AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಯಾಂಡಲ್​ವುಡ್​ಗೆ ಹೊಸ ಚೈತನ್ಯ ಕೊಟ್ಟ ಸಿನಿಮಾಗಳು; ಮತ್ತೆ ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರು

ವೀಕೆಂಡ್​​ನಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’, ‘ಆಚಾರ್ ಆ್ಯಂಡ್ ಕೋ..’ ಹಾಗೂ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಕೆಲ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡಿವೆ. ಇದು ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ಬೆಳವಣಿಗೆ.

ಸ್ಯಾಂಡಲ್​ವುಡ್​ಗೆ ಹೊಸ ಚೈತನ್ಯ ಕೊಟ್ಟ ಸಿನಿಮಾಗಳು; ಮತ್ತೆ ಚಿತ್ರಮಂದಿರಕ್ಕೆ ಬಂದ ಪ್ರೇಕ್ಷಕರು
ಕನ್ನಡದಲ್ಲಿ ರಿಲೀಸ್ ಆಗಇ ಮೆಚ್ಚುಗೆ ಪಡೆದ ಸಿನಿಮಾಗಳು
ರಾಜೇಶ್ ದುಗ್ಗುಮನೆ
|

Updated on: Jul 31, 2023 | 12:25 PM

Share

2023ರಲ್ಲಿ ಈಗಾಗಲೇ ಏಳು ತಿಂಗಳು ಕಳೆದಿವೆ. ಈ ವರ್ಷದ ಆರಂಭದಿಂದ ಇಲ್ಲಿಯವರೆಗೆ ಸ್ಯಾಂಡಲ್​ವುಡ್​ನಲ್ಲಿ ಗೆದ್ದ ಸಿನಿಮಾಗಳ ಸಂಖ್ಯೆ ತುಂಬಾನೇ ಕಡಿಮೆ. ಈಗ ಕನ್ನಡದಲ್ಲಿ ಬ್ಯಾಕ್​ ಟು ಬ್ಯಾಕ್ ಸಿನಿಮಾಗಳು ರಿಲೀಸ್ ಆಗಿದ್ದು ಜನ ಮೆಚ್ಚುಗೆ ಪಡೆಯುತ್ತಿವೆ. ವೀಕೆಂಡ್​​ನಲ್ಲಿ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare Movie), ‘ಆಚಾರ್ ಆ್ಯಂಡ್ ಕೋ..’ ಹಾಗೂ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರದ ಕೆಲ ಶೋಗಳು ಹೌಸ್​ಫುಲ್ ಪ್ರದರ್ಶನ ಕಂಡಿವೆ. ಇದು ಕನ್ನಡ ಚಿತ್ರರಂಗದ ಪಾಲಿಗೆ ಮಹತ್ವದ ಬೆಳವಣಿಗೆ ಎನ್ನಬಹುದು.

ಕೌಸಲ್ಯ ಸುಪ್ರಜಾ ರಾಮ

ಡಾರ್ಲಿಂಗ್ ಕೃಷ್ಣ ಅಭಿಮಾನಿ ಬಳಗ ದೊಡ್ಡದಿದೆ. ಅವರ ನಟನೆಯ ‘ಕೌಸಲ್ಯ ಸುಪ್ರಜಾ ರಾಮ’ ಚಿತ್ರ ಮೆಚ್ಚುಗೆ ಪಡೆದಿದೆ. ಬೃಂದಾ ಆಚಾರ್ಯ ಹಾಗೂ ಮಿಲನಾ ನಾಗರಾಜ್ ಕೂಡ ಸಿನಿಮಾದಲ್ಲಿ ನಟಿಸಿದ್ದಾರೆ. ಮಿಲನಾ ನಾಗರಾಜ್ ಹಾಗೂ ಡಾರ್ಲಿಂಗ್ ಕೃಷ್ಣ ಅವರ ಕಾಂಬಿನೇಷನ್​ಗೆ ದೊಡ್ಡ ಅಭಿಮಾನಿ ಬಳಗ ಇದೆ. ಸಿನಿಮಾ ಮೆಚ್ಚುಗೆ ಪಡೆಯಲು ಇದೂ ಒಂದು ಕಾರಣ. ಎಲ್ಲಕ್ಕಿಂತ ಮುಖ್ಯವಾಗಿ ಸಮಾಜಕ್ಕೆ ಈ ಚಿತ್ರದ ಮೂಲಕ ಒಂದು ಸಂದೇಶ ಸಾರಲಾಗಿದೆ.

ಆಚಾರ್ ಆ್ಯಂಡ್ ಕೋ

ಅಶ್ವಿನಿ ಪುನೀತ್ ರಾಜ್​ಕುಮಾರ್ ಮುನ್ನಡೆಸಿಕೊಂಡು ಹೋಗುತ್ತಿರುವ ‘ಪಿಆರ್​ಕೆ ಪ್ರೊಡಕ್ಷನ್ಸ್’ ಮೂಲಕ ‘ಆಚಾರ್​ ಆ್ಯಂಡ್ ಕೋ’ ಸಿನಿಮಾ ರಿಲೀಸ್ ಆಗಿದೆ. ಸಿಂಧು ಶ್ರೀನಿವಾಸಮೂರ್ತಿ ಅವರು ಈ ಚಿತ್ರದಲ್ಲಿ ನಟಿಸುವುದರ ಜೊತೆ ನಿರ್ದೇಶನ ಕೂಡ ಮಾಡಿದ್ದಾರೆ. 60ರ ದಶಕದ ಕಥೆಯನ್ನು ಈ ಸಿನಿಮಾ ಹೊಂದಿದೆ. ಈ ಚಿತ್ರದಲ್ಲೂ ಸಮಾಜಕ್ಕೆ ಒಂದೊಳ್ಳೆಯ ಸಂದೇಶ ಸಾರುವ ಕೆಲಸ ಆಗಿದೆ. ಹೊಸಬರ ತಂಡಕ್ಕೆ ಪಿಆರ್​ಕೆ ಬೆಂಬಲವಾಗಿ ನಿಂತಿದೆ.

ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ

ಹೊಸ ತಂಡ ಸೇರಿಕೊಂಡು ಮಾಡಿರುವ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕೂಡ ಜನ ಮೆಚ್ಚುಗೆ ಪಡೆದಿದೆ. ಕಾಲೇಜು ಹುಡುಗರು, ಹಾಸ್ಟೆಲ್​ನಲ್ಲಿ ದಿನಗಳನ್ನು ಕಳೆದವರಿಗೆ ಈ ಸಿನಿಮಾ ಇಷ್ಟವಾಗಿದೆ. ನಿತಿನ್ ಕೃಷ್ಣಮೂರ್ತಿ ಅವರು ಈ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ವಿವಾದದ ಮಧ್ಯೆಯೂ ಚಿತ್ರ ಗೆದ್ದಿದೆ.

ಇದನ್ನೂ ಓದಿ: ವಿದೇಶಕ್ಕೆ ಹೊರಟ ‘ಹಾಸ್ಟೆಲ್ ಹುಡುಗರು’: ಹೊಸಬರ ಸಿನಿಮಾಗೆ ಸಿಕ್ಕಿದೆ ಭರ್ಜರಿ ಸಕ್ಸಸ್​

ಸ್ಯಾಂಡಲ್​ವುಡ್​ಗೆ ಹೊಸ ಚೈತನ್ಯ

‘ಡೇರ್​ ಡೆವಿಲ್ ಮುಸ್ತಫಾ’ ಸೇರಿ ಕೆಲವೇ ಕೆಲವು ಕನ್ನಡದ ಸಿನಿಮಾಗಳು ಜನರನ್ನು ಚಿತ್ರಮಂದಿರಕ್ಕೆ ಕರೆಸಿವೆ. ಈಗ ಮೂರು ಸಿನಿಮಾಗಳು ಬ್ಯಾಕ್ ಟು ಬ್ಯಾಕ್ ರಿಲೀಸ್ ಆಗಿ ಕನ್ನಡ ಚಿತ್ರರಂಗಕ್ಕೆ ಹೊಸ ಚೈತನ್ಯ ತುಂಬಿವೆ. ಆಗಸ್ಟ್​ ಹಾಗೂ ಸೆಪ್ಟೆಂಬರ್​ ತಿಂಗಳಲ್ಲಿ ಅನುಕ್ರಮವಾಗಿ ರಾಜ್ ಬಿ. ಶೆಟ್ಟಿ ನಟನೆಯ ‘ಟೋಬಿ’ ಹಾಗೂ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ರಿಲೀಸ್ ಆಗುತ್ತಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ಬ್ಯಾನರ್ ಗಲಾಟೆ: ಜನಾರ್ದನ ರೆಡ್ಡಿ ಕಚೇರಿಗೂ ಬಾಂಬ್ ನಿಷ್ಕ್ರಿಯ ದಳ ದೌಡು
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ದಿಲ್ಲಿ ಭಕ್ತರೊಬ್ಬರಿಂದ ಉಡುಪಿ ಶ್ರೀ ಕೃಷ್ಣನಿಗೆ ಬಂಗಾರದ ಭಗವದ್ಗೀತೆ ಕಾಣಿಕೆ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ರೋಷದಿಂದ ವೇದಿಕೆ ಕಡೆ ನುಗ್ಗಿ ಸೋಮಣ್ಣಗೆ ಎಚ್ಚರಿಕೆ ಕೊಟ್ಟ ತಂಗಡಗಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಸಚಿವ ಸೋಮಣ್ಣ ಮೇಲೆ ಕುರ್ಚಿ ಎಸೆದ ಕಾಂಗ್ರೆಸ್ ಕಾರ್ಯಕರ್ತರು, ವಿಡಿಯೋ ನೋಡಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಬೀದರ್ ಕೆಡಿಪಿ ಸಭೆಯಲ್ಲಿ ಕೈ ಕೈ ಮಿಲಾಯಿಸಿದ ಶಾಸಕ, ಎಂಎಲ್​ಸಿ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಶಿಷ್ಟಾಚಾರ ವಿವಾದ: ಕೇಂದ್ರ ಸಚಿವ ಸೋಮಣ್ಣ ಜೊತೆ ಶಿವರಾಜ್​​ ತಂಗಡಗಿ ವಾಗ್ವಾದ
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಅರಸು ದಾಖಲೆ ಮುರಿಯುತ್ತಿರುವ ಬಗ್ಗೆ ಸಿದ್ದರಾಮಯ್ಯ ಹೇಳಿದ್ದಿಷ್ಟು!
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಸ್ವಿಫ್ಟ್ ಕಾರಿಗೆ ಡಿಕ್ಕಿ ಹೊಡೆದ ಬೊಲೆರೋ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!