AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಹೊಂದಿಸಿ ಬರೆಯಿರಿ’ ಸಿನಿಮಾ ಉಚಿತವಾಗಿ ನೋಡಿ; ಇಷ್ಟವಾದರೆ ಮಾತ್ರ ಹಣ ಕೊಡಿ

ನವೀನ್ ಶಂಕರ್, ಶ್ರೀಮಹದೇವ್, ಪ್ರವೀಣ್ ತೇಜ್, ಭಾವನಾ ರಾವ್, ಐಶಾನಿ ಶೆಟ್ಟಿ, ಅರ್ಚನಾ ಜೋಯಿಸ್, ಅನಿರುದ್ದ್ ಆಚಾರ್ಯ, ಸಂಯುಕ್ತಾ ಹೊರನಾಡು ಮುಂತಾದವರು ‘ಹೊಂದಿಸಿ ಬರೆಯಿರಿ’ ಸಿನಿಮಾದಲ್ಲಿ ಅಭಿನಯಿಸಿದ್ದಾರೆ. ಈ ಸಿನಿಮಾ ಈಗ ಯೂಟ್ಯೂಬ್​ನಲ್ಲಿ ಉಚಿತವಾಗಿ ಲಭ್ಯವಾಗಿದೆ. ಚಿತ್ರತಂಡದವರು ಪ್ರೇಕ್ಷಕರಿಗೆ ಇಂಥ ಆಫರ್​ ನೀಡಿದ್ದಾರೆ.

‘ಹೊಂದಿಸಿ ಬರೆಯಿರಿ’ ಸಿನಿಮಾ ಉಚಿತವಾಗಿ ನೋಡಿ; ಇಷ್ಟವಾದರೆ ಮಾತ್ರ ಹಣ ಕೊಡಿ
‘ಹೊಂದಿಸಿ ಬರೆಯಿರಿ’ ಸಿನಿಮಾ ಪೋಸ್ಟರ್​
ಮದನ್​ ಕುಮಾರ್​
|

Updated on:May 20, 2024 | 4:10 PM

Share

2023ರ ಫೆಬ್ರವರಿಯಲ್ಲಿ ಕನ್ನಡದ ‘ಹೊಂದಿಸಿ ಬರೆಯಿರಿ’ (Hondisi Bareyiri) ಸಿನಿಮಾ ಬಿಡುಗಡೆಯಾಗಿ ವಿಮರ್ಶಕರ ಮೆಚ್ಚುಗೆ ಪಡೆದುಕೊಂಡಿತ್ತು. ರಾಮೇನಹಳ್ಳಿ ಜಗನ್ನಾಥ ಅವರು ನಿರ್ದೇಶನ ಮಾಡಿದ ಈ ಸಿನಿಮಾವನ್ನು ‘ಸಂಡೇ ಸಿನಿಮಾಸ್’ ಸಂಸ್ಥೆಯು ನಿರ್ಮಾಣ ಮಾಡಿದೆ. ಇದು ಈ ಬ್ಯಾನರ್​ನ ಮೊದಲ ಸಿನಿಮಾ. ವಿಶೇಷ ಏನೆಂದರೆ ‘ಹೊಂದಿಸಿ ಬರೆಯಿರಿ’ ಸಿನಿಮಾ ಈಗ ಯೂಟ್ಯೂಬ್​‌ನಲ್ಲೂ (YouTube) ಬಿಡುಗಡೆ ಆಗಿದೆ. ‘ಅಮೇಜಾನ್ ಪ್ರೈಮ್​ ವಿಡಿಯೋ’ ಒಟಿಟಿಯಲ್ಲಿ ಈಗಲೂ ವೀಕ್ಷಣೆಗೆ ಲಭ್ಯವಿದೆಯಾದರೂ ಭಾರತ, ಅಮೆರಿಕ ಹಾಗೂ ಯುಕೆ ಹೊರತಾಗಿ ಇತರೆ ದೇಶಗಳಲ್ಲಿ ಪ್ರಸಾರ ಆಗುತ್ತಿಲ್ಲ. ಆದ್ದರಿಂದ ಇನ್ನುಳಿದ ದೇಶಗಳ ಕನ್ನಡದ ಸಿನಿಮಾ (Kannada Cinema) ಪ್ರೇಕ್ಷಕರಿಗೆ ಈ ಸಿನಿಮಾ ತಲುಪಬೇಕು ಹಾಗೂ ಚಿತ್ರಮಂದಿರದಲ್ಲಿ ನೋಡಿರದ ಮತ್ತು ಒಟಿಟಿ ಚಂದಾದಾರರಲ್ಲದ ಪ್ರೇಕ್ಷಕರಿಗೂ ಸಿನಿಮಾ ಸಿಗಲಿ ಎಂಬ ಉದ್ದೇಶದಿಂದ ಯೂಟ್ಯೂಬ್​ನಲ್ಲಿ ರಿಲೀಸ್​ ಮಾಡಲಾಗಿದೆ.

