Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ

Fahadh Faasil | Pawan Kumar: ‘ಹೊಂಬಾಳೆ ಫಿಲ್ಮ್ಸ್​’ ಸಂಸ್ಥೆಯ ಪ್ರತಿ ಪ್ರಾಜೆಕ್ಟ್​ ಮೇಲೆ ಸಿನಿಪ್ರಿಯರಿಗೆ ಸಖತ್​ ನಿರೀಕ್ಷೆ ಇದೆ. ಸೂಪರ್​ ಹಿಟ್​ ಸಿನಿಮಾಗಳನ್ನು ನಿರ್ಮಿಸಿ ಈ ಸಂಸ್ಥೆ ಗುರುತಿಸಿಕೊಂಡಿದೆ.

Dhoomam: ‘ಹೊಂಬಾಳೆ ಫಿಲ್ಮ್ಸ್​’ ಹೊಸ ಚಿತ್ರ ‘ಧೂಮಂ’; ಫಹಾದ್​ ಫಾಸಿಲ್​-ಪವನ್​ ಕುಮಾರ್​ ಚಿತ್ರದ ಶೀರ್ಷಿಕೆ ಬಹಿರಂಗ
ಫಹಾದ್ ಫಾಸಿಲ್, ಪವನ್ ಕುಮಾರ್
Follow us
| Updated By: ಮದನ್​ ಕುಮಾರ್​

Updated on:Sep 30, 2022 | 10:46 AM

ನಿರ್ಮಾಪಕ ವಿಜಯ್​ ಕಿರಗಂದೂರು ಅವರು ಬ್ಯಾಕ್​ ಟು ಬ್ಯಾಕ್​ ಸಿನಿಮಾಗಳನ್ನು ನಿರ್ಮಾಣ ಮಾಡುತ್ತಿದ್ದಾರೆ. ಅವರ ‘ಹೊಂಬಾಳೆ ಫಿಲ್ಮ್ಸ್​’ ಬ್ಯಾನರ್​ ಮೂಲಕ ಒಂದಕ್ಕಿಂತ ಮತ್ತೊಂದು ಡಿಫರೆಂಟ್​ ಚಿತ್ರಗಳ ತಯಾರಾಗುತ್ತಿವೆ. ಈಗ ಈ ಪ್ರೊಡಕ್ಷನ್​ ಹೌಸ್​ನಿಂದ ಹೊಸ ಘೋಷಣೆ ಮಾಡಲಾಗಿದೆ. ನಿರ್ದೇಶಕ ಪವನ್​ ಕುಮಾರ್​ (Pawan Kumar) ಮತ್ತು ಮಲಯಾಳಂ ನಟ ಫಹಾದ್​ ಫಾಸಿಲ್​ (Fahadh Faasil) ಕಾಂಬಿನೇಷನ್​ನ ಹೊಸ ಚಿತ್ರಕ್ಕೆ ‘ಹೊಂಬಾಳೆ ಫಿಲ್ಮ್ಸ್​’ ಬಂಡವಾಳ ಹೂಡುತ್ತಿದ್ದು, ಸಿನಿಮಾದ ಟೈಟಲ್​ ಬಹಿರಂಗ ಆಗಿದೆ. ಈ ಚಿತ್ರಕ್ಕೆ ‘ಧೂಮಂ’ (Dhoomam) ಎಂದು ಹೆಸರು ಇಡಲಾಗಿದೆ. ಇಂದು (ಸೆ.30) ಶೀರ್ಷಿಕೆ ವಿನ್ಯಾಸದ ಪೋಸ್ಟರ್​ ಬಿಡುಗಡೆ ಮಾಡುವ ಮೂಲಕ ಸಿನಿಪ್ರಿಯರಲ್ಲಿ ಕೌತುಕ ಮೂಡಿಸಲಾಗಿದೆ.

ಪವನ್​ ಕುಮಾರ್​ ಅವರ ನಿರ್ದೇಶನದ ಬಗ್ಗೆ ಪ್ರೇಕ್ಷಕರಿಗೆ ಒಂದು ಭರವಸೆ ಇದೆ. ‘ಲೂಸಿಯಾ’, ‘ಯು-ಟರ್ನ್​’ ರೀತಿಯ ಸಿನಿಮಾಗಳ ಮೂಲಕ ಅವರು ತಮ್ಮ ಸಾಮರ್ಥ್ಯ ಏನು ಎಂಬುದನ್ನು ಸಾಬೀತು ಪಡಿಸಿದ್ದಾರೆ. ಇನ್ನು, ಫಹಾದ್​​ ಫಾಸಿಲ್​ ಅವರು ಬಹುಭಾಷೆಯಲ್ಲಿ ಫೇಮಸ್​. ಗಟ್ಟಿ ಕಥಾವಸ್ತು ಇರುವಂತಹ ಸಿನಿಮಾಗಳನ್ನು ಮಾಡಿ ಅವರು ಸೈ ಎನಿಸಿಕೊಂಡಿದ್ದಾರೆ. ಈ ಪ್ರತಿಭಾವಂತರಿಬ್ಬರು ಕೈ ಜೋಡಿಸಿರುವುದು ಸಖತ್​ ನಿರೀಕ್ಷೆ ಹುಟ್ಟುಹಾಕಿದೆ.

