AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸೆಪ್ಟೆಂಬರ್ 5ರ ವರೆಗೆ ದರ್ಶನ್​ಗೆ ಜೈಲೂಟವೇ ಗತಿ

ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್ ತೂಗುದೀಪ ತಮಗೆ ಮನೆ ಊಟ ಬೇಕೆಂದು ಹಾಕಿದ್ದ ರಿಟ್ ಅರ್ಜಿಯ ವಿಚಾರಣೆ ಇಂದು ನಡೆದಿದ್ದು, ಪ್ರಕರಣದ ಮುಂದಿನ ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಲಾಗಿದೆ.

ಸೆಪ್ಟೆಂಬರ್ 5ರ ವರೆಗೆ ದರ್ಶನ್​ಗೆ ಜೈಲೂಟವೇ ಗತಿ
ಮಂಜುನಾಥ ಸಿ.
|

Updated on:Aug 20, 2024 | 2:00 PM

Share

ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್, ಆರೋಗ್ಯ ಸಮಸ್ಯೆಯನ್ನು ಕಾರಣವನ್ನಾಗಿ ನೀಡಿ ಮನೆ ಊಟಕ್ಕೆ ಹಾಗೂ ಇತರೆ ಕೆಲವು ವಸ್ತುಗಳಿಗೆ ಬೇಡಿಕೆ ಇರಿಸಿದ್ದರು. ಮನೆ ಊಟ ಹಾಗೂ ಇತರೆ ವಸ್ತುಗಳನ್ನು ಜೈಲಿಗೆ ತರಿಸಿಕೊಳ್ಳಲು ಅನುಮತಿ ಕೋರಿ ಹೈಕೋರ್ಟ್​ಗೆ ರಿಟ್ ಅರ್ಜಿಯನ್ನು ಸಲ್ಲಿಸಿದ್ದರು. ಇಂದು (ಆಗಸ್ಟ್ 20) ಹೈಕೋರ್ಟ್​ನ ಏಕಸದಸ್ಯ ಪೀಠವು ಅರ್ಜಿಯ ವಿಚಾರಣೆ ನಡೆಸಿದ್ದು ಸೆಪ್ಟೆಂಬರ್ 5ಕ್ಕೆ ವಿಚಾರಣೆಯನ್ನು ಮುಂದೂಡಿದೆ.

ಆರೋಗ್ಯ ಸಮಸ್ಯೆ, ನಿದ್ರಾಹೀನತೆ ಕಾಡುತ್ತಿರುವುದಾಗಿ ಕಾರಣ ನೀಡಿ, ಮನೆ ಊಟ, ಹಾಸಿಗೆ, ಚಮಚ, ತಟ್ಟೆಗಳನ್ನು ತರಸಿಕೊಳ್ಳಲು ಅನುಮತಿ ಕೋರಿ ನಟ ದರ್ಶನ್ ಹೈಕೋರ್ಟ್​ಗೆ ರಿಟ್ ಅರ್ಜಿ ಸಲ್ಲಿಸಿದ್ದರು. ಈ ಹಿಂದೆ ಅರ್ಜಿಯ ವಿಚಾರಣೆ ನಡೆಸಿದ್ದ ಪೀಠವು, ಜೈಲು ಅಧಿಕಾರಿಗಳು ತಮ್ಮ ನಿರ್ಣಯವನ್ನು ನೀಡುವಂತೆ ಹೇಳಿದ್ದರು. ಅಂತೆಯೇ ನಿರ್ಧಾರವನ್ನು ಹೈಕೋರ್ಟ್​ಗೆ ನೀಡಿದ್ದ ಜೈಲು ಅಧಿಕಾರಿಗಳು ದರ್ಶನ್​ಗೆ ಜೈಲು ಊಟ ಸಾಕೆಂದಿದ್ದರು. ಜೈಲಿನ ವೈದ್ಯಾಧಿಕಾರಿ ನೀಡಿದ್ದ ವರದಿಯನ್ನು ಸಹ ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಇಂದು ಹೈಕೋರ್ಟ್​ನ ಏಕಸದಸ್ಯ ಪೀಠದ ಮುಂದೆ ನಡೆದ ವಿಚಾರಣೆ ವೇಳೆ, ವೈದ್ಯಾಧಿಕಾರಿಗಳು ದರ್ಶನ್​ಗೆ ಮನೆ ಊಟವನ್ನು ನಿರಾಕರಿಸಿದ್ದಾರೆ ಎಂದು ರಾಜ್ಯ ಅಭಿಯೋಜಕ ಬೆಳ್ಳಿಯಪ್ಪ ಹೇಳಿದರು. ಅದಕ್ಕೆ ಸಂಬಂಧಿಸಿದ ದಾಖಲೆಗಳನ್ನು ಸಲ್ಲಿಸಿರುವುದಾಗಿ ತಿಳಿಸಿದರು. ಆದರೆ ದರ್ಶನ್ ಪರ ವಕೀಲರು ವೈದ್ಯಾಧಿಕಾರಿಗಳ ವರದಿ ನೋಡಿ ವಾದಮಂಡನೆಗೆ ಸಮಯ ಬೇಕಾಗುತ್ತದೆಯಾದ್ದರಿಂದ ವಾದ ಮಂಡಿಸಲು ಕಾಲಾವಕಾಶ ನೀಡುವಂತೆ ಮನವಿ ಮಾಡಿದರು. ಅಂತೆಯೇ ನ್ಯಾಯಾಧೀಶರು ವಿಚಾರಣೆಯನ್ನು ಸೆಪ್ಟೆಂಬರ್ 5 ಕ್ಕೆ ಮುಂದೂಡಿದರು.

