AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತೆಲುಗಿಗೆ ಡಬ್ ಆದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ; ಶೀರ್ಷಿಕೆ ಬದಲಿಸಿದ ತಂಡ

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ‘ಬಾಯ್ಸ್ ಹಾಸ್ಟೆಲ್’ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ.

ತೆಲುಗಿಗೆ ಡಬ್ ಆದ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ; ಶೀರ್ಷಿಕೆ ಬದಲಿಸಿದ ತಂಡ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
Follow us
ರಾಜೇಶ್ ದುಗ್ಗುಮನೆ
|

Updated on:Aug 12, 2023 | 1:16 PM

ಒಂದು ಸಿನಿಮಾ ಸೂಪರ್ ಹಿಟ್ ಆಯಿತು ಎಂದಾಗ ಅದನ್ನು ಪರಭಾಷೆಗೆ ಡಬ್ ಮಾಡುವ ಕೆಲಸ ಆಗುತ್ತದೆ. ‘ಕಾಂತಾರ’ ಸಿನಿಮಾ ಮೊದಲು ಕನ್ನಡದಲ್ಲಿ ರಿಲೀಸ್ ಆಗಿ ಯಶಸ್ಸು ಕಂಡಿತು. ಬಳಿಕ ತೆಲುಗು, ತಮಿಳು ಹಾಗೂ ಹಿಂದಿಗೆ ರಿಲೀಸ್ ಆಗಿ ಭರ್ಜರಿ ಕಮಾಯಿ ಮಾಡಿತು. ಈಗ ಹಾಸ್ಟೆಲ್ ಹುಡುಗರ ಸರದಿ. ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ Hostel Hudugaru Bekagiddare Movie)ಸಿನಿಮಾ ತೆಲುಗಿಗೆ ಡಬ್ ಆಗಿದೆ. ಈ ಚಿತ್ರಕ್ಕೆ ತೆಲುಗಿನಲ್ಲಿ ‘ಬಾಯ್ಸ್ ಹಾಸ್ಟೆಲ್’ ಎಂದು ಶೀರ್ಷಿಕೆ ಇಡಲಾಗಿದೆ.

‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಕನ್ನಡದಲ್ಲಿ ಜುಲೈ 21ರಂದು ರಿಲೀಸ್ ಆಯಿತು. ಈ ಚಿತ್ರ ಕನ್ನಡ ಪ್ರೇಕ್ಷಕರಿಂದ ಭರ್ಜರಿ ಮೆಚ್ಚುಗೆ ಪಡೆಯಿತು. ಹಾಸ್ಟೆಲ್ ಹುಡುಗರ ತಮಾಷೆ ಅನೇಕರಿಗೆ ಇಷ್ಟವಾಯಿತು. ರಕ್ಷಿತ್ ಶೆಟ್ಟಿ ಒಡೆತನದ ‘ಪರಂವ ಸ್ಟುಡಿಯೋಸ್’ ಈ ಚಿತ್ರವನ್ನು ಪ್ರೆಸೆಂಟ್ ಮಾಡಿದೆ. ಈ ಚಿತ್ರಕ್ಕೆ ನಿತಿನ್ ಕೃಷ್ಣಮೂರ್ತಿ ಅವರು ನಿರ್ದೇಶನ ಮಾಡಿದ್ದಾರೆ.

ತೆಲುಗಿನಲ್ಲಿ ಈ ಚಿತ್ರ ಆಗಸ್ಟ್ 26ರಂದು ರಿಲೀಸ್ ಆಗಲಿದೆ. ‘ಬಾಯ್ಸ್ ಹಾಸ್ಟೆಲ್’ ಎನ್ನುವ ಶೀರ್ಷಿಕೆ ಫೈನಲ್ ಆಗಿದ್ದು, ಪೋಸ್ಟರ್ ರಿಲೀಸ್ ಮಾಡಲಾಗಿದೆ. ಚಾಯ್ ಬಿಸ್ಕೆಟ್ ಫಿಲ್ಮ್ಸ್ ಹಾಗೂ ಅಕ್ಕಿನೇನಿ ನಾಗಾರ್ಜುನ ಅವರ ಅನುಪಮಾ ಸ್ಟುಡಿಯೋ ಈ ಚಿತ್ರವನ್ನು ಆಂಧ್ರ ಪ್ರದೇಶ ಹಾಗೂ ತೆಲಂಗಾಣದಲ್ಲಿ ಹಂಚಿಕೆ ಮಾಡುತ್ತಿದೆ. ಅಲ್ಲಿ ಈ ಚಿತ್ರಕ್ಕೆ ಯಾವ ರೀತಿಯ ಪ್ರತಿಕ್ರಿಯೆ ಸಿಗಲಿದೆ ಎಂಬುದನ್ನು ಕಾದು ನೋಡಬೇಕಿದೆ.

