Sign In

By signing in or creating an account, you agree with Associated Broadcasting Company's Terms & Conditions and Privacy Policy.

ಅಧಿಕಾರಿಗಳ ಜತೆ ‘100’ ಸಿನಿಮಾ ನೋಡಿದ ಗೃಹ ಸಚಿವ ಆರಗ ಜ್ಞಾನೇಂದ್ರ; ಈ ಚಿತ್ರದಲ್ಲಿ ಏನಿದೆ ವಿಶೇಷ?

100 Kannada Movie: ‘100’ ಸಿನಿಮಾ ನೋಡಿದ ಬಳಿಕ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ನಿರ್ಮಾಪಕ ರಮೇಶ್​ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿದರು. ರಮೇಶ್​ ಅರವಿಂದ್​ ಈ ಚಿತ್ರಕ್ಕೆ ನಿರ್ದೇಶನ ಮಾಡಿದ್ದು, ನ.19ರಂದು ಬಿಡುಗಡೆ ಆಗುತ್ತಿದೆ.

ಅಧಿಕಾರಿಗಳ ಜತೆ ‘100’ ಸಿನಿಮಾ ನೋಡಿದ ಗೃಹ ಸಚಿವ ಆರಗ ಜ್ಞಾನೇಂದ್ರ; ಈ ಚಿತ್ರದಲ್ಲಿ ಏನಿದೆ ವಿಶೇಷ?
‘100’ ಸಿನಿಮಾ ನೋಡಿದ ಗೃಹ ಸಚಿವ ಆರಗ ಜ್ಞಾನೇಂದ್ರ
Follow us
TV9 Web
| Updated By: ಮದನ್​ ಕುಮಾರ್​

Updated on: Nov 17, 2021 | 9:01 PM

ಖ್ಯಾತ ನಟ ರಮೇಶ್​ ಅರವಿಂದ್​ (Ramesh Aravind) ಅವರು ನಿರ್ದೇಶನ ಮಾಡಿ, ನಾಯಕನಾಗಿ ಅಭಿನಯಿಸಿರುವ ‘100’ ಚಿತ್ರ ಈ ವಾರ ಬಿಡುಗಡೆ ಆಗುತ್ತಿದೆ. ನ.19ರಂದು ರಿಲೀಸ್​ ಆಗಲಿರುವ ಈ ಸಿನಿಮಾ ಹಲವು ಕಾರಣಗಳಿಗಾಗಿ ನಿರೀಕ್ಷೆ ಹುಟ್ಟುಹಾಕಿದೆ. ರಮೇಶ್​ ಜೊತೆ ರಚಿತಾ ರಾಮ್ (Rachita Ram)​, ಪೂರ್ಣಾ ಮುಂತಾದವರು ಕೂಡ ಪ್ರಮುಖ ಪಾತ್ರಗಳನ್ನು ನಿಭಾಯಿಸಿದ್ದಾರೆ. ವಿಶೇಷ ಏನೆಂದರೆ, ಈಗ ‘100’ ಸಿನಿಮಾವನ್ನು ಗೃಹ ಸಚಿವ ಆರಗ ಜ್ಞಾನೇಂದ್ರ (Home Minister Araga Jnanendra) ಅವರು ವೀಕ್ಷಿಸಿದ್ದಾರೆ. ಬೆಂಗಳೂರಿನಲ್ಲಿ ಬುಧವಾರ (ನ.17) ಅಧಿಕಾರಿಗಳ ಜೊತೆ ಕುಳಿತು ಅವರು ಸಿನಿಮಾ ನೋಡಿದ್ದಾರೆ. ಗೃಹ ಸಚಿವರು ವೀಕ್ಷಿಸಿದ್ದಾರೆ ಎಂದರೆ ಈ ಚಿತ್ರದಲ್ಲಿ ಏನಾದರೂ ವಿಶೇಷತೆ ಇರಲೇಬೇಕಲ್ಲವೇ? ಹೌದು, ಖಂಡಿತವಾಗಿಯೂ ಇದು ವಿಶೇಷ ಕಥಾಹಂದರ ಹೊಂದಿರುವ ಸಿನಿಮಾ. ಇಂದಿನ ಕಾಲಘಟ್ಟದಲ್ಲಿ ಅತಿ ಮುಖ್ಯವಾಗಿ ಚರ್ಚೆ ಆಗುತ್ತಿರುವ ಸೈಬರ್​ ಕ್ರೈಮ್​ ಕುರಿತು ‘100’ ಸಿನಿಮಾ (100 Kannada Movie) ಮೂಲಕ ಹೇಳಲಾಗಿದೆ. IAS ಅಧಿಕಾರಿ ಶಾಲಿನಿ​ ಹಾಗೂ ಸಿಐಡಿ ಅಧಿಕಾರಿಗಳು ಕೂಡ ಸಿನಿಮಾ ವೀಕ್ಷಿಸಿದ್ದಾರೆ.

