AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಈ ಕೆಲಸ ಮಾಡಿದ್ರೆ ಅಭಿಮಾನಿಗಳಿಗೆ ಸಿಗುತ್ತೆ ಉಪೇಂದ್ರ ಜೊತೆ ಊಟ ಮಾಡುವ ಚಾನ್ಸ್​; ಏನಿದು ಟಾಸ್ಕ್​?

Home Minister Challenge: ಉಪೇಂದ್ರ ಹೇಳಿದ ರೀತಿಯಲ್ಲಿ ತುಂಬ ಚೆನ್ನಾಗಿ ರೀಲ್ಸ್​ ಮಾಡುವ ಮೂವರಿಗೆ ‘ಹೋಮ್ ಮಿನಿಸ್ಟರ್​’ ಸಿನಿಮಾದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಸಿಗಲಿದೆ. ಉಪ್ಪಿ ಜೊತೆ ಊಟ ಮಾಡುವ ಅವಕಾಶ ಕೂಡ ಸಿಗಲಿದೆ.

ಈ ಕೆಲಸ ಮಾಡಿದ್ರೆ ಅಭಿಮಾನಿಗಳಿಗೆ ಸಿಗುತ್ತೆ ಉಪೇಂದ್ರ ಜೊತೆ ಊಟ ಮಾಡುವ ಚಾನ್ಸ್​; ಏನಿದು ಟಾಸ್ಕ್​?
ಉಪೇಂದ್ರ
TV9 Web
| Edited By: |

Updated on: Mar 28, 2022 | 9:11 AM

Share

‘ರಿಯಲ್​ ಸ್ಟಾರ್​’ ಉಪೇಂದ್ರ (Upendra) ಅವರ ಅಭಿಮಾನಿ ಬಳಗ ದೊಡ್ಡದು. ನಟನಾಗಿ, ನಿರ್ದೇಶಕನಾಗಿ ಅವರು ಮಾಡಿರುವ ಸಾಧನೆ ಅಪಾರ. ಸೋಶಿಯಲ್​ ಮೀಡಿಯಾದಲ್ಲಿ ಉಪ್ಪಿ ಆ್ಯಕ್ಟೀವ್​ ಆಗಿರುತ್ತಾರೆ. ಈಗ ಅವರ ಹೊಸ ಸಿನಿಮಾ ‘ಹೋಮ್​ ಮಿನಿಸ್ಟರ್’ (Home Minister Movie) ಬಿಡುಗಡೆಗೆ ಸಜ್ಜಾಗಿದೆ. ಏ.1ರಂದು ಈ ಚಿತ್ರ ಬಿಡುಗಡೆ ಆಗಲಿದೆ. ಅದಕ್ಕೂ ಮುನ್ನ ತಮ್ಮ ಅಭಿಮಾನಿಗಳಿಗಾಗಿ ಉಪೇಂದ್ರ ಒಂದು ಟಾಸ್ಕ್​ ನೀಡಿದ್ದಾರೆ. ಅದನ್ನು ಚೆನ್ನಾಗಿ ಮಾಡಿದವರಿಗೆ ಎರಡು ಬಂಪರ್​ ಆಫರ್​ ಸಿಗಲಿದೆ. ‘ಹೋಮ್​ ಮಿನಿಸ್ಟರ್​’ ಸಿನಿಮಾ ವೀಕ್ಷಿಸಲು ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಉಚಿತವಾಗಿ ಸಿಗಲಿದೆ. ಅದಕ್ಕಿಂತಲೂ ಸೂಪರ್​ ಅವಕಾಶ ಎಂದರೆ ಉಪೇಂದ್ರ ಜೊತೆ ಕುಳಿತು ಊಟ ಮಾಡಬಹುದು! ಹೌದು, ಈ ಬಗ್ಗೆ ಉಪೇಂದ್ರ ಅವರೇ ಮಾಹಿತಿ ಹಂಚಿಕೊಂಡಿದ್ದಾರೆ. ಈ ಎರಡು ಚಾನ್ಸ್​ ಪಡೆಯಲು ಅಭಿಮಾನಿಗಳು (Upendra Fans) ಏನು ಮಾಡಬೇಕು? ಉಪ್ಪಿ ಹಾಕಿರುವ ಒಂದು ಸವಾಲನ್ನು ಸ್ವೀಕರಿಸಬೇಕು. ಉಪೇಂದ್ರ ಹೇಳಿದ ಕೆಲಸವನ್ನು ತುಂಬ ಚೆನ್ನಾಗಿ ಮಾಡುವ ಮೂವರಿಗೆ ಮಾತ್ರ ಈ ಚಾನ್ಸ್​ ಸಿಗಲಿದೆ. ಈ ಕುರಿತು ಉಪ್ಪಿ ಹಂಚಿಕೊಂಡಿರುವ ಒಂದು ವಿಡಿಯೋ ಸಖತ್​ ವೈರಲ್​ ಆಗುತ್ತಿದೆ.