ಇದನ್ನೂ ಓದಿ: ವಿದೇಶಕ್ಕೆ ಹೊರಟ ‘ಹಾಸ್ಟೆಲ್ ಹುಡುಗರು’: ಹೊಸಬರ ಸಿನಿಮಾಗೆ ಸಿಕ್ಕಿದೆ ಭರ್ಜರಿ ಸಕ್ಸಸ್​

ಈ ಚಿತ್ರದಲ್ಲಿ ನಟಿಸಿದ ಬಹುತೇಕ ಎಲ್ಲರೂ ಹೊಸ ಪ್ರತಿಭೆಗಳೇ. ಹಲವರಿಗೆ ರಂಗಭೂಮಿ ಹಿನ್ನೆಲೆ ಇದೆ. ಅರವಿಂದ್ ಕಶ್ಯಪ್ ಅವರ ಛಾಯಾಗ್ರಹಣಕ್ಕೆ ಮೆಚ್ಚುಗೆ ಸಿಕ್ಕಿದೆ. ವರುಣ್ ಗೌಡ, ಪ್ರಜ್ವಲ್ ಬಿ.ಪಿ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಎಸ್. ಕಶ್ಯಪ್ ಅವರು ಈ ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಅಜನೀಶ್ ಲೋಕನಾಥ್ ಅವರು ಈ ಚಿತ್ರಕ್ಕೆ ಸಂಗೀತ ನಿರ್ದೇಶನ ಮಾಡಿದ್ದಾರೆ. ರಿಷಬ್ ಶೆಟ್ಟಿ, ಪವನ್ ಕುಮಾರ್, ಶೈನ್ ಶೆಟ್ಟಿ, ದಿಗಂತ್ ಹಾಗೂ ರಮ್ಯಾ ಅತಿಥಿ ಪಾತ್ರ ಮಾಡಿ ಗಮನ ಸೆಳೆದರು. ಸದ್ಯ ಹೈದರಾಬಾದ್​ನಲ್ಲಿ ಕನ್ನಡ ವರ್ಷನ್ ಪ್ರದರ್ಶನ ಕಾಣುತ್ತಿತ್ತು ಎನ್ನಲಾಗಿದೆ. ಈಗ ತೆಲುಗು ವರ್ಷನ್ ರಿಲೀಸ್ ಆಗುತ್ತಿರುವುದರಿಂದ ಕನ್ನಡ ಅವತರಣಿಕೆಯನ್ನು ತೆಗೆಯಲಾಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಾಗಿ ಇಲ್ಲಿ ಕ್ಲಿಕ್​ ಮಾಡಿ

Published On - 1:15 pm, Sat, 12 August 23

ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ಬೆಂಗಳೂರಿನ ಜಯನಗರದಲ್ಲಿ ಧರೆಗೆ ಉರುಳಿದ ಮರ
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ನೆಲೆಮಂಗಲ: ಮನೆ ಮುಂದೆ ಕಟ್ಟಿದ್ದ ಹಸುಗಳನ್ನ ಕದ್ದು ಪರಾರಿ, ರೈತ ಕಂಗಾಲು
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ಗಂಗಾವತಿ ಉಪ ಚುನಾವಣೆಗೆ ಅನ್ಸಾರಿ ಟಿಕೆಟ್ ಬಯಸಿದ್ದರೆ ತಪ್ಪಿಲ್ಲ: ಸಂಗಣ್ಣ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ದೇಶಕ್ಕಿಂತ ದೊಡ್ಡವರು ಯಾರೂ ಇಲ್ಲ, ದೇಶವುಳಿದರೆ ನಾವು ಉಳಿದಂತೆ: ಶಾಸಕ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ತಿಂಗಳ ಅವಧಿಯಲ್ಲಿ ಭಕ್ತರಿಂದ ಹುಂಡಿಯಲ್ಲಿ ₹59, 28, 876 ಕಾಣಿಕೆ ಸಂಗ್ರಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಎರಡು ವರ್ಷಗಳಿಂದ ತಮ್ಮಯ್ಯ-ರವಿ ಮಧ್ಯೆ ಆಗಾಗ್ಗೆ ನಡೆಯುತ್ತಿದೆ ಮಾತಿನ ಕಲಹ
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಡಿಜೆ ಸೌಂಡ್, ಅತಿಯಾದ ಬೆಳಕು ಹೃದಯಾಘಾತಕ್ಕೆ ಕಾರಣವಾಗುತ್ತದೆಯೇ?
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಐಪಿಎಲ್: ಬೆಂಗಳೂರಿನ ಈ ರಸ್ತೆಗಳಲ್ಲಿ ಕಿಲೋಮೀಟರ್​ಗಟ್ಟಲೇ ಟ್ರಾಫಿಕ್ ಜಾಮ್
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ಒಡಿಷಾದಿಂದ ಬಂದಿರುವ ಕೊಹ್ಲಿ ಕಟ್ಟಾಭಿಮಾನಿಗೆ ಟಿಕೆಟ್ ಸಿಕ್ಕಿಲ್ಲ
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?
ತಾಳಿ ಕಟ್ಟಿದ ಕೆಲವೇ ಕ್ಷಣದಲ್ಲಿ ಮದುಮಗ ಸಾವು: ಅಸಲಿಗೆ ಆಗಿದ್ದೇನು?