Hostel Hudugaru Bekagiddare Trailer: ಮಿತಿ ಮೀರಿದೆ ಹಾಸ್ಟೆಲ್​ ಹುಡುಗರ ಹಾವಳಿ; ಏನೆಲ್ಲ ಮಾಡವ್ರೆ ನೀವೇ ನೋಡಿ

Hostel Hudugaru Bekagiddare Trailer: ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಚಿತ್ರದ ಟ್ರೇಲರ್​ ಬಿಡುಗಡೆ ಆಗಿದೆ. ಈ ಸಿನಿಮಾದ ಅತಿಥಿ ಪಾತ್ರದಲ್ಲಿ ರಮ್ಯಾ, ರಿಷಬ್​ ಶೆಟ್ಟಿ, ಪವನ್​ ಕುಮಾರ್​, ದಿಗಂತ್​ ಮಂಚಾಲೆ ನಟಿಸಿದ್ದಾರೆ.

Hostel Hudugaru Bekagiddare Trailer: ಮಿತಿ ಮೀರಿದೆ ಹಾಸ್ಟೆಲ್​ ಹುಡುಗರ ಹಾವಳಿ; ಏನೆಲ್ಲ ಮಾಡವ್ರೆ ನೀವೇ ನೋಡಿ
ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ
Follow us
|

Updated on: Jul 10, 2023 | 9:34 PM

ಬಹಳ ದಿನಗಳಿಂದ.. ಅಲ್ಲಲ್ಲ, ಬಹಳ ತಿಂಗಳುಗಳಿಂದ.. ಅದೂ ಅಲ್ಲ.. ಒಂದೆರಡು ವರ್ಷಗಳಿಂದ ಬರೀ ಪ್ರೋಮೋಗಳ ಮೂಲಕವೇ ಸದ್ದು ಮಾಡುತ್ತಿದ್ದ ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare) ಚಿತ್ರತಂಡ ಅಂತೂ-ಇಂತೂ ಟ್ರೇಲರ್​ ಬಿಡುಗಡೆ ಮಾಡಿದೆ. ಇಂದು (ಜುಲೈ 10) ಅದ್ದೂರಿ ವೇದಿಕೆಯಲ್ಲಿ ಟ್ರೇಲರ್ ಲಾಂಚ್​ ಮಾಡಲಾಗಿದೆ. ಧ್ರುವ ಸರ್ಜಾ, ಅಶ್ವಿನಿ ಪುನೀತ್​ ರಾಜ್​ಕುಮಾರ್​, ರಿಷಬ್​ ಶೆಟ್ಟಿ (Rishab Shetty), ರಕ್ಷಿತ್​ ಶೆಟ್ಟಿ ಸೇರಿದಂತೆ ಕನ್ನಡ ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಈ ಕಾರ್ಯಕ್ರಮಕ್ಕೆ ಆಗಮಿಸಿ ಶುಭ ಕೋರಿದ್ದಾರೆ. ಬಹುತೇಕ ಹೊಸ ಪ್ರತಿಭೆಗಳೇ ಸೇರಿಕೊಂಡು ಮಾಡಿರುವ ಈ ಚಿತ್ರವೀಗ ಬಿಡುಗಡೆಗೆ ಸಜ್ಜಾಗಿದೆ. ಜುಲೈ 21ರಂದು ಗ್ರ್ಯಾಂಡ್​ ಆಗಿ ಸಿನಿಮಾ ರಿಲೀಸ್​ ಆಗಲಿದೆ. ಅಂದಹಾಗೆ, ಈ ಸಿನಿಮಾದಲ್ಲಿ ಹಾಸ್ಟೆಲ್​ ಹುಡುಗರು ಮಾಡಿರುವ ಹಾವಳಿ ಕಮ್ಮಿ ಏನಲ್ಲ. ಹತ್ತು ಹಲವು ಕೀಟಲೆ ಮಾಡಿದ್ದಾರೆ. ಅದೆಲ್ಲವೂ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ (Hostel Hudugaru Bekagiddare Trailer) ಟ್ರೇಲರ್​ನಲ್ಲಿ ಕಾಣಿಸಿದೆ.

