AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 5ರ ವರೆಗೆ ದರ್ಶನ್​ಗೆ ಜೈಲೂಟವೇ ಗತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ತಮಗೆ ಮನೆ ಊಟ ಬೇಕೆಂದು ಹಾಕಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಲಾಗಿದೆ.

ಸೆಪ್ಟೆಂಬರ್ 5ರ ವರೆಗೆ ದರ್ಶನ್​ಗೆ ಜೈಲೂಟವೇ ಗತಿ
ಮಂಜುನಾಥ ಸಿ.
|

Updated on:Aug 20, 2024 | 2:00 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಆರೋಗ್ಯ ಸಮಸ್ಯೆಯನ್ನು ಕಾರಣವನ್ನಾಗಿ ನೀಡಿ ಮನೆ ಊಟಕ್ಕೆ ಹಾಗೂ ಇತರೆ ಕೆಲವು ವಸ್ತುಗಳಿಗೆ ಬೇಡಿಕೆ ಇರಿಸಿದ್ದರು. ಮನೆ ಊಟ ಹಾಗೂ ಇತರೆ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್​ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು (ಆಗಸ್ಟ್ 20) ಹೈಕೋರ್ಟ್​ನ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಆರೋಗ್ಯ ಸಮಸ್ಯೆ, ನಿದ್ರಾಹೀನತೆ ಕಾಡುತ್ತಿರುವುದಾಗಿ ಕಾರಣ ನೀಡಿ, ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಳನ್ನು ತರಸಿಕೊಳ್ಳಲು ಅನುಮತಿ ಕೋರಿ ನಟ ದರ್ಶನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಪೀಠವು, ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ಹೇಳಿದ್ದರು. ಅಂತೆಯೇ ನಿರ್ಧಾರವನ್ನು ಹೈಕೋರ್ಟ್​ಗೆ ನೀಡಿದ್ದ ಜೈಲು ಅಧಿಕಾರಿಗಳು ದರ್ಶನ್​ಗೆ ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇಂದು ಹೈಕೋರ್ಟ್​ನ ಏಕಸದಸ್ಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ, ವೈದ್ಯಾಧಿಕಾರಿಗಳು ದರ್ಶನ್​ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಆದರೆ ದರ್ಶನ್ ಪರ ವಕೀಲರು ವೈದ್ಯಾಧಿಕಾರಿಗಳ ವರದಿ ನೋಡಿ ವಾದಮಂಡನೆಗೆ ಸಮಯ ಬೇಕಾಗುತ್ತದೆಯಾದ್ದರಿಂದ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಂತೆಯೇ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿದರು.

ಇದನ್ನೂ ಓದಿ:ದರ್ಶನ್​ಗೆ ಮನೆ ಊಟ, ಇಂದು ಹೈಕೋರ್ಟ್ ವಿಚಾರಣೆ

ಆಗಸ್ಟ್ 28 ರವೆರಗೆ ದರ್ಶನ್​ರ ನ್ಯಾಯಾಂಗ ಬಂಧನ ವಿಸ್ತರಿಸಿ ಕಳೆದ ವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಇದೀಗ ಮನೆ ಊಟದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಈ ನಡುವೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಶೀಘ್ರವೇ ನ್ಯಾಯಾಧೀಶರ ಮುಂದೆ ಬರಲಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಾಕ್ಷ್ಯಗಳನ್ನು ಕಲೆ ಹಾಕಿದ್ದು ಕೆಲವು ಡಿಜಿಟಲ್ ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಯಾಗಿ ಕಾಯುತ್ತಿದ್ದಾರೆ. ಹೈದರಾಬಾದ್​ನಿಂದ ಈ ಎಫ್​ಎಸ್​ಎಲ್​ ವರದಿಗಳು ಬರಬೇಕಿದ್ದು ವರದಿಗಳು ಬಂದ ಕೂಡಲೇ ಚಾರ್ಜ್​ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಪೊಲೀಸರು ಚಾರ್ಜ್​ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Tue, 20 August 24

ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
ಆರತಕ್ಷತೆಗೆ ತೆರಳುವಾಗ ವರನಿಗೆ ಚಾಕ ಇರಿತ: ವಧು ನಯನಾಳ ನೌಟಂಕಿ ಆಟ ಬಯಲು
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
‘ಅಂಬಲಿ ರಾಶಿಗೆ ಮುತ್ತಿನ ಗಿಣಿ ಸಮೃದ್ಧಿ ಆಯ್ತಲೇ ಪರಾಕ್’
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!