪಂಜುರ್ಲಿ ದೈವ ಬಹಳ ಮಹತ್ವದ ಪಾತ್ರವಹಿಸಿತ್ತು. ಈ ಸಿನಿಮಾ ಯಶಸ್ಸು ಕಂಡಿರುವುದರಿಂದ ಚಿತ್ರತಂಡ ಖುಷಿಯಲ್ಲಿದೆ. ರಿಷಬ್ ಶೆಟ್ಟಿ ಅವರು ಸ್ಟಾರ್ ಹೀರೋ ಆಗಿದ್ದಾರೆ. ಪ್ಯಾನ್ ಇಂಡಿಯಾ ಮಟ್ಟದಲ್ಲಿ ಅವರ ಖ್ಯಾತಿ ಹಬ್ಬಿದೆ.

ಇದನ್ನೂ ಓದಿ
Image
ಬಾಲ್ಯ ಸ್ನೇಹಿತನ ಮದುವೆಗೆ ಪತ್ನಿ ಸಮೇತ ಬಂದು ಹರಸಿದ ಯಶ್​; ಸಲಾಂ ರಾಕಿ ಭಾಯ್​ ಎಂದ ಫ್ಯಾನ್ಸ್​
Image
ಗೋವಾ ಸಿಎಂ ಪ್ರಮೋದ್​ ಸಾವಂತ್​ ಭೇಟಿ ಮಾಡಿದ ಯಶ್​-ರಾಧಿಕಾ ಪಂಡಿತ್​; ಮುಂದಿನ ಸಿನಿಮಾ ಬಗ್ಗೆ​ ಕುತೂಹಲ
Image
‘ಕೆಜಿಎಫ್​ 2’ ಹಿಟ್​ ಆಗಿದ್ದಕ್ಕೆ ಕಬ್ಬಿನ ಹಾಲು ಟ್ರೀಟ್​ ಕೇಳಿದ ‘ಗೂಗ್ಲಿ’ ನಟಿ ಕೃತಿ ಕರಬಂಧ: ಯಶ್​ ಏನಂದ್ರು?
Image
‘ಕೆಜಿಎಫ್​ 2’ಗೆ ಕೆಟ್ಟ ವಿಮರ್ಶೆ ಮಾಡಿ, ಯಶ್​ ಬಗ್ಗೆ ವ್ಯಂಗ್ಯದ ಮಾತಾಡಿದ ‘ದೇಶದ್ರೋಹಿ’ ನಟ:​ ಸಿಡಿದೆದ್ದ ಫ್ಯಾನ್ಸ್​

ಇತ್ತೀಚೆಗೆ ರಿಷಬ್ ಶೆಟ್ಟಿ, ಪ್ರಗತಿ ಶೆಟ್ಟಿ, ವಿಜಯ್ ಕಿರಗಂದೂರು, ಸಪ್ತಮಿ ಗೌಡ, ಪ್ರಮೋದ್ ಶೆಟ್ಟಿ ಮೊದಲಾದವರು ಮಂಗಳೂರಿನ ಅಣ್ಣಪ್ಪ ಪಂಜುರ್ಲಿಗೆ ತೆರಳಿ ಹರಕೆ ತೀರಿಸಿದ್ದರು. ಆ ಫೋಟೋಗಳು ವೈರಲ್ ಆಗಿದ್ದವು. ಈಗ ವಿಡಿಯೋ ಮಾಡಿ ಹೊಂಬಾಳೆ ಫಿಲ್ಮ್ಸ್ ಹಂಚಿಕೊಂಡಿದೆ. ಇದನ್ನು ನೋಡಿ ಅನೇಕರು ಮೆಚ್ಚುಗೆ ಸೂಚಿಸಿದ್ದಾರೆ.

‘ಕಾಂತಾರ’ ಚಿತ್ರದಿಂದ ಕರಾವಳಿಯ ಆಚರಣೆಗಳು ಜಗತ್ತಿನ ಮುಂದೆ ಪರಿಚಯಗೊಂಡಿವೆ. ಹೀಗೊಂದು ಆಚರಣೆ ಇದೆಯೇ ಎಂದು ಹೊರ ರಾಜ್ಯದವರಿಗೆ ಪ್ರಶ್ನೆ ಮೂಡಿತ್ತು. ಈಗ ಹಂಚಿಕೊಂಡಿರುವ ವಿಡಿಯೋ ಅವರ ಪ್ರಶ್ನೆಗಳಿಗೆ ಉತ್ತರ ಕೊಟ್ಟಂತಿದೆ. ‘ಕಾಂತಾರ’ ಸಿನಿಮಾ ಬಾಕ್ಸ್ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್ ಮಾಡಿ ಬೀಗಿದೆ. 2022ರಲ್ಲಿ ರಿಲೀಸ್ ಆದ ಸಿನಿಮಾಗಳ ಪೈಕಿ ಅಪರೂಪದ ಸಾಧನೆ ಮಾಡಿದ ಸಾಲಿನಲ್ಲಿ ‘ಕಾಂತಾರ’ ಮುಂಚೂಣಿಯಲ್ಲಿ ನಿಲ್ಲುತ್ತದೆ.

