AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಆಂತರಿಕ ತನಿಖೆ ನಡೆಸಿ ವರದಿ ‌ನೀಡಿ’; ದರ್ಶನ್ ರಾಜಾತಿಥ್ಯದ ಬಗ್ಗೆ ಗೃಹಸಚಿವ ಪರಮೇಶ್ವರ್ ಗರಂ

ನಟ ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್​ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರ ವಿಡಿಯೋ ಕಾಲ್​ ಕ್ಲಿಪಿಂಗ್​ಗಳು ಸಖತ್ ವೈರಲ್​ ಆಗಿವೆ. ಅವರು ಟೀ ಕುಡಿಯುತ್ತಿರುವ ಫೋಟೋಗಳು ಇವೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸಿಟ್ಟಾಗಿದ್ದಾರೆ.

‘ಆಂತರಿಕ ತನಿಖೆ ನಡೆಸಿ ವರದಿ ‌ನೀಡಿ’; ದರ್ಶನ್ ರಾಜಾತಿಥ್ಯದ ಬಗ್ಗೆ ಗೃಹಸಚಿವ ಪರಮೇಶ್ವರ್ ಗರಂ
ದರ್ಶನ್
ಪ್ರಸನ್ನ ಗಾಂವ್ಕರ್​
| Edited By: |

Updated on: Aug 26, 2024 | 6:58 AM

Share

ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್​ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಏಳುವಂತೆ ಆಗಿದೆ. ದರ್ಶನ್ ಅವರು ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಸಮಯ ಕಳೆಯುತ್ತಿರೋ ಫೋಟೋನ ಯಾರೋ ವೈರಲ್ ಮಾಡಿದ್ದಾರೆ. ಇದರಿಂದ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಸದ್ಯ ಬಂದಿಖಾನೆ ಡಿಜಿ ಮಾಲಿನಿ‌ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ಮಾಡಿದ್ದಾರೆ.

ಪರಮೇಶ್ವರ್ ಅವರು ಮಾಲಿನಿ‌ ಕೃಷ್ಣಮೂರ್ತಿ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ದರ್ಶನ್​ಗೆ ರಾಜಾತಿಥ್ಯದ ಬಗ್ಗೆ ಪರಮೇಶ್ವರ್ ಗರಂ ಆಗಿದ್ದಾರೆ. ಆಂತರಿಕ ತನಿಖೆ ನಡೆಸಿ ವರದಿ ‌ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ವರದಿ ಆಗಿದೆ.

ಇನ್ನು ಜೈಲಿನಲ್ಲಿ ದರ್ಶನ್​ಗೆ ಮೊಬೈಲ್ ಬಳಕೆಗೂ ಅವಕಾಶ ಸಿಗುತ್ತಿದೆ. ಅವರು ಸಹ ಖೈದಿಯ ಮೊಬೈಲ್​ನಿಂದ ಇತರ ರೌಡಿ ಶೀಟರ್ ಕುಟುಂಬದವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ದರ್ಶನ್​ಗೆ ಪಶ್ಚಾತಾಪ ಇದೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಅವರಿಗೆ ಆ ರೀತಿಯ ಯಾವುದೇ ಭಾವನೆ ಇದ್ದಂತೆ ಇಲ್ಲ. ಅವರು ಹಾಯಾಗಿಯೇ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಇತ್ತ ರೇಣುಕಾ ಸ್ವಾಮಿ ಕುಟುಂಬದವರ ಕಣ್ಣೀರು ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Follow Us
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
ಮುಂಬೈ ವಿಮಾನ ನಿಲ್ದಾಣದೊಳಗೆ ಭಾರಿ ಬೆಂಕಿ ಅವಘಡ
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
600ಕ್ಕೆ 597 ಅಂಕ ಗಳಿಸಿದ ವಿದ್ಯಾರ್ಥಿನಿಯರು: ಪೋಷಕರ ಭಾವುಕ ಮಾತು
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಧಾರ್ಮಿಕ ಆಚರಣೆಗಾಗಿ ನರ್ಮದಾ ನದಿಗೆ 11 ಸಾವಿರ ಲೀಟರ್ ಹಾಲು ಸುರಿದ ಭಕ್ತರು!
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಬೆಂಗಳೂರು ಓಟ: 10 ಕಿಮೀ ರಸ್ತೆ ದುರಸ್ತಿಗೆ ತೇಜಸ್ವಿ ಸೂರ್ಯ ಆಗ್ರಹ
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಟಿವಿಕೆಗೆ ಕಾಂಗ್ರೆಸ್ ಬೆಂಬಲ ನೀಡಿಲ್ಲ; ವಿಜಯ್ ಹೇಳಿಕೆಗೆ ಡಿಕೆಶಿ ತಿರುಗೇಟು
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಪಿಯುಸಿ ಫಲಿತಾಂಶ 2026: ಸಚಿವ ಮಧುಬಂಗಾರಪ್ಪ ಸುದ್ದಿಗೋಷ್ಠಿ ನೇರಪ್ರಸಾರ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ಯಾರು‌ ಮತದಾನ ಮಾಡಿಲ್ಲ ಹೋಗಿ ಓಟ್ ಮಾಡಿ: ಮಸೀದಿಯಿಂದ ಸಂದೇಶ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ರಸ್ತೆಯಲ್ಲಿ ಹೊಡೆದಾಕ್ತಾರೆ: ರೌಡಿಶೀಟರ್​ನಲ್ಲಿರೋ ಅಪ್ಪ ಮಗನಿಗೆ ತರಾಟೆ
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯು ರಿಸಲ್ಟ್: ಕಾಮರ್ಸ್​​ನಲ್ಲಿ ಮಂಗಳೂರಿನ ದಿಶಾ ಟಾಪರ್​​
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ
ದ್ವಿತೀಯ ಪಿಯುಸಿ ರಿಸಲ್ಟ್ ಪ್ರಕಟ: ಈ ಬಾರಿ ದಾಖಲೆ ಫಲಿತಾಂಶ