AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​

ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​
ವಿಜಯ್ ಕಿರಗಂದೂರು
Follow us
ರಾಜೇಶ್ ದುಗ್ಗುಮನೆ
|

Updated on:Jun 30, 2021 | 6:42 PM

‘ಕೆಜಿಎಫ್’​ ಸಿನಿಮಾ ನಿರ್ಮಾಣ ಮಾಡಿದ ನಂತರದಲ್ಲಿ ಹೊಂಬಾಳೆ ಫಿಲ್ಮ್ಸ್​ ಖ್ಯಾತಿ ದೇಶದಾದ್ಯಂತ ಹಬ್ಬಿದೆ. ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು ಚಿತ್ರರಂಗಕ್ಕೂ ಹೊಂಬಾಳೆ ಫಿಲ್ಮ್ಸ್ ಕಾಲಿಟ್ಟಿದೆ. ಈಗ ಈ ನಿರ್ಮಾಣ ಸಂಸ್ಥೆ ಹೊಸ ಆರಂಭಕ್ಕೆ ನಾಂದಿ ಹಾಡೋಕೆ ರೆಡಿ ಆಗಿದೆ. ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ಚಿತ್ರದ ​ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್ ಹೊತ್ತುಕೊಂಡಿದೆ. ಈ ಚಿತ್ರದ ಟೈಟಲ್​ ನಾಳೆ (ಜುಲೈ 1) ಲಾಂಚ್​ ಆಗಲಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಹೊಂಬಾಳೆ ಫಿಲ್ಮ್ಸ್​, ‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು. ನಾಳೆ ಬೆಳಿಗ್ಗೆ 11:46ಕ್ಕೆ #HombaleFilms9 ಟೈಟಲ್ ಅನಾವರಣ’ ಎಂದಿದೆ.

ಪವನ್​ ಕುಮಾರ್​ ಈಗಾಗಲೇ ‘ಲೂಸಿಯಾ’, ‘ಯು-ಟರ್ನ್​’ನಂಥ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಅವರ ನಿರ್ದೇಶನದ ಚಿತ್ರಗಳು ತುಂಬಾನೇ ಭಿನ್ನ ಕಥೆ ಹೊಂದಿರುತ್ತವೆ ಅನ್ನೋದು ವಿಶೇಷ. ಈಗ ಪುನೀತ್​ ಚಿತ್ರಕ್ಕೆ ಪವನ್​ ನಿರ್ದೇಶನ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸಹಜವಾಗಿಯೇ ಹೆಚ್ಚಿದೆ.

ಸದ್ಯ ಹೊಂಬಾಳೆ ಸಿನಿಮಾ ಮೂರು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ. ‘ಕೆಜಿಎಫ್​ 2’ ಸಿನಿಮಾ ಕೆಲಸಗಳು ಕೊನೆಯ ಹಂತದಲ್ಲಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಪ್ರಭಾಸ್​ ನಟಿಸುತ್ತಿರುವ ‘ಸಲಾರ್’ ಸಿನಿಮಾಗೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್​ ಹೊತ್ತುಕೊಂಡಿದೆ. ಶ್ರೀಮುರಳಿ ನಟನೆಯ ‘ಭಗೀರ’ ಚಿತ್ರಕ್ಕೂ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಈಗ ಈ ಸಾಲಿಗೆ ಪುನೀತ್​ ಸಿನಿಮಾ ಕೂಡ ಸೇರಿಕೊಂಡಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಾಡಿದ ಕೆಲಸವನ್ನು ನಿಜ ಜೀವನದಲ್ಲಿಯೂ ಮಾಡಿ ತೋರಿಸಿದ ಪುನೀತ್ ರಾಜ್​ಕುಮಾರ್

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

Published On - 6:11 pm, Wed, 30 June 21

ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ಆರ್​​​ಸಿಬಿ ಅಭಿಮಾನಿಗಳು ವಿಧಾನಸೌಧ ಬಳಿ ಅವಾಂತರ ಮಾಡಿದ್ದು ಅಷ್ಟಿಷ್ಟಲ್ಲ
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ವಿಯೆಟ್ನಾಂನ ಬೈಕ್ ಅಪಘಾತದಲ್ಲಿ 21 ವರ್ಷದ ಭಾರತೀಯ ವಿದ್ಯಾರ್ಥಿ ಸಾವು
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಆಟೋಚಾಲಕನಿಗೆ ತನ್ನ ಫೋನ್ ಕಳುವು ಗೊತ್ತಾಗಿದ್ದು ಕಳ್ಳನನ್ನು ಹಿಡಿದ ನಂತರ!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಕಾಲ್ತುಳಿತದ ನಡುವೆ ನೂರರು ಮೊಬೈಲ್‌ ಎಗರಿಸಿದ ಕಳ್ಳರು...!
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಉಚಿತ ಪಾಸ್​ಗಳನ್ನು ವಿತರಿಸಿದ್ದಕ್ಕೆ ಕಾಲ್ತುಳಿತದ ಘಟನೆ ಸಂಭವಿಸಿದೆ: ವಕೀಲ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ಎರಡೆರಡು ಕಡೆ ಸತ್ಕಾರ ಸಮಾರಂಭ ಏರ್ಪಡಿಸುವ ಅಗತ್ಯವೇನಿತ್ತು? ಚಲವಾದಿ
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ತಮ್ಮ ಮನೆಯಲ್ಲಿ ಸಿಂಧೂರ ಸಸಿ ನೆಟ್ಟ ಪ್ರಧಾನಿ ಮೋದಿ; ಏನಿದರ ವಿಶೇಷತೆ?
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಅರ್​ಸಿಬಿ ಆಟಗಾರರ ವಿಕ್ಟರಿ ಪರೇಡ್ ನೋಡಲು ಅಕ್ಷತಾರನ್ನು ಕರೆತಂದಿದ್ದ ಪತಿ
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಆರ್​ಸಿಬಿ ವಿಜಯೋತ್ಸವದಲ್ಲಿ ಕಾಲ್ತುಳಿತ: ಚಂದನ್ ಶೆಟ್ಟಿ ಹೇಳಿದ್ದೇನು?
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ
ಸರ್ಕಾರದ ತಪ್ಪಿನಿಂದಾಗಿ ಅನೇಕ ಜನ ಪ್ರಾಣ ಕಳೆದುಕೊಂಡರು: ಹಿರಿಯ ನಾಗರಿಕ