AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂತರಿಕ ತನಿಖೆ ನಡೆಸಿ ವರದಿ ‌ನೀಡಿ’; ದರ್ಶನ್ ರಾಜಾತಿಥ್ಯದ ಬಗ್ಗೆ ಗೃಹಸಚಿವ ಪರಮೇಶ್ವರ್ ಗರಂ

ನಟ ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್​ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರ ವಿಡಿಯೋ ಕಾಲ್​ ಕ್ಲಿಪಿಂಗ್​ಗಳು ಸಖತ್ ವೈರಲ್​ ಆಗಿವೆ. ಅವರು ಟೀ ಕುಡಿಯುತ್ತಿರುವ ಫೋಟೋಗಳು ಇವೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸಿಟ್ಟಾಗಿದ್ದಾರೆ.

‘ಆಂತರಿಕ ತನಿಖೆ ನಡೆಸಿ ವರದಿ ‌ನೀಡಿ’; ದರ್ಶನ್ ರಾಜಾತಿಥ್ಯದ ಬಗ್ಗೆ ಗೃಹಸಚಿವ ಪರಮೇಶ್ವರ್ ಗರಂ
ದರ್ಶನ್
ಪ್ರಸನ್ನ ಗಾಂವ್ಕರ್​
| Edited By: |

Updated on: Aug 26, 2024 | 6:58 AM

Share

ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್​ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಏಳುವಂತೆ ಆಗಿದೆ. ದರ್ಶನ್ ಅವರು ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಸಮಯ ಕಳೆಯುತ್ತಿರೋ ಫೋಟೋನ ಯಾರೋ ವೈರಲ್ ಮಾಡಿದ್ದಾರೆ. ಇದರಿಂದ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಸದ್ಯ ಬಂದಿಖಾನೆ ಡಿಜಿ ಮಾಲಿನಿ‌ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ಮಾಡಿದ್ದಾರೆ.

ಪರಮೇಶ್ವರ್ ಅವರು ಮಾಲಿನಿ‌ ಕೃಷ್ಣಮೂರ್ತಿ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ದರ್ಶನ್​ಗೆ ರಾಜಾತಿಥ್ಯದ ಬಗ್ಗೆ ಪರಮೇಶ್ವರ್ ಗರಂ ಆಗಿದ್ದಾರೆ. ಆಂತರಿಕ ತನಿಖೆ ನಡೆಸಿ ವರದಿ ‌ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ವರದಿ ಆಗಿದೆ.

ಇನ್ನು ಜೈಲಿನಲ್ಲಿ ದರ್ಶನ್​ಗೆ ಮೊಬೈಲ್ ಬಳಕೆಗೂ ಅವಕಾಶ ಸಿಗುತ್ತಿದೆ. ಅವರು ಸಹ ಖೈದಿಯ ಮೊಬೈಲ್​ನಿಂದ ಇತರ ರೌಡಿ ಶೀಟರ್ ಕುಟುಂಬದವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ದರ್ಶನ್​ಗೆ ಪಶ್ಚಾತಾಪ ಇದೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಅವರಿಗೆ ಆ ರೀತಿಯ ಯಾವುದೇ ಭಾವನೆ ಇದ್ದಂತೆ ಇಲ್ಲ. ಅವರು ಹಾಯಾಗಿಯೇ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಇತ್ತ ರೇಣುಕಾ ಸ್ವಾಮಿ ಕುಟುಂಬದವರ ಕಣ್ಣೀರು ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಕಾವೇರಿ ವಿವಾದ: ಮಂಡ್ಯದಲ್ಲಿ ರೈತರ ಆಕ್ರೋಶ, ರಾತ್ರಿ ಪಂಜಿನ ಪ್ರತಿಭಟನೆ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
ಇಂದು ಗುರು ಪೂರ್ಣಿಮೆ ಶುಭ ದಿನ: ಮೇಷಾದಿ 12 ರಾಶಿಗಳ ದಿನ ಭವಿಷ್ಯ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
‘ಅವರು ಭಯೋತ್ಪಾದಕರಾ?’; ಪ್ರತಿಭಟನಾನಿರತ ವಿದ್ಯಾರ್ಥಿಗಳ ಮೇಲೆ ಗನ್ ದಾಳಿಗೆ ಪ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ವಿದ್ಯಾರ್ಥಿ ಪ್ರತಿಭಟನೆ ವೇಳೆ ಹಿಂಸಾಚಾರ; SIT ತನಿಖೆಗೆ ಸುಪ್ರೀಂ ಸೂಚನೆ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ಅಲ್ಲು ಅರ್ಜುನ್ ಮಾಡಿದ್ದು ನೋಡಿ ಭೇಷ್ ಎಂದ ಅಭಿಮಾನಿಗಳು: ವಿಡಿಯೋ ನೋಡಿ
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ವೈಮನಸ್ಸು ಮರೆತು ದರ್ಶನ್ ಭೇಟಿ ಮಾಡಲು ಜೈಲಿಗೆ ಬಂದ ನಟ ಧನ್ವೀರ್
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಲ್ಲಿ ವ್ಯರ್ಥವಾಗಿ ಸಮುದ್ರ ಸೇರುತ್ತಿರುವ ಕಾವೇರಿ ನೀರು!
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ಕಾವೇರು ನೀರು ಬಿಡದಂತೆ ಸರ್ಕಾರಕ್ಕೆ ಎಚ್ಚರಿಕೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ತಮಿಳುನಾಡಿಗೆ ನೀರು ಹರಿಸುವ ಆದೇಶ ಖಂಡಿಸಿ ಮಂಡ್ಯದಲ್ಲಿ ರೈತರ ಪ್ರತಿಭಟನೆ
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್
ಪ್ರಧಾನ್ ಅವರನ್ನು ತೆಗೆದು ಪ್ರಧಾನಿಯನ್ನು ಉಳಿಸಿಕೊಂಡಿರಿ; ಅಖಿಲೇಶ್ ಯಾದವ್