Sign In

By signing in or creating an account, you agree with Associated Broadcasting Company's Terms & Conditions and Privacy Policy.

Kantara 2 Movie: ರಿಷಬ್ ಶೆಟ್ಟಿಗೆ ‘ಹೊಂಬಾಳೆ’ ಕಡೆಯಿಂದ ಬರ್ತ್​ಡೇ ವಿಶ್​; ಅಭಿಮಾನಿಗಳಿಗೆ ನಿರಾಸೆ

Rishab Shetty Birthday: ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಕುರಿತು ಅಪ್​ಡೇಟ್ ಸಿಗುತ್ತದೆ. ಇದೇ ಆಸೆಯಲ್ಲಿ ರಿಷಬ್ ಅಭಿಮಾನಿಗಳು ಇದ್ದರು. ಆದರೆ, ಅದು ಸುಳ್ಳಾಗಿದೆ.

Kantara 2 Movie: ರಿಷಬ್ ಶೆಟ್ಟಿಗೆ ‘ಹೊಂಬಾಳೆ’ ಕಡೆಯಿಂದ ಬರ್ತ್​ಡೇ ವಿಶ್​; ಅಭಿಮಾನಿಗಳಿಗೆ ನಿರಾಸೆ
ರಿಷಬ್
Follow us
ರಾಜೇಶ್ ದುಗ್ಗುಮನೆ
|

Updated on: Jul 07, 2023 | 1:12 PM

ರಿಷಬ್ ಶೆಟ್ಟಿ (Rishab Shetty) ಅವರು ‘ಕಾಂತಾರ’ ಸಿನಿಮಾದಿಂದ ಸಾಕಷ್ಟು ಜನಪ್ರಿಯತೆ ಪಡೆದರು. ಈ ಚಿತ್ರವನ್ನು ನಿರ್ಮಾಣ ಮಾಡಿದ್ದು ವಿಜಯ್ ಕಿರಗಂದೂರು ಒಡೆತನದ ಹೊಂಬಾಳೆ ಫಿಲ್ಮ್ಸ್​. ಸದ್ಯ ರಿಷಬ್ ಶೆಟ್ಟಿ ಅವರು ‘ಕಾಂತಾರ 2’ ಸಿನಿಮಾ ಕೆಲಸಗಳಲ್ಲಿ ಬ್ಯುಸಿ ಆಗಿದ್ದಾರೆ. ಇಂದು (ಜುಲೈ 7) ರಿಷಬ್ ಶೆಟ್ಟಿ ಬರ್ತ್​ಡೇ. ಈ ದಿನ ಅವರ ಹೊಸ ಸಿನಿಮಾ ಬಗ್ಗೆ ಘೋಷಣೆ ಆಗಹುದು ಅಥವಾ ಹೊಸ ಸಿನಿಮಾ ಕುರಿತು ಏನಾದರೂ ಒಂದು ಮಾಹಿತಿ ಸಿಗಬಹುದು ಎಂದು ಫ್ಯಾನ್ಸ್ ಕಾದಿದ್ದರು. ಆದರೆ, ಅದು ಸುಳ್ಳಾಗಿದೆ. ಹೊಂಬಾಳೆ ಫಿಲ್ಮ್ಸ್​ ಕಡೆಯಿಂದ ರಿಷಬ್ ಬರ್ತ್​ಡೇಗೆ ವಿಶ್ ಏನೋ ಬಂದಿದೆ. ಆದರೆ, ಅದರಲ್ಲಿ ‘ಕಾಂತಾರ 2’ (Kantara 2) ಬಗ್ಗೆ ಯಾವುದೇ ಅಪ್​ಡೇಟ್ ಸಿಕ್ಕಿಲ್ಲ.

ಸಾಮಾನ್ಯವಾಗಿ ಸ್ಟಾರ್ ಹೀರೋಗಳ ಬರ್ತ್​ಡೇ ದಿನ ಅವರ ಮುಂದಿನ ಸಿನಿಮಾ ಕುರಿತು ಅಪ್​ಡೇಟ್ ಸಿಗುತ್ತದೆ. ಇದೇ ಆಸೆಯಲ್ಲಿ ರಿಷಬ್ ಅಭಿಮಾನಿಗಳು ಇದ್ದರು. ಆದರೆ, ಅದು ಸುಳ್ಳಾಗಿದೆ. ಹೊಂಬಾಳೆ ಫಿಲ್ಮ್ಸ್ ಕಡೆಯಿಂದ ಈ ಕುರಿತು ಯಾವುದೇ ಮಾಹಿತಿ ಕೊಟ್ಟಿಲ್ಲ. ಕೇವಲ ವಿಶ್ ಮಾತ್ರ ಬಂದಿದೆ.

