AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 5ರ ವರೆಗೆ ದರ್ಶನ್​ಗೆ ಜೈಲೂಟವೇ ಗತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ತಮಗೆ ಮನೆ ಊಟ ಬೇಕೆಂದು ಹಾಕಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಲಾಗಿದೆ.

ಸೆಪ್ಟೆಂಬರ್ 5ರ ವರೆಗೆ ದರ್ಶನ್​ಗೆ ಜೈಲೂಟವೇ ಗತಿ
ಮಂಜುನಾಥ ಸಿ.
|

Updated on:Aug 20, 2024 | 2:00 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಆರೋಗ್ಯ ಸಮಸ್ಯೆಯನ್ನು ಕಾರಣವನ್ನಾಗಿ ನೀಡಿ ಮನೆ ಊಟಕ್ಕೆ ಹಾಗೂ ಇತರೆ ಕೆಲವು ವಸ್ತುಗಳಿಗೆ ಬೇಡಿಕೆ ಇರಿಸಿದ್ದರು. ಮನೆ ಊಟ ಹಾಗೂ ಇತರೆ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್​ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು (ಆಗಸ್ಟ್ 20) ಹೈಕೋರ್ಟ್​ನ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಆರೋಗ್ಯ ಸಮಸ್ಯೆ, ನಿದ್ರಾಹೀನತೆ ಕಾಡುತ್ತಿರುವುದಾಗಿ ಕಾರಣ ನೀಡಿ, ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಳನ್ನು ತರಸಿಕೊಳ್ಳಲು ಅನುಮತಿ ಕೋರಿ ನಟ ದರ್ಶನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಪೀಠವು, ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ಹೇಳಿದ್ದರು. ಅಂತೆಯೇ ನಿರ್ಧಾರವನ್ನು ಹೈಕೋರ್ಟ್​ಗೆ ನೀಡಿದ್ದ ಜೈಲು ಅಧಿಕಾರಿಗಳು ದರ್ಶನ್​ಗೆ ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇಂದು ಹೈಕೋರ್ಟ್​ನ ಏಕಸದಸ್ಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ, ವೈದ್ಯಾಧಿಕಾರಿಗಳು ದರ್ಶನ್​ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಆದರೆ ದರ್ಶನ್ ಪರ ವಕೀಲರು ವೈದ್ಯಾಧಿಕಾರಿಗಳ ವರದಿ ನೋಡಿ ವಾದಮಂಡನೆಗೆ ಸಮಯ ಬೇಕಾಗುತ್ತದೆಯಾದ್ದರಿಂದ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಂತೆಯೇ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿದರು.

ಇದನ್ನೂ ಓದಿ:ದರ್ಶನ್​ಗೆ ಮನೆ ಊಟ, ಇಂದು ಹೈಕೋರ್ಟ್ ವಿಚಾರಣೆ

ಆಗಸ್ಟ್ 28 ರವೆರಗೆ ದರ್ಶನ್​ರ ನ್ಯಾಯಾಂಗ ಬಂಧನ ವಿಸ್ತರಿಸಿ ಕಳೆದ ವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಇದೀಗ ಮನೆ ಊಟದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಈ ನಡುವೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಶೀಘ್ರವೇ ನ್ಯಾಯಾಧೀಶರ ಮುಂದೆ ಬರಲಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಾಕ್ಷ್ಯಗಳನ್ನು ಕಲೆ ಹಾಕಿದ್ದು ಕೆಲವು ಡಿಜಿಟಲ್ ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಯಾಗಿ ಕಾಯುತ್ತಿದ್ದಾರೆ. ಹೈದರಾಬಾದ್​ನಿಂದ ಈ ಎಫ್​ಎಸ್​ಎಲ್​ ವರದಿಗಳು ಬರಬೇಕಿದ್ದು ವರದಿಗಳು ಬಂದ ಕೂಡಲೇ ಚಾರ್ಜ್​ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಪೊಲೀಸರು ಚಾರ್ಜ್​ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Tue, 20 August 24

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್