‘ಆಂತರಿಕ ತನಿಖೆ ನಡೆಸಿ ವರದಿ ‌ನೀಡಿ’; ದರ್ಶನ್ ರಾಜಾತಿಥ್ಯದ ಬಗ್ಗೆ ಗೃಹಸಚಿವ ಪರಮೇಶ್ವರ್ ಗರಂ

ನಟ ದರ್ಶನ್​ ಅವರು ಪರಪ್ಪನ ಅಗ್ರಹಾರ ಜೈಲಿನಿಂದ ವಿಡಿಯೋ ಕಾಲ್​ ಮಾಡಿರುವ ವಿಚಾರ ಬೆಳಕಿಗೆ ಬಂದಿದೆ. ಅವರ ವಿಡಿಯೋ ಕಾಲ್​ ಕ್ಲಿಪಿಂಗ್​ಗಳು ಸಖತ್ ವೈರಲ್​ ಆಗಿವೆ. ಅವರು ಟೀ ಕುಡಿಯುತ್ತಿರುವ ಫೋಟೋಗಳು ಇವೆ. ಈ ಬಗ್ಗೆ ಗೃಹ ಸಚಿವ ಪರಮೇಶ್ವರ್ ಸಿಟ್ಟಾಗಿದ್ದಾರೆ.

‘ಆಂತರಿಕ ತನಿಖೆ ನಡೆಸಿ ವರದಿ ‌ನೀಡಿ’; ದರ್ಶನ್ ರಾಜಾತಿಥ್ಯದ ಬಗ್ಗೆ ಗೃಹಸಚಿವ ಪರಮೇಶ್ವರ್ ಗರಂ
ದರ್ಶನ್
Edited By:

Updated on: Aug 26, 2024 | 6:58 AM

ನಟ ದರ್ಶನ್ ಅವರು ಜೈಲಿನಲ್ಲಿ ಹಾಯಾಗಿ ದಿನಗಳನ್ನು ಕಳೆಯುತ್ತಿದ್ದಾರೆ. ಕಾಫಿ ಕುಡಿಯುತ್ತಾ, ಸಿಗರೇಟ್ ಸೇದುತ್ತಿರುವ ಫೋಟೋ ವೈರಲ್ ಆಗಿದೆ. ದರ್ಶನ್​ಗೆ ಇದರಿಂದ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಏಳುವಂತೆ ಆಗಿದೆ. ದರ್ಶನ್ ಅವರು ಜೈಲಲ್ಲಿ ಪಶ್ಚಾತಾಪ ಪಡುತ್ತಿದ್ದಾರೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಆ ರೀತಿ ಇಲ್ಲ ಎಂಬುದು ಸ್ಪಷ್ಟವಾಗಿದೆ. ಈ ಬೆನ್ನಲ್ಲೇ ಗೃಹಸಚಿವ ಜಿ.ಪರಮೇಶ್ವರ್ ಅಧಿಕಾರಿಗಳ ವಿರುದ್ಧ ಗರಂ ಆಗಿದ್ದಾರೆ.

ದರ್ಶನ್ ಅವರು ಜೈಲಲ್ಲಿ ಹಾಯಾಗಿ ಸಮಯ ಕಳೆಯುತ್ತಿದ್ದಾರೆ. ಅವರು ವಿಲ್ಸನ್ ಗಾರ್ಡನ್ ನಾಗ, ಮ್ಯಾನೇಜರ್ ನಾಗರಾಜ್ ಒಟ್ಟಿಗೆ ಸಮಯ ಕಳೆಯುತ್ತಿರೋ ಫೋಟೋನ ಯಾರೋ ವೈರಲ್ ಮಾಡಿದ್ದಾರೆ. ಇದರಿಂದ ದರ್ಶನ್​ಗೆ ರಾಜಾತಿಥ್ಯ ಸಿಗುತ್ತಿದೆಯೇ ಎನ್ನುವ ಪ್ರಶ್ನೆ ಮೂಡುವಂತೆ ಆಗಿದೆ. ಸದ್ಯ ಬಂದಿಖಾನೆ ಡಿಜಿ ಮಾಲಿನಿ‌ ಕೃಷ್ಣಮೂರ್ತಿ ಜೊತೆ ಗೃಹ ಸಚಿವ ಪರಮೇಶ್ವರ್ ಚರ್ಚೆ ಮಾಡಿದ್ದಾರೆ.

ಪರಮೇಶ್ವರ್ ಅವರು ಮಾಲಿನಿ‌ ಕೃಷ್ಣಮೂರ್ತಿ ಜೊತೆ ದೂರವಾಣಿ ಕರೆ ಮಾಡಿ ಮಾತನಾಡಿದ್ದಾರೆ. ದರ್ಶನ್​ಗೆ ರಾಜಾತಿಥ್ಯದ ಬಗ್ಗೆ ಪರಮೇಶ್ವರ್ ಗರಂ ಆಗಿದ್ದಾರೆ. ಆಂತರಿಕ ತನಿಖೆ ನಡೆಸಿ ವರದಿ ‌ನೀಡುವಂತೆ ಸೂಚನೆ ನೀಡಿದ್ದಾರೆ ಎಂದು ವರದಿ ಆಗಿದೆ.

