AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​

ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​
ವಿಜಯ್ ಕಿರಗಂದೂರು
ರಾಜೇಶ್ ದುಗ್ಗುಮನೆ
|

Updated on:Jun 30, 2021 | 6:42 PM

Share

‘ಕೆಜಿಎಫ್’​ ಸಿನಿಮಾ ನಿರ್ಮಾಣ ಮಾಡಿದ ನಂತರದಲ್ಲಿ ಹೊಂಬಾಳೆ ಫಿಲ್ಮ್ಸ್​ ಖ್ಯಾತಿ ದೇಶದಾದ್ಯಂತ ಹಬ್ಬಿದೆ. ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು ಚಿತ್ರರಂಗಕ್ಕೂ ಹೊಂಬಾಳೆ ಫಿಲ್ಮ್ಸ್ ಕಾಲಿಟ್ಟಿದೆ. ಈಗ ಈ ನಿರ್ಮಾಣ ಸಂಸ್ಥೆ ಹೊಸ ಆರಂಭಕ್ಕೆ ನಾಂದಿ ಹಾಡೋಕೆ ರೆಡಿ ಆಗಿದೆ. ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ಚಿತ್ರದ ​ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್ ಹೊತ್ತುಕೊಂಡಿದೆ. ಈ ಚಿತ್ರದ ಟೈಟಲ್​ ನಾಳೆ (ಜುಲೈ 1) ಲಾಂಚ್​ ಆಗಲಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಹೊಂಬಾಳೆ ಫಿಲ್ಮ್ಸ್​, ‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು. ನಾಳೆ ಬೆಳಿಗ್ಗೆ 11:46ಕ್ಕೆ #HombaleFilms9 ಟೈಟಲ್ ಅನಾವರಣ’ ಎಂದಿದೆ.

ಪವನ್​ ಕುಮಾರ್​ ಈಗಾಗಲೇ ‘ಲೂಸಿಯಾ’, ‘ಯು-ಟರ್ನ್​’ನಂಥ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಅವರ ನಿರ್ದೇಶನದ ಚಿತ್ರಗಳು ತುಂಬಾನೇ ಭಿನ್ನ ಕಥೆ ಹೊಂದಿರುತ್ತವೆ ಅನ್ನೋದು ವಿಶೇಷ. ಈಗ ಪುನೀತ್​ ಚಿತ್ರಕ್ಕೆ ಪವನ್​ ನಿರ್ದೇಶನ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸಹಜವಾಗಿಯೇ ಹೆಚ್ಚಿದೆ.

ಸದ್ಯ ಹೊಂಬಾಳೆ ಸಿನಿಮಾ ಮೂರು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ. ‘ಕೆಜಿಎಫ್​ 2’ ಸಿನಿಮಾ ಕೆಲಸಗಳು ಕೊನೆಯ ಹಂತದಲ್ಲಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಪ್ರಭಾಸ್​ ನಟಿಸುತ್ತಿರುವ ‘ಸಲಾರ್’ ಸಿನಿಮಾಗೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್​ ಹೊತ್ತುಕೊಂಡಿದೆ. ಶ್ರೀಮುರಳಿ ನಟನೆಯ ‘ಭಗೀರ’ ಚಿತ್ರಕ್ಕೂ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಈಗ ಈ ಸಾಲಿಗೆ ಪುನೀತ್​ ಸಿನಿಮಾ ಕೂಡ ಸೇರಿಕೊಂಡಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಾಡಿದ ಕೆಲಸವನ್ನು ನಿಜ ಜೀವನದಲ್ಲಿಯೂ ಮಾಡಿ ತೋರಿಸಿದ ಪುನೀತ್ ರಾಜ್​ಕುಮಾರ್

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

Published On - 6:11 pm, Wed, 30 June 21

Follow Us
Rajesh Duggumane
Rajesh Duggumane

ಪತ್ರಿಕೋದ್ಯಮಕ್ಕೆ ಕಾಲಿಟ್ಟು 9 ವರ್ಷ. ಸಂಯುಕ್ತ ಕರ್ನಾಟಕ, ವಿಜಯವಾಣಿ, ನ್ಯೂಸ್18 ಕನ್ನಡದಲ್ಲಿ ಕೆಲಸ ಮಾಡಿದ ಅನುಭವ ಇದೆ. ಈಗ ಟಿವಿ9 ಕನ್ನಡ ಡಿಜಿಟಲ್ನಲ್ಲಿ ಬರಹ ಕೃಷಿ ಮುಂದುವರಿಸಿದ್ದೇನೆ. ಸಿನಿಮಾ ರಂಗದ ಬಗ್ಗೆ ಮೊದಲಿನಿಂದಲೂ ಆಸಕ್ತಿ. ಅದರ ಜೊತೆ ಬರವಣಿಗೆಯೂ ಸೇರಿತು. ಈಗ ಅದುವೇ ಕಾಯಕ. ಸಿನಿಮಾ ವಿಮರ್ಶೆ, ಚಿತ್ರರಂಗದ ಗಾಸಿಪ್, ಹೊಸ ಸಿನಿಮಾ ಬಗ್ಗೆ ಅಪ್ಡೇಟ್ ನನ್ನ ಕಡೆಯಿಂದ. ಟ್ರಾವೆಲಿಂಗ್ ಕಡೆ ಹೆಚ್ಚು ಆಸಕ್ತಿ. ಓದುವುದು ಎಂದರೆ ಹುಚ್ಚು. ಸಿನಿಮಾ ನೋಡುವುದೂ ಆಸಕ್ತಿಗಳಲ್ಲಿ ಒಂದು. ಹಲವು ಸಿನಿಮಾ ನೋಡಿ ಈಗಾಗಲೇ ವಿಮರ್ಶೆ ಮಾಡಿ ನಿಮ್ಮ ಮುಂದಿಟ್ಟಿದ್ದೇನೆ.

Read More
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು