AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara 2 Movie: ರಿಷಬ್ ಶೆಟ್ಟಿಗೆ ‘ಹೊಂಬಾಳೆ’ ಕಡೆಯಿಂದ ಬರ್ತ್​ಡೇ ವಿಶ್​; ಅಭಿಮಾನಿಗಳಿಗೆ ನಿರಾಸೆ

Rishab Shetty Birthday: ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಕುರಿತು ಅಪ್​ಡೇಟ್ ಸಿಗುತ್ತದೆ. ಇದೇ ಆಸೆಯಲ್ಲಿ ರಿಷಬ್ ಅಭಿಮಾನಿಗಳು ಇದ್ದರು. ಆದರೆ, ಅದು ಸುಳ್ಳಾಗಿದೆ.

Kantara 2 Movie: ರಿಷಬ್ ಶೆಟ್ಟಿಗೆ ‘ಹೊಂಬಾಳೆ’ ಕಡೆಯಿಂದ ಬರ್ತ್​ಡೇ ವಿಶ್​; ಅಭಿಮಾನಿಗಳಿಗೆ ನಿರಾಸೆ
ರಿಷಬ್
ರಾಜೇಶ್ ದುಗ್ಗುಮನೆ
|

Updated on: Jul 07, 2023 | 1:12 PM

Share

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾದಿಂದ ಸಾಕಷ್ಟು ಜನಪ್ರಿಯತೆ ಪಡೆದರು. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್​. ಸದ್ಯ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜುಲೈ 7) ರಿಷಬ್ ಶೆಟ್ಟಿ ಬರ್ತ್​ಡೇ. ಈ ದಿನ ಅವರ ಹೊಸ ಸಿನಿಮಾ ಬಗ್ಗೆ ಘೋಷಣೆ ಆಗಹುದು ಅಥವಾ ಹೊಸ ಸಿನಿಮಾ ಕುರಿತು ಏನಾದರೂ ಒಂದು ಮಾಹಿತಿ ಸಿಗಬಹುದು ಎಂದು ಫ್ಯಾನ್ಸ್ ಕಾದಿದ್ದರು. ಆದರೆ, ಅದು ಸುಳ್ಳಾಗಿದೆ. ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ರಿಷಬ್ ಬರ್ತ್​ಡೇಗೆ ವಿಶ್ ಏನೋ ಬಂದಿದೆ. ಆದರೆ, ಅದರಲ್ಲಿ ‘ಕಾಂತಾರ 2’ (Kantara 2) ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ.

ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಕುರಿತು ಅಪ್​ಡೇಟ್ ಸಿಗುತ್ತದೆ. ಇದೇ ಆಸೆಯಲ್ಲಿ ರಿಷಬ್ ಅಭಿಮಾನಿಗಳು ಇದ್ದರು. ಆದರೆ, ಅದು ಸುಳ್ಳಾಗಿದೆ. ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಈ ಕುರಿತು ಯಾವುದೇ ಮಾಹಿತಿ ಕೊಟ್ಟಿಲ್ಲ. ಕೇವಲ ವಿಶ್ ಮಾತ್ರ ಬಂದಿದೆ.

‘ಅಗಾಧ ಪ್ರತಿಭೆ ಇರುವ ಮತ್ತು ವಿನಮ್ರ ವ್ಯಕ್ತಿ ರಿಷಬ್​ ಶೆಟ್ಟಿಗೆ ಜನ್ಮದಿನದ ಶುಭಾಶಯ. ನಟನಾಗಿ ಮತ್ತು ನಿರ್ದೇಶಕರಾಗಿ ನಿಮ್ಮಲ್ಲಿರುವ ಕೌಶಲ್ಯ ನಿಜವಾಗಿಯೂ ಸ್ಫೂರ್ತಿದಾಯಕ. ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ನಿಮ್ಮ ಕಲಾತ್ಮಕ ಯಾತ್ರೆಯು ಸದಾ ಎಲ್ಲರನ್ನೂ ಬೆರಗುಗೊಳಿಸಲಿ. ನಿಮಗೆ ನಿರಂತರ ಯಶಸ್ಸು ಸಿಗಲಿ ಎಂದು ಬಯಸುತ್ತೇವೆ’ ಎಂಬುದಾಗಿ ಹೊಂಬಾಳೆ ಟ್ವೀಟ್ ಮಾಡಿದೆ. ಈ ಟ್ವೀಟ್​ಗೆ ‘ಕಾಂತಾರ’ ಸಿನಿಮಾ ಪೋಸ್ಟರ್ ಬಳಸಲಾಗಿದೆ.

ಇದನ್ನೂ ಓದಿ: Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

‘ಕಾಂತಾರ 2’ ಚಿತ್ರದ ಶೂಟಿಂಗ್ ಆಗಸ್ಟ್​ನಿಂದ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಕಥೆ ಮಳೆಗಾಲದ ಪರಿಸರ ಬೇಡುವುದರಿಂದ ಆಗಸ್ಟ್​ನಲ್ಲಿ ಶೂಟಿಂಗ್ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎಂದು ವಿಜಯ್ ಕಿರಗಂದೂರು ಈ ಮೊದಲು ಹೇಳಿದ್ದರು. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!