ಇದೊಂದು ಭಿನ್ನ ಪ್ರಯತ್ನ. ‘ಹೊಂದಿಸಿ ಬರೆಯಿರಿ’ ಚಿತ್ರಕ್ಕೆ ಹಾಕಿದ್ದ ಹಣ ಪೂರ್ತಿ ವಾಪಸ್ ಆಗಿಲ್ಲ. ಹಾಗಿದ್ದರೂ ಕೂಡ ಚಿತ್ರತಂಡ ಈ ರೀತಿಯ ಗಟ್ಟಿ ನಿರ್ಧಾರ ಮಾಡಿದೆ. ಯೂಟ್ಯೂಬ್​ನಲ್ಲಿ ರೆಂಟಲ್ ಆಯ್ಕೆಯ ಮೂಲಕ ಒಂದಿಷ್ಟು ಹಣ ನಿಗದಿಪಡಿಸಿ ನೋಡಿ ಅಂತ ಕೇಳುವುದಕ್ಕಿಂತ ಉಚಿತವಾಗಿ ಎಲ್ಲರೂ ಸಿನಿಮಾ ನೋಡಲಿ ಎಂಬುದು ಚಿತ್ರತಂಡದ ಉದ್ದೇಶ. ಪ್ರೇಕ್ಷಕರಿಗೆ ಸಿನಿಮಾ ಇಷ್ಟವಾದರೆ ಮಾತ್ರ ತೋಚಿದಷ್ಟು ಹಣವನ್ನು ನೀಡಲಿ ಎಂಬ ನಿರ್ಧಾರ ಮಾಡಲಾಗಿದೆ. ಆದ್ದರಿಂದ ನಿರ್ಮಾಣ ಸಂಸ್ಥೆಯಾದ ‘ಸಂಡೇ ಸಿನಿಮಾಸ್​’ನ ಕ್ಯೂಆರ್​ ಕೋಡ್​, ಯುಪಿಐ ಐಡಿ ಮತ್ತು ಬ್ಯಾಂಕ್ ಖಾತೆಯ ವಿವರಗಳನ್ನು ನೀಡಲಾಗಿದೆ. ಯೂಟ್ಯೂಬ್​ Description ಮೂಲಕವೂ ಈ ಮಾಹಿತಿ ಹಂಚಿಕೊಳ್ಳಲಾಗಿದೆ.

‘ಹೊಂದಿಸಿ ಬರೆಯಿರಿ’ ಸಿನಿಮಾ:

ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಅವರು ಡೈರೆಕ್ಷನ್​ ಮಾಡುವುದರ ಜೊತೆಗೆ ತಮ್ಮ ಸ್ನೇಹಿತರ ಜೊತೆ ಸೇರಿ ‘ಸಂಡೇ ಸಿನಿಮಸ್’ ಸಂಸ್ಥೆಯ ಮೂಲಕ ‘ಹೊಂದಿಸಿ ಬರೆಯಿರಿ’ ಸಿನಿಮಾವನ್ನು ನಿರ್ಮಾಣ ಮಾಡಿದ್ದಾರೆ. ಈ ಚಿತ್ರದಲ್ಲಿ ನವೀನ್ ಶಂಕರ್, ಪ್ರವೀಣ್ ತೇಜ್, ಶ್ರೀಮಹದೇವ್, ಭಾವನಾ ರಾವ್, ಅನಿರುದ್ದ್ ಆಚಾರ್ಯ, ಐಶಾನಿ ಶೆಟ್ಟಿ, ಸಂಯುಕ್ತಾ ಹೊರನಾಡು, ಅರ್ಚನಾ ಜೋಯಿಸ್ ಮುಂತಾದವರು ಅಭಿನಯಿಸಿದ್ದಾರೆ.

ಇದನ್ನೂ ಓದಿ: ಅಮೆಜಾನ್ ಹೊಸ ದಾಖಲೆ ಬರೆದ ಹೊಂದಿಸಿ ಬರೆಯಿರಿ: 50 ಮಿಲಿಯನ್ಸ್ ಮಿನಿಟ್ ಸ್ಟ್ರೀಮಿಂಗ್

ಈ ಬಗ್ಗೆ ನಿರ್ದೇಶಕ ರಾಮೇನಹಳ್ಳಿ ಜಗನ್ನಾಥ ಪ್ರತಿಕ್ರಿಯೆ ನೀಡಿದ್ದಾರೆ. ‘ಹೊಂದಿಸಿ ಬರೆಯಿರಿ ಸಿನಿಮಾದ ಯೂಟ್ಯೂಬ್​ ಲಿಂಕ್​ ಅನ್ನು ನಿಮ್ಮ ಸೋಶಿಯಲ್​ ಮೀಡಿಯಾದಲ್ಲಿ, ವಾಟ್ಸಪ್​ ಸ್ಟೇಟಸ್​ನಲ್ಲಿ ಹಂಚಿಕೊಳ್ಳಿ. ಆ ಮೂಲಕ ಎಲ್ಲರಿಗೂ ಇದು ತಲುಪಲಿ. ನಮ್ಮ ಸಂಸ್ಥೆಯ ಮುಂದಿನ ಚಿತ್ರಗಳನ್ನು ಪ್ರೋತ್ಸಾಹಿಸಿ. ಈಗಾಗಲೇ ಪ್ರೀ-ಪ್ರೊಡಕ್ಷನ್ ಹಂತದಲ್ಲಿ ಇರುವ ನಮ್ಮ ಮುಂದಿನ ಸಿನಿಮಾ ವಿವರಣೆಯನ್ನು ಶೀಘ್ರದಲ್ಲೇ ಹಂಚಿಕೊಳ್ಳುತ್ತೇವೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್​ ಮಾಡಿ.

Published On - 4:08 pm, Mon, 20 May 24

ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ಸೊಸೆಗೆ ನೌಕರಿ ಕೊಟ್ಟಿಲ್ಲವೆಂದು ಅಂಗನವಾಡಿಗೆ ಬೀಗ ಜಡಿದ ಮಾಲೀಕ!
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