Kantara: ಇಟಾಲಿಯನ್​, ಸ್ಪ್ಯಾನಿಶ್​ ಭಾಷೆಯಲ್ಲೂ ರಿಲೀಸ್​ ಆಗತ್ತೆ ‘ಕಾಂತಾರ’; ಗುಡ್​ ನ್ಯೂಸ್​ ನೀಡಿದ ‘ಹೊಂಬಾಳೆ’

Hombale Films | Rishab Shetty: ‘ಕಾಂತಾರ’ ಸಿನಿಮಾದ ಅಬ್ಬರ ಇನ್ನೂ ನಿಂತಿಲ್ಲ. ಬೇರೆ ಬೇರೆ ದೇಶಗಳಲ್ಲಿ ಈ ಚಿತ್ರ ಸದ್ದು ಮಾಡುತ್ತಿದೆ. ರಿಷಬ್​ ಶೆಟ್ಟಿ ಅವರ ಈ ಸಿನಿಮಾಗೆ ವಿದೇಶಿ ಪ್ರೇಕ್ಷಕರಿಂದ ಬೇಡಿಕೆ ಬಂದಿದೆ.

Kantara: ಇಟಾಲಿಯನ್​, ಸ್ಪ್ಯಾನಿಶ್​ ಭಾಷೆಯಲ್ಲೂ ರಿಲೀಸ್​ ಆಗತ್ತೆ ‘ಕಾಂತಾರ’; ಗುಡ್​ ನ್ಯೂಸ್​ ನೀಡಿದ ‘ಹೊಂಬಾಳೆ’
ಕಾಂತಾರ ಸಿನಿಮಾ
Follow us
|

Updated on:Mar 19, 2023 | 10:08 AM

ಕನ್ನಡದ ಸಿನಿಮಾಗಳು ದೇಶ-ಭಾಷೆಯ ಗಡಿ ಮೀರಿ ಬೆಳೆದಿವೆ. ಅದಕ್ಕೆ ‘ಕಾಂತಾರ’ (Kantara Movie) ಸಿನಿಮಾದ ಯಶಸ್ಸೇ ಸಾಕ್ಷಿ. ಈ ಚಿತ್ರದಿಂದ ನಿರ್ಮಾಣ ಆಗಿರುವ ದಾಖಲೆಗಳು ಒಂದೆರಡಲ್ಲ. ಸಾಧಾರಣ ಬಜೆಟ್​ನಲ್ಲಿ ಸಿದ್ಧವಾದ ಈ ಸಿನಿಮಾ ಬಾಕ್ಸ್​ ಆಫೀಸ್​ನಲ್ಲಿ 400 ಕೋಟಿ ರೂಪಾಯಿಗೂ ಅಧಿಕ ಕಲೆಕ್ಷನ್​ ಮಾಡಿದ್ದು ಈಗ ಇತಿಹಾಸ. ಇದರ ನಾಗಾಲೋಟ ಇನ್ನೂ ನಿಂತಿಲ್ಲ. ಈಗ ಕೆಲವು ವಿದೇಶಿ ಭಾಷೆಗಳಲ್ಲೂ ‘ಕಾಂತಾರ’ ರಿಲೀಸ್​ ಆಗಲಿದೆ. ರಿಷಬ್​ ಶೆಟ್ಟಿ (Rishab Shetty) ನಿರ್ದೇಶನದ ಈ ಚಿತ್ರಕ್ಕೆ ಬೇರೆ ಬೇರೆ ದೇಶಗಳ ಪ್ರೇಕ್ಷಕರಿಂದ ಬೇಡಿಕೆ ಬಂದಿದೆ. ಹಾಗಾಗಿ ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಡಬ್​ ಮಾಡಿ ತೆರೆಕಾಣಿಸಲು ಸಿದ್ಧತೆ ನಡೆದಿದೆ. ಈ ಖುಷಿ ಸುದ್ದಿಯನ್ನು ‘ಹೊಂಬಾಳೆ ಫಿಲ್ಮ್ಸ್​’ (Hombale Films) ಹಂಚಿಕೊಂಡಿದೆ. ಶೀಘ್ರದಲ್ಲೇ ರಿಲೀಸ್​ ದಿನಾಂಕ ಪ್ರಕಟ ಆಗಲಿದೆ.