ಇದನ್ನೂ ಓದಿ: Kantara 2: ‘ಕಾಂತಾರ 2 ಅಂತ ನೀವೇ ಎಲ್ಲ ಹೇಳ್ತಿದ್ದೀರಿ..’; ಸೀಕ್ವೆಲ್​ ಬಗ್ಗೆ ಕೇಳಿದ್ದಕ್ಕೆ ರಿಷಬ್​ ಶೆಟ್ಟಿ ಉತ್ತರ

ರಿಷಬ್ ಶೆಟ್ಟಿ ಅವರು ‘ಕಾಂತಾರ’ ಚಿತ್ರಕ್ಕೆ ಸೀಕ್ವೆಲ್ ಅಥವಾ ಪ್ರೀಕ್ವೆಲ್ ಮಾಡುತ್ತಾರೆ ಎಂದು ವರದಿ ಆಗಿದೆ. ಇದನ್ನು ಚಿತ್ರತಂಡ ಖಚಿತಪಡಿಸಿದೆ. ಆದರೆ, ರಿಷಬ್ ಅವರು ಈ ವಿಚಾರದಲ್ಲಿ ನಿರ್ಧಾರ ತೆಗೆದುಕೊಂಡಿಲ್ಲ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಎರಡೂ ಪಕ್ಷಗಳ ಪ್ರಮುಖ ನಾಯಕರು ಸಭೆಯಲ್ಲಿ ಭಾಗಿ, ಅಶೋಕ ಅಧ್ಯಕ್ಷತೆ
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಲೋಕಾಯುಕ್ತ ವರದಿ ಮತ್ತು ಶಿಫಾರಸ್ಸನ್ನು ನಾನು ಇನ್ನೂ ಓದಿಲ್ಲ: ಶಿವಕುಮಾರ್
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಬೆಳಗಾವಿ, ಖಾನಾಪುರ, ನಿಪ್ಪಾಣಿಯಲ್ಲಿ ಕನ್ನಡ ಮಾತಾಡುವವರೇ ವಿರಳ: ಹೊರಟ್ಟಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಜಿಟಿ ದೇವೇಗೌಡರ ಬಗ್ಗೆ ಅಪಾರವಾದ ಗೌರವವಿದೆ: ನಿಖಿಲ್ ಕುಮಾರಸ್ವಾಮಿ
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಕುಮಾರಸ್ವಾಮಿ ಎರಡು ಬಾರಿ ಸಿಎಂ ಆಗಿ ಮಾಡಿದ ಸಾಧನೆ ಏನು? ಜಮೀರ್
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಬೆಂಗಳೂರು: ವೀಲಿಂಗ್ ಮಾಡಿದ್ದರ ವಿರುದ್ಧ ರೌಡಿಶೀಟ್​​ ಓಪನ್​
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ಕಂಡಕ್ಟರ್ ನಮ್ಮ ಮಗಳ ವಿರುದ್ಧ ಅವಾಚ್ಯ ಪದ ಬಳಸಿದ್ದು ನಿಜ: ಪಾಲಕರು
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ನಡೆದಿರುವ ಅಚಾತುರ್ಯದ ಬಗ್ಗೆ ಶಿವಲಿಂಗೇಗೌಡರಿನ್ನೂ ಪ್ರತಿಕ್ರಿಯೆ ನೀಡಿಲ್ಲ
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ದೊಡ್ಡಬಳ್ಳಾಪುರ: ಭೀಕರ ರಸ್ತೆ ಅಪಘಾತ, ನಾಲ್ಕು ಪಲ್ಟಿಯಾದ ಕಾರು
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್
ಗ್ಯಾರಂಟಿ ಯೋಜನೆಗಳು ಹೊರೆಯಾಗಿವೆ, ಅದರಲ್ಲಿ ಎರಡು ಮಾತಿಲ್ಲ: ಪರಮೇಶ್ವರ್