ಇನ್ನು ಜೈಲಿನಲ್ಲಿ ದರ್ಶನ್​ಗೆ ಮೊಬೈಲ್ ಬಳಕೆಗೂ ಅವಕಾಶ ಸಿಗುತ್ತಿದೆ. ಅವರು ಸಹ ಖೈದಿಯ ಮೊಬೈಲ್​ನಿಂದ ಇತರ ರೌಡಿ ಶೀಟರ್ ಕುಟುಂಬದವರಿಗೆ ವಿಡಿಯೋ ಕಾಲ್ ಮಾಡಿ ಮಾತನಾಡಿದ್ದಾರೆ. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಇದನ್ನೂ ಓದಿ: ಜೈಲಿಂದ ದರ್ಶನ್ ವಿಡಿಯೋ ಕಾಲ್ ಮಾಡಿದ್ದು ಕೂಡ ರೌಡಿಗಳಿಗೆ; ಸ್ವಲ್ಪವೂ ಬದಲಾಗಿಲ್ಲ ದಾಸ

ದರ್ಶನ್​ಗೆ ಪಶ್ಚಾತಾಪ ಇದೆ ಎಂದೆಲ್ಲ ಹೇಳಲಾಗಿತ್ತು. ಆದರೆ, ಅವರಿಗೆ ಆ ರೀತಿಯ ಯಾವುದೇ ಭಾವನೆ ಇದ್ದಂತೆ ಇಲ್ಲ. ಅವರು ಹಾಯಾಗಿಯೇ ಜೈಲಿನಲ್ಲಿ ಸಮಯ ಕಳೆಯುತ್ತಿದ್ದಾರೆ. ಇತ್ತ ರೇಣುಕಾ ಸ್ವಾಮಿ ಕುಟುಂಬದವರ ಕಣ್ಣೀರು ಮುಂದುವರಿದಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Prasanna Gaonkar

ಹುಟ್ಟೂರು ಯಲ್ಲಾಪುರ, ಬೆಳೆದೂರು ದಾಂಡೇಲಿಯ ದಟ್ಟ ಕಾಡುಗಳ ನಡುವೆ. ರವಿ ಬೆಳಗೆರೆ ಎಂಬ ಅಕ್ಷರ ರಾಕ್ಷಸನ ಕಟ್ಟಾಭಿಮಾನದಿಂದ ಹಾಳಾಗಿ, ಸೈನ್ಸ್ ನಲ್ಲಿ ಡಿಗ್ರಿ ಪಡೆದು ಜರ್ನಲಿಸಂಗೆ ಹಿಂಬದಿ ಕಿಟಕಿಯಿಂದ ನುಸುಳಿದ್ದು 2010 ರ ಅಕ್ಟೋಬರ್ ನಲ್ಲಿ. ಉಡುಪಿಯಲ್ಲಿ ಮೊದಲ ಪತ್ರಿಕೋದ್ಯಮ ಕರ್ತವ್ಯ ಪ್ರಾರಂಭಿಸಿದ್ದು 2010 ರಲ್ಲಿಯೇ. ಜನಶ್ರೀ ನ್ಯೂಸ್ ಮೊದಲು ಅನ್ನ ನೀಡಿದ ಸಂಸ್ಥೆ. ಉಡುಪಿ ಜಿಲ್ಲಾ ವರದಿಗಾರನಾಗಿ ಮೂರು ವರ್ಷ ಕೆಲಸ ಮಾಡಿ 2013 ರ ಅಂತ್ಯಕ್ಕೆ ಸಮಯ ನ್ಯೂಸ್ ಮೂಲಕ ಬೆಂಗಳೂರಿಗೆ ಎಂಟ್ರಿ. ಬಿಗ್ ೩, ಬೆಂಗಳೂರ್ ಲೈವ್, ಸಮಯ ಸಕಾಲ ಕಾರ್ಯಕ್ರಮದಲ್ಲಿ ವರದಿಗಾರಿಕೆ ಮಾಡಿದ ಖುಷಿ. 2014 ರ ಡಿಸೆಂಬರ್ ನಿಂದ ಟಿವಿ9 ನಲ್ಲಿ ಕೆಲಸ ಪ್ರಾರಂಭ. ಟಿವಿ9 ನಲ್ಲಿ ಮೊದಲು ಮೆಟ್ರೋ ರಿಪೋರ್ಟಿಂಗ್ ಮೂಲಕ ಬೆಂಗಳೂರು ಸುತ್ತುವ ಅರಿಯುವ ರಾಜಧಾನಿಯ ನಾಡಿಮಿಡಿತ ಹುಡುಕುವ ಅವಕಾಶ. ಮೆಟ್ರೋ ಬ್ಯೂರೋ ದಲ್ಲಿ ಶೈಕ್ಷಣಿಕ ಹಾಗೂ ಬಿಬಿಎಂಪಿ ವರದಿಗಾರಿಕೆ. ಚಪ್ಪಲಿಯಿಂದ ಹಿಡಿದು ಚಾದರ್ ತನಕ ಸ್ಟೋರಿ ಮಾಡಿದ ಅನುಭವ. ಮೆಟ್ರೋ ಟೀಂ ನಿಂದ ರಾಜಕೀಯ ವರದಿಗಾರಿಕೆಗೆ ಶಿಫ್ಟ್ ಆದ ತಕ್ಷಣ- ಮುಂದುವರಿದಿದೆ ನಿರಂತರ ಪಯಣ. ಕಥೆ, ಕಾದಂಬರಿ, ಕವನ, ಸಿನಿಮಾ, ಸುತ್ತಾಟ, ಆಗಾಗ ಕಿತ್ತಾಟ, ಸ್ನೇಹಿತರೊಂದಿಗೆ ಒಡನಾಟ ಇವೆಲ್ಲ ಮಾಮೂಲಿ ದಿನಚರಿ. ಇವತ್ತಿಗೂ ಬರವಣಿಗೆಯೊಂದೇ ಖುಷಿ ಕೊಡುವ ಖರ್ಜೂರ. ಸ್ಟಾಕ್ ಮಾರ್ಕೆಟ್ ನಲ್ಲಿ 2019 ರಿಂದ ಆ್ಯಕ್ಟಿವ್.

Read More
Follow Us