‘ಹೋಮ್​ ಮಿನಿಸ್ಟರ್​’ ಚಿತ್ರದಲ್ಲಿ ಉಪೇಂದ್ರ ಮತ್ತು ವೇದಿಕಾ ಅವರು ಜೋಡಿಯಾಗಿ ನಟಿಸಿದ್ದಾರೆ. ಸಿನಿಮಾದ ಥೀಮ್​ಗೆ ತಕ್ಕಂತೆ ಉಪ್ಪಿ ಒಂದು ವಿಡಿಯೋ ಮಾಡಿ ಹಂಚಿಕೊಂಡಿದ್ದಾರೆ. ಮನೆಯಲ್ಲಿ ತಮ್ಮ ಪತ್ನಿ ಪ್ರಿಯಾಂಕಾ ಉಪೇಂದ್ರ ಅವರಿಗೆ ಅನೇಕ ಕೆಲಸಗಳನ್ನು ಉಪ್ಪಿ ಮಾಡಿಕೊಟ್ಟಿದ್ದಾರೆ. ಮನೆ ಕ್ಲೀನ್​ ಮಾಡುವುದು, ಅಡುಗೆ ಮಾಡುವುದು, ಪಾತ್ರೆ ತೊಳೆಯುವುದು, ಹೆಂಡತಿಯ ಸೇವೆ ಮಾಡುವುದು ಸೇರಿದಂತೆ ಅನೇಕ ಕೆಲಸಗಳನ್ನು ಉಪೇಂದ್ರ ನಿಭಾಯಿಸಿದ್ದಾರೆ. ಅದೇ ರೀತಿ ಅಭಿಮಾನಿಗಳು ಕೂಡ ತಮ್ಮ ತಮ್ಮ ಮನೆಗಳಲ್ಲಿ ಈ ಕೆಲಸವನ್ನು ಮಾಡಬೇಕು. ಅದರ ವಿಡಿಯೋವನ್ನು ಸೋಶಿಯಲ್​ ಮೀಡಿಯಾದಲ್ಲಿ ಉಪೇಂದ್ರ ಅವರಿಗೆ ಟ್ಯಾಗ್​ ಮಾಡುವ ಮೂಲಕ ಹಂಚಿಕೊಳ್ಳಬೇಕು. ಹೀಗೆ ತುಂಬ ಚೆನ್ನಾಗಿ ರೀಲ್ಸ್​ ಮಾಡುವ ಮೂವರಿಗೆ ‘ಹೋಮ್ ಮಿನಿಸ್ಟರ್​’ ಸಿನಿಮಾದ ಫಸ್ಟ್​ ಡೇ ಫಸ್ಟ್​ ಶೋ ಟಿಕೆಟ್​ ಮತ್ತು ಉಪ್ಪಿ ಜೊತೆ ಊಟ ಮಾಡುವ ಅವಕಾಶ ಸಿಗಲಿದೆ.

View this post on Instagram

A post shared by Upendra (@nimmaupendra)

ಉಪೇಂದ್ರ ಹಾಕಿರುವ ಸವಾಲನ್ನು ಅನೇಕ ಅಭಿಮಾನಿಗಳು ಈಗಾಗಲೇ ಸ್ವೀಕರಿಸಿದ್ದಾರೆ. ಆ ಪೈಕಿ ಕೆಲವು ರೀಲ್ಸ್​ಗಳನ್ನು ತಮ್ಮ ಇನ್​ಸ್ಟಾಗ್ರಾಮ್​ ಸ್ಟೋರಿಯಲ್ಲಿ ಉಪೇಂದ್ರ ಹಂಚಿಕೊಂಡಿದ್ದಾರೆ. ಇತ್ತೀಚೆಗೆ ಉಪೇಂದ್ರ ಅವರು ಹುಡುಗಿ ರೀತಿ ಡ್ರೆಸ್​ ಮಾಡಿಕೊಂಡಿದ್ದ ಫೋಟೋ ವೈರಲ್​ ಆಗಿತ್ತು. ಆ ಮೂಲಕ ‘ಹೋಮ್​ ಮಿನಿಸ್ಟರ್​’ ಬಗ್ಗೆ ಅಭಿಮಾನಿಗಳಲ್ಲಿ ಇನ್ನಷ್ಟು ಕೌತುಕ ಹೆಚ್ಚಿದೆ. ಈ ಚಿತ್ರಕ್ಕೆ ಸುಜಯ್​ ಕೆ. ಶ್ರೀಹರಿ ನಿರ್ದೇಶನ ಮಾಡಿದ್ದಾರೆ.

