ಕೊನೆಗೂ ಬಿಡುಗಡೆ ದಿನಾಂಕ ಘೋಷಿಸಿದ ಹಾಸ್ಟೆಲ್ ಹುಡುಗರು: ಏಳು ವರ್ಷದ ಬಳಿಕ ರಮ್ಯಾ ಮರು ಎಂಟ್ರಿ

Hostel Hudugru Bekagiddare: ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಬಿಡುಗಡೆ ದಿನಾಂಕ ಘೋಷಣೆ ಆಗಿದೆ. ಏಳು ವರ್ಷಗಳ ಬಳಿಕ ರಮ್ಯಾ ಸಿನಿಮಾದಲ್ಲಿ ನಟಿಸಿದ್ದಾರೆ.

ಕೊನೆಗೂ ಬಿಡುಗಡೆ ದಿನಾಂಕ ಘೋಷಿಸಿದ ಹಾಸ್ಟೆಲ್ ಹುಡುಗರು: ಏಳು ವರ್ಷದ ಬಳಿಕ ರಮ್ಯಾ ಮರು ಎಂಟ್ರಿ
ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ
Follow us
|

Updated on: Jul 01, 2023 | 6:46 PM

ಹೊಸ ಹುಡುಗರ ಸಿನಿಮಾಗಳು ಬಿಡುಗಡೆ ಆದ ಬಳಿಕ ಗಮನ ಸೆಳೆಯುವುದು ಸಾಮಾನ್ಯ. ಆದರೆ ಬಿಡುಗಡೆಗೆ ಮುಂಚೆಯೇ ಗಮನ ಸೆಳೆದಿರುವ ಹೊಸ ಹುಡುಗರ ಸಿನಿಮಾ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ‘ (Hostel Hudugru Bekagiddare) ಹೊಸ ಹೊಸ ಐಡಿಯಾಗಳ ಮೂಲಕ, ಕ್ರಿಯಾಶೀಲ ವಿಡಿಯೋ ತುಣುಕುಗಳ ಮೂಲಕ ಸಿನಿಮಾ ಪ್ರಚಾರವನ್ನು (Promotions) ಮಾಡಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ತಂಡ ಸಿನಿಮಾದ ಬಗ್ಗೆ ಕುತೂಹಲ ಮೂಡಿಸಲು ಸಫಲರಾಗಿದ್ದಾರೆ. ಇದೀಗ ಸಿನಿಮಾ ಬಿಡುಗಡೆಯನ್ನು ಚಿತ್ರತಂಡ ಘೋಷಣೆ ಮಾಡಿದೆ. ವಿಶೇಷವೆಂದರೆ ಏಳು ವರ್ಷಗಳ ಬಳಿಕ ಈ ಸಿನಿಮಾದ ಮೂಲಕ ನಟಿ ರಮ್ಯಾ (Ramya) ಬೆಳ್ಳಿ ತೆರೆಗೆ ಮರಳಿ ಬಂದಿದ್ದಾರೆ.

ಈಗಾಗಲೇ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾದ ಟೀಸರ್, ಸಾಂಗ್ ಬಿಡುಗಡೆ ಆಗಿ ಗಮನ ಸೆಳೆದಿದೆ. ಸಿನಿಮಾ ಜುಲೈ 21ಕ್ಕೆ ರಾಜ್ಯಾದ್ಯಂತ ಬಿಡುಗಡೆ ಆಗಲಿದೆ. ಸೆಟ್ಟೇರಿದ ದಿನದಿಂದಲೂ ವಿಭಿನ್ನ ಬಗೆಯಲ್ಲಿ ಪ್ರಚಾರ ನಡೆಸುತ್ತಿರುವ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾಗೆ ಪುನೀತ್ ರಾಜ್ ಕುಮಾರ್, ರಮ್ಯಾ, ರಕ್ಷಿತ್ ಶೆಟ್ಟಿ, ರಿಷಬ್ ಶೆಟ್ಟಿ, ಶೈನಿ ಶೆಟ್ಟಿ, ಪವನ್ ಕುಮಾರ್ ಸೇರಿದಂತೆ ಚಂದನವನದ ಹಲವು ತಾರೆಯರು ಸಾಥ್ ಕೊಟ್ಟಿದ್ದಾರೆ. ಇತ್ತೀಚೆಗಷ್ಟೇ ದೂದ್ ಪೇಡಾ ದಿಗಂತ್ ಹಾಸ್ಟೆಲ್ ಹುಡುಗರ ಬಳಗ ಸೇರಿದ್ದಾರೆ.