‘ಅಗಾಧ ಪ್ರತಿಭೆ ಇರುವ ಮತ್ತು ವಿನಮ್ರ ವ್ಯಕ್ತಿ ರಿಷಬ್​ ಶೆಟ್ಟಿಗೆ ಜನ್ಮದಿನದ ಶುಭಾಶಯ. ನಟನಾಗಿ ಮತ್ತು ನಿರ್ದೇಶಕರಾಗಿ ನಿಮ್ಮಲ್ಲಿರುವ ಕೌಶಲ್ಯ ನಿಜವಾಗಿಯೂ ಸ್ಫೂರ್ತಿದಾಯಕ. ಭಾರತೀಯ ಸಿನಿಮಾ ಕ್ಷೇತ್ರದಲ್ಲಿ ನಿಮ್ಮ ಕಲಾತ್ಮಕ ಯಾತ್ರೆಯು ಸದಾ ಎಲ್ಲರನ್ನೂ ಬೆರಗುಗೊಳಿಸಲಿ. ನಿಮಗೆ ನಿರಂತರ ಯಶಸ್ಸು ಸಿಗಲಿ ಎಂದು ಬಯಸುತ್ತೇವೆ’ ಎಂಬುದಾಗಿ ಹೊಂಬಾಳೆ ಟ್ವೀಟ್ ಮಾಡಿದೆ. ಈ ಟ್ವೀಟ್​ಗೆ ‘ಕಾಂತಾರ’ ಸಿನಿಮಾ ಪೋಸ್ಟರ್ ಬಳಸಲಾಗಿದೆ.

ಇದನ್ನೂ ಓದಿ: Rishab Shetty: ಪಂಚೆ ಧರಿಸಿ ‘ವಿಶ್ವ ಶ್ರೇಷ್ಠ ಕನ್ನಡಿಗ 2023’ ಪ್ರಶಸ್ತಿ ಪಡೆದ ರಿಷಬ್ ಶೆಟ್ಟಿ

‘ಕಾಂತಾರ 2’ ಚಿತ್ರದ ಶೂಟಿಂಗ್ ಆಗಸ್ಟ್​ನಿಂದ ಆರಂಭ ಆಗಲಿದೆ ಎಂದು ಹೇಳಲಾಗುತ್ತಿದೆ. ಈ ಚಿತ್ರದ ಕಥೆ ಮಳೆಗಾಲದ ಪರಿಸರ ಬೇಡುವುದರಿಂದ ಆಗಸ್ಟ್​ನಲ್ಲಿ ಶೂಟಿಂಗ್ ಪ್ಲ್ಯಾನ್ ಮಾಡಿಕೊಳ್ಳಲಾಗಿದೆ ಎಂದು ವಿಜಯ್ ಕಿರಗಂದೂರು ಈ ಮೊದಲು ಹೇಳಿದ್ದರು. ‘ಕಾಂತಾರ’ ಚಿತ್ರದ ಪ್ರೀಕ್ವೆಲ್ ಇದಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ಕನ್ನಡಿಗ ವೈಶಾಕ್​ನನ್ನು ಕಣಕ್ಕಿಳಿಸಿ ಪಂದ್ಯ ಗೆದ್ದ ಪಂಜಾಬ್
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ದೆಹಲಿಯಲ್ಲಿ ಹೆಚ್​ಡಿಕೆ ಮತ್ತು ದೇವೇಗೌಡರನ್ನು ಭೇಟಿಯಾಗಿರುವ ಜಾರಕಿಹೊಳಿ
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಸದ್ಯಕ್ಕೆ ವಾಪಸ್ಸು ಹೋಗುತ್ತಿದ್ದೇನೆ ಎಂದಷ್ಟೇ ಹೇಳಿದ ಬಸನಗೌಡ ಯತ್ನಾಳ್
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ಯುವ ಕ್ರಿಕೆಟಿಗನ ಕ್ವಾಟ್ಲೆ ನೋಡಿ ಶಾಕ್ ಆದ ಇಡೀ ಆರ್​ಸಿಬಿ ತಂಡ
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ನಮ್ಮ ಸಿಎಂ ಕಚೇರಿಯೂ ಇಷ್ಟು ಭವ್ಯವಾಗಿಲ್ಲವೆಂದು ಉದ್ಗರಿಸಿದ ಪರಮೇಶ್ವರ್!
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಬಿಜೆಪಿ ಶಾಸಕರು ಪೀಠಕ್ಕೆ ಅಗೌರವ ತೋರಿಲ್ಲ,ಸದನ ದೇಗುಲವಿದ್ದಂತೆ: ಸುರೇಶ್ ಗೌಡ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಸಿಎಂ ಸಿದ್ದರಾಮಯ್ಯಕ್ಕಿಂತ ಮೊದಲು ಡಿಸಿಎಂ ಶಿವಕುಮಾರ್ ದೆಹಲಿ ಪಯಣ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಕರಾಟೆಯಲ್ಲಿ ಪುಟ್ಟ ಹುಡುಗನ ಅದ್ಭುತ ಸಾಧನೆ, ಏಷ್ಯಾ ಬುಕ್ ಆಫ್​ಗೆ ಸೇರ್ಪಡೆ
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
ಪಾರ್ಲಿಮೆಂಟ್ ಕಚೇರಿಯಲ್ಲಿ ಇವತ್ತು ಸಹ ಹೆಚ್​ಡಿಕೆಯನ್ನು ಭೇಟಿಯಾದ ಸತೀಶ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್
Video: ಬೆಂಗಳೂರಿನಲ್ಲಿ ಭಯಾನಕ ಸಿಲಿಂಡರ್ ಸ್ಫೋಟ, ವ್ಯಕ್ತಿ ಜಸ್ಟ್ ಮಿಸ್