‘ಇದು ವಿಭಿನ್ನವಾದಂತಹ ಪ್ರಯತ್ನ. ಸಿನಿಮಾ ನೋಡಿದರೆ ಜನರಿಗೆ ಗೊತ್ತಾಗುತ್ತದೆ. ನಾವು ಮಾಡಿದ ಸಿನಿಮಾವನ್ನು ನಾವೇ ಹೊಗಳಬಾರದು. ಹೋಮ್ ಮಿನಿಸ್ಟರ್ ಎಂಬ ಟೈಟಲ್ ಕೇಳಿ ಥಿಯೇಟರ್ ಒಳಗೆ ಹೋದರೆ ನೀವು ಶಾಕ್ ಆಗ್ತೀರಿ. ಅಲ್ಲಿ ಬೇರೆಯದೇ ಹೋಮ್ ಮಿನಿಸ್ಟರ್ ಇರುತ್ತಾರೆ. ಈ ಸಿನಿಮಾದಲ್ಲಿ ಅದೇ ಸಸ್ಪೆನ್ಸ್. ನನಗಿಂತ ವೇದಿಕಾ ಪಾತ್ರ ಹೆಚ್ಚು ಚೆನ್ನಾಗಿದೆ. ಸಿನಿಮಾದಲ್ಲಿ ಅವರು ನನ್ನನ್ನು ಆಟ ಆಡಿಸ್ತಾರೆ. ಅವರು ತುಂಬ ಚೆನ್ನಾಗಿ ನಟಿಸಿದ್ದಾರೆ. ಹಲವು ಹುಡುಗಿಯರು ಈ ಸಿನಿಮಾದಲ್ಲಿ ಇದ್ದಾರೆ. ನಮ್ಮ ನಿರ್ಮಾಪಕರಿಗೆ ಗ್ಲಾಮರ್ ಎಂದರೆ ಇಷ್ಟ. ಮಲೇಷಿಯಾ, ಥಾಯ್ಲೆಂಡ್​ನಲ್ಲಿ ಶೂಟಿಂಗ್ ಮಾಡಲಾಗಿದೆ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಉಪೇಂದ್ರ ಹೇಳಿದ್ದರು.

ಹಲವಾರು ಪ್ರಾಜೆಕ್ಟ್​ಗಳಲ್ಲಿ ಉಪೇಂದ್ರ ಬ್ಯುಸಿ ಆಗಿದ್ದಾರೆ. ತಮ್ಮದೇ ನಿರ್ದೇಶನದ ಹೊಸ ಚಿತ್ರವನ್ನು ಅವರು ಇತ್ತೀಚೆಗೆ ಅನೌನ್ಸ್ ಮಾಡಿದರು. ನಿರ್ದೇಶಕ ರಾಮ್​ ಗೋಪಾಲ್​ ವರ್ಮಾ ಜೊತೆಗಿನ ಹೊಸ ಪ್ರಾಜೆಕ್ಟ್​ ಕೂಡ ಘೋಷಣೆ ಆಗಿದೆ.

ಇದನ್ನೂ ಓದಿ:

ಉಪ್ಪಿ ಡೈರೆಕ್ಷನ್​ ಸಿನಿಮಾ ಟೈಟಲ್​ ಅರ್ಥವೇನು?; ಎಲ್ಲವನ್ನೂ ವಿವರಿಸಿದ ಪ್ರಿಯಾಂಕಾ ಉಪೇಂದ್ರ

ಕೊಂಬು ಇರುವ ಕುದುರೆ ಏರಿ ಬಂದ ಉಪೇಂದ್ರ; ನಿರ್ದೇಶನದ ಹೊಸ ಚಿತ್ರದಲ್ಲಿ ಹೇಗಿದೆ ನೋಡಿ ಉಪ್ಪಿ ಫಸ್ಟ್​ ಲುಕ್​

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಇನ್ನೇನು ವಿಶೇಷ ಚೇತನರಿಗೆ ಹಸ್ತಾಂತರಿಸಬೇಕಿದ್ದ ವಾಹನಗಳು ಸುಟ್ಟು ಭಸ್ಮ
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ದೆಹಲಿಯಲ್ಲಿ ಡಿಕೆಶಿ ಸ್ಫೋಟಕ ಹೇಳಿಕೆ, ರಾಜ್ಯ ರಾಜಕಾರಣದಲ್ಲಿ ಸಂಚಲನ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