ನಿತಿನ್​ ಕೃಷ್ಣಮೂರ್ತಿ ನಿರ್ದೇಶನ ಮಾಡಿರುವ ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾದಲ್ಲಿ ಮಸ್ತ್​ ಎಂಟರ್​ಟೇನ್ಮೆಂಟ್​ ಇರಲಿದೆ ಎಂಬುದಕ್ಕೆ ಟ್ರೇಲರ್​ನಲ್ಲಿ ಸಾಕ್ಷಿ ಸಿಕ್ಕಿದೆ. ಹೊಸ ಹುಡುಗರು ಮಾತ್ರವಲ್ಲದೇ ‘ಮೋಹಕ ತಾರೆ’ ರಮ್ಯಾ ಕೂಡ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಅವರನ್ನು ನೋಡಿ ಅಭಿಮಾನಿಗಳಿಗೆ ಖುಷಿ ಆಗಿದೆ.

(‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಟ್ರೇಲರ್​)

ಇನ್ನು, ಅತಿಥಿ ಪಾತ್ರದಲ್ಲಿ ರಿಷಬ್​ ಶೆಟ್ಟಿ, ಪವನ್​ ಕುಮಾರ್​, ದಿಗಂತ್​ ಮಂಚಾಲೆ ಕೂಡ ಇದ್ದಾರೆ. ಹಾಗಾಗಿ ಪ್ರೇಕ್ಷಕರಿಗೆ ಮಸ್ತ್​ ಮನರಂಜನೆ ಗ್ಯಾರಂಟಿ.

ಇದನ್ನೂ ಓದಿ: ಕೊನೆಗೂ ಬಿಡುಗಡೆ ದಿನಾಂಕ ಘೋಷಿಸಿದ ಹಾಸ್ಟೆಲ್ ಹುಡುಗರು: ಏಳು ವರ್ಷದ ಬಳಿಕ ರಮ್ಯಾ ಮರು ಎಂಟ್ರಿ

ಅಜನೀಶ್​ ಬಿ. ಲೋಕನಾಥ್​ ಅವರು ‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾಗೆ ಸಂಗೀತ ನೀಡಿದ್ದಾರೆ. ಅರವಿಂದ್​ ಎಸ್​. ಕಶ್ಯಪ್​ ಅವರು ಛಾಯಾಗ್ರಹಣ ಮಾಡಿದ್ದಾರೆ. ಒಂದು ಹಾಸ್ಟೆಲ್​​ನಲ್ಲಿ ಏನೆಲ್ಲ ಕಿತಾಪತಿಗಳು ನಡೆಯಬಹುದು ಎಂಬುದನ್ನೇ ಇಟ್ಟುಕೊಂಡು ಈ ಸಿನಿಮಾ ಸಿದ್ಧವಾಗಿದೆ. ಕಾಮಿಡಿಗೆ ಈ ಚಿತ್ರದಲ್ಲಿ ಕೊರತೆ ಇಲ್ಲ ಎಂಬುದು ನೋಡಿ ಟ್ರೇಲರ್​ ನೋಡಿದ ಬಳಿಕ ಕನ್ಫರ್ಮ್​ ಆಗಿದೆ. ಈವರೆಗೂ ಬಿಡುಗಡೆಯಾದ ಪ್ರೋಮೋಗಳೇ ಆಕರ್ಷಕವಾಗಿದ್ದವು. ಇನ್ನು, ಪೂರ್ತಿ ಸಿನಿಮಾ ಹೇಗಿರಬಹುದು ಅಂತ ಪ್ರೇಕ್ಷಕರಿಗೆ ಕೌತುಕ ಮೂಡಿದೆ.