ಮೊದಲು ‘ಕಾಂತಾರ’ ಬಿಡುಗಡೆ ಆಗಿದ್ದು ಕನ್ನಡದಲ್ಲಿ ಮಾತ್ರ. ಮೊದಲ ದಿನವೇ ಈ ಚಿತ್ರಕ್ಕೆ ಭರ್ಜರಿ ಪ್ರತಿಕ್ರಿಯೆ ಸಿಕ್ಕಿತು. ಪರಭಾಷೆ ಪ್ರೇಕ್ಷಕರು ಕೂಡ ಆಸಕ್ತಿ ತೋರಿಸಿದ್ದರಿಂದ ತಮಿಳು, ತೆಲುಗು, ಮಲಯಾಳಂ ಹಾಗೂ ಹಿಂದಿ ಭಾಷೆಗೆ ಡಬ್​ ಮಾಡಿ ರಿಲೀಸ್​ ಮಾಡಲಾಯಿತು. ಎಲ್ಲ ಭಾಷೆಗಳಿಂದಲೂ ಉತ್ತಮ ಕಲೆಕ್ಷನ್​ ಆಯಿತು. ಒಟಿಟಿ ಪ್ರೇಕ್ಷಕರಿಗಾಗಿ ಇಂಗ್ಲಿಷ್​ ವರ್ಷನ್​ ಕೂಡ ರಿಲೀಸ್​ ಆಯಿತು. ಈಗ ಇನ್ನೂ ಒಂದು ಹೆಜ್ಜೆ ಮುಂದೆ ಹೋಗಿ ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಗಳಿಗೆ ಡಬ್​ ಮಾಡಲಾಗುತ್ತಿರುವುದು ವಿಶೇಷ.

ಇದನ್ನೂ ಓದಿ
Image
Rishab Shetty: ಪಂಚೆ ಧರಿಸಿದ ರಿಷಬ್​ ಶೆಟ್ಟಿ ಗತ್ತು ಹೇಗಿದೆ ನೋಡಿ; ಇಲ್ಲಿದೆ ‘ಕಾಂತಾರ’ ಹೀರೋ ಫೋಟೋ ಗ್ಯಾಲರಿ
Image
Kantara: ಕರ್ನಾಟಕದಲ್ಲಿ ‘ಕಾಂತಾರ’ ಚಿತ್ರದ 1 ಕೋಟಿ ಟಿಕೆಟ್ಸ್​ ಮಾರಾಟ; ದಾಖಲೆಗೆ ಹಿಗ್ಗಿದ ‘ಹೊಂಬಾಳೆ ಫಿಲ್ಮ್ಸ್​’
Image
Kantara: ಬೆಂಗಳೂರಿಗೆ ಕಾಲಿಡುತ್ತಲೇ ‘ಕಾಂತಾರ’ ಬಗ್ಗೆ ಮಾತಾಡಿದ ಎಬಿ ಡಿವಿಲಿಯರ್ಸ್; ರಿಷಬ್​ ಶೆಟ್ಟಿ ಹೇಳಿದ್ದೇನು?
Image
Kantara: ‘ಕಾಂತಾರ’ ಸೂಪರ್​ ಹಿಟ್​ ಆದ್ಮೇಲೆ ರಿಷಬ್​ ಶೆಟ್ಟಿ ಏನು ಮಾಡ್ತಿದ್ದಾರೆ? ಪ್ರೈವೇಟ್​ ಜೆಟ್​ ಏರಿದ ಶಿವ