ಸಿನಿಮಾ ನೋಡಿದ ಬಳಿಕ ಮಾತನಾಡಿದ ಆರಗ ಜ್ಞಾನೇಂದ್ರ ಅವರು ನಿರ್ಮಾಪಕ ರಮೇಶ್​ ರೆಡ್ಡಿ ಅವರಿಗೆ ಅಭಿನಂದನೆ ಸಲ್ಲಿಸಿದರು. ‘ಈ ಸಿನಿಮಾ ಜನರ ಮೇಲೆ ದೊಡ್ಡ ಪರಿಣಾಮ ಬೀರುತ್ತದೆ. ಅಪರಾಧದ ಜಗತ್ತನ್ನು ಎಚ್ಚರಿಸುತ್ತದೆ. ಇಂಥ ಒಳ್ಳೆಯ ಸಿನಿಮಾ ನೀಡಿದ ನಿರ್ಮಾಪಕ ರಮೇಶ್​ ರೆಡ್ಡಿ ಅವರಿಗೆ ಅಭಿನಂದನೆ ತಿಳಿಸುತ್ತೇನೆ. ಕಲಾವಿದರಾದ ರಮೇಶ್​, ರಚಿತಾ ರಾಮ್​, ಪೂರ್ಣಾ ತುಂಬ ಚೆನ್ನಾಗಿ ನಟಿಸಿದ್ದಾರೆ’ ಎಂದು ಆರಗ ಜ್ಞಾನೇಂದ್ರ ಮೆಚ್ಚುಗೆ ಸೂಚಿಸಿದ್ದಾರೆ.

‘ಈ ಸಿನಿಮಾ ಕೇವಲ ಮನರಂಜನೆಗಾಗಿ ಮಾತ್ರವಲ್ಲ. ಜನರ ಕಣ್ಣು ತೆರೆಸಲು ಮತ್ತು ಅಪರಾಧಿ ಜಗತ್ತನ್ನು ನಿರ್ನಾಮ ಮಾಡಲಿಕ್ಕಾಗಿ, ಶಾಂತಿ ಸುವ್ಯವಸ್ಥೆ ಕಾಪಾಡಲು ಈ ಸಿನಿಮಾ ಮಾಡಿದ್ದಾರೆ. ಇದನ್ನು ಎಲ್ಲರೂ ನೋಡಬೇಕು ಅಂತ ವಿನಂತಿ ಮಾಡಿಕೊಳ್ಳುತ್ತೇನೆ. ಪೊಲೀಸ್​ ಅಧಿಕಾರಿಗಳು ವಿಶೇಷವಾಗಿ ಈ ಚಿತ್ರವನ್ನು ಗಮನಿಸಿ ಅಂತ ವಿನಂತಿಸುತ್ತೇನೆ’ ಎಂದು ಆರಗ ಜ್ಞಾನೇಂದ್ರ ಹೇಳಿದ್ದಾರೆ.

ಶಾಲಿನಿ ರಜನೀಶ್ ಅವರಿಗೂ ‘100’ ಸಿನಿಮಾ ಇಷ್ಟವಾಗಿದೆ. ‘ನಮ್ಮ ಯುವಕ-ಯುವತಿಯರಿಗೆ ಇಂದು ತಂತ್ರಜ್ಞಾನ ಎಷ್ಟು ಅನುಕೂಲ ನೀಡುತ್ತದೆಯೋ ಅಷ್ಟೇ ಕೆಟ್ಟ ಪರಿಣಾಮವನ್ನೂ ಬೀರುತ್ತದೆ ಎಂಬ ಎಚ್ಚರಿಕೆಯನ್ನು ಈ ಸಿನಿಮಾದ ಮೂಲಕ ಹೇಳಲಾಗಿದೆ. ಈ ಚಿತ್ರದಿಂದ ಯುವ ಜನತೆ ಒಂದು ಪಾಠ ಕಲಿಯಲಿದೆ’ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ:

‘100’ ಚಿತ್ರದಲ್ಲಿ ಸೈಬರ್​ ಕ್ರೈಂ ಕಥೆ; ತೆರೆ ಹಿಂದೆಯೂ, ತೆರೆ ಮೇಲೂ ರಮೇಶ್​ ಅರವಿಂದ್​ ಕಸುಬುದಾರಿಕೆ

‘100’ ಚಿತ್ರದ ವಿಶೇಷವೇನು?; ಕುತೂಹಲಕರ ಮಾಹಿತಿಗಳನ್ನು ಹಂಚಿಕೊಂಡ ರಮೇಶ್ ಅರವಿಂದ್

ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಹಂತಕರು ನೇಪಾಳಿ ಮಂಜನಿಗೆ ಅಪರಚಿತರಾಗಿರಲಿಲ್ಲ, ಅವರೇ ಊಟಕ್ಕೆ ಕರೆಸಿದ್ದರು
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಫ್ಲೈಓವರ್​ನಿಂದ ಸರ್ವೀಸ್ ರಸ್ತೆಗೆ ಬಿದ್ದ ತೈಲ ಟ್ಯಾಂಕರ್, ಭಯಾನಕ ವಿಡಿಯೋ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಂಗಳೂರಿನಲ್ಲಿ ರಂಜಾನ್: ಸಾಮೂಹಿಕ ಪ್ರಾರ್ಥನೆಯಲ್ಲಿ ಸ್ಪೀಕರ್ ಖಾದರ್ ಭಾಗಿ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಮಸೀದಿ ಎದುರು ಮಹಿಳೆ-ಭದ್ರತಾ ಅಧಿಕಾರಿ ಪರಸ್ಪರ ಕಪಾಳಮೋಕ್ಷ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಇಂದು ದೇಶಾದ್ಯಂತ ರಂಜಾನ್ ಹಬ್ಬ ಆಚರಣೆ: 30 ದಿನಗಳ ಉಪವಾಸ ಅಂತ್ಯ
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು
ಯಾರಾದ್ರೂ ಸತ್ರಾ? ಪಾದಚಾರಿಗಳಿಗೆ ಗುದ್ದಿದ್ಮೇಲೆ ಕಾರು ಚಾಲಕ ಕೇಳಿದ್ದಿದು