ಅಕ್ಟೋಬರ್​ 9ರಿಂದ ‘ಧೂಮಂ’ ಚಿತ್ರದ ಶೂಟಿಂಗ್​ ಶುರುವಾಗಲಿದೆ. ಫಹಾದ್​ ಫಾಸಿಲ್​ ಜೊತೆಗೆ ನಾಯಕಿಯಾಗಿ ಅಪರ್ಣಾ ಬಾಲಮುರಳಿ ನಟಿಸಲಿದ್ದಾರೆ. ‘ಸೂರರೈ ಪೋಟ್ರು’ ಸಿನಿಮಾದಲ್ಲಿ ಅಭಿನಯಿಸಿ ಜನಮನ ಗೆದ್ದಿರುವ ಅವರಿಗೆ ಈಗ ಫಹಾದ್​ ಜತೆ ನಟಿಸುವ ಚಾನ್ಸ್​ ಸಿಕ್ಕಿದೆ. ಮಲಯಾಳಂ, ಕನ್ನಡ, ತೆಲುಗು ಮತ್ತು ತಮಿಳು ಭಾಷೆಯಲ್ಲಿ ‘ಧೂಮಂ’ ಚಿತ್ರ ಮೂಡಿಬರಲಿದೆ.

‘ಕೆಜಿಎಫ್​’, ‘ಕೆಜಿಎಫ್​ 2’, ‘ರಾಜಕುಮಾರ’, ‘ಕಾಂತಾರ’ ಮುಂತಾದ ಸಿನಿಮಾಗಳನ್ನು ನಿರ್ಮಿಸಿದ ಖ್ಯಾತಿ ಈ ಸಂಸ್ಥೆಗೆ ಸಲ್ಲುತ್ತದೆ. ಇಂದು (ಸೆ.30) ‘ಕಾಂತಾರ’ ಚಿತ್ರ ಬಿಡುಗಡೆಯಾಗಿ ಭರ್ಜರಿ ಮೆಚ್ಚುಗೆ ಗಳಿಸಿಕೊಂಡಿದೆ. ಇದೇ ಬ್ಯಾನರ್​ನಿಂದ ‘ಸಲಾರ್​’, ‘ಬಘೀರ’, ‘ರಾಘವೇಂದ್ರ ಸ್ಟೋರ್ಸ್​’ ಮುಂತಾದ ಸಿನಿಮಾಗಳು ಮೂಡಿಬರುತ್ತಿವೆ. ಅದರ ಜೊತೆಗೆ ಈಗ ಹೊಸ ಸಿನಿಮಾ ‘ಧೂಮಂ’ ಸೇಪರ್ಡೆ ಆಗಿದೆ.​

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

Published On - 10:33 am, Fri, 30 September 22

ತಾಜಾ ಸುದ್ದಿ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ವ್ಯಾಪ್ತಿ ಮತ್ತು ಜವಾಬ್ದಾರಿಯ ಬಗ್ಗೆ ಕುಮಾರಸ್ವಾಮಿಗೆ ಮಾಹಿತಿ ಇಲ್ಲ: ಸಚಿವ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ರೇಣುಕಾಸ್ವಾಮಿ ಕೊಲೆ ಪ್ರಕರಣ; ಆರೋಪಿ ಪ್ರದೋಶ್ ಸ್ನೇಹಿತನ ವಿಚಾರಣೆ ಅಂತ್ಯ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಚಲುವರಾಯಸ್ವಾಮಿಯ ಲೂಟಿ ಹೊಡೆಯುವ ಕೆಲಸಕ್ಕೆ ನಾನು ಅಡ್ಡಿ? ಕುಮಾರಸ್ವಾಮಿ
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಮೈದುಂಬಿ ಹರಿಯುತ್ತಿರುವ ಶರಾವತಿ, ಜೋಗದ ಜಲಪಾತವೀಗ ರುದ್ರ ರಮಣೀಯ!
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಭೈರತಿ ಸುರೇಶ್ ಮುಡಾದ ಯಾವ ದಾಖಲಾತಿಗಳನ್ನು ಚಾಪರ್​ನಲ್ಲಿ ಒಯ್ದರು?ಹೆಚ್​ಡಿಕೆ
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ಕೀರ್ತಿ ಚಕ್ರ ಸ್ವೀಕರಿಸಿದ ಅಂಶುಮಾನ್ ಸಿಂಗ್ ಪತ್ನಿ ನೋಡಿ ಭಾವುಕರಾದ ಮುರ್ಮು
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ನಗರದಲ್ಲಿ ಶಿವಕುಮಾರ್​ರನ್ನು ಭೇಟಿಯಾದ ಬಿಕೆಯು ವಕ್ತಾರ ರಾಕೇಶ್ ಟಿಕಾಯತ್
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ಪೊಲೀಸರು ರಿಯಲ್ ಎಸ್ಟೇಟ್​ ವ್ಯವಹಾರದಲ್ಲಿ ಶಾಮೀಲಾಗಕೂಡದು: ಸಿದ್ದರಾಮಯ್ಯ 
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಾಜಕೀಯ ಪಿತೂರಿಗೆ ಅರವಿಂದ್ ಕೇಜ್ರಿವಾಲ್ ಬಲಿ; ಸುನೀತಾ ಕೇಜ್ರಿವಾಲ್ ಆರೋಪ
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್
ರಕ್ತದಿಂದ ಕೆಂಪಾಯ್ತು ಸಮುದ್ರದ ನೀರು; ವಿಡಿಯೋ ವೈರಲ್