ಇದನ್ನೂ ಓದಿ: Kantara: ಸ್ವಿಟ್ಜರ್​ಲೆಂಡ್​ನ ಜಿನೆವಾನಲ್ಲಿ ಕಾಂತಾರ ಸಿನಿಮಾ ವಿಶೇಷ ಪ್ರದರ್ಶನ

‘ಈ ವಿಷಯ ತಿಳಿಸಲು ನಮಗೆ ಖುಷಿ ಎನಿಸುತ್ತಿದೆ. ಅಂತಾರಾಷ್ಟ್ರೀಯ ಪ್ರೇಕ್ಷಕರಿಂದ ಬೇಡಿಕೆ ಬಂದಿರುವುದಕ್ಕೆ ಧನ್ಯವಾದಗಳು. ಇಟಾಲಿಯನ್​ ಮತ್ತು ಸ್ಪ್ಯಾನಿಶ್​​ ಭಾಷೆಯಲ್ಲಿ ಕಾಂತಾರ ಚಿತ್ರವನ್ನು ಎಡಿಟ್​ ಮಾಡಲಾಗುತ್ತಿದೆ’ ಎಂದು ಇಟಾಲಿಯನ್​ ಭಾಷೆಯಲ್ಲಿ ‘ಹೊಂಬಾಳೆ ಫಿಲ್ಮ್ಸ್​’ ಟ್ವೀಟ್​ ಮಾಡಿದೆ. ಜಪಾನಿ ಭಾಷೆಯಲ್ಲೂ ರಿಲೀಸ್​ ಮಾಡಿ ಎಂದು ನೆಟ್ಟಿಗರು ಕಮೆಂಟ್​ ಮಾಡಿದ್ದಾರೆ.

‘ಕಾಂತಾರ’ ಸಿನಿಮಾದ ಬಳಿಕ ರಿಷಬ್​ ಶೆಟ್ಟಿ ​ಅವರ ಖ್ಯಾತಿ ವಿಶ್ವಮಟ್ಟದಲ್ಲಿ ಹಬ್ಬಿದೆ. ಇತ್ತೀಚೆಗಷ್ಟೇ ಅವರು ವಿಶ್ವಸಂಸ್ಥೆಯಲ್ಲಿ ಭಾಷಣ ಮಾಡುವ ಮೂಲಕ ಗಮನ ಸೆಳೆದರು. ಜೆನಿವಾದಲ್ಲೂ ಈ ಚಿತ್ರದ ವಿಶೇಷ ಪ್ರದರ್ಶನ ಮತ್ತು ಸಂವಾದ ಏರ್ಪಡಿಸಲಾಗಿತ್ತು. ಈ ಚಿತ್ರದಲ್ಲಿ ನಟಿಸಿದ ಸಪ್ತಮಿ ಗೌಡ ಅವರಿಗೂ ಚಿತ್ರರಂಗದಲ್ಲಿ ಭರ್ಜರಿ ಡಿಮ್ಯಾಂಡ್​ ಸೃಷ್ಟಿ ಆಗಿದೆ.

ಇದನ್ನೂ ಓದಿ: Laughing Buddha: ಕಾಂತಾರ 2 ನಿರ್ದೇಶಕ್ಕೆ ಮುನ್ನ ಹೊಸ ಸಿನಿಮಾ ನಿರ್ಮಾಣಕ್ಕೆ ಕೈ ಹಾಕಿದ ರಿಷಬ್ ಶೆಟ್ಟಿ

ರಿಷಬ್​ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಅನೌನ್ಸ್​ ಮಾಡಿದ್ದಾರೆ. ಅದಕ್ಕಾಗಿ ಸಕಲ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಳೆಗಾಲದಲ್ಲಿ ಈ ಚಿತ್ರದ ಶೂಟಿಂಗ್​ ಆರಂಭ ಆಗುವ ಸಾಧ್ಯತೆ ಇದೆ. ಅಭಿಮಾನಿಗಳು ಈ ಸಿನಿಮಾ ಬಗ್ಗೆ ಬೆಟ್ಟದಷ್ಟು ನಿರೀಕ್ಷೆ ಇಟ್ಟುಕೊಂಡಿದ್ದಾರೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:08 am, Sun, 19 March 23

ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ರೈಲಿನಡಿ ಬೀಳಲಿದ್ದ ಮಹಿಳೆ ಸ್ವಲ್ಪದರಲ್ಲೇ ಬಚಾವ್
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು