AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​

ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು.

‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು’; ವಿಶೇಷ ಘೋಷಣೆಗೆ ರೆಡಿ ಆದ ಹೊಂಬಾಳೆ ಫಿಲ್ಮ್ಸ್​
ವಿಜಯ್ ಕಿರಗಂದೂರು
ರಾಜೇಶ್ ದುಗ್ಗುಮನೆ
|

Updated on:Jun 30, 2021 | 6:42 PM

Share

‘ಕೆಜಿಎಫ್’​ ಸಿನಿಮಾ ನಿರ್ಮಾಣ ಮಾಡಿದ ನಂತರದಲ್ಲಿ ಹೊಂಬಾಳೆ ಫಿಲ್ಮ್ಸ್​ ಖ್ಯಾತಿ ದೇಶದಾದ್ಯಂತ ಹಬ್ಬಿದೆ. ಕೇವಲ ಕನ್ನಡ ಮಾತ್ರವಲ್ಲದೆ, ತೆಲುಗು ಚಿತ್ರರಂಗಕ್ಕೂ ಹೊಂಬಾಳೆ ಫಿಲ್ಮ್ಸ್ ಕಾಲಿಟ್ಟಿದೆ. ಈಗ ಈ ನಿರ್ಮಾಣ ಸಂಸ್ಥೆ ಹೊಸ ಆರಂಭಕ್ಕೆ ನಾಂದಿ ಹಾಡೋಕೆ ರೆಡಿ ಆಗಿದೆ. ಪುನೀತ್​ ರಾಜ್​ಕುಮಾರ್​ ನಟನೆಯ ಮುಂದಿನ ಚಿತ್ರಕ್ಕೆ ‘ಲೂಸಿಯಾ’ ಪವನ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಸಿನಿಮಾದ ಬಗ್ಗೆ ಪವನ್​ ಇತ್ತೀಚೆಗೆ ಘೋಷಣೆ ಮಾಡಿದ್ದರು. ಈ ಚಿತ್ರದ ​ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್ ಹೊತ್ತುಕೊಂಡಿದೆ. ಈ ಚಿತ್ರದ ಟೈಟಲ್​ ನಾಳೆ (ಜುಲೈ 1) ಲಾಂಚ್​ ಆಗಲಿದೆ.

ಈ ಬಗ್ಗೆ ಟ್ವಿಟರ್​ನಲ್ಲಿ ಬರೆದುಕೊಂಡಿರುವ ಹೊಂಬಾಳೆ ಫಿಲ್ಮ್ಸ್​, ‘ಹೊಸ ಆರಂಭಕ್ಕೆ ಹೆಸರಿಡುವ ಸಮಯ ಬಂದಾಯ್ತು. ನಾಳೆ ಬೆಳಿಗ್ಗೆ 11:46ಕ್ಕೆ #HombaleFilms9 ಟೈಟಲ್ ಅನಾವರಣ’ ಎಂದಿದೆ.

ಪವನ್​ ಕುಮಾರ್​ ಈಗಾಗಲೇ ‘ಲೂಸಿಯಾ’, ‘ಯು-ಟರ್ನ್​’ನಂಥ ಹಿಟ್​ ಚಿತ್ರಗಳನ್ನು ನೀಡಿದ್ದಾರೆ. ಅವರ ನಿರ್ದೇಶನದ ಚಿತ್ರಗಳು ತುಂಬಾನೇ ಭಿನ್ನ ಕಥೆ ಹೊಂದಿರುತ್ತವೆ ಅನ್ನೋದು ವಿಶೇಷ. ಈಗ ಪುನೀತ್​ ಚಿತ್ರಕ್ಕೆ ಪವನ್​ ನಿರ್ದೇಶನ ಮಾಡುತ್ತಿರುವುದರಿಂದ ಅಭಿಮಾನಿಗಳಲ್ಲಿ ನಿರೀಕ್ಷೆ ಸಹಜವಾಗಿಯೇ ಹೆಚ್ಚಿದೆ.

ಸದ್ಯ ಹೊಂಬಾಳೆ ಸಿನಿಮಾ ಮೂರು ಚಿತ್ರಗಳನ್ನು ನಿರ್ಮಾಣ ಮಾಡುತ್ತಿದೆ. ‘ಕೆಜಿಎಫ್​ 2’ ಸಿನಿಮಾ ಕೆಲಸಗಳು ಕೊನೆಯ ಹಂತದಲ್ಲಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಪ್ರಭಾಸ್​ ನಟಿಸುತ್ತಿರುವ ‘ಸಲಾರ್’ ಸಿನಿಮಾಗೆ ಪ್ರಶಾಂತ್​ ನೀಲ್​ ಆ್ಯಕ್ಷನ್​ ಕಟ್​ ಹೇಳುತ್ತಿದ್ದಾರೆ. ಈ ಚಿತ್ರದ ನಿರ್ಮಾಣದ ಜವಾಬ್ದಾರಿಯನ್ನು ಹೊಂಬಾಳೆ ಫಿಲ್ಮ್ಸ್​ ಹೊತ್ತುಕೊಂಡಿದೆ. ಶ್ರೀಮುರಳಿ ನಟನೆಯ ‘ಭಗೀರ’ ಚಿತ್ರಕ್ಕೂ ಹೊಂಬಾಳೆ ಫಿಲ್ಮ್ಸ್​ ಬಂಡವಾಳ ಹೂಡುತ್ತಿದೆ. ಈಗ ಈ ಸಾಲಿಗೆ ಪುನೀತ್​ ಸಿನಿಮಾ ಕೂಡ ಸೇರಿಕೊಂಡಿದೆ.

ಇದನ್ನೂ ಓದಿ: ಸಿನಿಮಾದಲ್ಲಿ ಮಾಡಿದ ಕೆಲಸವನ್ನು ನಿಜ ಜೀವನದಲ್ಲಿಯೂ ಮಾಡಿ ತೋರಿಸಿದ ಪುನೀತ್ ರಾಜ್​ಕುಮಾರ್

‘ಮ್ಯಾನ್​ ಆಫ್​ ದಿ ಮ್ಯಾಚ್​’ ಚಿತ್ರಕ್ಕಾಗಿ ಕೈ ಜೋಡಿಸಿದ ಪುನೀತ್​ ರಾಜ್​ಕುಮಾರ್​ ಮತ್ತು ನಿರ್ದೇಶಕ ಸತ್ಯ ಪ್ರಕಾಶ್​

Published On - 6:11 pm, Wed, 30 June 21

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!