ಇದನ್ನೂ ಓದಿ:Ramya: ರಮ್ಯಾ ಬೇಕು ಅಂತ ಪ್ರತಿಭಟನೆ, ಗುಡಿ ಕಟ್ಟಿಸಿ ಪೂಜೆ; ‘ಹಾಸ್ಟೆಲ್​ ಹುಡುಗರು’ ಮಾಡಿದ್ದು ಒಂದೆರಡಲ್ಲ

ಚಿತ್ರರಂಗದಿಂದ ದೂರವಾಗಿದ್ದ ನಟಿ ರಮ್ಯಾ, ಹಾಸ್ಟೆಲ್ ಹುಡುಗರು ಸಿನಿಮಾದ ಮೂಲಕ ಮತ್ತೆ ಬೆಳ್ಳಿ ತೆರೆಗೆ ಮರಳಿದ್ದಾರೆ. ರಮ್ಯಾ ಈ ಸಿನಿಮಾದಲ್ಲಿ ಅತಿಥಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಮಾತ್ರವಲ್ಲ ಚಿತ್ರತಂಡಕ್ಕಾಗಿ ವಿಶೇಷ ಪ್ರಮೋಷನಲ್ ವಿಡಿಯೋನಲ್ಲಿಯೂ ಕಾಣಿಸಿಕೊಂಡಿದ್ದಾರೆ. ಏಳು ವರ್ಷದ ಬಳಿಕ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾ ಮೂಲಕ ರಮ್ಯಾರನ್ನು ಮತ್ತೆ ಬೆಳ್ಳಿ ತೆರೆಯ ಮೇಲೆ ಕಣ್ಣು ತುಂಬಿಕೊಳ್ಳಬಹುದಾಗಿದೆ.

ಯೂತ್ ಸಬ್ಜೆಕ್ಟ್ ಕಥೆಯನ್ನೊಳಗೊಂಡ ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ ಸಿನಿಮಾವನ್ನು ನಿತಿನ್ ಕೃಷ್ಣಮೂರ್ತಿ ಕಥೆ ಬರೆದು ನಿರ್ದೇಶಿಸಿದ್ದಾರೆ. ಬಹುತೇಕ ರಂಗಭೂಮಿ ಪ್ರತಿಭೆಗಳು ನಟಿಸಿರುವ ಈ ಚಿತ್ರವನ್ನು ವರುಣ್ ಸ್ಟುಡಿಯೋಸ್ ಹಾಗೂ ಗುಲ್ ಮೋಹರ್ ಫಿಲ್ಮಂಸ್ ಬ್ಯಾನರ್ ನಡಿ ಪ್ರಜ್ವಲ್ ಬಿ.ಪಿ, ವರುಣ್ ಕುಮಾರ್ ಗೌಡ, ನಿತಿನ್ ಕೃಷ್ಣಮೂರ್ತಿ, ಅರವಿಂದ್ ಕೆ ಕಶ್ಯಪ್ ಬಂಡವಾಳ ಹೂಡಿದ್ದಾರೆ. ಪ್ರತಿ ಬಾರಿ ಭಿನ್ನ ಮಾದರಿಯ ಮೂಲಕ ಪ್ರಚಾರ ಮಾಡುತ್ತಿರುವ ಹಾಸ್ಟೆಲ್ ಹುಡುಗರನು ಸಿನಿಮಾವನ್ನು ರಕ್ಷಿತ್ ಶೆಟ್ಟಿ ತಮ್ಮದೇ ಪರಂವಃ ಪಿಕ್ಚರ್ಸ್ ಮೂಲಕ ಪ್ರಸ್ತುತಪಡಿಸುತ್ತಿದ್ದಾರೆ. ಅಜನೀಶ್ ಲೋಕನಾಥ್ ಸಂಗೀತ ಅರವಿಂದ್ ಛಾಯಾಗ್ರಹಣ, ಸುರೇಶ್ ಸಂಕಲನವಿರುವ ಚಿತ್ರದ ಶ್ರೀಮಂತಿಕೆ ಹೆಚ್ಚಿಸಿದೆ. ಬಿಡುಗಡೆ ದಿನಾಂಕ ಘೋಷಿಸಿರುವ ಚಿತ್ರತಂಡ ಶೀಘ್ರದಲ್ಲಿಯೇ ಟ್ರೇಲರ್ ಬಿಡುಗಡೆ ಮಾಡಲು ಯೋಜನೆ ಹಾಕಿಕೊಂಡಿದೆ.

