AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ

ಆಂಕರ್ ಅನುಶ್ರೀ ಅವರ ವಿರುದ್ಧ ಡ್ರಗ್ಸ್ ಪ್ರಕರಣದ ಎ2 ಕಿಶೋರ್ ಶೆಟ್ಟಿ ಹೇಳಿಕೆಯನ್ನು ಸಿಸಿಬಿ ಪೊಲೀಸರು ಚಾರ್ಜ್​ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ. ಇದಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ.

ಆ್ಯಂಕರ್ ಅನುಶ್ರೀ ಡ್ರಗ್ಸ್ ಕೇಸ್ ವಿಚಾರ; ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ ಎಂದ ಗೃಹ ಸಚಿವ
ಗೃಹ ಸಚಿವ ಆರಗ ಜ್ಞಾನೇಂದ್ರ
TV9 Web
| Edited By: |

Updated on:Sep 08, 2021 | 11:05 AM

Share

ನಟಿ, ಸ್ಟಾರ್ ಆ್ಯಂಕರ್​ ಅನುಶ್ರೀ ಡ್ರಗ್ಸ್​ ಕೇಸ್​ ವಿಚಾರಕ್ಕೆ ಸಂಬಂಧಪಟ್ಟಂತೆ ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ನೀಡಿದ್ದಾರೆ. ಪ್ರಕರಣದಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಯಾರ ಮೇಲೂ ಸಾಫ್ಟ್ ಕಾರ್ನರ್ ತೋರಿಸುವುದಿಲ್ಲ ಎಂದು ಅವರು ಬೆಳಗಾವಿಯಲ್ಲಿ ಹೇಳಿಕೆ ನೀಡಿದ್ದಾರೆ. ಎಫ್‌ಎಸ್‌ಎಲ್ ವರದಿ ಬಂದಿರುವುದು ಗೊತ್ತಿದೆ. ಕಾನೂನು ಪ್ರಕಾರವೇ ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಚಾರ್ಜ್‌ಶೀಟ್‌ನಲ್ಲಿ ಅನುಶ್ರೀ ಅವರ ಹೆಸರನ್ನು ಕೈಬಿಟ್ಟ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯಿಸಿರುವ ಗೃಹಸಚಿವರು, ಈ ಬಗ್ಗೆ ಮಾಹಿತಿ ಪಡೆದು ನಂತರ ಪ್ರತಿಕ್ರಿಯಿಸುತ್ತೇನೆ ಎಂದಿದ್ದಾರೆ. ‘‘ಈ ಪ್ರಕರಣದಲ್ಲಿ ಯಾವ ರಾಜಕೀಯ ಒತ್ತಡವೂ ಇಲ್ಲ. ಡ್ರಗ್ಸ್ ಕೇಸ್ ಪ್ರಕರಣಗಳಲ್ಲಿ ಯಾರೂ ಒತ್ತಡ ಹಾಕಲ್ಲ. ಡ್ರಗ್ಸ್ ಕೇಸ್‌ನಲ್ಲಿ ಯಾರನ್ನೂ ಬಿಡುವ ಪ್ರಶ್ನೆಯೇ ಇಲ್ಲ. ಅಪರಾಧಿಗಳು ಯಾರೇ ಆಗಿದ್ದರೂ, ಎಷ್ಟೇ ಪ್ರಭಾವಿಗಳಾಗಿದ್ದರೂ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುತ್ತದೆ. ಪೊಲೀಸರ ಮೇಲೆ ಒತ್ತಡ ಇರುವುದು ಊಹಾಪೋಹ. ಯಾರ ಒತ್ತಡಕ್ಕೂ ನಮ್ಮ ಪೊಲೀಸರು ಬಗ್ಗುವುದಿಲ್ಲ’’ ಎಂದು ಜ್ಞಾನೇಂದ್ರ ಸ್ಪಷ್ಟಪಡಿಸಿದ್ದಾರೆ.

ಗೃಹ ಸಚಿವ ಆರಗ ಜ್ಞಾನೇಂದ್ರ ಪ್ರತಿಕ್ರಿಯೆ ಇಲ್ಲಿದೆ:

ಆ್ಯಂಕರ್ ಅನುಶ್ರೀ ಕುರಿತು ಚಾರ್ಜ್ ಶೀಟಿನಲ್ಲಿ ಆರೋಪಿಯ ಹೇಳಿಕೆ ದಾಖಲು:​

ಡ್ರಗ್ಸ್ ಕೇಸ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಚಾರ್ಜ್​ಶೀಟ್​ನಲ್ಲಿ ಎ2 ಕಿಶೋರ್ ಶೆಟ್ಟಿಯ ಹೇಳಿಕೆಯನ್ನು ಉಲ್ಲೇಖಿಸಲಾಗಿದೆ. ‘ರಿಯಾಲಿಟಿ ಶೋನ ಕೊರಿಯೋಗ್ರಾಫರ್​ ಆಗಿದ್ದ ತರುಣ್​ ಮುಖಾಂತರ ತನಗೆ ಅನುಶ್ರೀ ಪರಿಚಯವಾಗಿತ್ತು. ತರುಣ್​ ರೂಮ್​ನಲ್ಲಿ ತಡರಾತ್ರಿವರೆಗೂ ಅನುಶ್ರೀಗೆ ಡ್ಯಾನ್ಸ್ ಪ್ರಾಕ್ಟೀಸ್ ಮಾಡಿಸುತ್ತಿದ್ದೆವು. ಡ್ಯಾನ್ಸ್ ಪ್ರಾಕ್ಟೀಸ್​ಗೆ ಬರುವಾಗ ಅನುಶ್ರೀ ಎಕ್ಸ್‌ಟಸಿ ಡ್ರಗ್ಸ್​ ಖರೀದಿಸಿ  ತರುತ್ತಿದ್ದರು. ನಮಗೆ ಎಕ್ಸ್‌ಟಸಿ ಡ್ರಗ್ಸ್ ನೀಡಿ ಅನುಶ್ರೀ ಕೂಡ ಸೇವಿಸುತ್ತಿದ್ದರು. ಅನುಶ್ರೀಗೆ ಡ್ರಗ್ಸ್ ಪೆಡ್ಲರ್​ಗಳ ಪರಿಚಯವಿದೆ. ಡ್ರಗ್ಸ್ ಎಲ್ಲಿ ಸಿಗುತ್ತೆ, ಯಾರು ಪೂರೈಸುತ್ತಾರೆಂದು ಆಕೆಗೆ ಗೊತ್ತಿತ್ತು. ಡ್ರಗ್ಸ್​ ಅಷ್ಟು ಸುಲಭವಾಗಿ ಅನುಶ್ರೀಗೆ ಹೇಗೆ ಸಿಗುತ್ತಿತ್ತೋ ಗೊತ್ತಿಲ್ಲ.’ ಎಂದು ಚಾರ್ಜ್​ಶೀಟ್​​ನಲ್ಲಿ ಎ2 ಕಿಶೋರ್​ ಶೆಟ್ಟಿ ಹೇಳಿಕೆಯನ್ನು ದಾಖಲಿಸಲಾಗಿದೆ.

ಇದನ್ನೂ ಓದಿ:

Drug Case: ಸಿಸಿಬಿ ಚಾರ್ಜ್​ಶೀಟ್​ನಲ್ಲಿ ಆಂಕರ್ ಅನುಶ್ರೀ ಹೆಸರು ಉಲ್ಲೇಖ; ಅವರು ಡ್ರಗ್ಸ್ ಸೇವಿಸುತ್ತಿದ್ದರು ಎಂದು ಆರೋಪಿ ಹೇಳಿಕೆ

ಹೆಬ್ಬಾಳ: ಬುಲೆಟ್ ಪ್ರಕಾಶ್ ಮಗ ರಕ್ಷಕ್ ಮೇಲೆ ಮಂಗಳಮುಖಿಯರಿಂದ ದಾಳಿ; ಪ್ರಕರಣ ದಾಖಲು

(Home minister Araga Jnanendra reaction on Anchor Anushree drug case)

Published On - 10:51 am, Wed, 8 September 21

ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಮಹಿಳೆಯರಿಗೆ ಬೆಂಗಳೂರು ಫುಲ್ ಸೇಫ್: ಸಿಲಿಕಾನ್ ಸಿಟಿಯನ್ನ ಕೊಂಡಾಡಿದ ಯುವತಿ
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಕೆಎಸ್‌ ಈಶ್ವರಪ್ಪಗೆ ವಿದೇಶದಿಂದ ಜೀವ ಬೆದರಿಕೆ , ದೂರು ದಾಖಲು!
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಬಾವಿಗೆ ಬಿದ್ದು ಒದ್ದಾಡುತ್ತಿದ್ದ ಚಿರತೆ ರಕ್ಷಣೆ, ವಿಡಿಯೋ ನೋಡಿ
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಆಸ್ತಿ ವಿವಾದ: ಕೆಸರು ಗದ್ದೆಯಲ್ಲೇ ನಡೀತು ಫಿಲ್ಮಿ ಸ್ಟೈಲ್​​ ಫೈಟ್​​
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಕಳಪೆ ಕೊಟ್ಟ ರಾಶಿಕಾ ಮೇಲೆ ಉರಿದು ಬಿದ್ದ ರಕ್ಷಿತಾ, ನಕ್ಕ ಧ್ರುವಂತ್
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ: ಉಪನ್ಯಾಸಕನ ವಿರುದ್ಧ ತಾಯಿ ಗಂಭೀರ ಆರೋಪ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಬಗ್ಗೆ ಸತೀಶ್ ಜಾರಕಿಹೊಳಿ ಸ್ಫೋಟಕ ಹೇಳಿಕೆ
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
Video: ನಿಯಂತ್ರಣ ತಪ್ಪಿ ಕೆರೆಗೆ ಜಾರಿದ ಸರ್ಕಾರಿ ಬಸ್
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
ಬಿಳಿಗಿರಿರಂಗನ ಬೆಟ್ಟದಲ್ಲಿ ಅಗ್ನಿ ಅವಘಡ; ಅಂಗಡಿಗಳು ಭಸ್ಮ!
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?
KPCC ಅಧ್ಯಕ್ಷ ಸ್ಥಾನಕ್ಕೆ ಟವೆಲ್ ಹಾಕಿದ ರಾಜಣ್ಣ: ಮಾಜಿ ಸಚಿವರು ಏನಂದ್ರು?