AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara 2 Movie: ರಿಷಬ್ ಶೆಟ್ಟಿಗೆ ‘ಹೊಂಬಾಳೆ’ ಕಡೆಯಿಂದ ಬರ್ತ್​ಡೇ ವಿಶ್​; ಅಭಿಮಾನಿಗಳಿಗೆ ನಿರಾಸೆ

Rishab Shetty Birthday: ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಕುರಿತು ಅಪ್​ಡೇಟ್ ಸಿಗುತ್ತದೆ. ಇದೇ ಆಸೆಯಲ್ಲಿ ರಿಷಬ್ ಅಭಿಮಾನಿಗಳು ಇದ್ದರು. ಆದರೆ, ಅದು ಸುಳ್ಳಾಗಿದೆ.

Kantara 2 Movie: ರಿಷಬ್ ಶೆಟ್ಟಿಗೆ ‘ಹೊಂಬಾಳೆ’ ಕಡೆಯಿಂದ ಬರ್ತ್​ಡೇ ವಿಶ್​; ಅಭಿಮಾನಿಗಳಿಗೆ ನಿರಾಸೆ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Jul 07, 2023 | 1:12 PM

Share

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾದಿಂದ ಸಾಕಷ್ಟು ಜನಪ್ರಿಯತೆ ಪಡೆದರು. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್​. ಸದ್ಯ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜುಲೈ 7) ರಿಷಬ್ ಶೆಟ್ಟಿ ಬರ್ತ್​ಡೇ. ಈ ದಿನ ಅವರ ಹೊಸ ಸಿನಿಮಾ ಬಗ್ಗೆ ಘೋಷಣೆ ಆಗಹುದು ಅಥವಾ ಹೊಸ ಸಿನಿಮಾ ಕುರಿತು ಏನಾದರೂ ಒಂದು ಮಾಹಿತಿ ಸಿಗಬಹುದು ಎಂದು ಫ್ಯಾನ್ಸ್ ಕಾದಿದ್ದರು. ಆದರೆ, ಅದು ಸುಳ್ಳಾಗಿದೆ. ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ರಿಷಬ್ ಬರ್ತ್​ಡೇಗೆ ವಿಶ್ ಏನೋ ಬಂದಿದೆ. ಆದರೆ, ಅದರಲ್ಲಿ ‘ಕಾಂತಾರ 2’ (Kantara 2) ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ.

ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಕುರಿತು ಅಪ್​ಡೇಟ್ ಸಿಗುತ್ತದೆ. ಇದೇ ಆಸೆಯಲ್ಲಿ ರಿಷಬ್ ಅಭಿಮಾನಿಗಳು ಇದ್ದರು. ಆದರೆ, ಅದು ಸುಳ್ಳಾಗಿದೆ. ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಈ ಕುರಿತು ಯಾವುದೇ ಮಾಹಿತಿ ಕೊಟ್ಟಿಲ್ಲ. ಕೇವಲ ವಿಶ್ ಮಾತ್ರ ಬಂದಿದೆ.

‘ಅಗಾಧ ಪ್ರತಿಭೆ ಇರುವ ಮತ್ತು ವಿನಮ್ರ ವ್ಯಕ್ತಿ ರಿಷಬ್​ ಶೆಟ್ಟಿಗೆ ಜನ್ಮದಿನದ ಶುಭಾಶಯ. ನಟನಾಗಿ ಮತ್ತು ನಿರ್ದೇಶಕರಾಗಿ ನಿಮ್ಮಲ್ಲಿರುವ ಕೌಶಲ್ಯ ನಿಜವಾಗಿಯೂ ಸ್ಫೂರ್ತಿದಾಯಕ. ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ನಿಮ್ಮ ಕಲಾತ್ಮಕ ಯಾತ್ರೆಯು ಸದಾ ಎಲ್ಲರನ್ನೂ ಬೆರಗುಗೊಳಿಸಲಿ. ನಿಮಗೆ ನಿರಂತರ ಯಶಸ್ಸು ಸಿಗಲಿ ಎಂದು ಬಯಸುತ್ತೇವೆ’ ಎಂಬುದಾಗಿ ಹೊಂಬಾಳೆ ಟ್ವೀಟ್ ಮಾಡಿದೆ. ಈ ಟ್ವೀಟ್​ಗೆ ‘ಕಾಂತಾರ’ ಸಿನಿಮಾ ಪೋಸ್ಟರ್ ಬಳಸಲಾಗಿದೆ.

ಇದನ್ನೂ ಓದಿ: Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

‘ಕಾಂತಾರ 2’ ಚಿತ್ರದ ಶೂಟಿಂಗ್ ಆಗಸ್ಟ್​ನಿಂದ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಕಥೆ ಮಳೆಗಾಲದ ಪರಿಸರ ಬೇಡುವುದರಿಂದ ಆಗಸ್ಟ್​ನಲ್ಲಿ ಶೂಟಿಂಗ್ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎಂದು ವಿಜಯ್ ಕಿರಗಂದೂರು ಈ ಮೊದಲು ಹೇಳಿದ್ದರು. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್