ಇದನ್ನೂ ಓದಿ: Rakshit Shetty: ‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಚಿತ್ರಕ್ಕೆ ರಕ್ಷಿತ್ ಶೆಟ್ಟಿ ಬೆಂಬಲ; ‘ಪರಂವಃ’ ಮೂಲಕ ರಿಲೀಸ್

‘ಹಾಸ್ಟೆಲ್​ ಹುಡುಗರು ಬೇಕಾಗಿದ್ದಾರೆ’ ಸಿನಿಮಾವನ್ನು ರಕ್ಷಿತ್​ ಶೆಟ್ಟಿ ಅವರು ‘ಪರಂವಾ ಪಿಕ್ಚರ್ಸ್​’ ಮೂಲಕ ಬಿಡುಗಡೆ ಮಾಡುತ್ತಿದ್ದಾರೆ. ಸ್ಯಾಂಡಲ್​ವುಡ್​ ಸೆಲೆಬ್ರಿಟಿಗಳ ಬೆಂಬಲ ಈ ಸಿನಿಮಾಗೆ ಸಿಕ್ಕಿದೆ. ಬಿಡುಗಡೆಗೂ ಮುನ್ನವೇ ಈ ಚಿತ್ರ ಸದ್ದು ಮಾಡುತ್ತಿದೆ. ಸದ್ಯ ರಿಲೀಸ್​ ಆಗಿರುವ ಟ್ರೇಲರ್​ಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.

ಹೆಚ್ಚಿನ ಸಿನಿಮಾ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ.

ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಅಧಿಕಾರಿಗಳ ನಿರ್ಲಕ್ಷ್ಯ; ಈರುಳ್ಳಿ ನೀರುಪಾಲು, ರೈತರು ಕಂಗಾಲು
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
ಉಡುಪಿಯ ಹೆಬ್ರಿಯಲ್ಲಿ ಮೇಘಸ್ಫೋಟ; ಭೀಕರ ಪ್ರವಾಹ ಸೃಷ್ಟಿ
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
‘ಡೆವಿಲ್​’ ಎದುರು ‘ಕರ್ನಾಟಕದ ಅಳಿಯ’ ಸಿನಿಮಾ ಬರೋದು ಫಿಕ್ಸ್: ಪ್ರಥಮ್
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಉತ್ತರ ಕನ್ನಡ: ಮುರುಡೇಶ್ವರ ಕಡಲತೀರಕ್ಕೆ ಪ್ರವಾಸಿಗರಿಗೆ ನಿರ್ಬಂಧ
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಬಿಗ್​ಬಾಸ್​ನಲ್ಲಿ ಮನೆಯಲ್ಲಿ ಯಾರು ಹಿಟ್? ಫ್ಲಾಪ್ ಆಗಿದ್ದು ಯಾರು?
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಮುಡಾ ಹಗರಣದ ಬಗ್ಗೆ ಪದೇ ಪದೆ ಮಾತಾಡೋದು ಬೇಡ: ಸಚಿವ ವಿ ಸೋಮಣ್ಣ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ಅವರೇ ಹಾರೆ ಹಿಡಿದು ಗುಂಡಿ ಮುಚ್ಚಲು ಹೋಗಿದ್ದರಲ್ಲ ಈಗೇನಾಯ್ತು: ಹೆಚ್​ಡಿಕೆ
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
ರಾಮಲೀಲಾ ನಾಟಕ ಪ್ರದರ್ಶನದ ವೇಳೆ ರಾಮ ಪಾತ್ರಧಾರಿ ಹೃದಯಾಘಾತದಿಂದ ಸಾವು
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
‘ಬಿಗ್​ಬಾಸ್ ಏನು ಅಂಗಡಿಯಲ್ಲಿ ಸಿಗುವ ಒಳ ಉಡುಪಾ ಖರೀದಿ ಮಾಡೋಕೆ’
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು
ಸಿದ್ದರಾಮಯ್ಯ ವಾಹನಕ್ಕೆ ವಿರುದ್ಧ ದಿಕ್ಕಿನಲ್ಲಿ ಬಂದ ಜನಾರ್ದನ ರೆಡ್ಡಿ ಕಾರು