ಕನ್ನಡದಲ್ಲಿ ಇತ್ತೀಚೆಗೆ ಕೆಲ ಹೊಸ ಹುಡುಗರ ಸಿನಿಮಾಗಳು ಗೆಲುವು ಸಾಧಿಸಿವೆ. ‘ಕಂಬ್ಳಿಹುಳ’, ಇತ್ತೀಚೆಗೆ ಬಿಡಗುಡೆ ಆದ ‘ಡೇರ್​ಡೆವಿಲ್ ಮುಸ್ತಫಾ’ ಸಿನಿಮಾಗಳು ಗೆದ್ದಿವೆ. ಅದೇ ಸಾಲಿಗೆ ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಸಿನಿಮಾ ಸೇರುವ ವಿಶ್ವಾಸ ಸಿನಿಪ್ರೇಮಿಗಳಿಗಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ಅಜ್ಜಿ ಜೊತೆ ದಸರಾ ಆನೆಗಳಿಗೆ ಕಬ್ಬು, ಬೆಲ್ಲ ತಿನ್ನಿಸಿದ ಆದ್ಯವೀರ ಒಡೆಯರ್‌
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ನ್ಯೂಯಾರ್ಕ್​ನಲ್ಲಿ ಟೆಕ್ ಕಂಪನಿಗಳ ಸಿಇಒಗಳ ಜತೆ ಪ್ರಧಾನಿ ಮೋದಿ ಸಭೆ
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ಮಂತ್ರಾಲಯದಲ್ಲಿ ಪರಿಮಳ ಪ್ರಸಾದ ತಯಾರಿ ಪ್ರಕ್ರಿಯೆ ಹೇಗಿದೆ ಗೊತ್ತಾ?
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
ವಿಶ್ವವಿಖ್ಯಾತ ಮೈಸೂರು ದಸರಾ ಕುರಿತು ಜಿಲ್ಲಾಡಳಿತದಿಂದ ವಿಶೇಷ ವಿಡಿಯೋ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Daily Devotional: ಲಲಿತಾ ಸಹಸ್ರನಾಮದ ಮಹತ್ವ ಹಾಗೂ ಫಲ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸದ 4ನೇ ಸೋಮವಾರದ ದಿನ ಭವಿಷ್ಯ ತಿಳಿಯಿರಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
PM Modi in US: ಭಾರತದ 5G ಮಾರುಕಟ್ಟೆ ಅಮೆರಿಕಕ್ಕಿಂತ ದೊಡ್ಡದು ಎಂದ ಮೋದಿ
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
‘ಅನ್ನ’ ಸಿನಿಮಾ ವೀಕ್ಷಿಸಿ ಭಾವುಕರಾದ ಸಿದ್ದರಾಮಯ್ಯ; ಕಾಡಿತು ಬಾಲ್ಯದ ನೆನಪು
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಗೇಟ್​ ಬಿದ್ದು ಮಗು ಸಾವು ಕೇಸ್:​ ಈ ಬಗ್ಗೆ ತನಿಖೆ ಮಾಡ್ತೇವೆ ಎಂದ ದಿನೇಶ್
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ
ಈದ್ ಮಿಲಾದ್ ಮೆರವಣಿಗೆಯಲ್ಲಿ ಎದುರಾದ ಕೂಡಲಸಂಗಮ ಸ್ವಾಮೀಜಿ; ಪರಸ್ಪರ ಘೋಷಣೆ