ಇದನ್ನೂ ಓದಿ:ದರ್ಶನ್​ಗೆ ಮನೆ ಊಟ, ಇಂದು ಹೈಕೋರ್ಟ್ ವಿಚಾರಣೆ

ಆಗಸ್ಟ್ 28 ರವೆರಗೆ ದರ್ಶನ್​ರ ನ್ಯಾಯಾಂಗ ಬಂಧನ ವಿಸ್ತರಿಸಿ ಕಳೆದ ವಾರ ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಆದೇಶ ನೀಡಿದೆ. ಇದೀಗ ಮನೆ ಊಟದ ಅರ್ಜಿಯ ವಿಚಾರಣೆ ಸೆಪ್ಟೆಂಬರ್ 5ಕ್ಕೆ ಮುಂದೂಡಲಾಗಿದೆ. ಈ ನಡುವೆ ಪ್ರಕರಣದ ನಂಬರ್ 1 ಆರೋಪಿ ಪವಿತ್ರಾ ಗೌಡ ಪರ ವಕೀಲರು ಜಾಮೀನಿಗಾಗಿ ಅರ್ಜಿ ಸಲ್ಲಿಸಿದ್ದು, ಅರ್ಜಿಯ ವಿಚಾರಣೆ ಶೀಘ್ರವೇ ನ್ಯಾಯಾಧೀಶರ ಮುಂದೆ ಬರಲಿದೆ.

ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸರು ಪ್ರಕರಣಕ್ಕೆ ಸಂಬಂಧಿಸಿದಂತೆ ಹಲವಾರು ಸಾಕ್ಷ್ಯಗಳನ್ನು ಕಲೆ ಹಾಕಿದ್ದು ಕೆಲವು ಡಿಜಿಟಲ್ ಸಾಕ್ಷ್ಯಗಳ ಎಫ್​ಎಸ್​ಎಲ್ ವರದಿಯಾಗಿ ಕಾಯುತ್ತಿದ್ದಾರೆ. ಹೈದರಾಬಾದ್​ನಿಂದ ಈ ಎಫ್​ಎಸ್​ಎಲ್​ ವರದಿಗಳು ಬರಬೇಕಿದ್ದು ವರದಿಗಳು ಬಂದ ಕೂಡಲೇ ಚಾರ್ಜ್​ ಶೀಟ್ ಸಲ್ಲಿಕೆ ಮಾಡಲಿದ್ದಾರೆ. ಮುಂದಿನ ತಿಂಗಳ ಮೊದಲ ವಾರದಲ್ಲಿ ಪೊಲೀಸರು ಚಾರ್ಜ್​ ಶೀಟ್ ಸಲ್ಲಿಕೆ ಮಾಡುವ ಸಾಧ್ಯತೆ ಇದೆ.

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 1:41 pm, Tue, 20 August 24

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