AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​

ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​
ವಿಜಯ್ ಕಿರಗಂದೂರು
ರಾಜೇಶ್ ದುಗ್ಗುಮನೆ
|

Updated on:Jun 30, 2021 | 6:42 PM

Share

‘ಕೆಜಿಎಫ್’​ ಸಿನಿಮಾ ನಿರ್ಮಾಣ ಮಾಡಿದ ನಂತರದಲ್ಲಿ ಹೊಂಬಾಳೆ ಫಿಲ್ಮ್ಸ್​ ಖ್ಯಾತಿ ದೇಶದಾದ್ಯಂತ ಹಬ್ಬಿದೆ. ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು ಚಿತ್ರರಂಗಕ್ಕೂ ಹೊಂಬಾಳೆ ಫಿಲ್ಮ್ಸ್ ಕಾಲಿಟ್ಟಿದೆ. ಈಗ ಈ ನಿರ್ಮಾಣ ಸಂಸ್ಥೆ ಹೊಸ ಆರಂಭಕ್ಕೆ ನಾಂದಿ ಹಾಡೋಕೆ ರೆಡಿ ಆಗಿದೆ. ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ಚಿತ್ರದ ​ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್ ಹೊತ್ತುಕೊಂಡಿದೆ. ಈ ಚಿತ್ರದ ಟೈಟಲ್​ ನಾಳೆ (ಜುಲೈ 1) ಲಾಂಚ್​ ಆಗಲಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಹೊಂಬಾಳೆ ಫಿಲ್ಮ್ಸ್​, ‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು. ನಾಳೆ ಬೆಳಿಗ್ಗೆ 11:46ಕ್ಕೆ #HombaleFilms9 ಟೈಟಲ್ ಅನಾವರಣ’ ಎಂದಿದೆ.

ಪವನ್​ ಕುಮಾರ್​ ಈಗಾಗಲೇ ‘ಲೂಸಿಯಾ’, ‘ಯು-ಟರ್ನ್​’ನಂಥ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಅವರ ನಿರ್ದೇಶನದ ಚಿತ್ರಗಳು ತುಂಬಾನೇ ಭಿನ್ನ ಕಥೆ ಹೊಂದಿರುತ್ತವೆ ಅನ್ನೋದು ವಿಶೇಷ. ಈಗ ಪುನೀತ್​ ಚಿತ್ರಕ್ಕೆ ಪವನ್​ ನಿರ್ದೇಶನ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸಹಜವಾಗಿಯೇ ಹೆಚ್ಚಿದೆ.

ಸದ್ಯ ಹೊಂಬಾಳೆ ಸಿನಿಮಾ ಮೂರು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ. ‘ಕೆಜಿಎಫ್​ 2’ ಸಿನಿಮಾ ಕೆಲಸಗಳು ಕೊನೆಯ ಹಂತದಲ್ಲಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಪ್ರಭಾಸ್​ ನಟಿಸುತ್ತಿರುವ ‘ಸಲಾರ್’ ಸಿನಿಮಾಗೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್​ ಹೊತ್ತುಕೊಂಡಿದೆ. ಶ್ರೀಮುರಳಿ ನಟನೆಯ ‘ಭಗೀರ’ ಚಿತ್ರಕ್ಕೂ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಈಗ ಈ ಸಾಲಿಗೆ ಪುನೀತ್​ ಸಿನಿಮಾ ಕೂಡ ಸೇರಿಕೊಂಡಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಾಡಿದ ಕೆಲಸವನ್ನು ನಿಜ ಜೀವನದಲ್ಲಿಯೂ ಮಾಡಿ ತೋರಿಸಿದ ಪುನೀತ್ ರಾಜ್​ಕುಮಾರ್

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

Published On - 6:11 pm, Wed, 30 June 21

ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಮಾನಸಿಕ ಒತ್ತಡ, ಖಿನ್ನತೆ ದೂರ ಮಾಡುತ್ತೆ ಕಿರಣ್: ಏನಿದು ಕಿರಣ್ ಸಹಾಯವಾಣಿ?
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಹಸುಗಳಿಗೆ AI ಅನ್ವಯದ ಬಗ್ಗೆ ಮೋದಿ ತುರ್ತು ನಿರ್ಧಾರ;ನಂದನ್ ನಿಲೇಕಣಿ ಬಣ್ಣನೆ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮಳೆ, ರಾಜ್ಯಕಾರಣದ ಬಗ್ಗೆ ಬಬಲಾದಿ ಕಾಲಜ್ಞಾನ ಸ್ಫೋಟಕ ಭವಿಷ್ಯ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
ಮೈಸೂರು: ಡಾ ಯತೀಂದ್ರ ಕಟೌಟ್ ನಿಲ್ಲಿಸಲು ರಸ್ತೆ ಬ್ಲಾಕ್; ಸವಾರರು ಆಕ್ರೋಶ
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
KSRTC, BMTC ಸಾರಿಗೆ ನೌಕರರ ಮುಷ್ಕರ ಏನಾಯ್ತು? ನಾಳೆ ಬಸ್ ಸಂಚಾರ ಇರುತ್ತಾ?
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ವಿದ್ಯಾರ್ಥಿಗಳೇ ಪರೀಕ್ಷೆ ಹೊತ್ತಲ್ಲಿ ಭಯ ಬೇಡ.. ನಿಮಗಾಗಿ ಸಿಂಪಲ್ ಟಿಪ್ಸ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಯುವತಿಯರಿಗೆ ಪ್ಲೈಯಿಂಗ್ ಕಿಸ್:ಬೀದಿ ಕಾಮಣ್ಣರ ವಿಡಿಯೋ ವೈರಲ್
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಮಂಗಳೂರಿಗೆ ಹೂಡಿಕೆದಾರರು ಬರುತ್ತಿಲ್ಲ ಎಂದ ಖರ್ಗೆ ವಿರುದ್ಧ ಪೈ ಕಿಡಿ
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಆ ಪಾತ್ರದಲ್ಲಿ ನಟಿಸುವ ಶಿವಣ್ಣನ ಆಸೆ ಇನ್ನೂ ಈಡೇರಿಲ್ಲ: ಯಾವುದು ಆ ಪಾತ್ರ?
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ
ಸರ್ಕಾರದ ಮುಖ್ಯ ಕಾರ್ಯದರ್ಶಿ ವಿರುದ್ಧವೂ 1.60 ಕೋಟಿ ರೂ. ಲಂಚ ಆರೋಪ