AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿಗೆ ಡಬ್ ಆದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ; ಶೀರ್ಷಿಕೆ ಬದಲಿಸಿದ ತಂಡ

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ‘ಬಾಯ್ಸ್ ಹಾಸ್ಟೆಲ್’ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ.

ತೆಲುಗಿಗೆ ಡಬ್ ಆದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ; ಶೀರ್ಷಿಕೆ ಬದಲಿಸಿದ ತಂಡ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
ರಾಜೇಶ್ ದುಗ್ಗುಮನೆ
|

Updated on:Aug 12, 2023 | 1:16 PM

Share

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ‘ಕಾಂತಾರ’ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. ಈಗ ಹಾಸ್ಟೆಲ್ ಹುಡುಗರ ಸರದಿ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ Hostel Hudugaru Bekagiddare Movie)ಸಿನಿಮಾ ತೆಲುಗಿಗೆ ಡಬ್ ಆಗಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಎಂದು ಶೀರ್ಷಿಕೆ ಇಡಲಾಗಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕನ್ನಡದಲ್ಲಿ ಜುಲೈ 21ರಂದು ರಿಲೀಸ್ ಆಯಿತು. ಈ ಚಿತ್ರ ಕನ್ನಡ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆಯಿತು. ಹಾಸ್ಟೆಲ್ ಹುಡುಗರ ತಮಾಷೆ ಅನೇಕರಿಗೆ ಇಷ್ಟವಾಯಿತು. ರಕ್ಷಿತ್ ಶೆಟ್ಟಿ ಒಡೆತನದ ‘ಪರಂವ ಸ್ಟುಡಿಯೋಸ್’ ಈ ಚಿತ್ರವನ್ನು ಪ್ರೆಸೆಂಟ್ ಮಾಡಿದೆ. ಈ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ‘ಬಾಯ್ಸ್ ಹಾಸ್ಟೆಲ್’ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ. ಅಲ್ಲಿ ಈ ಚಿತ್ರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ವಿದೇಶಕ್ಕೆ ಹೊರಟ ‘ಹಾಸ್ಟೆಲ್ ಹುಡುಗರು’: ಹೊಸಬರ ಸಿನಿಮಾಗೆ ಸಿಕ್ಕಿದೆ ಭರ್ಜರಿ ಸಕ್ಸಸ್​

ಈ ಚಿತ್ರದಲ್ಲಿ ನಟಿಸಿದ ಬಹುತೇಕ ಎಲ್ಲರೂ ಹೊಸ ಪ್ರತಿಭೆಗಳೇ. ಹಲವರಿಗೆ ರಂಗಭೂಮಿ ಹಿನ್ನೆಲೆ ಇದೆ. ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಸಿಕ್ಕಿದೆ. ವರುಣ್ ಗೌಡ, ಪ್ರಜ್ವಲ್ ಬಿ.ಪಿ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ರಮ್ಯಾ ಅತಿಥಿ ಪಾತ್ರ ಮಾಡಿ ಗಮನ ಸೆಳೆದರು. ಸದ್ಯ ಹೈದರಾಬಾದ್​ನಲ್ಲಿ ಕನ್ನಡ ವರ್ಷನ್ ಪ್ರದರ್ಶನ ಕಾಣುತ್ತಿತ್ತು ಎನ್ನಲಾಗಿದೆ. ಈಗ ತೆಲುಗು ವರ್ಷನ್ ರಿಲೀಸ್ ಆಗುತ್ತಿರುವುದರಿಂದ ಕನ್ನಡ ಅವತರಣಿಕೆಯನ್ನು ತೆಗೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Sat, 12 August 23

Follow Us
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
BSNL ಸಿಬ್ಬಂದಿ ಸೋಗಿನಲ್ಲಿ ಕಳ್ಳತನ ಮಾಡುತ್ತಿದ್ದ ಅಂತಾರಾಜ್ಯ ಗ್ಯಾಂಗ್ ಬಂಧನ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಕರ್ನಾಟಕದಲ್ಲಿ ರಾಷ್ಟ್ರಪತಿ ಆಳ್ವಿಕೆ ಬರುತ್ತೆ ಎಂದ ಬಿಜೆಪಿ ಶಾಸಕ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ಬಂಗಾಳದಲ್ಲಿ ಜಂಗಲ್ ರಾಜ್​ನ ಅಂತ್ಯದ ಆರಂಭ; ಪ್ರಧಾನಿ ಮೋದಿ ವಾಗ್ದಾಳಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ತಂಡದ ಹೀನಾಯ ಪ್ರದರ್ಶನ; ಮಧ್ಯದಲ್ಲೇ ಕ್ರೀಡಾಂಗಣ ತೊರೆದ ಆಕಾಶ್ ಅಂಬಾನಿ
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ರಣಬಿಸಿಲಿಗೆ ಕೋಲಾರದಲ್ಲಿ ಮಣ್ಣಿನ ಮಡಿಕೆ ಖರೀದಿಗೆ ಮುಗಿಬೀಳ್ತಿರೋ ಜನ!
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
ಮಗುವಿನ ಸಮೇತ ಎಸ್ಕಲೇಟರ್​ನಿಂದ ಬೀಳೋಕಾದ ಮಹಿಳೆ
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
CET ಪರೀಕ್ಷೆಯಲ್ಲಿ ಜನಿವಾರ ತೆಗೆಸಿದ ಆರೋಪ ಸುಧಾಕರ್ ಏನಂದ್ರು?
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ಪೊಲೀಸರೆದುರೇ ಯುವಕನಿಗೆ ಯದ್ವಾತದ್ವ ಹೊಡೆದ ಹುಡುಗಿಯರು! ವಿಡಿಯೋ ವೈರಲ್
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ರೋಗಿಗಳಿಗಾಗಿ ಬೆಡ್ ಮೀಸಲು; ಎಸಿ, ಫ್ಯಾನ್ ಅಳವಡಿಕೆ!
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು
ಕೊಪ್ಪಳ ಜನರ ನೀರಿನ ದಾಹ ತಣಿಸುವ ಹಿರೇಹಳ್ಳ ಜಲಾಶಯ ಬತ್ತಿ ಹೋಯ್ತು